ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗಾಗಿ ಆಗ್ರಹಿಸಿ ಸೆ.21 ರಂದು ಪಟ್ಟಣದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ಗೆ ಕಾಲ್ನಡಿಗೆ ಜಾಥಾ

ಶ್ರೀನಿವಾಸಪುರ: ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗಾಗಿ ಆಗ್ರಹಿಸಿ ಸೆ.21 ರಂದು ಪಟ್ಟಣದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ಗೆ ಕಾಲ್ನಡಿಗೆ ಜಾಥಾ ಏರ್ಪಡಿಸಲಾಗಿದೆ ಎಂದು ಜಾಥಾ ಆಯೋಜಕ ಜೆವಿ ಕಾಲೋನಿ ವೆಂಕಟಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ಜಮೀನು ಪರಭಾರೆ ನಿಷೇಧ ಕಾಯ್ದೆ 1978ಕ್ಕೆ ಕಾಲ ಮಿತಿ ಅನ್ವಯಿಸದಂತೆ ತಿದ್ದುಪಡಿ ಮಾಡುವಂತೆ ಒತ್ತಾಯಿಸಲು ಸೆ.21 ರಂದು ಬೆಳಿಗ್ಗೆ 9 ಗಂಟೆಗೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೋಲಾರ ಮಾರ್ಗವಾಗಿ ಬೆಂಗಳೂರಿಗೆ ಜಾಥಾ ಹೊರಡಲಾಗುವುದು ಎಂದು ತಿಳಿಸಿದ್ದಾರೆ.

ಶ್ರೀನಿವಾಸಪುರ – ಜನರ ಆರೋಗ್ಯ ರಕ್ಷಣೆಯಲ್ಲಿ ಕಾರ್ಮಿಕರ ಪಾತ್ರ ಹಿರಿದು : ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್

ಪಟ್ಟಣದ ಹೊರವಲಯದ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರ ಕಾರ್ಮಿಕರ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ಮನೋಲ್ಲಾಸ ಉಂಟುಮಾಡುತ್ತವೆ. ಸದಾ ದುಡಿಯುವ ಪೌರ ಕಾರ್ಮಿಕರು ಆಟೋಟಗಳಲ್ಲಿ ಭಾಗವಹಿಸಬೇಕು. ಕೆಲಸದ ದಣಿವು ಮರೆತು ಆಟ ಆಡಬೇಕು ಎಂದು ಹೇಳಿದರು.
ಉಪಾದ್ಯಕ್ಷೆ ಅಯೀಷಾ ನಾಯಜ್ ಮಾತನಾಡಿ, ನಿಮ್ಮ ವೈಯಕ್ತಿಕ ಆರೋಗ್ಯದ ಕಡೆವು ಹೆಚ್ಚಿನ ಕಾಳಜಿ ವಹಿಸಿ ಕಾರ್ಯನಿರ್ವಹಣಾ ವೇಳೆಯಲ್ಲಿ ಆರೋಗ್ಯದ ದೃಷ್ಠಿಯಿಂದ ತಮಗೆ ನೀಡಿರುವ ಸಾಧನ ಸಲಕರಣೆಗಳನ್ನು ಕಡ್ಡಾಯವಾಗಿ ಬಳಸಬೇಕೆಂದರು.
ಮುಖ್ಯಾಧಿಕಾರಿ ಎಂ.ಜಯರಾಂ ಮಾತನಾಡಿ, ದೈಹಿಕ ಹಾಗೂ ಮಾನಸಿಕ ದೃಢತೆ ಕ್ರೀಡೆಗಳಿಂದ ಬರುತ್ತದೆ. ದೃಢ ಕಾಯ ಹಾಗೂ ದೃಢ ಮನಸ್ಸು ಉತ್ತಮ ವ್ಯಕ್ತಿತ್ವದ ಲಕ್ಷಣ. ಪೌರ ಕಾರ್ಮಿಕರು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು. ತಮ್ಮ ಮಕ್ಕಳಲ್ಲೂ ಕ್ರೀಡಾಸಕ್ತಿ ಬೆಳೆಸಬೇಕು ಎಂದು ಹೇಳಿದರು.
ಪುರಸಭೆ ಉಪಾಧ್ಯಕ್ಷೆ ಆಯಿಷಾ ನಯಾಜ್, ಕಂದಾಯ ನಿರೀಕ್ಷಕರಾದ ವಿ.ನಾಗರಾಜ್, ಶಂಕರ್, ಎಂಜಿನಿಯರ್‍ಗಳಾದ ರೂಪ, ವೇದಾಂತ್ ಶಾಸ್ತ್ರಿ, ಅಧಿಕಾರಿಗಳಾದ ಸುರೇಶ್, ಪ್ರತಾಪ್, ಸದಸ್ಯರಾದ ಬಿ.ವೆಂಕಟರೆಡ್ಡಿ, ಷಬ್ಬೀರ್, ರಸೂಲ್ ಖಾನ್, ರಾಮಾಂಜಿ, ರೆಡ್ಡಪ್ಪ, ಜರೀನಾ ಬೇಗಂ, ವಹೀದಾ ಬೇಗಂ, ಇರ್ಷಾದ್ ಇದ್ದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ 2022-23ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಪುನಾರಯ್ಕೆ

ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕ್ರತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ 2022-23ನೇ ಸಾಲಿನ 23ನೇ ವರ್ಷದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಅವರು ಅವಿರೋಧವಾಗಿ ಪುನಾರಾಯ್ಕೆಯಾಗಿದ್ದಾರೆ.




ಪದಾಧಿಕಾರಿಗಳ ವಿವರಗಳು: 

ಸಂಚಾಲಕರು- ಅಬ್ಬನಡ್ಕ ಸಂದೀಪ್ ವಿ. ಪೂಜಾರಿ
ಗೌರವಾಧ್ಯಕ್ಷರು- ರಾಜು ಶೆಟ್ಟಿ ಕುಂಟಲಗುಂಡಿ
ಸ್ಥಾಪಕಾಧ್ಯಕ್ಷರು- ವಿಠಲ ಮೂಲ್ಯ
ನಿಕಟ ಪೂರ್ವಾಧ್ಯಕ್ಷರು- ಬೋಳ ಉದಯ ಅಂಚನ್
ಉಪಾಧ್ಯಕ್ಷರು- ಲೀಲಾ ಪೂಜಾರಿ
ಕಾರ್ಯದರ್ಶಿ- ಲಲಿತಾ ಆಚಾರ್ಯ
ಜೊತೆ ಕಾರ್ಯದರ್ಶಿ- ಸುದರ್ಶನ್ ಕುಂದರ್
ಕೋಶಾಧಿಕಾರಿ- ಆಶ್ವಿನಿ ಪ್ರಭಾಕರ್
ಅಭಿವೃದ್ಧಿ ಸಮಿತಿಯ ಅಧ್ಯಕ್ಷರು – ದಿನೇಶ್ ಪೂಜಾರಿ ಬೀರೊಟ್ಟು
ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ – ಸಂಧ್ಯಾ ಶೆಟ್ಟಿ
ಮಹಿಳಾ ಸಂಘಟನಾ ಕಾರ್ಯದರ್ಶಿ- ಪದ್ಮಶ್ರೀ ಪೂಜಾರಿ
ಭಜನಾ ಮಂಡಳಿಯ ಗೌರವಾಧ್ಯಕ್ಷರು – ರಾಜೇಶ್ ಕೋಟ್ಯಾನ್
ಭಜನಾ ಮಂಡಳಿಯ ಆಧ್ಯಕ್ಷರು- ಸುಲೋಚನಾ ಕೋಟ್ಯಾನ್
ಭಜನಾ ಮಂಡಳಿಯ ಕಾರ್ಯದರ್ಶಿ- ಕೀರ್ತನ್ ಕುಮಾರ್
ಶ್ರೀ ವನದುರ್ಗಾ ಸ್ವಸಹಾಯ ಸಂಘದ ಅಧ್ಯಕ್ಷೆ- ವೀಣಾ ಪೂಜಾರಿ
ಶ್ರೀ ವನದುರ್ಗಾ ಸ್ವಸಹಾಯ ಸಂಘದ ಕಾರ್ಯದರ್ಶಿ- ಪುಷ್ಪ ಕುಲಾಲ್
ವಿವಿಧ ಸಮಿತಿಯ ನಿರ್ದೇಶಕರುಗಳು- ಸುರೇಶ್ ಕಾಸ್ರಬೈಲು, ಸತೀಶ್ ಪೂಜಾರಿ, ಸುರೇಶ್ ಅಬ್ಬನಡ್ಕ, ಆರತಿ ಕುಮಾರಿ, ಕಿರಣ್ ಶೆಟ್ಟಿ ಮೊದಲಾದವರು ಆಯ್ಕೆಯಾಗಿದ್ದಾರೆ.

ಪ್ರಧಾನಿ ಶ್ರೀ ನರೇಂದ್ರ ಮೋದಿ ಇವರ ಎಪ್ಪತ್ತೆರನೇ ಹುಟ್ಟು ಹಬ್ಬದ ಅಂಗವಾಗಿ ದೇಶದಾದ್ಯಂತ ರಕ್ತ ದಾನ ಶಿಬಿರ

ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿ ಇವರ ಎಪ್ಪತ್ತೆರನೇ ಹುಟ್ಟು ಹಬ್ಬದ ಅಂಗವಾಗಿ ದೇಶದಾದ್ಯಂತ ರಕ್ತ ದಾನ ಶಿಬಿರ ಆಯೋಜಿಸಲಾಯಿತು. ಭಾರತೀಯ ರೆಡ್ ಕ್ರಾಸ್‌ ಸಂಸ್ಥೆಯ ರಕ್ತ ನಿಧಿ ಕೇಂದ್ರ ದಲ್ಲಿ ಈದಿನ ಆಯೋಜಿಸಲಾದ ರಕ್ತ ದಾನ ಶಿಬಿರ ವನ್ನು ಶಾಸಕರಾದ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಗಾಟಿಸಿ ಉದ್ಘಾಟನಾ ಭಾಷಣ ಮಾಡಿದರು. ಸಭಾಪತಿ ಎಸ್ ಜಯಕರ ಶೆಟ್ಟಿ ಸರ್ವರಿಗೂ ಸ್ವಾಗತ ಕೋರಿದರು. ಸಭೆಯಲ್ಲಿ ಕರ್ಣಾಟಕ ಆಹಾರ ನಿಗಮದ ಉಪಾಧ್ಯಕ್ಷ ರಾದ ಕಿರಣ ಕುಮಾರ್ ಕೊಡ್ಗಿ, ಪುರಸಭಾ ಅಧ್ಯಕ್ಷರಾದ ವೀಣಾ ಮೆಂಡನ್, ಪ್ರಾಧಿಕಾರದ ಅದ್ಯಕ್ಷರಾದ ವಿಜಯ, ಶಂಕರ್ ಅಂಕದ ಕಟ್ಟೆ, ಪ್ರಜ್ವಲ್ ಶೆಟ್ಟಿ ಕಾಲ್ತೋಡು, ಸದಾನಂದ ಉಪ್ಪಿನಕುದ್ರು ಖಜಾಂಚಿ ಶಿವರಾಮ ಶೆಟ್ಟಿ, ಸದಸ್ಯರು ಗಳಾದ ಗಣೇಶ್ ಆಚಾರ್ಯ, ಡಾ. ಸೋನಿ, ಎ. ಮುತ್ತಯ್ಯ ಶೆಟ್ಟಿ, ಸೀತಾರಾಮ ನಕ್ಕತ್ತಾಯ, ಸದಾನಂದ ಶೆಟ್ಟಿ, ನಾರಾಯಣ ದೇವಾಡಿಗ, ದಿನಕರ ಶೆಟ್ಟಿ ಮತ್ತು ಸಂಪತ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ ವಂದನಾರ್ಪಣೆ ಗೈದರು.

ಕೋಲಾರ ಜಿಲ್ಲೆಯ ಹಲವು ಸಮಸ್ಯೆಗಳ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿಗೆ ಕೆ.ಎನ್.ರವೀಂದ್ರನಾಥ್ ಮನವಿ

ಕೋಲಾರ ಸೆಪ್ಟೆಂಬರ್ 18 : ಕೋಲಾರ ಜಿಲ್ಲೆಯ ಹಲವು
ಸಮಸ್ಯೆಗಳ ವಿಚಾರವಾಗಿ ಮಾಜಿ ಮುಖ್ಯಮಂತ್ರಿ
ಹೆಚ್.ಡಿ.ಕುಮಾರಸ್ವಾಮಿರವರಿಗೆ ಸಾಮಾಜಿಕ ಕಾರ್ಯಕರ್ತ ಗೌರಿಪೇಟೆ
ಕೆ.ಎನ್.ರವೀಂದ್ರನಾಥ್ ರವರು ಮನವಿ ಸಲ್ಲಿಸಿದರು.
ಮೊದಲನೇಯದಾಗಿ ಮೇಕೆದಾಟು ಯೋಜನೆಯನ್ನು
ಅನುμÁ್ಠನಗೊಳಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ
ಕುಡಿಯುವ ನೀರನ್ನು ಪೂರೈಸಲು ಯೋಜನೆಯನ್ನು
ರೂಪಿಸಲು ಎರಡನೇಯದಾಗಿ ಕೋಲಾರ ಜಿಲ್ಲೆಗೆ ಸರ್ಕಾರಿ
ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಲಿಟಿ
ಆಸ್ಪತ್ರೆಯನ್ನು ಮಂಜೂರು ಮಾಡುವ ಮತ್ತು
ಮೂರನೆಯದಾಗಿ ಕೋಲಾರ ನಗರಸಭೆಯಲ್ಲಿ 418 ವಿವಿಧ
ಹುದ್ದೆಗಳು ಮಂಜೂರಾತಿ ಇದ್ದು ಇದರಲ್ಲಿ 275 ಮಂದಿ
ಕಾರ್ಯನಿರ್ವಹಿಸುತ್ತಿದ್ದು ಬಾಕಿ ಇರುವ 143 ಹುದ್ದೆಗಳನ್ನು
ಶೀಘ್ರವಾಗಿ ತುಂಬುವಂತೆ ಕೋರಿ ಮನವಿ ಪತ್ರ ಸಲ್ಲಿಸಿದರು.
ಕೋಲಾರ ಜಿಲ್ಲೆಯ ಅಂತರ್ಜಲ ವಿಷಯುಕ್ತವಾಗಿದ್ದು ಅನೇಕ
ವಿಷಕಾರಿಯ ಲವಣಾಂಶಗಳನ್ನು, ಆರೋಗ್ಯಕ್ಕೆ
ಹಾನಿಕರವಾಗಿರುವ ಫೆÇ್ಲೀರೈಡ್, ಆ ರ್ಸಿನಿಕ್ ಮಟ್ಟಕಿಂತ ಅತಿ ಹೆಚ್ಚು
ಪ್ರಮಾಣದಲ್ಲಿ ಹೊಂದಿದ್ದು ಕುಡಿಯುಲು ಯೋಗ್ಯವಲ್ಲದಂತಾಗಿದೆ.
ಸರ್ಕಾರವು ನಿರ್ಮಿಸುತ್ತಿರುವ ನೀರು ಶುದ್ಧಿಕರಣ
ಘಟಕಗಳನ್ನು ಸಹ ಈ ಅಧಿಕ ಪ್ರಮಾಣದ ರಾಸಾಯನಿಕ ಮತ್ತು
ಲವಣಗಳ ಪರಿಣಾಮವಾಗಿ 2-3ತಿಂಗಳಲ್ಲಿಯೇ ನೀರು ಶುದ್ಧಿಕರಿಸುವ
ಪಿಲಮೆಂಟ್‍ಗಳನ್ನು ಬದಲಾಯಿಸಬೇಕಾಗಿದ ಅನಿವಾರ್ಯ
ಪರಿಸ್ಥಿತಿಯನ್ನು ಎದುರಿಸುತ್ತಿವೆ. ಖಔ ಪ್ಲಾಂಟ್‍ಗಳು ಕಡಿಮೆ
ಅವಧಿಯಲ್ಲಿಯೇ ಕೆಟ್ಟು ನಿಲ್ಲುತ್ತಿವೆ. ಇದರ ಪರಿಣಾಮವಾಗಿ ಜನರಿಗೆ
ಶುದ್ಧ ಆರೋಗ್ಯಕ್ಕೆ ಹಾನಿಕರವಲ್ಲದ ಕುಡಿಯುವ ನೀರನ್ನು
ಒದಗಿಸುವ ಈ ಯೋಜನೆ ನಿರೀಕ್ಷಿತ ಯಶಸ್ಸನ್ನು ಕಾಣದೆ. ಇದು ನದಿ
ನೀರನ್ನು ಹರಿಸಬೇಕಾಗುವ ಅನಿವಾರ್ಯತೆಯನ್ನು ಸಾರಿ ಹೇಳಿತ್ತಿದೆ.
ಸರ್ಕಾರವು ತಕ್ಷಣ ಮೇಕೆದಾಟು ಯೋಜನೆಯನ್ನು ಪ್ರಾರಂಭಿಸಿ
ಅನುμÁ್ಠನ ಗೊಳಿಸುವಂತೆ ಒತ್ತಡ ಏರಿ ಕೋಲಾರ ಮತ್ತು
ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಈ ಯೋಜನೆ ಅನುಕೂಲ ಮಾಡಲು
ಕೋರಿದರು.
ಕೋಲಾರವು ಜಿಲ್ಲಾ ಕೇಂದ್ರವಾಗಿದ್ದರೂ ಸಹ
ಸುಸಜ್ಜಿತವಾದ ಸರ್ಕಾರಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಮತ್ತು ಸರ್ಕಾರಿ
ವ್ಯದ್ಯಕೀಯ ಕಾಲೇಜು ಇಲ್ಲದ ಕಾರಣ ಇಂತಹ ರೋಗಗಳಿಗೆ
ಚಿಕಿತ್ಸೆ ಪಡಿಯಲು ಸಾಧ್ಯವಾಗುತ್ತಿಲ್ಲ. ಈ ಭಾಗದ ಶೇ.90% ಜನರು
ಹಣಕಾಸಿನಲ್ಲಿ ಸ್ಥಿತಿವಂತರಲ್ಲದ ಕಾರಣ ಖಾಸಿಗಿ ಆಸ್ಪತ್ರೆಗಳಿಗೆ ಹೋಗಿ,
ಹಣವನ್ನು ಕೊಟ್ಟು ಚಿಕಿತ್ಸೆಯನ್ನು ಪಡಿಯುವ ಸ್ಥಿತಿಯಲ್ಲಿ
ಇರುವುದಿಲ್ಲ.ಕೋಲಾರದ ಹೊರವಲಯದಲ್ಲಿ ಸರ್ಕಾರದ
ಕಮಲಾ ನೆಹರು ಸಾನಿಟೋರಿಯಂ ಎಂಬ ಕ್ಷಯ ಆಸ್ಪತ್ರೆಅನ್ನು
ಸುಮಾರು 50 ಎಕ್ಕರೆ ಜಾಗದಲ್ಲಿ ನಿರ್ಮಿಸಲು ಸರ್ಕಾರದ ಗಮನಕ್ಕೆ
ವಿಧಾನ ಮಂಡಲದ ಅಧಿವೇಶನದಲ್ಲಿ ತರುವಂತೆ ಕೋರಿದರು.
ಕೋಲಾರದಲ್ಲಿ ಸುಮಾರು ಎರಡು ಲಕ್ಷದಷು ಜನರು
ವಾಸವಾಗಿದ್ದು 35 ವಾರ್ಡ್‍ಗಳು ಇರುತ್ತವೆ. ನಗರವು ಅತಿ ವೇಗವಾಗಿ
ಬೆಳಯುತ್ತಿದ್ದು ನಗರಸಭೆಯಲ್ಲಿ ಅಗತ್ಯ ಸಿಬ್ಬಂದಿಯ
ಕೊರತೆ ಇರುವದರಿಂದ ಮೂಲಭೂತ ಸಮಸ್ಯೆಗಳಾದ ರಸ್ತೆ,
ದೀಪಗಳು, ಒಳಚರಂಡಿ ವ್ಯವಸ್ಥೆ, ಡ್ರೈನೇಜ್, ಕುಡಿಯುವ
ಹಾಗೂ ದಿನಬಳಕೆಯ ನೀರಿನ ವ್ಯವಸ್ಥೆ, ರಸ್ತೆ ಹಾಗೂ

ಬಡಾವಣೆಗಳಲ್ಲಿನ ಕಸ ವಿಲೇವಾರಿ ಸರಿಯಾಗಿ ಆಗದೇ ನಿವಾಸಿಗಳು
ಪರೀತಪ್ಪಿಸುವಂತೆ ಆಗಿದೆ. ಅಧಿಕಾರಿಗಳು, ಆಡಳಿತ ಸಿಬ್ಬಂದಿ, ಗ್ರೂಪ್ ‘ಸಿ ‘
ಮತ್ತು ‘ ಡಿ ‘ ಗ್ರೂಪ್ ನೌಕರರನ್ನು ಒಳಗೊಂಡಂತೆ ಒಟ್ಟು 418
ಹುದ್ದೆಗಳ ಮಂಜೂರಾತಿ ಇದ್ದು, ಇದರ ಪೈಕಿ 275 ಹುದ್ದೆಗಳ
ಭರ್ತಿಯಾಗ್ಗಿದು 143 ಹುದ್ದೆಗಳು ಖಾಲ್ಲಿ ಇರುತ್ತವೆ. ಎಲ್ಲಾ
ಅವಲೋಕಿಸಿ ಖಾಲ್ಲಿ ಇರುವಂತಹ ಎಲ್ಲಾ 143 ಹುದ್ದೆಗಳುನ್ನು
ತಕ್ಷಣ ಭರ್ತಿ ಮಾಡಲು ಸರ್ಕಾರದ ಗಮನ ಸೆಳೆಯಲು ಕ್ರಮ
ತೆಗೆದುಕೊಂಡು ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದ್ದು
ಸಾರ್ವಜನಿಕರ ಹಿತದೃಷ್ಟಿಯಿಂದ ಮನವಿ ಸಲ್ಲಿಸುತ್ತಿರುವುದಾಗಿ
ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಂಡು ಸೌಲಭ್ಯಗಳ ಸದ್ಭಳಕೆ ಮಾಡಿಕೊಳ್ಳಿ :ಶರೀನಾತಾಜ್

ಶ್ರೀನಿವಾಸಪುರ 1 : ಸರ್ಕಾರದ ಆದೇಶ ಮೇರೆಗೆ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರವನ್ನು ಆಯೋಜಿಸಲಾಗಿದ್ದು , ಸಾರ್ವಜನಿಕರು ಇಂತಹ ಕಾರ್ಯಕ್ರಮದಲ್ಲಿ ಪಾಲ್ಗುಂಡು ಸರ್ಕಾರದ ಸೌಲಭ್ಯಗಳ ಸದ್ಭಳಕೆ ಮಾಡಿಕೊಳ್ಳುವಂತೆ ತಹಶೀಲ್ದಾರ್ ಶರೀನಾತಾಜ್ ಹೇಳಿದರು.
ರಾಯಲ್ಪಾಡು ಹೋಬಳಿಯ ಚಿಲ್ಲಾರ್ಲಪಲ್ಲಿ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾರ್ವಜನಿಕರು ಸಮಸ್ಯೆ ಇದ್ದಲ್ಲಿ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕರು ಗ್ರಾಮದಲ್ಲಿನ ಸ್ಮಶಾನವು ಒತ್ತುವರಿಯಾಗಿರುವ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬೇಟಿ ನೀಡಿ , ಒತ್ತುವರಿದಾರರನ್ನು ಸ್ಥಳಕ್ಕೆ ಕರೆಯಿಸಿ ತಕ್ಷಣವೇ ಒತ್ತವರಿಯನ್ನು ತೆರವುಗೊಳಿಸಿದಕ್ಕೆ ಒತ್ತುವಾರಿದಾರರಿಗೆ ಅಭಿನಂದನೆ ಸಲ್ಲಿಸಿದರು.
ಗುಂಡುತೋಪುಗಳಲ್ಲಿ ಅರಣ್ಯ ಇಲಾಖೆಯಿಂದ ಗಿಡಗಳನ್ನು ನಡೆಲಾಯಿತು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ದಾಖಲಿಸಲು ಇಲಾಖಾಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು. ರಸ್ತೆ ಸಮಸ್ಯೆ ಹಾಗು ಗ್ರಾಮಕ್ಕೊಂದು ಗ್ರಂಥಾಲಯ ಬೇಕೆಂಬ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಲಿಖಿತ ರೂಪದಲ್ಲಿ ಅರ್ಜಿ ಸಲ್ಲಿಸಿ ಸಂಬಂದಪಟ್ಟ ಇಲಾಖೆಯ ಗಮನಕ್ಕೆ ತಂದು ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಮತದಾರರ ಗುರುತಿನ ಚೀಟಿಗೆ ಆದಾರ ಲಿಂಕ್ ಮಾಡುವ ಪ್ರಕ್ರಿಯೆಯು ಚಾಲನೆಯಲ್ಲಿ ಇದ್ದು, 40% ಆಗಿದ್ದು, ಉಳಿದ 60% ಫಲಾನುಭವಿಗಳು ಅದನ್ನು ಸಂಬಂದ ಪಟ್ಟ ಅಧಿಕಾರಿಗಳ ಮೂಲಕ ಲಿಂಕ್ ಮಾಡಿಸಿಕೊಳ್ಳುವಂತೆ ತಿಳಿಸಿದರು. ರೈತರ ಬೆಳೆ ಸಮೀಕ್ಷೆ 20% ಆಗಿದೆ ಉಳಿದ 80% ಬೆಳೆ ಸಮೀಕ್ಷೆ ಬಾಕಿ ಇದ್ದು, ರೈತರು ಸಂಬಂದಪಟ್ಟ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದರು.
17 ರೀತಿಯ ವಿವಿಧ ಪಿಂಚಣಿಗಳು ಇದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಸೂಚಿಸಿದರು.
ಪೌವತಿ ಖಾತೆ ದಾರರು ಮರಣಪ್ರಮಾಣ ಪತ್ರ ಹಾಗೂ ವಂಶವೃಕ್ಷ ಇತರೆ ದಾಖಲೆಗಳನ್ನು ನೀಡಿದರೆ ಅವುಗಳನ್ನು ಪರಿಶೀಲಿಸಿ 45 ದಿನಗಳಲ್ಲಿ , ಅರ್ಹ ಫಲಾನುಭವಿಗಳಿಗೆ ದಾಖಲೆ ನೀಡಲಾಗುವುದು ಎಂದರು.
ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮು ಇಲಾಖೆಯಲ್ಲಿ ಸಿಗುವಂತಹ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಗ್ರಾ.ಪಂ.ಅಧ್ಯಕ್ಷೆ ನಿರ್ಮಲಮ್ಮ , ಬಿಇಒ ವಿ.ಉಮಾದೇವಿ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸನ್, ಪಿಡಬ್ಲೂಡಿ ಹಿರಿಯ ಅಭಯಂತರ ಎಂ.ಕೆ.ಹಸೇನ್ ಸಾಬ್, ಕಿರಿಯ ಅಭಯಂತರ ಗೋವಿಂದಪ್ಪ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್, ರೇಷ್ಮೆ ಇಲಾಖೆ ಅಧಿಕಾರಿ ಕೃಷ್ಣಪ್ಪ, ಕೃಷಿ ಇಲಾಖೆ ಅಧಿಕಾರಿ ಮಂಜುನಾಥ್, ಶಿರಸ್ತೆದಾರ್ ಬಲರಾಮೇಗೌಡ ಆರ್‍ಐಗಳಾದ ಅಂಬರೀಶ್, ಜನಾರ್ಧನ್, ಮುನಿರೆಡ್ಡಿ, ಗುರುರಾಜರಾವ್, ಗ್ರಾ.ಪಂ ಸದಸ್ಯರು ಮಮತ, ಸೋಮಶೇಖರ್, ಬೈರೆಡ್ಡಿ, ಕಾರ್ಯದರ್ಶಿ ಮಂಜುಳ, ತಹಶೀಲ್ದಾರ್ ಕಚೇರಿ ಎಫ್‍ಡಿಎ ಭಾವನ ಇದ್ದರು.

ಬೈಂದೂರು ಹೋಲಿ ಕ್ರಾಸ್ ಚರ್ಚಿನಲ್ಲಿ ಶೋಕ ಮಾತೆಯ ದಿನಾಚರಣೆ


ಬೈಂದೂರು: ಸ್ಥಳೀಯ ಹೋಲಿ ಕ್ರಾಸ್ ಚರ್ಚಿನಲ್ಲಿ ಭಾನುವಾರದಂದು ಶೋಕ ಮಾತೆಯ ದಿನಾಚರuಯನ್ನು ಆಚರಿಸಲಾಯಿತು. ಉಡುಪಿ ದಿವ್ಯ ಜ್ಯೋತಿ ಕೇಂದ್ರದ ನಿರ್ದೇಶಕರಾದ ರೆ.ಫಾ.ಸಿರಿಲ್ ಲೋಬೊ ಅವರು ದಿವ್ಯಬಲಿ ಪೂಜೆಯನ್ನು ನೇರವೇರಿಸಿದರು.
ಈ ಸಂಭ್ರಮದಲ್ಲಿ ಉಡುಪಿಯ ರೆ.ಫಾ. ಹೆರಾಲ್ಡ್ ಡಿಸೋಜಾ, ಹೋಲಿ ಕ್ರಾಸ್ ಚರ್ಚಿನ ಧರ್ಮಗುರು ರೆ.ಫಾ. ವಿನ್ಸೆಂಟ್ ಕುವೆಲ್ಲೊ, ಆಚರಣೆಗಾರ ಅಂತೋನಿ ಲೋಬೊ ಮತ್ತು ಅವರ ಕುಟುಂಬ ಹಾಗೂ ಧರ್ಮಕೇಂದ್ರದ ಭಕ್ತಾಧಿಗಳು ಹಾಜರಿದ್ದರು
.

ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳು ಹಾಗೂ ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ-ನಿಯಂತ್ರಣ ಮಾಡಲು ರೈತ ಸಂಘ ಮನವಿ

ಶ್ರೀನಿವಾಸಪುರ, ಸ.17, ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳು ಹಾಗೂ ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮಾಡಲು ವಿಶೇಷ ತಂಡ ರಚನೆ ಮಾಡುವಂತೆ ರೈತ ಸಂಘದಿಂದ ಅಬಕಾರಿ ಇಲಾಖೆ ಮುಂದೆ ಹೋರಾಟ ಮಾಡಿ ಅಬಕಾರಿ ನಿರೀಕ್ಷಕರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ವಿಧಾನ ಸಭಾಧ್ಯಕ್ಷ ಜನ ಪ್ರಿಯ ಶಾಸಕರಾದಂತಹ ಕೆ.ಆರ್.ರಮೇಶ್‍ಕುಮಾರ್ ರವರ ತವರು ಜಿಲ್ಲೆಯಲ್ಲೇ ಗ್ರಾಮೀಣ ಪ್ರದೇಶಗಳ ಅಕ್ರಮ ಮದ್ಯ ಮಾರಾಟ ದಂದೆ ರಾಜಾರೋಷವಾಗಿ ನಡೆಯುತ್ತಿದ್ದರು ಯಾವುದೇ ಕ್ರಮ ಕೈಗೊಳ್ಳದೆ ಮೌನವಾಗಿರುವುದಕ್ಕೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಶಾಸಕರ ವಿರುದ್ದ ಅಸಮದಾನ ವ್ಯಕ್ತಪಡಿಸಿದರು.
ಕುಡಿಯುವವನು ಕೇವಲ ಮದ್ಯವನ್ನು ಕುಡಿಯವುದಿಲ್ಲ. ತಾಯಿಯ ಸುಖ ಹೆಂಡತಿಯ ನೆಮ್ಮದಿ ಮಕ್ಕಳ ಕನಸುಗಳು, ತಂದೆಯ ಪ್ರತಿಷ್ಠೆ ಎಲ್ಲವನ್ನು ಒಂದೇ ಗುಟಕಿನಲ್ಲಿ ಕುಡಿದು ಇಡೀ ಸಂಸಾರದ ಮಾನ ಸಾರ್ವಜನಿಕವಾಗಿ ಹರಾಜು ಹಾಕಿ ಕುಟುಂಬಗಳೇ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳು ಇದ್ದರೂ ಈ ದುರಂತಗಳಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಭ್ರಷ್ಟಾಚಾರವೇ ಅವ್ಯವಸ್ಥೆಗೆ ಕಾರಣವೆಂದು ಕಿಡಿಕಾರಿದರು.
ಸಾಂಕ್ರಾಮಿಕ ರೋಗಗಳು ಅತಿವೃಷ್ಟಿಯಿಂದ ತತ್ತರಿಸಿ ದುಡಿಯುವ ಕೈಗೆ ಕೆಲಸ ವಿಲ್ಲದೆ ಬೆಳೆದ ಬೆಳೆಗೆ ಬೆಲೆ ಇಲ್ಲದೆ ತತ್ತರಿಸಿರುವ ಜನ ಸಾಮಾನ್ಯರು ಬುದುಕು ಕಟ್ಟಿಕೊಳ್ಳುತ್ತಿರುವ ಸಮಯದಲ್ಲಿ ಗ್ರಾಮೀಣ ಪ್ರದೇಶಗಳ ಅಕ್ರಮ ಮದ್ಯ ಮಾರಾಟ ಬಡವರ ಅನ್ನವನ್ನು ಕಸಿದುಕೊಳ್ಳುತ್ತಿದೆ. ಕೂಲಿ ಮಾಡಿ ಮನೆಯ ಸಂಸಾರ ನಿರ್ವಹಣೆ ಮಾಡಬೇಕಾದ ಮದ್ಯೆ ಪ್ರಿಯರು ದುಡಿದ ಹಣವನ್ನು ಸಂಜೆ ಮದ್ಯದ ಅಂಗಡಿಗೆ ಇಟ್ಟು ಬರೀ ಕೈಯಲ್ಲಿ ಮನೆಗೆ ಬಂದು ಅವರನ್ನೇ ನಂಬಿರುವ ಕುಟುಂಬ ಅನ್ನವಿಲ್ಲದೆ ಹಸಿದ ಹೊಟ್ಟೆಯಿಂದ ತನ್ನೀರು ಬಟ್ಟೆ ಹಾಕಿಕೊಂಡು ಜೀವನ ಮಾಡಬೇಕಾದ ಪರಿಸ್ಥಿತಿ ಅಬಕಾರಿ ಇಲಾಖೆಯರು ತಂದು ನಿಲ್ಲಿಸಿದ್ದಾರೆಂದು ಆರೋಪ ಮಾಡಿದರು.
ತಾಲ್ಲೂಕು ಅಧ್ಯಕ್ಷ ತೆರ್ನಹಳ್ಳಿ ಆಂಜಿನಪ್ಪ ಮಾತನಾಡಿ ಸರ್ಕಾರ ನಿಂತಿರುವುದು ಬಡ ರೈತ ಕೂಲಿಕಾರ್ಮಿಕರ ಕುಟುಂಗಳನ್ನು ಹಾಳು ಮಾಡುವ ಮದ್ಯ ಮಾರಾಟದ ಆದಾಯದಿಂದ ಎಂಬ ಸರ್ಕಾರದ ಹೇಳಿಕೆಗೆ ಅಬಕಾರಿ ಇಲಾಖೆಗಳು ತಮಗೆ ಇಷ್ಟ ಬಂದಂತೆ ತಾಲ್ಲೂಕಿನಾದ್ಯಂತ ಮದ್ಯೆ ಮಾರಾಟಗಾರರಿಗೆ ಕಡ್ಡಾಯವಾಗಿ ತಿಂಗಳಿಗೆ ಇಷ್ಟು ಆದಾಯ ಇಲಾಖೆಗೆ ಬರುವಂತೆ ಮದ್ಯ ಮಾರಾಟ ಮಾಡುವ ಆದೇಶ ಗ್ರಾಮೀಣ ಪ್ರದೇಶದ ಬಡ ಕೂಲಿಕಾರ್ಮಿಕರ ಕುಟುಂಬಗಳನ್ನು ಬೀದಿ ಪಾಲು ಮಾಡುವ ಮುಖಾಂತರ ಸರ್ಕಾರ ಬಡವರ ಅನ್ನದ ಮೇಲೆ ಸವಾರಿ ಮಾಡುತ್ತಿರುವುದಕ್ಕೆ ಲಕ್ಷಾಂತರ ಮಹಿಳೆಯರ ಶಾಪ ತಟ್ಟುತ್ತದೆ ಎಂದು ಭವಿಷ್ಯ ನುಡಿದರು.
ಲಕ್ಷಾಂತರ ಕುಟುಂಬಗಳ ಸ್ವಾಭಿಮಾನ ಬುದುಕು ಕಟ್ಟಿಕೊಟ್ಟಿರುವ ಹಾಲಿನ ಧರ 25 ರೂಪಾಯಿ ಅದೇ ಕುಟುಂಬಗಳನ್ನು ನಾಶ ಮಾಡುವ ಮದ್ಯದ ಬೆಲೆ 150 ರಿಂದ 1000 ರೂಪಾಯಿಯವರೆಗೆ ಮಾರಾಟ ಮಾಡುತ್ತಿರುವ ಸರ್ಕಾರಕ್ಕೆ ಬಡವನ ಬದುಕಿನ ಬೆಲೆ ಗೊತ್ತಿಲ್ಲವೆಂದು ಅವ್ಯವಸ್ಥೆ ವಿರುದ್ದ ಕಣ್ಣೀರು ಹಾಕಿದರು.
ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಡಾಬಾಗಳಲ್ಲಿ ರಾಜಾರೋಷವಾಗಿ ದಿನದ 24 ಗಂಟೆ ಅಕ್ರಮ ಮದ್ಯೆ ಮಾರಾಟ ರಾಜರೋಷವಾಗಿ ನಡೆಯುತ್ತಿದ್ದರು ತಡೆಯಬೇಕಾದ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ. ದೂರು ನೀಡಿದಾಗ ನೆಪಮಾತ್ರಕ್ಕೆ 1 ಮತ್ತು 2 ಕೇಸು ದಾಖಲಿಸಿ ತಮ್ಮ ಪೌರುಷವನ್ನು ತೋರಿಸಿ ದಿನದ 24 ಗಂಟೆ ಗ್ರಾಮೀಣ ಪ್ರದೇಶಗಳಿಗೆ ಸರಬರಾಜು ಮಾಡುವ ಅಂಗಡಿಗಳ ವಿರುದ್ದ ಕ್ರಮ ಕೈಗೊಳ್ಳಲು ರಾಜಕೀಯ ಒತ್ತಡವೇ ಇಲ್ಲವೆ ಅವರು ನೀಡುವ ತಿಂಗಳ ಪ್ರಸಾದಕ್ಕೆ ತಮ್ಮ ಕರ್ತವ್ಯವನ್ನು ಮರತಂತೆ ಕಾಣುತ್ತಿದೆ ಅದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟದಿಂದ ಅಶಾಂತಿಯ ಜೊತೆಗೆ ಗೌರವದಿಂದ ಬದುಕುವ ಕುಟುಂಬಗಳು ನೆಮ್ಮದಿಯಿಂದ ಜೀವನ ಮಾಡಲು ಸಾದ್ಯವಾಗದ ಮಟ್ಟಕ್ಕೆ ಹಳ್ಳಿಗಳು ಹದಗೆಟ್ಟಿವೆ ಎಂದು ಆರೋಪ ಮಾಡಿದರು.
24 ಗಂಟೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಮದ್ಯ ಮಾರಾಟ ಮಾಡುವ ದಂದೆಕೋರ ಹಾಗೂ ಅವರಿಗೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಂಡು ಬಡ ಕೂಲಿಕಾರ್ಮಿಕರ ಸಂಸಾರಗಳನ್ನು ಉಳಿಸಬೇಕು ಇಲ್ಲವಾದರೆ ಶಾಸಕರ ಮನೆ ಮುಂದೆ ಸಾವಿರಾರು ಮಹಿಳೆಯರೊಂದಿಗೆ ಆಹೋರಾತ್ರಿ ಧರಣಿ ಮಾಡುವ ಎಚ್ಚರಿಕೆಯೊಂದಿಗೆ ಮನವಿ ನೀಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ನಿರೀಕ್ಷಕರಾದ ರೋಹಿತ್ ರವರು ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡುವ ಜೊತೆಗೆ ಅವರಿಗೆ ಸಹಕರಿಸುತ್ತಿರುವ ಅಧಿಕಾರಿಗಳಿಗೆ ನೋಟೀಸ್ ನೀಡಿ ಸಮಸ್ಯೆ ಬಗೆ ಹರಿಸುವ ಭರವಸೆಯನ್ನು ನೀಡಿದರು.
ಹೋರಾಟದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಕೋಟೆ ಶ್ರೀನಿವಾಸ್, ಶೇಷಾದ್ರಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಗಸಂದ್ರ ತಿಮ್ಮಣ್ಣ, ರಾಮಕ್ಕ, ವೆಂಕಟಮ್ಮ, ಕೊಲ್ಲೂರು ವೆಂಕಟ್, ರಾಜೇಂದ್ರಣ್ಣ, ಶೇಕ್‍ಷಪಿವುಲ್ಲಾ, ಕುಡುವನಹಳ್ಳಿ ಸುರೇಶ್, ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್, ವಕ್ಕಲೇರಿ ಹನುಮಯ್ಯ, ಸಂದೀಪ್‍ರೆಡ್ಡಿ, ಸಂದೀಪ್‍ಗೌಡ, ವೇಣು, ಮುದುವಾಡಿ ಗಂಗಪ್ಪ, ಲೋಕೇಶ್, ಸಹದೇವಣ್ಣ, ಗಂಗಾಧರ್, ಆಲವಾಟಿ ಶಿವ ಇನ್ನು ಮುಂತಾದವರು ಇದ್ದರು.

ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ವಾರ್ಷಿಕ ಸಭೆ-500 ಕೋಟಿ ವ್ಯವಹಾರ 2 ಕೋಟಿ 10 ಲಕ್ಷ ನಿವ್ವಳ ಲಾಭ ಶೇ. 20% ಡಿವಿಡೆಂಡ್ ಘೋಷಣೆ.

ಕುಂದಾಪುರ ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ. 20 % ಡಿವಿಡೆಂಡ್ ಘೋಷಿಸಲಾಯಿತು

ಕುಂದಾಪುರದ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶ್ರೀ ಜಾನ್ಸನ್ ಡಿ’ ಅಲ್ಮೇಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ನಿರ್ದೇಶಕ ಶ್ರೀ ಡೇರಿಕ್ ಡಿ ಸೋಜಾ ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು ವರದಿ ಸಾಲಿನ ಅಂತ್ಯಕ್ಕೆ ಒಟ್ಟು 3940 ಸದ್ಯಸ್ಯರಿಂದ 91.87 ಲಕ್ಷ ಪಾಲು ಬಂಡವಾಳ ಹಾಗೂ 122.59 ಕೋಟಿ ರೂ ಠೇವಣಿ ಇದ್ದು 98.43 ಕೋಟಿ ಹೊರಬಾಕಿ ಸಾಲ ಹೊಂದಿರುತ್ತದೆ.
2022 ರ ಆಗಸ್ಟ್ ಅಂತ್ಯಕ್ಕೆ ಒಟ್ಟು ರೂಪಾಯಿ 130 ಕೋಟಿ ಠೇವಣಿ ಹಾಗೂ ರೂ 106 ಕೋಟಿ ಸಾಲ ಇದೆ.
ವರದಿ ಸಾಲಿನಲ್ಲಿ ಸಂಘವು ರೂ 2 ಕೋಟಿ 11 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ಸಂಘದ ಅಧ್ಯಕ್ಷರು ಸಭೆಯಲ್ಲಿ ತಿಳಿಸಿದರು.
ಕಳೆದ ಸಾಲಿನಲ್ಲಿ ಸಂಸ್ಥೆ ಒಟ್ಟು ರೂಪಾಯಿ 500 ಕೋಟಿ ವ್ಯವಹಾರ ಮಾಡಿದೆ ಈವರೆಗೆ ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೊಸೈಟಿ ಇನ್ನು ಮುಂದೆ ಇತರ ಜಿಲ್ಲೆಗಳಿಗೆ ವಿಸ್ತರಿಸಲು ಹಾಗೂ ಬಾಕಿ ಇರುವ ಶಾಖೆಗಳಿಗೆ ಸ್ವಂತ ಕಟ್ಟಡ, ಗ್ರಾಹಕರ ಅನುಕೂಲಕ್ಕಾಗಿ ಹೊಸ ಶಾಖೆ, ಸಂಘದ ಮುಂದಿನ ಭವಿಷ್ಯಕ್ಕಾಗಿ ಕುಂದಾಪುರದ ಆಸುಪಾಸಿನಲ್ಲಿ ಒಂದು ಸ್ವಂತ ಜಾಗ ಖರೀದಿ, ಸಂಘದ ಪ್ರಧಾನ ಕಛೇರಿಯ ಮೂರನೇ ಅಂತಸ್ತಿನಲ್ಲಿ ಸಭಾಂಗಣ ಮಾಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು. ಸಂಘದ ಮುಖ್ಯ ಸಲಹದಾರರಾದ ಅತೀ ವಂದನಿಯ ಸ್ಟೇನಿ ತಾವ್ರೋ ರವರು ಪ್ರಗತಿಗೆ ಮುಖ್ಯ ಕಾರಣ ಉತ್ತಮ ನಿರ್ದೇಶನ ಹಾಗೂ ಸಿಬ್ಬಂದಿಗಳ ಕಾರ್ಯತತ್ಪರತೆ ಮತ್ತು ಗ್ರಾಹಕರ ಪ್ರಾಮಾಣಿಕತೆಗೆ ಸಂಘವು ಇಷ್ಟು ಎತ್ತರಕ್ಕೆ ಬೆಳೆಯಲು ಕಾರಣವಾಯಿತು , ಅಲ್ಲದೆ ಮುಂದೆಯೂ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಹರಸಿದರು

ಸಂಘದ ಸ್ಥಾಪಕ ಹಾಗೂ ಪ್ರಸ್ತುತ ನಿರ್ದೇಶಕರಾದ ಶ್ರೀ ಫಿಲಿಪ್ ಡಿ ಕೋಸ್ಟಾ ಸ್ವಾಗತಿಸಿದರು, ನಿರ್ದೇಶಕ ಶ್ರೀ ವಿಲ್ಸನ್ ಡಿ ಸೋಜಾ ಪ್ರಾಸ್ತವಿಕ ಭಾಷಣ ನುಡಿದರು ನಿರ್ದೇಶಕಿ ಶ್ರೀಮತಿ ಡೈನಾ ಡಿ ಅಲ್ಮೇಡ ವಂದನಾರ್ಪಣೆ ಮಾಡಿದರು ನಿರ್ದೇಶಕಿ ಶ್ರೀಮತಿ ಶಾಂತಿ ಆರ್ ಕರ್ವಾಲ್ಲೊ , ಶ್ರೀ ಕಿರಣ್ ಮೇಲ್ವಿನ್ ಲೋಬೋ ಕಾರ್ಯಕ್ರಮ ನಿರೂಪಿಸಿದರು
ಸಭೆಯಲ್ಲಿ ಸಂಘದ ನಿರ್ದೇಶಕರಾದ ಶ್ರೀ ವಿನೋದ್ ಕ್ರಾಸ್ಟೋ, ಶ್ರೀ ಬ್ಯಾಪ್ಟಿಸ್ಟ್ ಡಾಯಾಸ್, ಶ್ರೀ ಓಜಲಿನ್ ರೆಬೆಲ್ಲೊ, ಶ್ರೀ ಪ್ರಕಾಶ್ ಲೋಬೋ, ಶ್ರೀಮತಿ ಶಾಂತಿ ಡಾಯಾಸ್, ಶ್ರೀ ಸಂತೋಷ್ ಓಝೋಲ್ಡ ಡಿ ಸಿಲ್ವಾ, ಶ್ರೀ ವಿಲ್ಫ್ರೆಡ್ ಮಿನೇಜಸ್, ಶ್ರೀ ಟೆರೆನ್ಸ್ ಸುವಾರಿಸ್, ಮತ್ತು ಶ್ರೀ ತಿಯೋದರ ಒಲಿವೇರ ಉಪಸ್ಥಿತರಿದ್ದರು.