

ಕುಂದಾಪುರ: ಶ್ರೀ ವೆಂಕಟರಮಣ ವಿದ್ಯಾ ಸಂಸ್ಥೆ ಕುಂದಾಪುರ ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಯೋಜಿಸಿರುವ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಸೆಮಿ ಫೈನಲ್ ನಲ್ಲಿ ವಿ. ಕೆ.ಆರ್ ತಂಡವನ್ನು ಮಣಿಸಿ, ಫೈನಲ್ ಪಂದ್ಯಾಟದ ಎದುರಾಳಿಯಾದ ಕುಂದಾಪುರ ಬೋರ್ಡ್ ಹೈಸ್ಕೂಲ್ ವಿದ್ಯಾರ್ಥಿಗಳನ್ನು ಮಣಿಸಿ ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ತರಬೇತಿ ನೀಡುತ್ತಿರುವವರು ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯ ಶೆಟ್ಟಿ ಮತ್ತು ಪ್ರಜ್ವಲ್ ಖಾರ್ವಿಯವರು.












































