ಶ್ರೀನಿವಾಸಪುರ: ಕಾಯಕದಲ್ಲಿ ಕೈಲಾಸ, ಧರ್ಮದಲ್ಲಿ ದಯೆ ಕಂಡುಕೊಂಡ ಬಸವಣ್ಣ ಮಾನವ ಕುಲಕ್ಕೆ ದೊಡ್ಡ ಆದರ್ಶ; ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಕಾಯಕದಲ್ಲಿ ಕೈಲಾಸ, ಧರ್ಮದಲ್ಲಿ ದಯೆ ಕಂಡುಕೊಂಡ ಬಸವಣ್ಣನವರು ಮಾನವ ಕುಲಕ್ಕೆ ದೊಡ್ಡ ಆದರ್ಶವಾಗಿ ಉಳಿದಿದ್ದಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ, ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಬಸವಣ್ಣ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಬಸವಣ್ಣನವರ ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ. ವಚನಕಾರರ ವಚನಗಳಿಂದ ಕನ್ನಡ ಸಾರಸ್ವತ ಲೋಕ ಶ್ರೀಮಂತವಾಗಿದೆ ಎಂದು ಹೇಳಿದು.
ಶಿರಸ್ತೇದಾರ್ ಮನೋಹರ ಮಾನೆ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುಪ್ರಸಾದ್ ಇದ್ದರು.