ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 03-02-2025ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಆಜ್ರಿ ಮಾನಂಜೆ, ಕಮಲಶಿಲೆ ಇಲ್ಲಿ ನೆರವೇರಿತು.
ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ಶ್ರೀ ಕಮಲಶಿಲೆ ಶ್ರೀಧರ ಅಡಿಗ ಇವರು ಶಿಬಿರವನ್ನು ಉದ್ಘಾಟಿಸಿ ಶಿಬಿರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಶಿಬಿರಕ್ಕೆ ಶುಭಹಾರೈಸಿದರು.
ತದನಂತರ ರಾಜೀವ ಶೆಟ್ಟಿ ಹಂದಿಮನೆ ಇವರು ವಾರ್ಷಿಕ ವಿಶೇಷ ಶಿಬಿರದ ಲೋಗೋ ವನ್ನು ಅನಾವರಣ ಗೊಳಿಸಿ ಭೌತಿಕ, ದೈಹಿಕ ಶ್ರಮದ ಮಹತ್ವವನ್ನು ತಿಳಿಸಿ ಶಿಬಿರ ಯಶಸ್ವಿಯಾಗಲೆಂದು ಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಇವರು ಏನ್ ಎಸ್ ಎಸ್ ಶಿಬಿರದ ಧ್ಯೇಯೋದ್ದೇಶಗಳನ್ನು ತಿಳಿಸಿ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವoತೆ ಹೇಳಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸತ್ಯನಾರಾಯಣ ಹತ್ವಾರ್, ಕಾಲೇಜಿನ ಕಛೇರಿ ಪ್ರಬಂಧಕರಾದ ಗೋಪಾಲ ನಾಯ್ಕ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಗೌರಿ ಬಾಯಿ, ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ ಶ್ರೀ ಅರುಣ್ ಎ. ಎಸ್.
ಸಮಾರಂಭದಲ್ಲಿ ಉಪಸ್ಥಿತರಿದ್ದರು. ಯೋಜಾನಾಧಿಕಾರಿಗಳಾದ ರಾಮಚಂದ್ರ ಆಚಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.
ಶಿಬಿರಾರ್ಥಿಗಳಾದ ಸಮೀಕ್ಷಾ ಶೆಟ್ಟಿ ವಂದಿಸಿದರು. ಲತಿಕಾ ಡಿ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.