ಭಂಡಾರ್ಕಾರ್ಸ್ : ರೆಡ್ ಕ್ರಾಸ್ ಘಟಕದ ವತಿಯಿಂದ ” ಯಶಸ್ಸಿನಲ್ಲಿ ಗುರುವಿನ ಪಾತ್ರದ ಕುರಿತು ಉಪನ್ಯಾಸ

ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೆಡ ಕ್ರಾಸ್ ಘಟಕದ ವತಿಯಿಂದ ” ಯಶಸ್ಸಿನಲ್ಲಿ ಗುರುವಿನ ಪಾತ್ರ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈಯ ಇಸ್ಕಾನ್ ಸಂಸ್ಥೆಯ ಲೋಕಭವನ ಮಾತಾಜಿ ಆಗಮಿಸಿ ವ್ಯಕ್ತಿಯ ಜೀವನದಲ್ಲಿ ಒಬ್ಬ ಗುರುವಿನ ಪಾತ್ರ ಯಾವ ರೀತಿಯಲ್ಲಿ ಬಹುಮುಖ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಉಪಸ್ಥಿತರಿದ್ದರು.

ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಪ್ರೊ.ಸತ್ಯನಾರಾಯಣ ಸ್ವಾಗತಿಸಿದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಾಕಾರಿಣಿ ವಿದ್ಯಾರಾಣಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.