

ಕುಂದಾಪುರ: ಮಾರ್ಚ್ 22ರಂದು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇದರ ಗಣಕಯಂತ್ರ ವಿಭಾಗ ಮತ್ತು ಐಕ್ಯೂಎಸಿ ಇವರ ಸಹಯೋಗದೊಂದಿಗೆ ವಕ್ತಿತ್ವ ವಿಕಾಸನ ಮತ್ತು ಉದ್ಯೋಗ ಸಂದರ್ಶನ ಮಾಹಿತಿ ಕಾರ್ಯಗಾರ ನಡೆಯಿತು.
ನೆಟ್ ಅನಾಲಿಟಿಕ್ಸ್ಕಂ ಪೆನಿಯಲ್ಲಿ ಹ್ಯೂಮನ್ ಕ್ಯಾಪಿಟಲ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿರುವ ಶ್ರೀರಕ್ಷಾ ಇವರು ಮುಖ್ಯ ಸಂಪನ್ಮೂಲವ್ಯಕ್ತಿ ಯಾಗಿ ಆಗಮಿಸಿದ್ದರು. ಒಂದು ದಿನ ನಡೆದ ಈ ಕಾರ್ಯಾಗಾರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಉಪಯೋಗ ಪಡೆದುಕೊಂಡರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಇವರು ವಹಿಸಿದ್ದರು.ಗಣಕಯಂತ್ರ. ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಗಣೇಶ್ ಕೆ, ಐಕ್ಯೂಎಸಿ ಸಂಚಾಲಕರಾದ ಪ್ರೊ. ಸತ್ಯನಾರಾಯಣ ಉಪಸ್ಥಿತರಿದ್ದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿಯಾದ ಶ್ರೀನಿಧಿ ಹೆಗ್ಡೆ ಅವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
