ಲಯನ್ಸ್ ಕ್ಲಬ್ ಹಾಗೂ ಶ್ರೀ ನಂದಿಕೇಶ್ವರ ಯುವಕಮಂಡಲ ಅಸೋಡು ಜಂಟಿ ಆಶ್ರಯದಲ್ಲಿ 76ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಬೃಹತ್ ವನಮಹೋತ್ಸವ

ಲಯನ್ಸ್ ಕ್ಲಬ್ ಕುಂದಾಪುರ ಹಾಗೂ ಶ್ರೀ ನಂದಿಕೇಶ್ವರ ಯುವಕಮಂಡಲ ಅಸೋಡು ಇದರ ಜಂಟಿ ಆಶ್ರಯದಲ್ಲಿ 76ನೇ ಸ್ವಾತಂತ್ರ್ಯ ಸಂಭ್ರಮದ ಸಂದರ್ಭದಲ್ಲಿ ಬೃಹತ್ ವನಮಹೋತ್ಸವ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಸೋಡಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ಲಬಿನ ಅಧ್ಯಕ್ಷರಾದ ನವೀನ ಕುಮಾರ ಶೆಟ್ಟಿ ಹಾಗೂ ಯುವಕಮಂಡಲದ ಅಧ್ಯಕ್ಷರಾದ ಉಮೇಶ ಪೂಜಾರಿಯವರು ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಊರಿನ ಮಹನೀಯರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸಸಿಗಳನ್ನು ನೀಡಲಾಯಿತು. ಲಯನ್ಸ್ ಕ್ಲಬಿನ ಕೋಶಾಧಿಕಾರಿ ಲ. ಶಂಕರ ಶೆಟ್ಟಿ, ಸದಸ್ಯರಾದ ಅಮರನಾಥ ಶೆಟ್ಟಿ, ನಾರಾಯಣ ಶೆಟ್ಟಿ, ರಾಜೀವ ಕೋಟ್ಯಾನ್, ಪ್ರಕಾಶ್ ಬೆಟ್ಟಿನ್ ಹಾಗೂ ಕ್ಲಬಿನ ಹಿರಿಯ ಸದಸ್ಯರು ಮತ್ತು ಸ್ಥಳೀಯ ಮುಖಂಡರಾದ ಲ. ಅಜಿತ ಕುಮಾರ ಶೆಟ್ಟಿಯವರು ಕಾರ್ಯಕ್ರಮವನ್ನು ಸಂಘಟಿಸಿದರು. ಯುವಕಮಂಡಲದ ಪದಾಧಿಕಾರಿಗಳು, ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರ ಪೂಜಾರಿ, ಶ್ರೀಮತಿ ಪಾರ್ವತಿ ಶೇರೆಗಾರ್, ರಘುರಾಮ ಶೆಟ್ಟಿ ಹಾಗೂ ಮುಖ್ಯೋಪಾದ್ಯಾಯರಾದ ಶ್ರೀಮತಿ ಗಾಯತ್ರಿ ಹಾಗೂ ಅದ್ಯಾಪಕ ವೃಂದದವರು ಉಪಸ್ಥಿತರಿದ್ದರು.