

ಕುಂದಾಪುರ: ಕುಂದಾಪುರ ಸಂಚಾರ ಠಾಣಾ ವ್ಯಾಪ್ತಿಯ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಕಾರು ನಡುವೆ ಅಫಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನೆಡೆದಿದೆ. ಬೈಕ್ ಸವಾರ ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ ಪೂಜಾರಿ (48) ಗುರುತಿಸಲಾಗಿದೆ. ಮೃತರು ಖಾಸಗಿ ಬಸ್ಸು ಚಾಲಕರಾಗಿದ್ದು, ಕೊನೆಯ ಟ್ರಿಪ್ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಅವಘಡ ನೆಡೆದಿದೆ.
ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸ್ ಭೇಟಿ ನೀಡಿದ್ದಾರೆ.