ಬೋರ್ಡ್ ಹೈಸ್ಕೂಲ್ ಕುಂದಾಪುರ;ಜೂನ್ 12 ರಂದು ಶತಮಾನೋತ್ತರ ಬೆಳ್ಳಿ ಹಬ್ಬದ ಭವನ ಹಸ್ತಾಂತರ

JANANUDI.COM NETWORK


ಹಳೆ ವಿದ್ಯಾರ್ಥಿ ಸಂಘ (ರಿ), ಬೋರ್ಡ್ ಹೈಸ್ಕೂಲ್ ಕುಂದಾಪುರದ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಶತಮಾನೋತ್ತರ ಬೆಳ್ಳಿ ಹಬ್ಬದ ಭವನ ಹಸ್ತಾಂತರ ಜೂನ್ 12ರಂದು ನಡೆಯಲಿದೆ.
ಈ ಸಮಾರಂಭದೊಂದಿಗೆ ಶಾಲೆಗೆ ಕೀರ್ತಿ ತಂದ ಕಾರಂತ, ಮುದ್ದಣ್ಣ, ಅಡಿಗರ ಪುತ್ಥಳಿ ಅನಾವರಣ ಕಾರ್ಯಕ್ರಮ ಸಹ ನಡೆಯಲಿದೆ.
ಕರ್ನಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ. ಎಸ್. ಪುತ್ಥಳಿ ಅನಾವರಣ ಮಾಡಲಿದ್ದಾರೆ. ಸಮಾರಂಭವನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೊಲಮನ್ ಸೋನ್ಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾದ ಶತಮಾನೋತ್ಸವ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಎ. ಜಿ. ಕೊಡ್ಗಿ ಹಿರಿಯ ಹಳೆ ವಿದ್ಯಾರ್ಥಿ, ಪ್ರಶಸ್ತಿ ಪುರಸ್ಕøತ ಇಂಜಿನಿಯರ್ ಪ್ರೊ. ಎಂ. ಎಸ್. ಶೆಟ್ಟಿ, ಕೋಟೇಶ್ವರ, ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಆಗಮಿಸಲಿದ್ದಾರೆ.
ಹಿರಿಯ ಸಾಹಿತಿ ವೈದೇಹಿ, ಖ್ಯಾತ ಅಂಕಣಗಾರ ಕೋ. ಶಿವಾನಂದ ಕಾರಂತ, ದಾನಿ ಕಟೀಲು ಹೇಮಂತ ಪೈ, ಖ್ಯಾತ ಉದ್ಯಮಿ ದಿನೇಶ ಬೆಂಗಳೂರು ಶುಭಾಶಂಸನೆ ಮಾಡಲಿದ್ದಾರೆ. ನಿರ್ಮಾಣಕ್ಕೆ ನೆರವಾದವರಿಗೆ ಸನ್ಮಾನ, ಗೌರವಾರ್ಪಣೆ ನಡೆಯಲಿದೆ.
ಸಭಾ ಕಾರ್ಯಕ್ರಮದ ನಂತರ ಹಳೆ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ. ಕಾರ್ಯಕ್ರಮಗಳಲ್ಲಿ ಎಲ್ಲಾ ಹಳೆ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಸಂಘಟಕರು, ಪ್ರಾಂಶುಪಾಲರು ವಿನಂತಿಸಿದ್ದಾರೆ.
ಬೆಳಿಗ್ಗೆ ಗಂಟೆ 10:00 ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಸರ್ವರೂ ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸಹಕರಿಸಬೇಕೆಂದು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎ. ಅನಂತ ಕೃಷ್ಣ ಕೊಡ್ಗಿ, ಶತಮಾನೋತ್ತರ ಬೆಳ್ಳಿ ಹಬ್ಬ ಸಮಿತಿಯ ಕಾರ್ಯದರ್ಶಿ ಕೆ. ನಾರಾಯಣ ವಿನಂತಿಸಿದ್ದಾರೆ.