ಕಾರು ಬೈಕ್ ಮುಖಾಮುಖಿ ಡಿಕ್ಕಿ : ಸ್ಕೂಟರ್ ಸವಾರ ಧರ್ಮಗುರು ಸ್ಟೀವನ್ ಲೋಬೊ ಸಹೋದರ, ಮ್ರತ್ಯು ವಶ, ಸಹಸವಾರ ಗಂಭೀರ

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನೊರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಎ.28 ರಂದು ಬೆಳಿಗ್ಗೆ ನಡೆದಿದೆ.

ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಅಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ‌.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸಂದೀಪ್ ಲೋಬೊ ವೆಲ್ಡಿಂಗ್ ವ್ರತ್ತಿಯಲ್ಲಿ ಕಾಂಟೆಕ್ಟ್ ಮಾಡುವರಾಗಿದ್ದು, ಸಹ ಸವಾರ ಇವರ ಜೊತೆ ಕೆಲಸ ಮಾಡುವನಾಗಿದ್ದು, ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀವೇಗದ ಹಾಗೂ ಅಜಾಕರಕತೆಯಿಂದ ಚಾಲನೆ ಮಾಡಿಕೊಂಡು ಬಂದ ರಿಟ್ಜ್ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಸಂದೀಪ್ ಲೋಬೊ ಅಮ್ಟಾಡಿ ಗ್ರಾಮದ ಗೋರೆಮಾರ್ ನಿವಾಸಿ ಹೆರಾಲ್ಡ್ ಲೋಬೊ ಮತ್ತು ಐರಿನ್ ಲೋಬೊ ದಂಪತಿಯ ಹಿರಿಯ ಮಗನಾಗಿದ್ದರು. ಅವರು ತಂದೆಯ ಕಾಂಟ್ರೆಕ್ಟ್ ವ್ರತ್ತಿಯನ್ನೆ ಮುಂದುವರಿಸುತಿದ್ದರು.
ಅಪಘಾತದಿಂದ ಗಾಯಗೊಂಡಿದ್ದ ಸಂದೀಪ್ ಲೋಬೋ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದ್ದು,ಅಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮ್ರತ್ಯುವಶವಾದ ಸಂದೀಪ್ ಲೋಬೊ ಕಾರ್ಮೆಲ್ ಮೇಳದ ಧರ್ಮಗುರು ವಂ|ಸ್ಟೀವನ್ ಲೋಬೊ ಅವರ ಹಿರಿಯ ಸಹೋದರನಾಗಿರುವನೆಂದು ತಿಳಿದು ಬಂದಿದೆ. ಇವರು ಪತ್ನಿ ಮತ್ತು ಮೂವರು ಮಕ್ಕಳನ್ನು, ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಪುಂಜಾಲಕಟ್ಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.