
ರೋಹನ್ ಕಾರ್ಪೊರೇಶನ್, ಮಾರ್ಚ್ 6, 2024: ಸುರಕ್ಷತೆಗೆ ಸಾಕ್ಷಿಯಾಗಿ, ರೋಹನ್ ಕಾರ್ಪೊರೇಶನ್ 06-03-2024ರಂದು ರೋಹನ್ ಸಿಟಿ ಬಿಜೈನಲ್ಲಿ 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳನ್ನು ತಲುಪಿದ ಗಮನಾರ್ಹ ಸಾಧನೆಯನ್ನು ಆಚರಿಸಿತು. 5ನೇ ರಾಷ್ಟ್ರೀಯ ಸುರಕ್ಷತಾ ದಿನದ ವಾರದ ಅಭಿಯಾನದಲ್ಲಿ ಸಾಧಿಸಿದ ಮೈಲಿಗಲ್ಲು, ಸುರಕ್ಷತೆ ಮತ್ತು ಯೋಗಕ್ಷೇಮದ ಸಂಸ್ಕೃತಿಯನ್ನು ಬೆಳೆಸುವಲ್ಲಿ ರೋಹನ್ ಕಾರ್ಪೊರೇಶನ್ ಬದ್ಧವಾಗಿದೆ. ಈ ಐತಿಹಾಸಿಕ ಕ್ಷಣವನ್ನು ಕಾರ್ಮಿಕರು, ಉದ್ಯೋಗಿಗಳು ಮತ್ತು ಮ್ಯಾನೇಜ್ಮೆಂಟ್ ಸೇರಿ ಆಚರಿಸಿತು. ಈ ಸಾಧನೆಯು ತಮ್ಮ ದೈನಂದಿನ ಜೀವನದಲ್ಲಿ ಸುರಕ್ಷತೆಗೆ ಆದ್ಯತೆ ನೀಡಿದ […]

ಕುಂದಾಪುರ: ಪ್ರತಿಕ್ಷಣ ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕರೆ ನೀಡಿದರು .ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ನಾವೆಲ್ಲರೂ ಸಮಾಜದ ಋಣದಲ್ಲಿದ್ದೇವೆ. ಅವರು ಋಣವನ್ನು ತೀರಿಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನೆಲೆಯಲ್ಲಿ ವಿದ್ಯಾರ್ಥಿಗಳು ಪದವಿಯ ಅಧ್ಯಯನದ ಸಮಯವು ಬದುಕನ್ನು ಸರಿಯಾದ ರೀತಿಯಲ್ಲಿ ರೂಪಿಸಿಕೊಳ್ಳಲು ಸೂಕ್ತ ಸಮಯವಾಗಿದೆ. […]

ಮಂಗಳೂರು: ಸೇಂಟ್ ಆಗ್ನೆಸ್ ಪಿಯು ಕಾಲೇಜು ಯುವತಿಯರನ್ನು ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವ ಗುರಿಯನ್ನು ಹೊಂದಿರುವ ಅಪೋಸ್ಟೋಲಿಕ್ ಕಾರ್ಮೆಲ್ ಸಭೆಯಿಂದ ನಡೆಸಲ್ಪಡುವ ಪ್ರಮುಖ ಸಂಸ್ಥೆಯಾಗಿದೆ. ಅಪೋಸ್ಟೋಲಿಕ್ ಕಾರ್ಮೆಲ್ ಕಾಂಗ್ರೆಗೇಶನ್ ಎಜುಕೇಶನಲ್ ಸೊಸೈಟಿಯು ತಮ್ಮ ಪಠ್ಯಕ್ರಮದ ಭಾಗವಾಗಿ ಸೇವಾ ಕಲಿಕೆಯ ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ನಿಟ್ಟಿನಲ್ಲಿ ಸೇಂಟ್ ಆಗ್ನೆಸ್ ಪಿಯು ಕಾಲೇಜು 6ನೇ ಮಾರ್ಚ್ 2024 ರಂದು “ಸೇವಾ ಕಲಿಕೆ – ಹೃದಯ, ತಲೆ ಮತ್ತು ಕೈಗಳ ಶಿಕ್ಷಣಕ್ಕೆ ಒಂದು ವಿಧಾನ” ಎಂಬ ವಿಷಯದ ಕುರಿತು ಸಿಬ್ಬಂದಿ ಸಂವರ್ಧನಾ […]

ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ವತಿಯಿಂದ ಪ್ರಾರಂಭಗೊಂಡ ಸಮುದಾಯ ಬಾನುಲಿ ರೇಡಿಯೋ ಕುಂದಾಪ್ರ 89.6 ಎಫ್.ಎಮ್. ನಿರಂತರ ಪ್ರಸಾರ ಮಾರ್ಚ್ 13 ರಿಂದ ಆರಂಭಗೊಳ್ಳಲಿದೆ. ಅಕಾಡೆಮಿ ಆಫ್ಜನರಲ್ ಎಜ್ಯುಕೇಶನ್ ಮಣಿಪಾಲದ ಅಧ್ಯಕ್ಷಡಾ. ಎಚ್.ಎಸ್.ಬಲ್ಲಾಳ್ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ವರದರಾಯ ಪೈ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಭಂಡಾರ್ಕಾರ್ಸ್ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ. ಶಾಂತಾರಾಮ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ.ರೇಡಿಯೋ ಕುಂದಾಪುರ ಇದು ಲಾಭರಹಿತ ಸಮುದಾಯ ಬಾನುಲಿ ಕೇಂದ್ರವಾಗಿದ್ದು ಸ್ಥಳೀಯ ಜನರಜೀವನದ ಪ್ರಗತಿ ಸುಧಾರಿಸುವ ಗುರಿಯನ್ನು ಹೊಂದಿದೆ. ಕೃಷಿ, […]

ಕುಂದಾಪುರ: ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ದಿನಾಂಕ 05.03.2024 ಮಂಗಳವಾರದಂದು ಶಿಕ್ಷಕ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲತಾ ಜಿ. ಭಟ್ ಸ್ವಾಗತಿಸಿದರು. ಸಂಸ್ಥೆಯ ಪ್ರಾಂಶುಪಾಲರು, ಸಭೆಯ ಅಧ್ಯಕ್ಷರೂ ಆಗಿರುವ ಡಾ. ಚಿಂತನಾ ರಾಜೇಶ್ ತರಗತಿಯ ಹಸ್ತಪ್ರತಿಯನ್ನು ಅನಾವರಣಗೊಳಿಸಿ ಪೋಷಕರನ್ನು ಉದ್ದೇಶಿಸಿ ತಮ್ಮ ಮಕ್ಕಳನ್ನು ಸುಸಂಸ್ಕೃತ ಸಜ್ಜನ ವ್ಯಕ್ತಿಯಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರಷ್ಟೇ ಪೋಷಕರಿಗೂ ಇದೆ ಎಂಬುದಾಗಿ ತಿಳಿಸಿದರು. […]

ಭೂ ನ್ಯಾಯ ಮಂಡಳಿಗೆ ರಮೇಶ್ ಶೆಟ್ಟಿ ವಕ್ವಾಡಿ ಆಯ್ಕೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭೂ ನ್ಯಾಯ ಮಂಡಳಿಗೆ ಕಾಳಾವರ ಗ್ರಾಮ ಪಂಚಾಯತ್ ಸದಸ್ಯರಾಗಿ ಜನ ಮೆಚ್ಚುವ ಸೇವೆ ಸಲ್ಲಿಸಿ ಇದೀಗ ಕರ್ನಾಟಕ ಸರಕಾರದಿಂದ ಕುಂದಾಪುರ ತಾಲೂಕು ಭೂ ನ್ಯಾಯ ಮಂಡಳಿ ( ಲ್ಯಾಂಡ್ ಟ್ರಿಬುನಲ್ ) ಗೆ ನಾಮನಿರ್ದೇಶನಗೊಂಡು ಸದಸ್ಯರಾಗಿ ಆಯ್ಕೆ ಮಾಡಿ ಸರಕಾರ ಆದೇಶ ಹೊರಡಿಸಿದೆ

ಬೆಳ್ಮಣ್ಣು ಜೇಸಿಐ ನೇತೃತ್ವದಲ್ಲಿ ಮಾರ್ಚ್ 10ರಂದು ಮಹಿಳಾ – ಯುವತಿಯರ ವಿಭಾಗದ ಥ್ರೋಬಾಲ್ ಪಂದ್ಯಾಟಜೇಸಿಐ ಬೆಳ್ಮಣ್ಣು, ಯುವ ಜೇಸಿ ವಿಭಾಗ ಮತ್ತು ಮಹಿಳಾ ಜೇಸಿ ವಿಭಾಗದ ನೇತೃತ್ವದಲ್ಲಿ 44ನೇ ವರ್ಷಾಚರಣೆ ಅಂಗವಾಗಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 10ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 08-30ರಿಂದ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಶಾಲಾ ಮೈದಾನದಲ್ಲಿ ಮಹಿಳಾ – ಯುವತಿಯರ ವಿಭಾಗದ ಥ್ರೋಬಾಲ್ ಪಂದ್ಯಾಟ ಜರಗಲಿದೆ. ಬೆಳ್ಮಣ್ಣು ಜೇಸಿಐ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ ಅವರು ಪತ್ರಿಕಾ ಪ್ರಕಟನೆಗೆ […]

ಕುಂದಾಪುರ: ತಲ್ಲೂರು ಕೋಟೆಬಾಗಿಲು ಶಾಲಾ ವಠಾರದಲ್ಲಿ ನಡೆದ 30ಗಜಗಳ ಕ್ರಿಕೆಟ್ ಪಂದ್ಯಾಟದ ಕೆ ಕೆ ವೈ ಸ್ಟಾರ್ ಟ್ರೋಫಿ 2024 ಇದರ ಉದ್ಘಾಟನಾ ಸಮಾರಂಭದಲ್ಲಿ ಸಮಾಜ ಸೇವೆ ಕ್ರೀಡೆ ಶೈಕ್ಷಣಿಕ ಮತ್ತು ಚಿತ್ರಕಲೆಯಲ್ಲಿ ವಿಶೇಷ ಸಾಧನೆ ಮಾಡಿದ ಪ್ರತಿಭೆಗಳಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಟಿ ಬಿ ಶೆಟ್ಟಿ,ವಸಂತ ಆರ್ ಹೆಗ್ಡೆ ತಲ್ಲೂರು ಪಂಚಾಯತ್ ಅಧ್ಯಕ್ಷರಾದ ಗಿರೀಶ್ ಎಸ್ ನಾಯ್ಕ್ ,ಉದ್ಯಮಿಗಳಾದ ಸುಂದರ್ ಶೆಟ್ಟಿ ರಮೇಶ್ ಆಚಾರ್ಯ , ರ್ವೋತ್ತಮ ಶೆಟ್ಟಿ ಸುರೇಶ್ […]

ಮಂಗಳೂರು, 04.03.2024 : ತನ್ನನ್ನು ತಾನು ಕ್ಯಾಥೊಲಿಕ್ ನಾಯಕನೆಂದು ಬಿಂಬಿಸಿಕೊಳ್ಳುತ್ತಿರುವ ಮತ್ತು ಅಧಿಕೃತ ಅನುಮತಿಯಿಲ್ಲದೆ ವಿವಿಧ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುತ್ತಿರುವ ರಾಬರ್ಟ್ ರೊಸಾರಿಯೊ ಅವರಿಂದ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯವು ಅಂತರ ಕಾಯ್ದುಕೊಳ್ಳುತ್ತದೆ. ಕ್ಯಾಥೊಲಿಕ್ ಸಮುದಾಯವನ್ನು ಪ್ರತಿನಿಧಿಸಲು ರಾಬರ್ಟ್ ರೊಸಾರಿಯೊರಿಗೆ ಧರ್ಮಪ್ರಾಂತ್ಯದ ಅಧಿಕೃತ ಅಧಿಕಾರಿಗಳು ಅಧಿಕಾರ ನೀಡಿಲ್ಲ ಅಥವಾ ಅವರನ್ನು ವಿನಂತಿಸಿಲ್ಲ ಎಂದು ಡಯಾಸಿಸ್ ಸ್ಪಷ್ಟಪಡಿಸಲು ಬಯಸುತ್ತದೆ. ವ್ಯಕ್ತಿಗಳು ಸ್ವ ನೆಲೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಮತ್ತು ನಂಬಿಕೆಗಳನ್ನು ವ್ಯಕ್ತಪಡಿಸಬಹುದು, ಆದರೆ ರಾಬರ್ಟ್ ರೊಸಾರಿಯೊ ಎಲ್ಲಾ ಕ್ಯಾಥೋಲಿಕರನ್ನು ಪ್ರತಿನಿಧಿಸುವ ನಾಯಕ […]