ಕುಂದಾಪುರ, ಜು.16; ನಮ್ಮ ಸಂಸ್ಥೆಯಾದ ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಇಲ್ಲಿ ಸರಿ ಸುಮಾರು 13 ವರ್ಷಗಳ ಕಾಲ (2000 ರಿಂದ 2013ರವರೆಗೆ) ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಶ್ರೀಮತಿ ಕೊನಿ ರೆಬೆಲ್ಲೋ ಅವರು ದಿನಾಂಕ 16.07.2025ರಂದು ನಿಧನ (74 ವರ್ಷ) ಹೊಂದಿದ್ದು, ಅವರ ನಿಧನದ ಸುದ್ದಿ ನಮ್ಮೆಲ್ಲರಿಗೂ ತುಂಬಾ ದುಃಖ ತಂದಿದೆ. ಅವರು ಅಪಾರ ಬದ್ಧತೆ ಮತ್ತು ಶ್ರದ್ಧೆಯಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಿಷ್ಠಾವಂತ ಶಿಕ್ಷಕಿ ಹಾಗೂ ಕರುಣಾಮಯಿ […]
ಗಂಗೊಳ್ಳಿ, ಜು.15; ಇಂದು ಬೆಳಿಗ್ಗೆ ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ದೋಣಿಯಲ್ಲಿ ನಾಲ್ಕು ಜನರು ಮೀನುಗಾರರು ಹೊರಟಿದ್ದು, ಅಲೆಯ ರಭಸಕ್ಕೆ ಸಿಲುಕಿ ದೋಣಿ ಮಗುಚಿದ್ದು, ಒಬ್ಬ ಮೀನುಗಾರ ಈಜಿ ಬೇರೆ ದೋಣಿ ತಲುಪಿದ್ದು ಇನ್ನೂ ಮೂವರು ಮೀನುಗಾರರು ಈತನಕ ನಾಪತ್ತೆಯಾಗಿದ್ದಾರೆ. ಗಂಗೊಳ್ಳಿ ಸೀವಾಕ್ ಬಳಿ ಈ ದುರ್ಘಟನೆ ನಡೆದಿದ್ದು, ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಮತ್ತು ರೋಹಿತ್ ಖಾರ್ವಿ ನಾಪತ್ತೆಯಾದ ಮೀನುಗಾರರು. ಸಂತ ಸಂತೋಷ್ ಖಾರ್ವಿ ಎನ್ನುವವರನ್ನು ಬೇರೊಂದು ಬೋಟ್ ನವರು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.ಸಿಪಾಯಿ ಸುರೇಶ […]
CA ಗಿರೀಶ್ ಪೈ(T. ವಿಟ್ಟಲ್ದಾಸ್ ಪೈ ಮತ್ತು ಶ್ರೀಮತಿ ವಿನಯ ವಿಟ್ಟಲ್ದಾಸ್ ಪೈ ದಂಪತಿಗಳ ಪುತ್ರ, ತೆಕ್ಕಟ್ಟೆ) CA ಕೌಶಿಕ್ ಅಡಿಗ(ದಿ| ಪರಮೇಶ್ವರ ಅಡಿಗ ಮತ್ತು ಶ್ರೀಮತಿ ಸುಲೋಚನ ಅಡಿಗ ದಂಪತಿಗಳ ಪುತ್ರ, ಕೋಟೇಶ್ವರ) CA ಸಹನಾ ಮೇಸ್ತಾ(ಶ್ರೀ ಜಗದೀಶ ಮೇಸ್ತಾ ಮತ್ತು ಶ್ರೀಮತಿ ಸವಿತಾ ದಂಪತಿಗಳ ಪುತ್ರಿ, ಕುಂದಾಪುರ) CA ನಾಗೇಂದ್ರ ಕಾಮತ್(ಶ್ರೀ ಅಶೋಕ್ ಕಾಮತ್ ಮತ್ತು ಶ್ರೀಮತಿ ಅಶ್ವಿನಿ ಕಾಮತ್ ದಂಪತಿಗಳ ಪುತ್ರ, ಶಿರೂರು) CA ಪ್ರಸಾದ್. ಪಿ. ಶಾನಭೋಗ್(ಶ್ರೀ ಪುರಂದರ್ ಶಾನಭೋಗ್ ಮತ್ತು […]
ಮಂಗಳೂರು; ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ (FMCI) ಅಂಗವಾದ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು (FMHMC) ತನ್ನ ರೂಬಿ ಜುಬಿಲಿ ಮಹೋತ್ಸವವನ್ನು ಆಚರಿಸಿತು – ಸಮಾಜಕ್ಕೆ ತನ್ನ 40 ವರ್ಷಗಳ ಸೇವೆಯನ್ನು ಸಂಭ್ರಮದಿಂದ, ಜುಲೈ 14, 2025 ರಂದು ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ(FMCI)ಗಳ ನಿರ್ದೇಶಕರಾದ ವಂದನೀಯ ಫಾದರ್ ಫೌಸ್ಟಿನ್ ಲ್ಯೂಕಾಸ್ ಲೋಬೊ ಮತ್ತು ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು(FMHMC) ಆಡಳಿತಾಧಿಕಾರಿ ವಂದನೀಯ ಫಾದರ್ ಡೊನಾಲ್ಡ್ ನಿಲೇಶ್ […]
ಮೂಡ್ಲಕಟ್ಟೆ ಐಎಂಜೆ ಸಮೂಹ ವಿದ್ಯಾಸಂಸ್ಥೆಗಳ ಅಡಿಯಲ್ಲಿ ಬರುವ ವಿದ್ಯಾ ಅಕಾಡೆಮಿ ಶಾಲೆಯಲ್ಲಿ ಪೋಷಕರಿಗಾಗಿ ಓರಿಯಂಟೇಷನ್ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಪೋಷಕರಿಗೆ ಮಕ್ಕಳ ಬೆಳೆವಣಿಗೆ, ಭಾವನಾತ್ಮಕ ಚಟುವಟಿಕೆಗಳು ಹಾಗೂ ಶೈಕ್ಷಣಿಕ ಪ್ರಗತಿಯ ಬಗ್ಗೆ ಸ್ಪಷ್ಟ ಅರಿವನ್ನು ನೀಡುವ ಗುರಿಯನ್ನು ಹೊಂದಿತ್ತು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಮಾನಸಿಕ ಆರೋಗ್ಯ ಸಲಹೆಗಾರರಾಗಿ ಸೇವೆ ನೀಡುತ್ತಿರುವ ಶ್ರೀ ಗಿರೀಶ್ ಎಂ ಎನ್ ಅವರು ಭಾಗವಹಿಸಿದ್ದರು. ಅವರು ಮಕ್ಕಳಲ್ಲಿ ಕಂಡುಬರುವ ಆತ್ಮವಿಶ್ವಾಸದ ಕೊರತೆ, ಒತ್ತಡ, ತಂತ್ರಜ್ಞಾನದ ಇತಿಮಿತಿಯ ಬಳಕೆ ಮುಂತಾದ ಸಮಸ್ಯೆಗಳ […]
ಕುಂದಾಪುರ; “ಜೀವನದ ಆಧಾರಸ್ತಂಭ ಕಟ್ಟಲು ಮುಖ್ಯವಾಗುವ ಪಿ.ಯು.ಸಿ ಹಂತ ವಿದ್ಯಾರ್ಥಿಗಳೆದರು ಹಲವು ಕ್ಷೇತ್ರಗಳನ್ನು ತೆರೆದಿಡುತ್ತದೆ. ಸಾಂಸ್ಕ್ರತಿಕ ಮತ್ತು ಆಟೋಟಗಳಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದರೂ, ಭವಿಷ್ಯದಲ್ಲಿ ಯಾವುದೇ ಉದ್ಯೋಗಕ್ಕೆ ಹೋದ ಮೇಲೆ ಶಿಕ್ಷಣದ ಹಿನ್ನೆಲೆ ಇದ್ದರೆ ಮಾತ್ರ ಯಶ: ಪಡೆಯಬಹುದು ” ಎಂದು ಕಿರುತೆರೆ ನಟಿ, ರಿಯಾಲಿಟಿ ಶೋ ಮಜಾಭಾರತ, ರಾಜಾ ರಾಣಿ ಖ್ಯಾತಿಯ ಪ್ರಿಯಾಂಕಾ ಕಾಮತ್ ರವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನವಸಂಕೇತ್- ಫ್ರೆಷರ್ಸ್ ಫಿಯೆಸ್ಟಾ ವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ […]
ಕುಂದಾಪುರ: ಜಾಗತಿಕ ಮಟ್ಟದಲ್ಲಿ ಮೊತ್ತ ಮೊದಲಬಾರಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದ್ದು, ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಂದಾಪುರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಮಾಡಿದರು .ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಮೊಳಹಳ್ಳಿ ದಿನೇಶ್ ಹೆಗ್ಡೆ ಮಾತನಾಡಿ, ರಾಜ್ಯ ಸರ್ಕಾರವು ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ. ದೇಶದ ಇತಿಹಾಸದಲ್ಲಿ […]
ತಲ್ಲೂರು ಸಂತ ಫ್ರಾನ್ಸಿಸ್ ದೇವಾಲಯದಲ್ಲಿ ದಿನಾಂಕ 13/7/2025 ರಂದು “ದಂಪತಿಗಳ ದಿನಾಚರಣೆ ” ಯನ್ನು ಕುಟುಂಬ ಆಯೋಗದ ನೇತೃತ್ವದಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಯಿತು. ಅಂದು ಬೆಳಿಗ್ಗೆ ದಂಪತಿಗಳಿಗಾಗಿ ದಿವ್ಯ ಬಲಿಪೂಜೆಯನ್ನು ,ಉಡುಪಿ ಡಯಾಸಿಸಿನ ಜುಡಿಷಿಯಲ್ ವಿಕಾರ್ ಹಾಗೂ ಪ್ಯಾರಿಷ್ ಆಡಳಿತಾಧಿಕಾರಿ (ಪಾಂಬೂರ್) ಅತೀ ವಂದನೀಯ ಫಾ.ಡಾI ರೋಶನ್ ಡಿಸೋಜ ನೆರವೇರಿಸಿ,ದಂಪತಿಗಳಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು ಹಾಗೂ ಅವರಿಗಾಗಿ ಹೊಸದಾಗಿ ಪ್ರತಿಜ್ಞಾ ವಿಧಿಯನ್ನು ನೆರವೇರಿಸಿದರು. ತದನಂತರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಂಪನ್ಮೂಲ ವ್ಯಕ್ತಿಗಳಾಗಿ, ಉಡುಪಿ ಡಯಾಸಿಸ್ ನ ಕುಟುಂಬ […]
ಮಂಗಳೂರು; ಕಾದಂಬರಿ ಚರಿತ್ರೆ ಅಲ್ಲ, ಆದರೆ ಕಾದಂಬರಿಯಲ್ಲಿ ಚರಿತ್ರೆ ಇರಬಹುದು. ಕಾದಂಬರಿ ಸವಿಸ್ತಾರವಾಗಿ ಜೀವನವನ್ನು ವಿಶ್ಲೇಷಣೆ ಮಾಡಬಲ್ಲುದು. ಆಂಜೆಲ್ 75 ವರ್ಷಗಳ ಹಿಂದಿನ ಜನಜೀವನವನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದೆ. ಕೊಂಕಣಿ ಅಕಾಡೆಮಿ ಒಂದು ಔಚಿತ್ಯಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಿಂದ ಮುಂದೆ ಸಾಹಿತ್ಯ ರಚಿಸುವವರಿಗೆ ಪ್ರೇರಣೆ ದೊರೆಯಲಿದೆ. ಅಕಾಡೆಮಿ ಸಾಹಿತ್ಯಾಸಕ್ತ ಯುವಜನತೆ ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಕ್ರಮ ವಹಿಸಿದರೆ ಈ ಪರಂಪರೆ ಮುಂದುವರಿಯಲಿದೆ ಎಂದು ಡಾ ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ್ ಡಾ ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯ […]

