ಕುಂದಾಪುರ,ಜೂ.24 : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆಯ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಜೂ. 23 ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಹಾಗೂ ಶಾಲಾ ಜಂಟಿ ಕಾರ್ಯದರ್ಶಿಗಳಾದ ಪೌಲ್ ರೇಗೋರವರು ದೀಪವನ್ನು ಬೆಳಗಿಸಿ “ನಾಯಕ ಅಂದರೆ ದಾರಿ ತಿಳಿದಿರುವವನು ಹಾಗೂ ದಾರಿಯನ್ನು ತೋರಿಸುವವನೆ ನಿಜವಾದ ನಾಯಕ” ಎಂದು ಸಂದೇಶ ನೀಡಿ ಎಲ್ಲಾ ಮಂತ್ರಿಗಳನ್ನು ಹಾಗೂ ಸರ್ವ ಸಂಘಗಳ ಅಧ್ಯಕ್ಷರನ್ನು ಅಭಿನಂದಿಸಿ ತಮ್ಮ […]
ಕುಂದಾಪುರ, ಜೂ, 24; ಕುಂದಾಪುರದ ಯುಬಿಎಂಸಿ ಮತ್ತು ಸಿ ಎಸ ಐ ಕೃಪಾ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಯೋಗದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು, ಮತ್ತು ಸಿಎಸ್ಐ ಕೃಪಾ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ರೀಮತಿ ಸವಿತಾರವರು ಮನುಷ್ಯನ ಆರೋಗ್ಯಕ್ಕೆ ಯೋಗಾಸನ ಎಷ್ಟು ಮುಖ್ಯವೆಂದು ತಿಳಿ ಹೇಳಿದರು. ಮಕ್ಕಳಿಗೆಲ್ಲರಿಗೂ ಯೋಗದ ಹಲವಾರು ಆಸನಗಳನ್ನು ಹೇಳಿಕೊಟ್ಟು ಮಾಡಿಸುತ್ತಾ ಅಂದಿನ […]
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಶಿನೆಡ್ ಫೆರ್ನಾಂಡಿಸ್ ಬರೆದ ‘ ದಿ ಡಿಸೆಪ್ಶನ್’ ಎಂಬ ಕೃತಿಯ ಅನಾವರಣ ಸಮಾರಂಭ ಜೂನ್ 20 ರಂದು ಶಾಲಾ ಸಂಸ್ಥಾಪಕರ ದಿನಾಚರಣೆಯ ಸಂದರ್ಭದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲೆಯ ನಿಕಟಪೂರ್ವ ಪ್ರಾಂಶುಪಾಲರಾದ ರೆ.ಫಾ. ಮೆಲ್ವಿನ್ ಅನಿಲ್ ಲೋಬೊ ಪುಸ್ತಕ ಬಿಡುಗಡೆ ಮಾಡಿ ಶಿನೆಡ್ ಅವರ ವಿಶೇಷ ಸಾಹಿತ್ಯಿಕ ಸಾಧನೆಯನ್ನು ಕೊಂಡಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ರೋಹನ್ ಡಿ’ ಅಲ್ಮೇಡಾ ಎಸ್ ಜೆ ಯವರು ಶಿನೆಡ್ ಗೆ ಸಾಹಿತ್ಯದ […]
ಬಾರ್ಕೂರು; ಹೊಸಳ, ಬಾರ್ಕೂರು ಮೇರಿಕ್ನಾಲ್ ಹೈಯರ್ ಪ್ರೈಮರಿ ಶಾಲೆಯಲ್ಲಿ 20 ಜೂನ್ 2025 ರಂದು ಅಗಾಧ ಸಂತೋಷ ಮತ್ತು ಹೃತ್ಪೂರ್ವಕ ಕೃತಜ್ಞತೆಯೊಂದಿಗೆ, ಹೊಸಳ, ಬಾರ್ಕೂರಿನ ಮೇರಿಕ್ನಾಲ್ ಹೈಯರ್ ಪ್ರೈಮರಿ ಶಾಲೆಯು 2025–26 ಶೈಕ್ಷಣಿಕ ವರ್ಷದ ವಾರ್ಷಿಕ ಉಚಿತ ಸಮವಸ್ತ್ರ ಮತ್ತು ನೋಟ್ಬುಕ್ ವಿತರಣಾ ಸಮಾರಂಭ ನಡೆಯಿತು. ಈ ಹೃದಯಸ್ಪರ್ಶಿ ಉಪಕ್ರಮವನ್ನು ಮುಂಬೈನ ಸೇಂಟ್ ಪೀಟರ್ಸ್ ಅಸೋಸಿಯೇಷನ್ (ಬಾರ್ಕೂರು) ಸಾಧ್ಯವಾಗಿಸಿತು, ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣವನ್ನು ಪೋಷಿಸಲು ಮತ್ತು ಯುವ ಕಲಿಯುವವರನ್ನು ಸಬಲೀಕರಣಗೊಳಿಸಲು ಅವರ ನಿರಂತರ ಸಮರ್ಪಣೆಯನ್ನು ಬಹಳವಾಗಿ ಪ್ರಶಂಸಿಸಲಾಯಿತುಈ […]
ಕಟಪಾಡಿ : ಗ್ರಾಮ ಪಂಚಾಯಿತಿ ಮುಂದುಗಡೆ ಬಿಜೆಪಿ ಧರಣಿ ಇದು ಗುಬ್ಬಚ್ಚಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿ ಜನರ ಕಣ್ಣಿಗೆ ಮಂಕುಬೂದಿ ಎರಚಿ ನಾಟಕ ಪ್ರದರ್ಶಿಸುವ ಹೇಡಿತನದ ಪರಮಾವಧಿ. ನಮ್ಮ ಕರಾವಳಿಯ ಪಂಚಾಯತ್ ವ್ಯಾಪ್ತಿಯಲ್ಲಿ ಅನೇಕ ಜ್ವಲಂತ ಸಮಸ್ಯೆಗಳ ಬಗ್ಗೆ ಕರಾವಳಿಯಾದ್ಯಂತ ಗೆದ್ದು ಬಂದ ಶಾಸಕರು ವಿಧಾನಸೌಧದ ಅಧಿವೇಶನದಲ್ಲಿ ಚರ್ಚಿಸಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲೆಯ ಎಲ್ಲಾ ಶಾಸಕರು ಮಾಡಲಿ. ಶಾಸಕರು ಗೆದ್ದು ಬಂದ ಮೇಲೆ ಪಕ್ಷಕ್ಕೆ ಸೀಮಿತವಲ್ಲ. ಪಕ್ಷದ ತತ್ವ ಸಿದ್ಧಾಂತಗಳನ್ನು ಬದಿಗಿಟ್ಟು ಪಕ್ಷಾತೀತವಾಗಿ ಎಲ್ಲಾ […]
ಉಡುಪಿ: ಜಿಲ್ಲೆಗೆ ನೂತನವಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆಗಮಿಸಿರುವ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು.ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ಶುಭಾಶಯ ಮತ್ತು ಆಶೀರ್ವಾದಗಳನ್ನು ಕೋರಿದ ನಿಯೋಗ ಧರ್ಮಪ್ರಾಂತ್ಯದ ವತಿಯಿಂದ ಸರ್ವ ರೀತಿಯ ಸಹಕಾರದ ಭರವಸೆಯನ್ನು ನೀಡಿದರು.ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಜಿಲ್ಲೆಗೆ ನೂತನವಾಗಿ ಅಧಿಕಾರ ಸ್ವೀಕರಿಸಿದ್ದು ಕ್ರೈಸ್ತ ಸಮುದಾಯದ ಸಂಸ್ಥೆಗಳ ಕುರಿತು ಮಾಹಿತಿ ಪಡೆದು […]
ಉಡುಪಿ: ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು.ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ಶುಭಾಶಯ ಮತ್ತು ಆಶೀರ್ವಾದಗಳನ್ನು ಕೋರಿದ ನಿಯೋಗ ಧರ್ಮಪ್ರಾಂತ್ಯದ ವತಿಯಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಎಲ್ಲಾ ರೀತಿಯ ಸಹಕಾರದ ಭರವಸೆಯನ್ನು ನೀಡಿದರು.ನಿಯೋಗದ ಭರವಸೆಗೆ ಸ್ಪಂದಿಸಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಸಮುದಾಯಕ್ಕೆ ಯಾವುದೇ ರೀತಿಯ ಸಮಸ್ಯೆಗಳಾದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಎಲ್ಲಾ […]
ಕುಂದಾಪುರ, ಜೂ.23; ರಂದು ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನಲ್ಲಿ ಶ್ರೀ ಸಾಮಾನ್ಯ ಆಯೋಗ ಹಾಗೂ ಕಥೋಲಿಕ್ ಸಭಾ ತಲ್ಲೂರು ಘಟಕ ಇದರ ಜಂಟಿ ಆಶ್ರಯದಲ್ಲಿ 22/06/2025 ರಂದು ಶ್ರೀ ಸಾಮಾನ್ಯರ ಮಹೋತ್ಸವನ್ನು ಆಚರಿಸಲಾಯಿತು. ಅಂದು ಶ್ರೀ ಸಾಮಾನ್ಯರಿಗಾಗಿ ದಿವ್ಯ ಬಲಿಪೂಜೆಯನ್ನು, ಮೂಲತಃ ದುಬೈಯಲ್ಲಿ ಧಾರ್ಮಿಕ ಸೇವೆಯನ್ನು ನೀಡುತ್ತಿರುವ ವಂದನೀಯ ಫಾ. ವಿಕ್ಟರ್ ಫೆರ್ನಾಂಡಿಸ್, ಪ್ರಧಾನ ಗುರುಗಳಾಗಿ ಆಗಮಿಸಿ ಬಲಿಪೂಜೆಯನ್ನು ನೆರವೇರಿಸಿ ಶ್ರೀ ಸಾಮಾನ್ಯರಿಗಾಗಿ ಪ್ರಾರ್ಥಿಸಿದರು.ಲಘು ಉಪಹಾರದ ನಂತರ ಚರ್ಚಿನ ಸಭಾಂಗಣದಲ್ಲಿ ಉದ್ಯಮಿಗಳಿಗೆ ಹಾಗೂ ಸ್ವಂತ ಉದ್ದಿಮೆ […]
ಕುಂದಾಪುರ: ಜೂನ್ 21ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶ, ಕುಂದಾಪುರದ ಪತಂಜಲಿ ಯೋಗಧಾಮ, ಮತ್ತು ಲಯನ್ಸ್ ಕ್ಲಬ್ ಕ್ರೌನ್ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ಯುಥ್ ರೆಡ್ ಕ್ರಾಸ್ ಘಟಕ, ರೇಂಜರ್ಸ್ ಮತ್ತು ರೋವರ್ಸ್ ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ* ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಪತಂಜಲಿ ಆರೋಗ್ಯಧಾಮ, ಕಡ್ಗಿರಸ್ತೆ, ಕುಂದಾಪುರ ಇಲ್ಲಿನ ಯೋಗ ಪ್ರಕೃತಿ ಚಿಕಿತ್ಸಾ ತಜ್ಞರು ಡಾ.ಸಾತಪ್ಪ ಹೂವಿನಹಳ್ಳಿ ಮಾತನಾಡಿ, ಯೋಗವು ಇಂದಿನ […]

