Student Parliament elections at UBMC English Medium School ಕುಂದಾಪುರದ ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಚುನಾವಣೆಯ ಅರಿವು ಮತ್ತು ಜವಾಬ್ದಾರಿಗಳನ್ನು ಮನವರಿಕೆ ಮಾಡುವ ಉದ್ದೇಶದಿಂದ 2025-26ನೆಯ ಸಾಲಿನ ವಿದ್ಯಾರ್ಥಿ ಸಂಸತ್ ಚುನಾವಣೆಯನ್ನು ದಿನಾಂಕ 28/06/2025 ಶನಿವಾರದಂದು ನಡೆಸಲಾಯಿತು. ಈ ಚುನಾವಣೆಯ ಮೂಲಕ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕನನ್ನು ಆರಿಸಲಾಯಿತು. ವಿದ್ಯಾರ್ಥಿ ನಾಯಕಿಯಾಗಿ ಪ್ರಣತಿ ಏಳನೇ ತರಗತಿ, ಉಪನಾಯಕನಾಗಿ ಗಗನ್ ಆರನೇ ತರಗತಿ ಬಹುಮತಗಳಿಂದ ಆಯ್ಕೆಯಾದರು. ಆಯ್ಕೆಯಾದ ಇವರು ಗಳೊಂದಿಗೆ ಉಳಿದ ಸ್ಪರ್ಧಿಗಳೊಂದಿಗೆ ಮಂತ್ರಿಮಂಡಲವನ್ನು […]

Read More

ಎಂ ಐ ಟಿ ಕುಂದಾಪುರ ಇಲ್ಲಿನ ಎಂ.ಬಿ.ಎ ವಿಭಾಗದಲ್ಲಿ ನ್ಯಾವಿಗೇಟಿಂಗ್ ದಿ ಡಿಜಿಟಲ್ ಫ್ರಾಂಟಿಯರ್: ದಿ ಫ್ಯೂಚರ್ ಆಫ್ ಟೆಕ್-ಡ್ರೈವನ್ ಎಂಟರ್‌ಪ್ರೈಸಸ್  ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಅನೀಶ್ ಬಿ., ಬಿಸಿನೆಸ್ ಅನಾಲಿಸ್ಟ್, ಟಿಎಟೊಎವ್ರಿ, ಬೆಂಗಳೂರು  ಇವರು ಆಗಮಿಸಿ ಪ್ರಥಮ ವರ್ಷದ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಐಟಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ,   ಆರ್ಟಿಫಿಶಿಯಲ್ ಇಂಟಲಿಜೆನ್ಸ್  ಯುಗದಲ್ಲಿ  ಎಂ.ಬಿ.ಎ ಪದವೀಧರರ ಪಾತ್ರದ ಬಗ್ಗೆ ತಿಳಿಸಿದರು. ಹಾಗೆಯೇ ಕೆಲವೊಂದು ಕೇಸ್ ಸ್ಟಡಿಗಳ ಉದಾಹರಣೆ ನೀಡಿ ವಿದ್ಯಾರ್ಥಿಗಳು […]

Read More

ಕುಂದಾಪುರ: ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದಿಂದ ಪ್ರಾಯೋಜಿಸಲ್ಪಟ್ಟ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರನ್ನಾಗಿ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ.ಶಾಂತಾರಾಮ್ ಪ್ರಭು ಅವರನ್ನು ಆಯ್ಕೆ ಮಾಡಲಾಗಿದೆ.ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಾಲೇಜಿನ ಹಿರಿಯ ವಿಶ್ವಸ್ಥರಾದ ಪ್ರಕಾಶ್.ಟಿ.ಸೋನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ.ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ ಯು.ಎಸ್.ಶೆಣೈ ಅವರನ್ನು ನೇಮಕ ಮಾಡಲಾಯಿತು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Read More

ವಿಜಯ ಕರ್ನಾಟಕ ದಿನಪತ್ರಿಕೆಯವರು ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಶಾಲೆಯ ವಿದ್ಯಾರ್ಥಿಗಳು ತಮ್ಮ ಕಲಾ ನೈಪುಣ್ಯದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಕ್ಕಳಲ್ಲಿರುವ ಕಲ್ಪನಾ ಶಕ್ತಿ ಮತ್ತು ಭಾವನೆಗಳನ್ನು ಅಭಿವ್ಯಕ್ತ ಪಡಿಸುವ ಉದ್ದೇಶದಿಂದ ಹಾಗೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಜಯ ಕರ್ನಾಟಕ ದಿನ ಪತ್ರಿಕೆಯು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರೊಂದಿಗೆ ಶ್ಯಾಮಿಲಿ ಸಭಾಭವನ ಅಂಬಲಪಾಡಿ ಉಡುಪಿ ಇಲ್ಲಿ ದಿನಾಂಕ 6/7 2025 ರಂದು ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ […]

Read More

ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ನಮತಿ‌ ವೇಸ್ಟ್ ಮ್ಯಾನೇಜ್ ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ‘ E- ವೇಸ್ಟ್ ಮ್ಯಾನೇಜ್ ಮೆಂಟ್ ‘ ವಿಷಯದ ಬಗ್ಗೆ  ಯೋಜನಾಧಿಕಾರಿ  ಶ್ರೀ ಧೀರಜ್  ಶೆಣೈಯವರು ವಿದ್ಯಾರ್ಥಿಗಳಿಗೆ ಇಲೆಕ್ಟ್ರಾನಿಕ್ ತ್ಯಾಜ್ಯಗಳ ಸರಿಯಾದ ನಿರ್ವಹಣೆ ಮತ್ತು ವಿಲೇವಾರಿ ಬಗ್ಗೆ ಸ್ಲೈಡ್ ಮೂಲಕ ಮಾಹಿತಿ ಮತ್ತು ಅರಿವು ನೀಡಿದರು.‌ಮುಂದಿನ ವಾರ ಸೂಚಿಸಿದ ಮೂರು ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿರುವ ಇಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ತಂದು ಕೊಟ್ಟರೆ ಅದರ ಸಮರ್ಪಕ ವಿಲೇವಾರಿ ಮಾಡಲಾಗುವುದು ಎಂದು […]

Read More

ಕುಂದಾಪುರ (ಜೂ 03) : ಮಕ್ಕಳ ಪೋಷಣೆಗೆ ಸಂಬಂಧಿಸಿದಂತೆ ಸರಿ ತಪ್ಪುಗಳ ವಿಚಾರಗಳನ್ನು ಪೋಷಕರು ಅರಿತಿರಬೇಕು. ಮಗು ಸಮಾಜಮುಖಿಯಾಗಿ ಬೆಳೆಯಬೇಕು. ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತಿ ಮುಖ್ಯ ಎಂದು ಎನ್.ಆರ್.ಆಚಾರ್ಯ ಸ್ಮಾರಕ ಆಸ್ಪತ್ರೆ ಕೋಟೇಶ್ವರದ ಮನೋವೈದ್ಯೆ ಡಾ| ಮಹಿಮಾ ಆಚಾರ್ಯ ಪೋಷಕರನ್ನು ಉದ್ದೇಶಿಸಿ ಹೇಳಿದರು.ಅವರು ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳು ಆಯೋಜಿಸಿದ ಶೈಕ್ಷಣಿಕ ವರ್ಷದ 2025-26ನೇ ಸಾಲಿನ ನರ್ಸರಿಯಿಂದ ನಾಲ್ಕನೇ ತರಗತಿಯವರೆಗಿನ ಮೊದಲ ಶಿಕ್ಷಕ – ರಕ್ಷಕ ಸಭೆಯಲ್ಲಿ […]

Read More

“ಸಾಮಾಜಿಕ‌ ಜಾಲತಾಣದ ಜನಪ್ರಿಯ ಪೋರ್ಟಲ್ ಗಳಲ್ಲೆಲ್ಲ ಬಳಕೆದಾರ ಸ್ನೇಹಿ ತಂತ್ರಾಂಶ‌ ಭಾಷೆ ಪೈತಾನ್ ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಗಳನ್ನೇ ಹೆಚ್ಚಾಗಿ ಬಳಸುತ್ತಾರೆ.ಕಂಪ್ಯೂಟರ್ ಮತ್ತು ಕೃತಕ ಬುದ್ಧಿಮತ್ತೆ( Artificial Intelligence) ಕ್ಷೇತ್ರದಲ್ಲಾಗುತ್ತಿರುವ ಕಲ್ಪನಾತೀತ ಬೆಳವಣಿಗೆ ಆವಿಷ್ಕಾರಗಳು ತಕ್ಷಣದಲ್ಲಿ ಉದ್ಯೋಗಾವಕಾಶಕ್ಕೆ ಧಕ್ಕೆ ಎನಿಸಿದರೂ, ಕಾಲಾಂತರದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವುದೂ ಖಚಿತ. ಪ್ರತಿಭೆ ಮತ್ತು ಶ್ರಮದಿಂದ ಕೆಲಸ ಮಾಡಿದರೆ ಬೇರೆ ಕ್ಷೇತ್ರಗಳಿಗಿಂತ ಕಂಪ್ಯೂಟರ್ ಕ್ಷೇತ್ರದಲ್ಲಿ ಕ್ಷಿಪ್ರವಾಗಿ‌ ಉನ್ನತ ಸ್ಥಾನ‌ ತಲುಪಬಹುದು ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ‌‌ ಕಂಪ್ಯೂಟರ್ ವಿಭಾಗ ಆಯೋಜಿಸಿದ ‘ ಪೈತಾನ್ ಓರಿಯಂಟೇಶನ್ ‘ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ‌ ಡೀನ್ ಎಕಾಡೆಮಿಕ್ಸ್ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಗಿರಿರಾಜ್ ಭಟ್ ರವರು ತಿಳಿಸಿದರು. ಕುಂದಾಪುರದ MICE ಕಂಪ್ಯೂಟರ್ ಸಂಸ್ಥೆಯ ಪ್ರಾಂಶುಪಾಲರಾದ ವಾಲ್ಟರ್ ಫೆರ್ನಾಂಡೀಸ್ ರವರು ಕಂಪ್ಯೂಟರ್ ತರಬೇತಿ ನೀಡುವ ತಮ್ಮ ಸುದೀರ್ಘ ಅನುಭವದಲ್ಲಿ‌ ಕಂಪ್ಯೂಟರ್ ಕ್ಷೇತ್ರ ಹಂತ ಹಂತವಾಗಿ ಸಾಧಿಸಿದ ಅಗಾಧ ಪ್ರಗತಿಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಂಪ್ಯೂಟರ್ ವಿಭಾಗದ ಉಪನ್ಯಾಸಕರಾದ ಶ್ರೀ ಪ್ರಣವ್ ಆರ್ ತಾವು ಅಭಿವೃದ್ಧಿ ಪಡಿಸಿದ ಕೆಲವು ತಂತ್ರಾಂಶ ಭಾಷೆಯ ಬಗ್ಗೆ ಸ್ಲೈಡ್ಸ್ ಮೂಲಕ ವಿವರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕಂಪ್ಯೂಟರ್ ವಿಷಯವನ್ನು  ಉತ್ತಮ ಧ್ಯೇಯದೊಂದಿಗೆ ಕಲಿಯಬೇಕೆಂದು ಕರೆ ನೀಡಿದರು.ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಸಂದೀಪ್ ಪೂಜಾರಿಯವರು ಅತಿಥಿಗಳನ್ನು ಸ್ವಾಗತಿಸಿದರು.ಕಂಪ್ಯೂಟರ್ ವಿಭಾಗದ ಉಪನ್ಯಾಸಕರಾದ ಸೂರ್ಯ ಇವರು‌ ಧನ್ಯವಾದ ಸಲ್ಲಿಸಿದರು.ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಅಭಿಜಿತ್ ರವರು ಕಾರ್ಯಕ್ರಮ ನಿರೂಪಿಸಿದರು.   

Read More

Mangalore Christian Sports Association® organizes chess tournament for members of the Christian community ಮಂಗಳೂರು ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್®, ಕ್ರೈಸ್ತ ಸಮುದಾಯದ ಸದಸ್ಯರಿಗಾಗಿ ಆಗಸ್ಟ್ 03, 2025 ರದು ಮಂಗಳೂರಿನ ಸೇಂಟ್ ಅಲೋಶಿಯಸ್ (ಡೀಮ್ಡ್ ಎಂದು ಪರಿಗಣಿಸಲಾದ ವಿಶ್ವವಿದ್ಯಾಲಯ) ನಲ್ಲಿರುವ ಸಹೋದಯ ಹಾಲ್‌ನಲ್ಲಿ ಚೆಸ್ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. 13 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗಾಗಿ, 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗಾಗಿ ಮತ್ತು ಪುರುಷರು ಮತ್ತು ಮಹಿಳೆಯರಿಗೆ ಮುಕ್ತ ಮತ್ತು 50 ವರ್ಷಕ್ಕಿಂತ […]

Read More

ಶಿರೂರು : ವೈದ್ಯೋ ನಾರಾಯಣೋ ಹರಿ : ಎಂಬ ಉಕ್ತಿಯಂತೆ ವೈದ್ಯರಾದವರು ದೇವರಿಗೆ ಸಮಾನರಾದವರು ಅವರು ರೋಗಿಯ ರೋಗವನ್ನು ಪರಿಹರಿಸುವವರು, ವೈದ್ಯ ಕೇವಲ ರೋಗ ಪರಿಹಾರಕರಾಗಿರದೇ ರೋಗಿಯ ಸಹ ಚಿಂತಕರೂ ಆಗಿರುತ್ತಾರೆ ಅದಕ್ಕಾಗಿ ವೈದ್ಯರನ್ನು ದೇವರಿಗೆ ಹೋಲಿಸುತ್ತಾರೆ ರೋಗಕ್ಕೆ ತುತ್ತಾದ ಪ್ರತಿಯೊಬ್ಬರನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ ಅವರಿಗೆ ಪುನರ್ಜನ್ಮ ನೀಡುವುದು ವೈದ್ಯರ ಕಾಯಕವಾದರೆ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ನಾಗರೀಕರ ಕರ್ತವ್ಯವಾಗಿದೆ ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜುಲೈ […]

Read More