
ಮಂಗಳೂರು:ಮಿಲಾಗ್ರೆಸ್ ಸೆಂಟ್ರಲ್ ಶಾಲೆಯ ವಾರ್ಷಿಕ ಕ್ರೀಡಾಕೂಟವು 21 ನವೆಂಬರ್ 2023 ರಂದು ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು. VI ರಿಂದ C ತರಗತಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉತ್ಸಾಹ ಮತ್ತು ಉತ್ಸಾಹದಿಂದ ಭಾಗವಹಿಸಿದ್ದರು. ಶಾಲಾ ಬ್ಯಾಂಡ್ ವಾದ್ಯದ ಮೂಲಕ ಅತಿಥಿಗಳನ್ನು ಕ್ರೀಡಾಂಗಣಕ್ಕೆ ಸ್ವಾಗತಿಸಲಾಯಿತು. ಈ ಕೆಳಗಿನ ಅತಿಥಿಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ರೆ.ಫಾ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್ ನ ಕರೆಸ್ಪಾಂಡೆಂಟ್ ಬೋನವೆಂಚರ್ ನಜರೆತ್ ವಹಿಸಿದ್ದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಪದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ನ […]

ಕುಂದಾಪುರ: ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ನವಜಾತ ಶಿಶು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ನಿರಂತರ ಪ್ರತಿಭಟನೆ ಮಂಗಳವಾರ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ವೈದ್ಯರ ನಿರ್ಲಕ್ಷದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿದ ಪೋಷಕರು ಹಾಗೂ ಗ್ರಾಮಸ್ಥರು, ಸೋಮವಾರ ಸಂಜೆ ಆಸ್ಪತ್ರೆ ಎದುರು ಜಮಾಯಿಸಿ ತಮ್ಮ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಡಿಎಚ್ಓ, ಡಿಸಿ ಬಾರದೇ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದರು. . ಉಪವಿಭಾಗಾಧಿಕಾರಿ, ಡಿಎಚ್ಓ ಹಾಗೂ ತಹಸೀಲ್ದಾರ್ ಆಗಮಿಸಿ ಪ್ರತಿಭಟನಾನಿರತರ ಮನವೊಲಿಸಲು ಪ್ರಯತ್ನಿಸಿದರೂ ಪಟ್ಟು ಬಿಡದ ಪ್ರತಿಭಟನಾಕಾರರು […]

ಕುಂದಾಪುರ: ಎಂಐಟಿಕೆಯಲ್ಲಿ ಸಿ-ಡಾಕ್ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಸಿ-ಡಿಎಸಿ ನಿರ್ದೇಶಕ ಡಾ.ಮಹಮ್ಮದ್ ಮಿಸ್ಬಾಹುದ್ದೀನ್ ಇದಕ್ಕೆ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಿ-ಡಿಎಸಿ ಬೆಂಗಳೂರಿನ ಸುಧಾರಿತ ಕಂಪ್ಯೂಟಿಂಗ್ ತರಬೇತಿ ಶಾಲೆಯ ನಿಯೋಜನಾ ಅಧಿಕಾರಿ ಶ್ರೀಮತಿ ಇಂದ್ರಾಣಿ ಹಂದೆ ಪಿ ಎಸ್ ಉಪಸ್ಥಿತರಿದ್ದರು. ಸಿ-ಡಾಕ್ ಮತ್ತು ಸಂಸ್ಥೆಯ ಅತ್ಯಾಧುನಿಕ ಯೋಜನೆಗಳು ಮತ್ತು ಉನ್ನತ ಕೌಶಲ್ಯದ ಅವಕಾಶಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ವಿವರಿಸಿದರು ಸಿ-ಡಾಕ್ ನ ತಾಂತ್ರಿಕ ವಿಚಾರ ಸಂಕಿರಣ ಐ ಟಿ ಮತ್ತು ಎಲೆಕ್ಟ್ರಾನಿಕ್ಸ್ ಆರ್ & ಡಿನಲ್ಲಿ […]

ಉಡುಪಿ: ಇತ್ತೀಚೆಗೆ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಕೊಲೆ ನಡೆದ ಮನೆಗೆ ಉಡುಪಿ ಕಥೊಲಿಕ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರ ಪ್ರತಿನಿಧಿಗಳು ಮತ್ತು ಸಮನ್ವಯ ಸೌಹಾರ್ದ ಸಮಿತಿ ತೊಟ್ಟಾಂ ಇದರ ಪದಾಧಿಕಾರಿಗಳು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.ಈ ವೇಳೆ ಮಾತನಾಡಿದ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಟ ಗುರು ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಘಟನೆಯ ಕುರಿತು ಧರ್ಮಾಧ್ಯಕ್ಷರು ಅತೀವ ಆಘಾತ ಮತ್ತು ನೋವನ್ನು ವ್ಯಕ್ತಪಡಿಸಿದ್ದು, ಇಂತಹ ಘಟನೆ ಬುದ್ದಿವಂತರ ಜಿಲ್ಲೆಯಾದ […]

ಉಡುಪಿ ಜಿಲ್ಲಾ ಇಂಟೆಕ್ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ INTUC ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಮಲ್ಲಿ ಅವರ ಉಪಸ್ಥಿತಿಯಲ್ಲಿ ನಡೆಯಿತು ಪದಗ್ರಹಣವನ್ನು ನೆರವೇರಿಸಿದ ರಾಕೇಶ್ ಮಲ್ಲಿ ಅವರು ಮಾತನಾಡುತ್ತಾ ಮುಂದಿನ ದಿನಗಳಲ್ಲಿ ಎಲ್ಲಾ ಬೂತು ಗಳಲ್ಲಿಯೂ ಸಮಿತಿಗಳನ್ನು ರಚಿಸಿ ಸಂಘಟನೆಯನ್ನು ಬಲಾಢ್ಯಗೊಳಿಸಬೇಕು ಇದರಿಂದ ಜಿಲ್ಲೆಯ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸಲು ಅನುಕೂಲವಾಗುವುದು ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮಾತನಾಡುತ್ತಾ ಜಿಲ್ಲಾ ಇಂಟಕ್ ಸಮಿತಿಯ ರಚನೆಯೊಂದಿಗೆ ಸಂಘಟನೆಯು ಮುಂದಿನ ದಿನಗಳಲ್ಲಿ ಬಲಾಡ್ಯಗೊಂಡು […]

ಕಾರ್ಕಳ : ಭಾರತೀಯ ಕಥೋಲಿಕ್ ಯುವ ಸಂಚಲನ(ICYM) ಹಿರ್ಗಾನ ಇದರ ಮುಂದಾಳತ್ವದಲ್ಲಿ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಕಥೋಲಿಕ ಕ್ರೈಸ್ತ ಸಮಾಜ ಬಾಂಧವರಿಗಾಗಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಕೂಟ “SMG ಟ್ರೋಫಿ 2023” ಹಿರ್ಗಾನ ಚರ್ಚ್ ಮೈದಾನದಲ್ಲಿ ನವೆಂಬರ್ 19 ರಂದು ಅದ್ದೂರಿಯಾಗಿ ನೆರವೇರಿತು. ಉಡುಪಿ ಧರ್ಮ ಪ್ರಾಂತ್ಯದ ವಿವಿಧ ಚರ್ಚುಗಳಿಂದ 32 ತಂಡಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು. ಹಿರ್ಗಾನ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಹಾಗೂ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘದ […]

Manglooru: Nov.14: To mark the occasion of Children’s Day, a Photography Contest was held by Naman Ballok Jesu wherein a photograph was to be clicked of a child between the age group of 3 to 15 years with Naman Ballok Jesu Magazine. More than 50 children participated in this competition and showed their enthusiasm and […]

ಕುಂದಾಪುರ: ನವೆಂಬರ್ 18ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ಷಕ – ಶಿಕ್ಷಕರ ಸಭೆ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ ಮಾತನಾಡಿ ವ್ಯಕ್ತಿತ್ವ ವಿಕಸನಕ್ಕೆ ಕಾಲೇಜು ವೇದಿಕೆಯಾಗಿದೆ. ಇಲ್ಲಿ ಅಭ್ಯಸಿಸಿದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪಾಲಕರು ಪೋಷಕರು ನಿಮ್ಮ ಮಕ್ಕಳು ಅಂತಹ ಸಾಧನೆ ಮಾಡುವಂತೆ ಪ್ರೇರೇಪಿಸಬೇಕು. ಅಧ್ಯಯನ ಸಮಯದಲ್ಲಿ ಒದಗಿ ಬರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ರಕ್ಷಕ- ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ […]

ನಂದಳಿಕೆ : ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕ್ರತ ಸಂಸ್ಥೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಬ್ಬನಡ್ಕ- ನಂದಳಿಕೆಯ ನೇತೃತ್ವದಲ್ಲಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ ಡಿಸೆಂಬರ್ 10ರಂದು ಆದಿತ್ಯವಾರ ಜರಗಲಿರುವ ಅಂತರ್ ಜಿಲ್ಲಾ ಮಟ್ಟದ ಮಕ್ಕಳ ಸಾಂಸ್ಕ್ರತಿಕ ಸಮ್ಮೇಳನದ ಸಿದ್ಧತೆ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿದವರು ಅಂತರ್ ಜಿಲ್ಲಾ ಮಟ್ಟದ ಮಕ್ಕಳ ಸಾಂಸ್ಕ್ರತಿಕ ಸಮ್ಮೇಳನದಲ್ಲಿ ಮೆರವಣಿಗೆ, ನೃತ್ಯ ಭಜನೆ, ಚೆಂಡೆ ವಾದನ, […]