ಗಂಗೊಳ್ಳಿ; ಧರ್ಮಾಚರಣೆ ಆಯೋಗದ ಮುಂದಾಳತ್ವದಲ್ಲಿ ಮಾರ್ಚ್ 30 ಭಾನುವಾರದಂದು ಧರ್ಮಾಚರಣೆ ಸಮಿತಿಯ ಸದಸ್ಯರಿಗೆ ತರಬೇತಿ ಮತ್ತು ಧರ್ಮಾಚರಣೆಯ ಪ್ರಮುಖ ವಿಷಯಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಚರಣೆ ಆಯೋಗದ ನಿರ್ದೇಶಕರಾದ ವಂದನಿಯ ಗುರು ವಿಲ್ಸನ್ ಡಿಸೋಜರವರು ಹಾಜರಿದ್ದರು. ಇಗರ್ಜಿಯ ಧರ್ಮ ಗುರುಗಳಾದ ವಂದನೀಯ ಗುರು ಥಾಮಸ್ ರೋಶನ್ ಡಿಸೋಜರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಆಯೋಗದ ಸಂಚಾಲಕಿ ಶ್ರೀಮತಿ ಜೆನ್ನಿ ಬುತ್ತೇಲ್ಲೊರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಿವನ್ ರೆಬೆರೊರವರು ವಂದಿಸಿದರು.
ಕುಂದಾಪುರ ;ಸ್ಥಳೀಯ ಯುಬಿಯಂಸಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಸಿ ಎಸ್ ಐ ಕೃಪಾ ವಿದ್ಯಾಲಯ, ಇಲ್ಲಿ ವಿದ್ಯಾರ್ಥಿಗಳಿಗಾಗಿ ವಿವಿಧ ರೀತಿಯ ಚಟುವಟಿಕೆಗಳಿಂದ ಕೂಡಿದ 5 ದಿನಗಳ ಶಿಬಿರವು 01/04/2025 ರಂದು ಶ್ರೀಮತಿ ಸವಿತಾ ಇವರ ಸಂಯೋಜನೆ ಹಾಗೂ ಅವರ ತಂಡದ ಮೂಲಕ ಆರಂಭವಾಯಿತು. ಕಾರ್ಯಕ್ರಮಗಳು ಶ್ರೀ ದೀಪಕ್ ತಾಂಡವ ನೃತ್ಯ ಶಾಲೆ ಇವರು ಹಾಗೂ ಗಣ್ಯರ ಸಹಕಾರದೊಂದಿಗೆ ದೀಪ ಬೆಳಗಿ ಉದ್ಘಾಟನೆಗೊಂಡಿತು.ಶ್ರೀಮತಿ ಐರಿನ್ ಸಾಲಿನ್ಸ್,ಸಂಚಾಲಕರು,ಸಿಎಸ್ಐ ಕೃಪಾ ದೇವಾಲಯದ ಧರ್ಮಗುರು ಇಮ್ಯಾನ್ಯುಯಲ್ ಜೈಕರ್ , ಮುಖ್ಯ ಶಿಕ್ಷಕಿ […]
ಕಾಪು;ಎ.೪ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿಇಂದು ಬೆಳಿಗ್ಗೆ 8.30 ಕ್ಕೆ ಎರಡು ಕಾರುಗಳ ನಡುವೆ ಅಪಘಾತವಾಗಿದ್ದು, ಎರಡು ಕಾರುಗಳು ತೀವ್ರ ಜಖಂ ಗೊಡಿದು, ಒರ್ವ ಪ್ರಯಾಣಿಕನಿಗೆ ಗಾಯಾಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಪಡಿಸಲಾಗಿದೆ. ಒಂದು ಕಾರು ನಿಂತುಗೊಂಡಿದ್ದು, ಆ ವೇಳೆ ನಿಂತಿದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಗುದ್ದಿದೆ. ಕಾಪು ಠಾಣೆಯ ಪೊಲೀಸರು, ಸ್ಥಳಕ್ಕೆ ಭೇಟಿ ಮಾಡಿದ್ದಾರೆ, ಹೆಚ್ಚಿನ ಸುದ್ದಿ ಇನ್ನಷ್ಟೆ ತಿಳಿಯಬೇಕಾಗಿದೆ.
ಬಾರ್ಕೂರು, ಏಪ್ರಿಲ್ 1, 2025 – ಹನೇಹಳ್ಳಿಯ ರಾಷ್ಟ್ರೀಯ ಹಿರಿಯ ಪ್ರಾಥಮಿಕ ಶಾಲೆಯಿಂದ ಆಯೋಜಿಸಲಾದ ಬಹುನಿರೀಕ್ಷಿತ ‘ಚಿಣ್ಣರ ಚಿಲುಮೆ ಬೇಸಿಗೆ ಶಿಬಿರ’ ಇಂದು ಬೆಳಿಗ್ಗೆ 10:30 ಕ್ಕೆ ಸುಂದರವಾಗಿ ಅಲಂಕರಿಸಲ್ಪಟ್ಟ ರೋಟರಿ ಭುವನದಲ್ಲಿ ಭವ್ಯ ಉದ್ಘಾಟನೆಯೊಂದಿಗೆ ಪ್ರಾರಂಭವಾಯಿತು. ಏಪ್ರಿಲ್ 1 ರಿಂದ ಏಪ್ರಿಲ್ 4 ರವರೆಗೆ ನಡೆಯುವ ನಾಲ್ಕು ದಿನಗಳ ಶಿಬಿರವು ಮಕ್ಕಳಿಗೆ ಕಲಿಕೆ, ಸೃಜನಶೀಲತೆ ಮತ್ತು ಮೋಜಿನ ಅನುಭವಗಳಿಗೆ ವೇದಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.ಉದ್ಘಾಟನಾ ಸಮಾರಂಭವನ್ನು ಗೌರವಾನ್ವಿತ ಗಣ್ಯರು, ಶಿಕ್ಷಕರು, ಪೋಷಕರು ಮತ್ತು ಉತ್ಸಾಹಿ ವಿದ್ಯಾರ್ಥಿಗಳು […]
ಬ್ರಹ್ಮಾವರ,ಎ, 01; ಕಾರು ಡಿಕ್ಕಿ- ಕುಂದಾಪುರದ ವಕ್ವಾಡಿ ನಿವಾಸಿ ಶಾಲಾ ವಿದ್ಯಾರ್ಥಿ ಸಾವು ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್ನಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ ಶೆಟ್ಟಿ(14) ಸಮ್ಮರ್ ಕ್ಯಾಂಪ್ ಗೆ ತೆರಳುವಾಗ ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ವಿದ್ಯಾರ್ಥಿ ವಂಶಿ […]
ಮಂಗಳೂರು; ಫಾದರ್ ಮುಲ್ಲರ್ ಚಾರೀಟೇಬಲ್ ಸಂಸ್ಥೆಗಳ ಘಟಕವಾದ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ತನ್ನ 35ನೇ ಪದವಿ ಪ್ರದಾನ ಸಮಾರಂಭವನ್ನು 03.04.2025 ರಂದು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಿದೆ. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಅಧ್ಯಕ್ಷರಾದ ಅತಿ ವಂ. ಡಾ. ಪೀಟರ್ ಪೌಲ್ ಸಲ್ಡಾನ್ಹಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ವಂ. ಡಾ. […]
ಕುಂದಾಪುರ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು. ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ […]
ಕಟಪಾಡಿ : ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಗಾಗಿ ಹೊಸ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಐರಿನ್ ಪಿರೇರಾ ಹಾಗೂ ಗ್ಲೋರಿಯ ಪಿಂಟೊ ಕಾರ್ಯನಿರ್ವಹಣಾಧಿಕಾರಿಯಾಗಿ ಆಯ್ಕೆಯಾಗಿದ್ದು, ಹೊಸ ನಿರ್ದೇಶಕರಾಗಿ ಗೊಡ್ಫ್ರಿ ಡಿಸೋಜಾ, ವಿಲಿಯಂ ಲೋಬೊ, ಆಸ್ಟಿನ್ ಕರ್ಡೋಜಾ, ಜೆರೊಮ್ ಕಸ್ತೆಲಿನೊ, ಲಾರೆನ್ಸ್ ಕ್ರಾಸ್ಟೊ, ರೊನಾಲ್ಡ್ ಮಾಚಾದೊ, ಶಾಂತಿ ಕ್ವಾಡ್ರಸ್, ಮೇರಿ ಡಿಸಿಲ್ವ ಆಯ್ಕೆಯಾಗಿದ್ದಾರೆ.
ಕುಂದಾಪುರ :ಮುಸ್ಲಿಮರ ಪವಿತ್ರ ಮಾಸವಾದ ರಮಝಾನ್ ತಿಂಗಳ ಉಪವಾಸ ವ್ರತಚಾರಣೆಯ ಈದುಲ್ ಫಿತರ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮ ದಿಂದ ಆಚರಿಸಿದರು.ಬೆಳಿಗ್ಗೆ ಕುಂದಾಪುರ ಜಾಮೀಯ ಮಸೀದಿ ಯಿಂದ ಹೊರಟ ಸ್ವಲಾತ್ ಮೆರವಣಿಗೆಯು ಜಮಾತ್ ಅಧ್ಯಕ್ಷರಾದ ವಸೀಮ್ ಬಾಷಾ, ಪದಾಧಿಕಾರಿಗಳಾದ ತಬರೇಜ್, ಪುರಸಭಾ ಸದಸ್ಯ ಎಂ.ಅಬು ಮಹ್ಮದ್ ಮುಂತಾದವರ ಮುಂದಾಳತ್ವದಲ್ಲಿ ಮುಖ್ಯ ಬೀದಿಯ ಮೂಲಕ ಸಾಗಿ ಈದ್ಗ ಮೈದಾನವನ್ನು ತಲುಪಿತು. ಜಮಾತಿನ ಖತೀಬರಾದ ಶಾಹೀದ್ ಹುಸೇನ್ ಅವರು ಈದ್ ನಮಾಜ್ ನೆರವೇರಿಸಿ ಸಕಲರ ಕಲ್ಯಾಣ, ಶಾಂತಿ, ನೆಮ್ಮದಿ ಗಾಗಿ […]

