ಸಂತ ಜೊಸೆಫರ ಇಗರ್ಜಿ ಕೋಟ ದಲ್ಲಿ ಮಾತೆ ಮರಿಯಮ್ಮನವರ ಸ್ವರ್ಗಾರೋಹಣದ ಹಬ್ಬ ಹಾಗೂ ದೇಶದ ಸ್ವಾತಂತ್ರ್ಯೊತವ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾರಂಭದಲ್ಲಿ ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು. ದೇಶಕ್ಕಾಗಿ ವಿಶೇಶವಾಗಿ ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು. ನಂತರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜೊಸೆಫ್ ರೊಡ್ರಿಗಸ್ ಸ್ವಾಗತ ಭಾಶಣ್ ಮಾಡಿದರು. ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಧ್ವಜಾರೋಹಣ ನೆರವೇರಿಸಿದರು. ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಶರಾದ ಹೆರಾಲ್ಡ್ ಫೆರ್ನಾಂಡಿಸ್, ಕಥೊಲಿಕ್ ಸಭಾ ಅಧ್ಯಕ್ಶ ವಿಲ್ಟನ್ ಒಲಿವೆರಾ […]
Udupi District Level Karate Tournament at Milagres PU College, Kallianpur ಆಗಸ್ಟ್ 11, ೨೦೨೬ರಂದುಶಾಲಾ ಶಿಕ್ಷಣ ಇಲಾಖೆ ಮತ್ತು ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕರ ಮತ್ತು ಬಾಲಕಿಯರ ಕರಾಟೆ ಪಂದ್ಯಾವಳಿಯು ಕಾಲೇಜಿನ ತ್ರಿ ಶತಮಾನ ಸಭಾಭವನದಲ್ಲಿ ನಡೆಯಿತು. ಉಡುಪಿ ಪದವಿ ಪೂರ್ವ ಕಾಲೇಜಿನ ಜಿಲ್ಲಾಮಟ್ಟದ ಕರಾಟೆ ಪಂದ್ಯಾವಳಿಯ ಉದ್ಘಾಟಕ ಸಮಾರಂಭವನ್ನು ಮುಖ್ಯ ಅತಿಥಿಗಳಾದ ಫೆರ್ನಾಂಡಿಸ್ ಗ್ರೂಪಿನ ಮಾಲಕರಾದ ಹಾಗೂ ಪ್ರಸಿದ್ಧ ಉದ್ಯಮಿಯರಾದ ಶ್ರೀ ವಿಲ್ಸನ್ ಫೆರ್ನಾಂಡೀಸ್ […]
ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ ಹಾಗೂ ಮೆಟಾಡೋರ್ ಚಾಲಕರ ಸಂಘ (ರಿ.)–INTUC ವತಿಯಿಂದ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆದೂರು ಸದಾನಂದ ಶೆಟ್ಟಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಾತ್ರ ಮತ್ತು ಸಂವಿಧಾನದ ಮೂಲಕ ಶೋಷಿತರಿಗೆ ನೀಡಿದ ಸ್ವಾತಂತ್ರ್ಯ ದ ಕುರಿತು ಮಾತನಾಡಿದರು. ಸಭೆಯಲ್ಲಿ INTUC ಅಧ್ಯಕ್ಷ ಲಕ್ಷ್ಮಣ ಶೆಟ್ಟಿ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ನಗರ ಕಾಂಗ್ರೆಸ್ […]
ಕುಂದಾಪುರ ಆಗಸ್ಟ್ 08. : ‘ ಕಥೆ ಬರೆಯಲು ಬೇಕಾದಷ್ಟು ಅನುಭವಗಳು ಮತ್ತು ವಸ್ತುಗಳು ಎಲ್ಲರಲ್ಲೂ ಇರುತ್ತವೆ. ಆದರೆ ಅವುಗಳನ್ನು ಅಚ್ಚುಕಟ್ಟಾಗಿ ಹೊಂದಿಸಿ ರೂಪಕ-ಪ್ರತಿಮೆಗಳನ್ನು ಅಳವಡಿಸಿಕೊಂಡು ಸುಂದರವಾಗಿ ಮತ್ತು ಕಲಾತ್ಮಕವಾಗಿ ಓದುಗನ ಮನಮುಟ್ಟುವ ರೀತಿಯಲ್ಲಿ ಕಟ್ಟಿ ಕೊಡುವುದು ಒಂದು ಸವಾಲು ‘ ಎಂದು ಖ್ಯಾತ ಲೇಖಕಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಹೇಳಿದರು. ಕನ್ನಡದ ಕಥೆಗಳು, ಗ್ರೀಕ್ ಸಾಹಿತ್ಯ.ಮತ್ತು ಭಾರತೀಯ ಜನಪದ ಸಾಹಿತ್ಯಗಳಿಂದ ಅನೇಕ ಉದಾಹರಣೆಗಳನ್ನು ಕೊಟ್ಟು , ಬರೆಯುವಾಗ ನಾವು ನಮ್ಮ ಪರಂಪರೆಯನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು. ಇಲ್ಲಿನ ‘ಸುರಗಂಗಾ ಕಲಾ-ಸಾಹಿತ್ಯ ಮಹಿಳಾ […]
ಬೆಳ್ತಂಗಡಿ: ಅನೇಕ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ಪರಿಶ್ರಮದ ಫಲವಾಗಿ ಭಾರತ ಇಂದು ಆಕ್ರಮಣಕಾರರಿಂದ ಬಂಧಮುಕ್ತವಾಗಿದೆ. ಭಾರತೀಯ ಪ್ರತಿಯೊಬ್ಬ ನಾಗರಿಕ ಇಂದು ಶಿಕ್ಷಿತನಾಗುವಲ್ಲಿ ಮೊದಲ ಪ್ರಾಶಸ್ತ್ಯ ನೀಡುತ್ತಿದೆ. ಶಿಕ್ಷಣದ ಬಲದಿಂದ ಎಲ್ಲ ವಿದ್ಯಾರ್ಥಿಗಳು ಭವ್ಯ ಭಾರತದ ಪ್ರಜೆಗಳಾಗಿ ಬೆಳೆಯಲು ಪಣತೊಡಬೇಕು ಎಂದು ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಸಂದೇಶ ನೀಡಿದರು. ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಆ.15 ರಂದು 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ, ಬಳಿಕ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆ […]
ಬೆಂಗಳೂರು, ಆ.15: ಉದ್ಯಮ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆಗೆ ಸಂಬಂಧಿಸಿದ ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ಸ್ಕೂಲ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ (SoIT) ವತಿಯಿಂದ ‘Automated Workflows for Enterprise AI’ ಎಂಬ ವಿಷಯದ ಕುರಿತು ಎರಡು ಗಂಟೆಗಳ ಪ್ರಾಯೋಗಿಕ ಕಾರ್ಯಾಗಾರ ನಡೆಯಿತು. ಬಾಷ್ ಗ್ಲೋಬಲ್ ಸಾಫ್ಟ್ವೇರ್ ಟೆಕ್ನಾಲಜೀಸ್ (BGSW) ಸಂಸ್ಥೆಯ ತಾಂತ್ರಿಕ ಆರ್ಕಿಟೆಕ್ಟ್ ಹಾಗೂ ಸೇಂಟ್ ಅಲೋಶಿಯಸ್ ಕಾಲೇಜಿನ AIMITನ ಹಳೆಯ ವಿದ್ಯಾರ್ಥಿ ಡೇನಿಯಲ್ […]
ಮಂಜೇಶ್ವರ: ಸ್ನೇಹಾಲಯ ಮನೋಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಅತ್ಯಂತ ಸಂಭ್ರಮ, ದೇಶಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಸ್ನೇಹಾಲಯದ ನಿವಾಸಿಗಳು, ಸಿಬ್ಬಂದಿ, ಆಡಳಿತ ಮಂಡಳಿ, ಟ್ರಸ್ಟಿಗಳು ಹಾಗೂ ಹಿತೈಷಿಗಳು ಒಂದಾಗಿ ಸೇರಿ ಆಚರಿಸಿದ ಈ ಕಾರ್ಯಕ್ರಮವು ಏಕತೆ, ದೇಶಪ್ರೇಮ, ಸಹಬಾಳ್ವೆ ಮತ್ತು ಮಾನವೀಯತೆಯ ಸುಂದರ ಸಂದೇಶವನ್ನು ಸಾರಿತು. ಭಾರತೀಯ ವಾಯುಪಡೆಯ ಸಾರ್ಜೆಂಟ್ ರೇಮಂಡ್ ಎ. ಡಿಸೋಜಾ ಹಾಗೂ ಸ್ನೇಹಾಲಯದ ಧರ್ಮಗುರು ರೆವರೆಂಡ್ ಫಾ. ಸಿರಿಲ್ ಡಿಸೋಜಾ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ […]
ಆಗಸ್ಟ್ 15ರಂದು ಶುಕ್ರವಾರ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾ ಹಾಗೂ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉರ್ವಾ ಚರ್ಚೆ ಮೈದಾನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದ ಚರ್ಚ್ ನ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಮ್ಯಾಕ್ಸಿಮ್ ಕ್ಯಾಸ್ಟಲಿನೊ ಅವರು ಮಾತನಾಡಿ, “ವಿದ್ಯಾರ್ಥಿಗಳು ದೇಶಪ್ರೇಮ, ಶಿಸ್ತು ಮತ್ತು ತ್ಯಾಗ ಮನೋಭಾವವನ್ನು ರೂಢಿಸಿಕೊಂಡು ತಮ್ಮ ಕೊಡುಗೆಯನ್ನು ದೇಶಕ್ಕೆ ಸಲ್ಲಿಸಬೇಕು” ಎಂದು ಕರೆ ನೀಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಸಂಚಾಲಕರು ಹಾಗೂ […]
ಮಂಗಳೂರು, ಆ. 13: ಪ್ರಿಸನ್ ಮಿನಿಸ್ಟ್ರಿ ಇಂಡಿಯಾ (ಪಿಎಂಐ), ಮಂಗಳೂರು ಘಟಕದ ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಮಂಗಳೂರು ಸಹಯೋಗದಲ್ಲಿ ನಗರದ ಜೈಲ್ ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ಕೈದಿಗಳಿಗಾಗಿ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಜೈಲು ಅಧೀಕ್ಷಕ ಶರಣಬಸಪ್ಪ ಅವರು, ಜೈಲನ್ನು ಕೇವಲ ಶಿಕ್ಷೆಯ ಸ್ಥಳವಾಗಿ ನೋಡದೆ **‘ತಿದ್ದುಪಡಿ ಕೇಂದ್ರ’**ವಾಗಿ ಪರಿಗಣಿಸಬೇಕು. ತಮ್ಮ ತಪ್ಪುಗಳನ್ನು ಅರಿತುಕೊಂಡು ಜೀವನವನ್ನು ಸುಧಾರಿಸಿಕೊಂಡು ಸಮಾಜಕ್ಕೆ ಜವಾಬ್ದಾರಿಯುತ ವ್ಯಕ್ತಿಗಳಾಗಿ ಮರಳಲು ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ ಎಂದರು. […]

