ಕುಂದಾಪುರ: ಡಿಸೆಂಬರ್ 10ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನೆಹರು ಯುವ ಕೇಂದ್ರದ ಸಹಯೋಗದೊಂದಿಗೆ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ” ನಡೆಯಿತು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮುಕ್ತಾಬಾಯಿ “ಮಾನವ ಹಕ್ಕುಗಳು ಮತ್ತು ಯುವಜನತೆ” ಎಂಬ ವಿಷಯದ ಕುರಿತು ಮಾತನಾಡಿ ಯಾವುದೇ ಕಾರಣಕ್ಕೂ ಕೆಟ್ಟ ಅಭ್ಯಾಸಗಳಿಂದ ದೂರ ಇದ್ದು ವಿದ್ಯಾರ್ಥಿಜೀವನವನ್ನು ಸಾಕಾರಗೊಳಿಸುವದರ ಜೊತೆಗೆ ಒಳ್ಳೆಯ ಅಧಿಕಾರಿಗಳಾಗಿ ಸಮಾಜದ ಋಣವನ್ನು ತೀರಿಸಲು ನಿಮ್ಮ ಪ್ರಯತ್ನ ಇರಬೇಕು. ಮಾದಕವಸ್ತು ವ್ಯಸನ , ಮೊಬೈಲ್ ಗೀಳಿಗೆ […]

Read More

ಶಿರ್ವ:ವೆಬ್ ಅಭಿವೃದ್ಧಿಯು ಇಂಟರ್ನೆಟ್ ಅಥವಾ ಇಂಟ್ರಾನೆಟ್ ಗಾಗಿ ವೆಬ್‌ಸೈಟ್ ಅನ್ನು ಅಭಿವೃದ್ಧಿಪಡಿಸುವಲ್ಲಿ ಒಳಗೊಂಡಿರುವ ಕೆಲಸವಾಗಿದೆ. ವೆಬ್ ಅಭಿವೃದ್ಧಿಯು ಸರಳ ಪಠ್ಯದ ಏಕ ಸ್ಥಿರ ಪುಟವನ್ನು ಅಭಿವೃದ್ಧಿಪಡಿಸುವುದರಿಂದ ಹಿಡಿದು ಸಂಕೀರ್ಣ ವೆಬ್ ಅಪ್ಲಿಕೇಶನ್‌ಗಳು, ಎಲೆಕ್ಟ್ರಾನಿಕ್ ವ್ಯವಹಾರಗಳು ಮತ್ತು ಸಾಮಾಜಿಕ ನೆಟ್‌ವರ್ಕ್ ಸೇವೆಗಳವರೆಗೆ ಇರುತ್ತದೆ.ವೆಬ್ ಅಭಿವೃದ್ಧಿಯು ಬೆಳೆಯುತ್ತಿದೆ ಮತ್ತು ಅದರ ಪರಿಧಿಯನ್ನು ವಿಸ್ತರಿಸುತ್ತಿದೆ.ವೆಬ್ ಇಂಟರ್‌ಫೇಸ್‌ಗಳನ್ನು ಸ್ವಯಂಚಾಲಿತಗೊಳಿಸುವುದರಿಂದ ಹಿಡಿದು ಮಿಷನ್-ನಿರ್ಣಾಯಕ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸುವವರೆಗೆ, ವೆಬ್ ಅಭಿವೃದ್ಧಿಯು ಕನಸುಗಳನ್ನು ವಾಸ್ತವಿಕವಾಗಿ ಪರಿವರ್ತಿಸುತ್ತಿದೆ.ಕಂಪ್ಯೂಟರ್ ಪದವೀಧರರು ತಮ್ಮ ಕೌಶಲ್ಯಗಳನ್ನು ನಿಯಮಿತವಾಗಿಅಭಿವೃದ್ಧಿ ಕೌಶಲ್ಯಗಳಲ್ಲಿ ಪ್ರಾವೀಣ್ಯತೆಯನ್ನು ಹೊಂದಲು ಉದ್ಯಮಕ್ಕೆ […]

Read More

ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಪುರುಷರ ಮತ್ತು ಮಹಿಳಾ ವಿಭಾಗದಗೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಸಮಗ್ರ ಪ್ರಶಸ್ತಿಯೊಂದಿಗೆ ಪ್ರಥಮ ಸ್ಥಾನ ಪಡೆಯಿತು.ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಮಂಗಳೂರಿನ ಎಸ್.ಜಿ.ಸಿ ಕಾಲೇಜು, ತೃತೀಯ ಸ್ಥಾನವನ್ನು ವಿಶ್ವವಿದ್ಯಾಲಯ ಕಾಲೇಜು, ಮಂಗಳೂರು ಮತ್ತು ಚತುರ್ಥ ಸ್ಥಾನವನ್ನು ಮಂಗಳೂರಿನ ಕಾರ್ ಸ್ಟ್ರೀಟ್ ನ ಜಿ.ಎಫ್.ಜಿ.ಸಿ ಕಾಲೇಜು ಪಡೆಯಿತು. ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ವಿಶ್ವವಿದ್ಯಾಲಯ ಕಾಲೇಜು ಮಂಗಳೂರು, ತೃತೀಯ […]

Read More

ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಮೂಲ ಪುರುಷ ಶ್ರೀ ಸುಬ್ರಾಯ ಆಚಾರ್ಯ (ಸುಬ್ಬ ಪೈ) ಇವರ ಪುಣ್ಯ ಸ್ಮರಣೆಯ ಅಂಗವಾಗಿ ನಾದೋಪಾಸಕ, ವಿದ್ವಾನ್ ವಾಗೀಶ್ ಭಟ್ ಅವರಿಂದ ಭಕ್ತಿ ಸಂಗೀತ ಸಾಂಸ್ಕøತಿಕ ಕಾರ್ಯಕ್ರಮ ದೇವಸ್ಥಾನದಲ್ಲಿ ನಡೆಯಿತು.ತಬಲಾದಲ್ಲಿ ವಿದ್ವಾನ್ ಸತೀಶ ಹಂಪಿಹೋಳಿ ಹಾಗೂ ಹಾರ್ಮೋನಿಯಂನಲ್ಲಿ ಲಕ್ಷ್ಮೀ ಗೋವಿಂದ ಭಟ್ ಸಹಕರಿಸಿದರು.

Read More

ಇಲ್ಲಿನ ಹೋಲಿಕ್ರಾಸ್ ಚರ್ಚಿನಲ್ಲಿ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೊರವರ ನೇತ್ರತ್ವದಲ್ಲಿ ನೆಡೆದ 2023-2025ನೇ ಸಾಲಿನ ಪಾಲನಾ ಮಂಡಳಿಯ ಚುನಾವಣೆಯಲ್ಲಿ ನೂತನ ಉಪಾಧ್ಯಕ್ಷರಾಗಿ ಸ್ಟೇಪನ್ ಡಾಯಸ್, ಕಾರ್ಯದರ್ಶಿಯಾಗಿ ವೀಣಾ ಫೆರ್ನಾಂಡಿಸ್, ಆಯೋಗಗಳ ಸಂಯೋಜಕಿಯಾಗಿ ಅನಿತಾ ನಜ್ರೆತ್ ರವರು ಆಯ್ಕೆಯಾಗಿರುತ್ತಾರೆ ಎಂದು ಮಾಧ್ಯಮ ಪ್ರತಿನಿಧಿ ಲಾರೆನ್ಸ್ ಫೆರ್ನಾಂಡಿಸ್ ರವರ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

Read More

ಕುಂದಾಪುರ, ಡಿ.11: ಹೆಸರಾಂತ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆ ತನ್ನ 31 ವರ್ಷಕ್ಕೆ ಕಾಲಿಡುವ ಸಂದರ್ಭದಲ್ಲಿ ಕುಂದಾಪುರದ ಪ್ರಧಾನ ಕಛೇರಿಯ ಕಟ್ಟಡದಲ್ಲಿ ಸುಸಜ್ಜಿತ ನಿರ್ಮಿಸಲ್ಪಟ್ಟ ರೋಜರಿ ಸಭಾಭವನ ಉದ್ಘಾಟನ ಕಾರ್ಯಕ್ರಮ ಮತ್ತು ಸಂಸ್ಥಾಪಕರ ದಿನವನ್ನು ನೂತನ ಸಭಾಭವನದಲ್ಲಿ ಆಚರಿಸಲಾಯಿತು.ನೂತನ ಸಭಾಭವನವನ್ನು ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.ಇದರ ಅಧ್ಯಕ್ಷ ಜೊನ್ಸನ್ ಡಿ ಆಲ್ಮೇಡಾ ಉದ್ಘಾಟಿಸಿ “ನಮ್ಮ ಸಂಸ್ಥೆಯ ಹಲವಾರು ಯೋಜನೆಗಳಲ್ಲಿ ಈ ಸಭಾಭವನದ ಕನಸು ಒಂದಾಗಿತ್ತು, ಕಡಿಮೆ ಖರ್ಚಿನಲ್ಲಿ ಉತ್ತಮ ರೀತಿಯಲ್ಲಿ ಇದನ್ನು ನಿರ್ಮಿಸಿದ್ದೇವೆ, […]

Read More

ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕ, ಬಿ. ಡಿ. ಶೆಟ್ಟಿ ಕಾಲೇಜ್ ಮಾಬುಕಳ,Lions club Brahmavara- Barkur, Royal club Brahmavara ಮತ್ತು HDFC ಬೇಂಕ್ ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಕಾಲೇಜಿನಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮ ದಲ್ಲಿ, ಸಭಾಪತಿ ಎಸ್ ಜಯಕರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಸಮಿತಿಯ ಸದಸ್ಯರಾದ ಸದಾನಂದ ಶೆಟ್ಟಿ ಉಪಸ್ಥಿತ ರಿದ್ದರು. ಅಲ್ಲದೇ ಕಾಲೇಜಿನ ಪ್ರಾಂಶುಪಾಲರು, ಮಾಜಿ ಪ್ರಾಂಶುಪಾಲರು, ಲಯನ್ಸ್ ಅಧ್ಯಕ್ಷರು ಮತ್ತು ಸದಸ್ಯರು, […]

Read More