ಮಣಿಪಾಲ: ಸಾಸ್ತಾನದ ಅಬ್ದುಲ್ ಲತೀಫ್(32), ಅಶ್ಫಾಕ್(21), ಕೋಟೇಶ್ವರದ ಮುಸ್ತಾಫ್ ಹಂಜಾ ಬ್ಯಾಲಿ(35), ಉಪ್ಪೂರಿನ ಶಕಿಲೇಶ(25) ಬಂಧಿತ ಆರೋಪಿಗಳು.ಇವರಿಂದ ಸುಮಾರು 274 ಗ್ರಾಂ ಗಾಂಜಾ, 5 ಲಕ್ಷ ರೂ. ಮೌಲ್ಯದ ಕಾರು, 19,130 ರೂ. ನಗದು, 20 ಸಾವಿರ ರೂ. ಮೌಲ್ಯದ 5 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಮಣಿಪಾಲ ಎಸ್ಸೈ ರಾಘವೆಂದ್ರ ಸಿ. ನೇತೃತ್ವದ ತಂಡ, ನಾಲ್ಕು ಮಂದಿಯನ್ನು ವಶಕ್ಕೆ ಪಡೆದುಕೊಂಡಿದೆ.ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ […]
ಕುಂದಾಪುರ: ದಿ:15/12/ 2023: ವಿದ್ಯಾ ಅಕಾಡೆಮಿ ಶಾಲೆ, ಮೂಡ್ಲಕಟ್ಟೆ ಕುಂದಾಪುರದಲ್ಲಿ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಡಾ. ಸೋನಿ ಡಿ’ಕೋಸ್ಟ ಅಧ್ಯಕ್ಷರು, ಜೆಸಿಐ ಕುಂದಾಪುರ ಘಟಕ ಇವರು ಉದ್ಘಾಟಿಸಿ, ಮಕ್ಕಳ ಪೋಷಕರನ್ನು ಉದ್ದೇಶಿಸಿ “ಮಕ್ಕಳಿಗೆ, ದೇವರಲ್ಲಿ ಶ್ರದ್ಧೆ ಯಿರಬೇಕು ಹಾಗೂ ಮಕ್ಕಳ ಪ್ರತಿಯೊಂದು ವಿಷಯದಲ್ಲಿಯೂ ಶಿಸ್ತು ಬೆಳೆಸುವುದು ನಮ್ಮ ಕರ್ತವ್ಯ. ಪ್ರತಿಯೊಂದು ಮಗುವು ಭಗವಂತನ ಅಮೂಲ್ಯ ಸೃಷ್ಟಿ. ನಿಮ್ಮ ಮಗುವನ್ನು ಇನ್ನೊಂದು ಮಗುವಿಗೆ ಹೋಲಿಸಬೇಡಿ” ಎಂದರು. ಮಕ್ಕಳ ಪಥಸಂಚಲ ಹಾಗೂ […]
ಕುಂದಾಪುರ: ಡಿಸೆಂಬರ್ 13ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ “ಪರಂಪರಾ” ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಅವರು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿ ಬೆಳೆಸಬೇಕು. ಮುಂದಿನ ಪೀಳಿಗೆಗೆ ಅದನ್ನು ಹಂಚುವಂತಹ ಕೆಲಸವೂ ಆಗಬೇಕು ಎಂದು ಕರೆ ನೀಡಿದರು.ಶಂಕರನಾರಾಯಣದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ನಿವೃತ್ತ ಇಂಗ್ಲಿಷ್ ಉಪನ್ಯಾಸಕರಾದ ರಾಮ ಭಟ್ ಅವರು ಭಾರತೀಯ ಸಂಸ್ಕೃತಿಯ ಮಹತ್ವದ ಕುರಿತು ಮಾತನಾಡಿದರು.ಇನ್ನೋರ್ವ […]
ಕುಂದಾಪುರ: ಡಿಸೆಂಬರ್ 13ರಂದು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಸಂಸ್ಕೃತ ಸಂಘದ ಆಶ್ರಯದಲ್ಲಿ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.ಶ್ರೀ ಸುರಸರಸ್ವತಿ ಸಭಾ, ಶೃಂಗೇರಿ ಇವರು ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಪ್ರಥಮಾ, ದ್ವಿತೀಯಾ, ತೃತೀಯಾ, ತುರೀಯಾ ಹಾಗೂ ಪ್ರವೇಶ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಬೆಳ್ಳಿ ಪದಕ ನೀಡಲಾಯಿತು. ಜೊತೆಗೆ ಜ್ಯೋತಿಷ್ಯ ಸರ್ಟಿಫಿಕೇಟ್ ಕೋರ್ಸನ್ನು ಪೂರೈಸಿದ ವಿದ್ಯಾರ್ಥಿಗಳಿಗೂ ಪ್ರಮಾಣಪತ್ರ ವಿತರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ […]
ಕುಂದಾಪುರ:ಡಿ.13 ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆಯ 1 ನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕರ್ನಾಟಕ ಸ್ಟೇಟ್ ಆಸೋಸಿಸಿಯೆನ್ ಮತ್ತು ದ.ಕನ್ನಡ ಆಸೋಸಿಸಿಯೆನ್ ವತಿಯಿಂದ ಮಂಗಳೂರಿನಲ್ಲಿ ನಡೆದ 5 ನೇ ಕೆ.ಸಿ.ಎ. ಟ್ರೋಪಿಯಲ್ಲಿ ಅಂಡರ್ 7 ರ ಕೆಟಗರಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಹಾಗೆಯೇ ಮಣಿಪಾಲದಲ್ಲ್ ನಡೆದ 16 ನೇ ಕಾಲ್ಯ ದೇವರಾಯ ಶೆಣೈ ಮೆಮೊರಿಯಲ್ ಟೂರ್ನಮೆಂಟನಲ್ಲಿ 7 ನೇ ಕೆಟಗರಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ. ಈ […]
ಕುಂದಾಪುರ: “ವಿದ್ಯಾರ್ಥಿಗಳು ದಿನನಿತ್ಯದ ಜೀವನದಲ್ಲಿ ಮಾಡುವ ಚಟುವಟಿಕೆಗಳಲ್ಲೇ ಕಾರ್ಯಸಂಸ್ಕ್ರತಿಯನ್ನು ಬೆಳೆಸಿಕೊಳ್ಳಬೇಕು. ತಮಗೆ ಸಂಬಂಧಿಸಿದ ಎಲ್ಲ ಕೆಲಸಗಳನ್ನು ತಾವೇ ಮಾಡಿಕೊಂಡು ಸ್ವಾವಲಂಬನೆ ಬೆಳೆಸಿಕೊಳ್ಳುವುದನ್ನು ವಿದ್ಯಾರ್ಥಿ ಹಂತದಿಂದಲೇ ರೂಢಿ ಮಾಡಿಕೊಳ್ಳಬೇಕು ಹಾಗೂ ತಾವು ಯಾವುದೇ ವೃತ್ತಿಯನ್ನು ಕೈಗೊಂಡರೂ ಅದನ್ನು ಶೃದ್ಧೆಯಿಂದ ಮಾಡಬೇಕು ” ಎಂದು ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದಶ್ರೀ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ, ಕೆ.ಎ.ಎಸ್, ಎಡಿಶನಲ್ ಕಮೀಶನರ್, ಬಿ.ಬಿ.ಎಮ್.ಪಿ, ಬೆಂಗಳೂರು- ಇವರು ಅಭಿಪ್ರಾಯ ಪಟ್ಟರು.ಕಾಲೇಜಿನ ಸಂಚಾಲಕರೂ, ಬೈಂದೂರಿನ ಮಾಜಿ […]
ಕುಂದಾಪುರ: ಕುಂದಾಪುರದ ತೆಕ್ಕಟ್ಟೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಕೆಡವಿದ್ದಾರೆ. ಬಸವ ವಸತಿ ಯೋಜನೆಯಲ್ಲಿ ಮಂಜೂರಾಗಿದ್ದ ಮನೆಯ ಅನುದಾನ ಬಿಡುಗಡೆಗೆ ಲಂಚದ ಬೇಡಿಕೆ ಇಟ್ಟ ಆರೋಪಿ ಪಿಡಿಓ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ. ಬೇಳೂರು ಗ್ರಾಮ ಪಂಚಾಯಿತಿ ಪಿ ಡಿ ಓ ಜಯಂತ್ ಎಂಬತ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಆರೋಪಿ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಗೆಬೆಟ್ಟು […]
ಹಂಗಾರಕಟ್ಟೆ : ಯಕ್ಷಗಾನ ಕವಿ ಪ್ರಸಂಗಕರ್ತ ಶಿರೂರು ಫಣಿಯಪ್ಪಯ್ಯ ಅವರ ಪ್ರಸಂಗ ಪುಸ್ತಕ ಸಂಪುಟ ಬಿಡುಗಡೆ ಕಾರ್ಯಕ್ರಮ 09 12 2023 ಶನಿವಾರ ಸಂಜೆ ಹಂಗಾರಕಟ್ಟೆ ಯಕ್ಷಗಾನ ಕೇಂದ್ರದಲ್ಲಿ ನಡೆಯಿತು. ಶಿರೂರು ಫಣಿಯಪ್ಪಯ್ಯ ವಿರಚಿತ ಜನಪ್ರಿಯ ಪ್ರಸಂಗ ಶ್ರೀ ಕೃಷ್ಣಗಾರುಡಿ, ಮಹೇಂದ್ರ ವಿಜಯ, ಮುನ್ನೂರು ವರ್ಷಗಳ ಹಿಂದಿನ ಹಟ್ಟಿಯಂಗಡಿ ರಾಮ ಭಟ್ ವಿರಚಿತ ಬಿಲ್ಲಹಬ್ಬ ಮತ್ತು ಕಂಸವಧೆ, ರತ್ನಪುರದ ರಾಮ ಕವಿಯ ಮೂಲಕಾಸುರ ಕಾಳಗ ಪ್ರಸಂಗಗಳನ್ನು ಒಳಗೊಂಡ ಫಣಿಗಿರಿ ಯಕ್ಷಸಂಪುಟ ಹಾಗೂ ಕ ಪು ಸೀತಾರಾಮ ಕೆದಿಲಾಯ […]
ಉಡುಪಿ, ಡಿ.3: ಉಡುಪಿಯ ಕನ್ನರ್ಪಾಡಿಯ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಮಾಣಿಕ್ಯ ಮಹೋತ್ಸವದ ಪ್ರಯುಕ್ತ ಆಯೋಜಿಸಲಾದ “ಸೇಂಟ್ ಮೇರಿಸ್ ರೂಬಿ ರನ್ 2023” ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಂದ ಅಪಾರ ಭಾಗವಹಿಸುವಿಕೆಗೆ ಪಾತ್ರವಾಯಿತು. ರೂಬಿ ರನ್ ಮ್ಯಾರಥಾನ್ ಕಾರ್ಯಕ್ರಮವು ಡಿಸೆಂಬರ್ 3 ರಂದು ಭಾನುವಾರ ನಡೆಯಿತು. ಕಿರಿಯರಿಂದ ಹಿಡಿದು ಹಿರಿಯ ನಾಗರಿಕರವರೆಗೂ ಬಹಳಷ್ಟು ಮಂದಿ ಕ್ರೀಡಾ ಸ್ಪೂರ್ತಿಯೊಂದಿಗೆ ಮ್ಯಾರಥಾನ್ನಲ್ಲಿ ಪಾಲ್ಗೊಂಡರು. ಮ್ಯಾರಥಾನ್ ಮುಗಿದ ಮೇಲೆ ಬಹುಮಾನ ವಿತರಣಾ ಸಮಾರಂಭ ನಡೆಯಿತು. ವಿಜೇತರಿಗೆ ಗಣ್ಯರು ನಗದು ಬಹುಮಾನ, ಸ್ಮರಣಿಕೆ, […]

