
ಕುಂದಾಪುರಃ ನವೆಂಬರ್ 14 ರಂದು UBMC ಆಂಗ್ಲ ಮಾಧ್ಯಮ ಶಾಲೆ ಕುಂದಾಪುರದಲ್ಲಿ ಮಕ್ಕಳ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಮುಖಂಡ ವಿಸ್ಮಿತ್ ಅಧ್ಯಕ್ಷ ತೆ ವಹಿಸಿದ್ದು, ರೆವರೆಂಡ್ ಇಮ್ಯಾನುಯೆಲ್ ಜಯಕರ್ ಹಾಗೂ ಶಾಲಾ ಸಂಚಾಲಕಿ ಐರಿನ್ ಸಾಲಿನ್ಸ್ ಮುಖ್ಯ ಅತಿಥಿಗಳಾಗಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಹಾಗೂ ನರ್ಸರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸವಿತಾ, ಅಂಗನವಾಡಿ ಶಿಕ್ಷಕಿ ವಿದ್ಯಾಲಕ್ಷ್ಮಿ ವೇದಿಕೆ ಹಂಚಿಕೊಂಡರು. ಶಿಕ್ಷಕಿಯರು ಪ್ರಾರ್ಥನ ಗೀತೆ ಹಾಡಿಅದ್ರು.ಪಂಡಿತ ಜವಾಹರಲಾಲ್ ನೆಹರು […]

ದಿನಾಂಕ :14/11/2024 ರಂದು ಹೋಲಿ ರೋಜರಿ ಶಾಲೆಯಲ್ಲಿ ವಿಜ್ರಂಭಣೆಯಿಂದ ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಸ್ ಶಾಂತಿ ಎ.ಸಿ.ಯವರು ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸಂಬಂಧ ಹೇಗಿರಬೇಕು ಎಂದು ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಸಂಬಂಧ ಪವಿತ್ರವಾದದು ಎನ್ನುತ್ತಾ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ಶಾಲಾ ಶಿಕ್ಷಕರಿಂದ ವಿವಿಧ ನೃತ್ಯ ಮತ್ತು ವಿದ್ಯಾರ್ಥಿಗಳಿಗೆ ಹಾರೈಕೆಯ ಶುಭಾಶಯವನ್ನು ಕೊರಲಾಯಿತು ಹಾಗೂ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಿಗೆ ಮುಖ್ಯೋಪಾಧ್ಯಾಯಿನಿಯವರು ಬಹುಮಾನ […]

ಕೋಲಾರ,ನ.13: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕೆಲಸದ ಕಾರ್ಯವೈಖರಿ ಹಾಗೂ ಮನೋಭಾವ ಬದಲಾಯಿಸಿಕೊಂಡರೆ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ತ್ವರಿತಗತಿಯಲ್ಲಿ ಕೊಡಬಹುದು. ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಬಹುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಬುಧವಾರ ಆಯೋಜಿಸಿದ್ದ ಕಂದಾಯ ಇಲಾಖೆ ಕಾರ್ಯಪ್ರಗತಿ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನು ಜಿಲ್ಲಾಧಿಕಾರಿಯಾಗಿ ಕೋಲಾರ ಜಿಲ್ಲೆಗೆ ಬಂದ ಮೇಲೆ ಹಿಂದೆ ಇದ್ದ ಸಿಬ್ಬಂದಿಯನ್ನೇ ಬಳಸಿಕೊಂಡು ಅವರ ಮನಪರಿವರ್ತನೆ ಮಾಡಿ, ಕಾರ್ಯವೈಖರಿ […]

ಕುಂದಾಪುರ; “ಪಠ್ಯ ಶಿಕ್ಷಣ ಕಲಿಸುವ ಒಳಾಂಗಣ ಚಟುವಟಿಕೆಗಳಷ್ಟೇ ಪ್ರಮುಖವಾಗುವುದು ಆಟೋಟ- ಪಂದ್ಯಾಟಗಳಿಂದ ಮಕ್ಕಳ ಬೆಳವಣಿಗೆಗೆ ಹೊಸ ಆಯಾಮವನ್ನು ನೀಡುವ ಹೊರಾಂಗಣ ಚಟುವಟಿಕೆಗಳು. ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜು ಈ ಎರಡೂ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿಸಿ ಮುಂಚೂಣಿಯಲ್ಲಿರುವುದು ಸಂತಸ ತಂದಿದೆ ” ಎಂದು ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿದ ಶ್ರೀ ರವಿಶಂಕರ್ ಹೆಗ್ಡೆ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ,ಉಡುಪಿ ಜಿಲ್ಲೆ, ಇವರು ತಮ್ಮ ಉದ್ಘಾಟನಾ ನುಡಿಯಲ್ಲಿ ತಿಳಿಸಿದರು. ಮುಖ್ಯ ಅತಿಥಿಯಾಗಿ […]

ಮಂಗಳೂರು:ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಏಕದಿನ ಅಂತರ್ ಪಿ ಯು ಕಾಲೇಜು ಸ್ಪರ್ಧೆ ಕ್ಯಾಂಪಸ್ ಕ್ರೋಮ ನವೆಂಬರ್ 11,2024 ರಂದು ಪಿ ಎ ಕ್ಯಾಂಪಸ್ ನಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆಸಿಸಿಐ ಅಧ್ಯಕ್ಷರಾದ ಆನಂದ್ ಜಿ ಪೈ ‘ಇಂದಿನ ಈ ಸ್ಪರ್ಧೆ ಗೆಲುವಿಗಿಂತಲೂ ಅನುಭವಕ್ಕೆ ಹೆಚ್ಚು ಒತ್ತನ್ನು ನೀಡಲಿ. ಸೋಲು ಗೆಲುವು ಇದ್ದದ್ದೆ ಆದರೆ ಅನುಭವ ಅದಕ್ಕಿಂತಲೂ ಮಿಗಿಲು’ ಎಂದರು. ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ ಸರ್ಫ್ರಾಜ್ ಜೆ ಹಾಸಿಂ […]

ಕುಂದಾಪುರ ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಿಕ್ಷಕರ ಸಂಘದ ಸಹಯೋಗದಲ್ಲಿ “ಹೊಸ ಪೀಳಿಗೆಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸಲಹೆ ನೀಡುವ ಕಲೆ” ಕುರಿತು ಕಾರ್ಯಾಗಾರ ನಡೆಯಿತು.ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಎನ್.ಎಮ್.ಎ.ಎಮ್.ಐ.ಟಿ ಇದರ ಆಪ್ತ ಸಮಾಲೋಚಕರೋದ ಅಂಕಿತ್ ಎಸ್.ಕುಮಾರ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಹೇಳುವ ವಿಚಾರಗಳು ಪರಿಣಾಮಕಾರಿಯಾಗಿ ಅವರಿಗೆ ತಲುಪುವ ಮತ್ತು ಅರ್ಥವಾಗುವ ರೀತಿಯಲ್ಲಿ ಇರಬೇಕು. ವಿದ್ಯಾರ್ಥಿ ಸಮುದಾಯದ ಮನಸ್ಥಿತಿಯನ್ನು ಅರಿಯುವ ಪ್ರಯತ್ನವನ್ನು ಮೊದಲು ಮಾಡಬೇಕು. ಅವರು ಆಸಕ್ತಿಯನ್ನು ಅರಿತು ಅದಕ್ಕೆ ತಕ್ಕ ರೀತಿಯಲ್ಲಿ […]

ಕುಂದಾಪುರ, ನ.13; ಕರ್ನಾಟಕ ಸರಕಾರದಿಂದ ಕುಂದಾಪುರ ನಗರ ಯೋಜನ ಪ್ರಾಧಿಕಾರ ಅಧ್ಯಕ್ಷರಾಗಿ ಆಯ್ಕೆಯಾದ ವಿನೋದ್ ಕ್ರಾಸ್ಟೊ ಅವರು ಕಾಂಗ್ರೆಸ್ ಪಕ್ಷದ ಹಲವು ನಾಯಕರ ಉಪಸ್ಥಿಯಲ್ಲಿ ನ.13 ರಂದು ನಗರ ಪ್ರಾಧಿಕಾರ ಕಚೇರಿಯ ಸಭಾಂಗಣದಲ್ಲಿ ಪದಗ್ರಹಣ ಮಾಡಿದರು.ನಗರ ಯೋಜನ ಪ್ರಾಧಿಕಾರದ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ದೀಪ ಬೆಳಗಿಸಿ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ನಂತರ ನೆಡೆದ ಸಭಾಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಿಂದ ಅಭಿನಂದನ ಕಾರ್ಯಕ್ರಮ ನಡೆಯಿತು.ಜಿಲ್ಲಾ ಕಾಂಗ್ರೆಸ್ ಕಾರ್ಯಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿ ‘ವಿನೋದ್ ಕ್ರಾಸ್ಟೊರವರಿಗೆ ಈ […]

ಕುಂದಾಪುರ(ನ.11) : ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ, ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ನವೆಂಬರ್ 9 ಶನಿವಾರದಂದು ಮಕ್ಕಳ ದಿನಾಚರಣೆಯ ಅಂಗವಾಗಿ, ವಿದ್ಯಾರ್ಥಿಗಳ ವೈಜ್ಞಾನಿಕ ಮನೋಭಾವವನ್ನು ಪ್ರೇರೇಪಿಸುವ ದೃಷ್ಠಿಯಿಂದ ಎಲ್ ಕೆ ಜಿ ಯಿಂದ 10ನೇ ತರಗತಿಯ ವರೆಗಿನ ಮಕ್ಕಳಿಂದ ಸ್ಪೆಕ್ಟ್ರಮ್ 2024 ವಸ್ತು ಪ್ರದರ್ಶನ ಜರುಗಿತು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಸಂಸ್ಥೆಯ ಸಂಚಾಲಕರೂ ಆಗಿರುವ ಬಿ. ಎಮ್. ಸುಕುಮಾರ […]

ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಕಾಶ್ ಇನ್ಸ್ಟೂಶನ್ ರವರು ನಡೆಸಿದ ಆಕಾಶ್ ನ್ಯಾಷ್ನಲ್ ಟ್ಯಾಲೆಂಟ್ ಹಂಟ್ ಪರೀಕ್ಷೆûಗೆ ಶಾಲೆಯ 10ನೇ ತರಗತಿಯ 34 ವಿದ್ಯಾಥಿಗಳು ಪರೀಕ್ಷೆಗೆ ಹಾಜರಾಗಿದ್ದು ಆಕಾಶ್ ಈಶ್ವರ್ ಮೊಗವೀರ ಇವರು 80 ಪ್ರತಿಶತ ಅಂಕಗಳೊಂದಿಗೆ ಉಡುಪಿ ಜಿಲ್ಲೆಗೆ ತ್ರತೀಯ ರ್ಯಾಂಕ್ ಗಳಿಸಿರುತ್ತಾರೆ.ತ್ರತೀಯ ರ್ಯಾಂಕ್ ಗಳಿಸಿರುವ ಹೆಮ್ಮೆಯ ವಿದ್ಯಾರ್ಥಿಗೆ ಸಂಚಾಲಕರು ಕುಂದಾಪುರ ರೋಜರಿ ಮಾತಾ ಚರ್ಚಿನ ಪ್ರಧಾನ ಧರ್ಮಗುರು ಅ|ವಂ| ಪಾವ್ಲ್ ರೇಗೊ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜಾ ಶಾಂತಿ, ಆಡಳಿತ ಮಂಡಳಿ, ಭೋಧಕ/ […]