ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಇಕೋ ಕ್ಲಬ್ ಇದರ ಸಹಭಾಗಿತ್ವದಲ್ಲಿ ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ರಾಜೇಂದ್ರ ಕಲ್ಬಾವಿ ಇವರು ಆಗಮಿಸಿ ನೀರಿನ ಮಹತ್ವ ಮತ್ತು ಸಂರಕ್ಷಣೆ ವಿಷಯದ ಕುರಿತು ವಿಚಾರ ವಿನಿಮಯ ಮಾಡಿದರು. ನೀರನ್ನು ಜೀವ ಜಲ ಎಂದು ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ನೀರಿನ ಅಭಾವದ ಕುರಿತು ಎಚ್ಚರಿಸುತ್ತ ಬಾವಿಯ […]
ಕಾರ್ಕಳ ತಾಲೂಕು ಮಟ್ಟದ ಅತ್ಯುತ್ತಮ ಶಾಲೆ ಪ್ರಶಸ್ತಿ ಪುರಸ್ಕøತ ಸಂಸ್ಥೆ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ಶಾಲಾ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿಗಳ ಸಮಾವೇಶ, ಗುರುವಂದನೆ ಕಾರ್ಯಕ್ರಮ, ವಿದ್ಯಾರ್ಥಿ ವೇತನ ವಿತರಣೆ, ಚೈತ್ಯನ್ಯ ಅವಲೋಕನ ಬಿಡುಗಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಜರಗಿತು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಯು. ಶೇಷಗಿರಿ ಕಾಮತ್ ವಹಿಸಿದ್ದರು. ಬೆಳ್ಮಣ್ಣು ಸರಕಾರಿ […]
ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಮಾ. 30 ರಂದು ಶ್ರೀ ರಾಮನವಮಿಯಂದು ಜರುಗಲಿದೆ.ರಥೋತ್ಸವ ಸಂಬಂಧ ಮಾ. 26 ರಿಂದ ಕಾರ್ಯಕ್ರಮಗಳು ನಡೆಯುತ್ತಿದ್ದು 30 ರಂದು ಗುರುವಾರ ಬೆಳಿಗ್ಗೆಯಿಂದ ಪಂಚಮೃತ ಅಭಿಷೇಕ, ಕನಕಾಭಿಷೇಕ, ತುಲಾಭಾರ, ಮಹಾಪೂಜೆ, ಮಹಾಬಲಿ ಪ್ರಧಾನ ನಡೆದು ಸಂಜೆ ಬ್ರಹ್ಮರಥಾರೋಹಣ ನಡೆಯಲಿದೆ ನಂತರ ರಾತ್ರಿ ಬ್ರಹ್ಮರಥೋತ್ಸವ ಜರುಗಲಿರುವುದು.ಮಾರ್ಚ್ 31 ರಂದು ಓಕುಳಿ ಸಂಭ್ರಮದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು, ಓಕುಳಿ ಉತ್ಸವ, ಚೂರ್ಣೋತ್ಸವ, ಅವಭೃತ ಸ್ನಾನ, ಧ್ವಜಾರೋಹಣ ಹಾಗೂ ರಾತ್ರಿ ಮೃಗಬೇಟೆ ಉತ್ಸವ ಜರುಗಲಿದೆ […]
ಕುಂದಾಪುರ. ಮಾ.28 : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಈ ದಿನ ತಮ್ಮ ಆಡಳಿತ ಕಛೇರಿಯಲ್ಲಿ ಬಾರಂದಾಡಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಅಭಿವ್ರದ್ದಿಗಾಗಿ ರೂಪಾಯಿ ಎಂಬತ್ತು ಸಾವಿರ ದೇಣಿಗೆ ನೀಡಿದರು. ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಶಾಲೆಯ HM ಶ್ರೀಮತಿ ಅಮಿತಾ ಆರ್ ಶೆಟ್ಟಿ ಇವರಿಗೆ 80,000/- ದ ಚೆಕ್ ಹಸ್ತಾಂತರಿಸಿದರು. ಈ ದೇಣಿಗೆಯನ್ನು ರೆಡ್ ಕ್ರಾಸ್ ಸದಸ್ಯರಾದ ಶ್ರೀಮತಿ ಪ್ರತಿಮಾ ಮತ್ತು ಡಾ. ದಿನಕರ ಶೆಟ್ಟಿ ಯವರು ಕೊಡಮಾಡಿದರು. ಕಾರ್ಯಕ್ರಮದಲ್ಲಿ […]
ಕುಂದಾಪುರ : ಇಲ್ಲಿನ ಸಂಚಾರಿ ಪೊಲೀಸ್ ಠಾಣೆಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಫ್ಯಾನುಗಳನ್ನು ಕೊಡುಗೆ ರೂಪದಲ್ಲಿ ನೀಡಲಾಯಿತುಈ ಸಂದರ್ಭದಲ್ಲಿ ಠಾಣೆಯ ಠಾಣಾಧಿಕಾರಿ ನಾಸಿರ್ ಹುಸೇನ್, ಜೆಸಿಐ ಕುಂದಾಪುರ ಸಿಟಿ ಯ ಅಧ್ಯಕ್ಷೆ ಡಾ ಸೋನಿ ಡಿಕೋಸ್ತಾ, ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಪೂರ್ವ ಅಧ್ಯಕ್ಷ ರಾದ ರಾಘವೇಂದ್ರ ಚರಣ್ ನಾವಡ, ಗಿರೀಶ್ ಹೆಬ್ಬಾರ್, ವಿಜಯ್ ತೆಕ್ಕಟ್ಟೆ, ರಾಘವೇಂದ್ರ ಕುಲಾಲ್ಸದ್ಯಸ್ಯರಾದ ಗುರುರಾಜ್ ಕೊತ್ವಾಲ್ ನಾಗರಾಜ್ ಪಾಟ್ವಲ್ ಇನ್ನಿತರರು ಉಪಸ್ಥಿತರಿದ್ದರು
ಬೆಳ್ತಂಗಡಿ:ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಮಾರ್ಚ್ 23 ಮತ್ತು 24 ರಂದು ಸ್ಕೌಟ್ ಮತ್ತು ಗೈಡ್ಸ್, ಕಬ್ಸ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಎರಡು ದಿನಗಳ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಸ್ಕೌಟ್ ತರಬೇತುದಾರ ಶ್ರೀ ವಲೇರಿಯನ್ ಸಿಕ್ವೇರಾ ಮುಖ್ಯ ಅತಿಥಿಯಾಗಿದ್ದರು. ಸ್ಕೌಟ್ಸ್ ಮತ್ತು ಗೈಡ್ಸ್ನ ಮೋಟೋ, ಪ್ರಾಮುಖ್ಯತೆ ಮತ್ತು ಮೂಲಭೂತ ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉತ್ತಮ ಮಾಹಿತಿ ನೀಡಲಾಯಿತು. ವಿವಿಧ ವೈಯಕ್ತಿಕ ಮತ್ತು […]
ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯು ಮಾರ್ಚ್ 25 ರಂದು ಹೊರಹೋಗುವ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ನಡೆಸಿತು. ನಿರ್ಗಮಿತ ಶಿಕ್ಷಕಿಯರಾದ ಶ್ರೀಮತಿ ಕವಿತಾ ಮತ್ತು ಕುಮಾರಿ ದಿವ್ಯಾ ಮತ್ತು ಚರ್ಚ್ ಧರ್ಮಾಧಿಕಾರಿ ಜೋಯಲ್ ಪ್ರೀತಂ ರೇಗೊ ಅವರನ್ನು ಸಂಸ್ಥೆಯ ವತಿಯಿಂದ ಅವರ ಸೇವೆಗಾಗಿ ಸನ್ಮಾನಿಸಲಾಯಿತು. ಪ್ಯಾಸ್ಟೋರಲ್ ಕೌನ್ಸಿಲ್ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಪಿಟಿಎ ಉಪಾಧ್ಯಕ್ಷ ಬೊನವೆಂಚರ್ ಪಿಂಟೋ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಫಾದರ್ ಕ್ಲಿಫರ್ಡ್ ಪಿಂಟೋ ಅವರು ಶಿಕ್ಷಕರ ಮುಂದಿನ ವೃತ್ತಿ ಮತ್ತು […]
ಕುಂದಾಪುರ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ. ಶಂಕರ್ ಫೆಮಿಲಿ ಟ್ರಸ್ಟ್ ಅಂಬಲಪಾಡಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಇವರ ಸಹಯೋಗದೊಂದಿಗೆ ಆಯೋಜಿಸಿದ ರಕ್ತ ದಾನ ಶಿಬಿರವನ್ನು ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ದೀಪಬೆಳಗಿಸಿ ಉದ್ಘಾಟಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದಲ್ಲಿ ನಡೆದ ಈ ಕಾರ್ಯಕ್ರಮ ದಲ್ಲಿ ಮೊಗವೀರ ಯುವ ಸಂಘಟನೆಯ ಅಧ್ಯಕ್ಷರಾದ ಚಂದ್ರಹಾಸ ಕೋಣಿ, ನಿಕಟಪೂರ್ವ ಅಧ್ಯಕ್ಷರಾದ ಕೆ. ಕೆ […]
ಕುಂದಾಪುರ: ಮಾ 27: ಐ.ಎಂ.ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮೂಡ್ಲಕಟ್ಟೆಯಲ್ಲಿ ‘ಶಿಕ್ಷಣ ಮತ್ತು ಜೀವನದ ಬಗ್ಗೆ ಗ್ರಹಿಕೆ’ ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಐ. ಎಂ. ಜೆ. ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಪ್ರೊಫೆಸರ್ ದೋಮ ಚಂದ್ರಶೇಖರ್ ಅವರು ವಿಷಯದ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. “ವೇಗವಾಗಿ ಬೆಳೆಯುತ್ತಿರುವ ಸ್ಪರ್ಧಾತ್ಮಕ ಪ್ರಪಂಚಕ್ಕೆ ವಿದ್ಯಾರ್ಥಿಗಳು ಅಣಿಯಾಗುತ್ತಿರುವ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಳ್ಳಬಹುದಾದ ವಿಷಯದ ಕುರಿತು ಮಾತನಾಡುತ್ತಾ, ಶಿಕ್ಷಣ, ಕೌಶಲ್ಯ ಮತ್ತು ಪ್ರಚಲಿತ ವಿದ್ಯಮಾನದ ಬಗ್ಗೆ ತಿಳಿಸಿದರು. ಜ್ಞಾನ, ಅರಿವು ಮತ್ತು ಆಸಕ್ತಿ ಆಧಾರಿತ ವಿಷಯದ ಕುರಿತು ವಿವರಣೆ ನೀಡಿದರು. ಜೀವನದಲ್ಲಿ ಶಿಕ್ಷಣ ಮತ್ತು ಕೌಶಲ್ಯದ ಬಗ್ಗೆ ಆಧುನಿಕ ಪ್ರಪಂಚದಲ್ಲಿ ನಡೆಯುತ್ತಿರುವ ವಿಚಾರವನ್ನು ಉದಾಹರಣೆಯೊಂದಿಗೆ ವಿವರಿಸಿದರು. ಕಾಲೇಜಿನಲ್ಲಿ ಪದವಿ ಜೊತೆಗೆ ನೀಡುತ್ತಿರುವ ಕೌಶಲ್ಯ ಮತ್ತು ಉದ್ಯೋಗ ಆಧಾರಿತ ತರಬೇತಿಯನ್ನು ಉತ್ತಮ […]

