JANANUDI.COM NETWORK ಕುಂದಾಪುರ: ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಗೀತ ಗಾಯನ ಕಾರ್ಯಕ್ರಮ ಕುಂದಾಪುರ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯ ವಠಾರದಲ್ಲಿ ಸಂಭ್ರಮದಿಂದ ಗುರುವಾರ ಜರುಗಿತು.ಸೈಂಟ್ ಮೇರಿಸ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜ್ ಹಾಗೂ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಸಂಘಟಿಸಲಾಯಿತು.ಕನ್ನಡ ಗೀತ ಗಾಯನ, ಕನ್ನಡ ಘೋಷಣೆಗಳ ಭಿತ್ತಿಫಲಕ, ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ವಾದನ, ಜೋಗ ಜಲಪಾತದ ನಡುವೆ ತಾಯಿ ಭುವನೇಶ್ವರಿ ಎಲ್ಲರ ಗಮನ ಸೆಳೆಯಿತು. […]
JANANUDI.COM NETWORK ಬೀಜಾಡಿ: ಗ್ರಾಮ ಪಂಚಾಯಿತಿ ಬೀಜಾಡಿ ಮತ್ತು ಮಿತ್ರ ಸಂಗಮ ಬೀಜಾಡಿ-ಗೋಪಾಡಿ ಇವರ ಜಂಟಿ ಆಶ್ರಯದಲ್ಲಿ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮ ಬೀಜಾಡಿ ಗ್ರಾಮ ಪಂಚಾಯಿತಿ ವಠಾರದಲ್ಲಿ ಗುರುವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಕೆ.ಎಸ್.ನಿಸಾರ್ ಅಹಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ, ಹಂಸಲೇಖ ಅವರ ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.ಈ ಸಂದರ್ಭದಲ್ಲಿ ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ […]
JANANUDI.COM NETWORK ಬೀಜಾಡಿ: ಗ್ರಾಮ ಪಂಚಾಯಿತಿ ಬೀಜಾಡಿ, ಬೀಜಾಡಿ ಗೋಪಾಡಿ ಮಿತ್ರ ಸಂಗಮ ಇವರ ಜಂಟಿ ಆಶ್ರಯದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ಕುಂದಾಪುರ ವಕೀಲರ ಸಂಘ, ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ,ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಉಚಿತ ಕಾನೂನು ಅರಿವು ನೆರವು ಮಾಹಿತಿ ಕಾರ್ಯಕ್ರಮ ಬೀಜಾಡಿ ಮಿತ್ರಸೌಧದಲ್ಲಿ ಸೋಮವಾರ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮತಿ ಮೊಗವೀರ ವಹಿಸಿದ್ದರು. ಕುಂದಾಪುರದ ವಕೀಲೆ ಕವಿತಾ […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಭಜನೆ ಎಂಬುದು ಮನುಷ್ಯನ ಜೀವನದಲ್ಲಿ ದೇವರನ್ನು ಅತೀ ವೇಗವಾಗಿ ಒಲಿಸುವಂತಹ ಒಂದು ಅದ್ಬುತವಾದ ಶಕ್ತಿ. ಎಲ್ಲಿ ಭಜಕರು ಇರುವರೋ ಅಲ್ಲಿ ದೇವನಿರುವುದು ಖಂಡಿತ. ದೇವರಿಗೆ ಮತ್ತು ಮನುಷ್ಯರಿಗೆ ಹತ್ತಿರದ ಸಂಬಂಧ ಅಂದ್ರೆ ಭಜನೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹೇಳಿದರು.ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ನಂದಳಿಕೆ ಅಬ್ಬನಡ್ಕ ಶ್ರೀ […]
JANANUDI.COM NETWORK ಉಡುಪಿ : 25-10-2021 ರಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಬಗ್ಗೆ ಉಡುಪಿ ಧರ್ಮಪ್ರಾಂತದ ವತಿಯಿಂದ ಸ್ಪಷ್ಟೀಕರಣ ನೀಡಿದೆ2021 ಅಕ್ತೋಬರ್ 24 ರಂದು ಉಡುಪಿ ಜಿಲ್ಲೆಯ ಬೆಳ್ವೆ ಗುಮ್ಮ ಹೊಲದ ಸ0ತ ಜೋಸೆಫ್ ಅಗ್ರಿಕಲ್ಚರ್ ಕಾಲನಿಯ ಜನರು ಚರ್ಚಿನ ಧರ್ಮಗುರುಗಳ ಎರುದ್ಧ ಅನೇಕ ಆರೋಪಗಳನ್ನುಮಾಡಿ, ಅವರನ್ನು ತಕ್ಷಣ ಅಲ್ಲಿಂದ ವರ್ಗಾವಣೆ ಮಾಡಬೇಕೆಂಬ ಬೇಡಿಕೆಯಿಟ್ಟು ಮಾಡಿದ ಪ್ರತಿಭಟನೆಯ ವರದಿಗಳು ಅಕ್ತೋಬರ್ 25 ರಂದು ವಿವಿಧ ಮಾಧ್ಯಮಗಳು ವರದಿಮಾಡಿವೆ. ಇವುಗಳಲ್ಲಿ ಸತ್ಯಕ್ಕೆ ದೂರವಾದ ಅನೇಕ ವಿಷಯಗಳಿದ್ದು, ಅವುಗಳ ಹಿ0ದಿನ […]
JANANUDI.COM NETWORK ಕುಂದಾಪುರ, ಅ.24; ಕುಂದಾಪುರ ಕಥೊಲಿಕ್ ಸಭಾ ವಲಯ ಸಮಿತಿಯಿಂದ ಹಿಮೋಗ್ಲೊಬಿನ್ ಪರೀಕ್ಷೆ, ಆರೋಗ್ಯ ಮಾಹಿತಿ ಶಿಬಿರ ಹಾಗೂ ಫಾ|ಮುಲ್ಲರ್ಸ್ ಆಸ್ಪತ್ರೆಯ ಹೆಲ್ತ್ ಕಾರ್ಡ್ ಬಗ್ಗೆ ಮಾಹಿತಿ ಕಾರ್ಯಕ್ರಮ ಕುಂದಾಪುರ ಸಂತ ಮೇರಿಸ್ ಪಿ.ಯು. ಕಾಲೇಜು ಸಭಾ ಭವನದಲ್ಲಿ ನಡೆಯಿತು.ಫಾ|ಮುಲ್ಲರ್ಸ್ ಆಸ್ಪತ್ರೆಯ ಮಾಜಿ ಸಾರ್ವಜನಿಕ ಸಂಪರ್ಕ ಅದಿಕಾರಿü ಹಾಗೂ ಸಮಾಜ ಸೇವಕ ಡೇವಿಡ್ ಸಿಕ್ವೇರಾ ಫಾ|ಮುಲ್ಲರ್ಸ್ ಆಸ್ಪತ್ರೆಯ ಆರೋಗ್ಯ ಕಾರ್ಡಗಳ ಬಗ್ಗೆ, ಅದರಿಂದ ಸಿಗುವ ಲಾಭ ಮತ್ತು ವೈದ್ಯಕೀಯ ಚಿಕಿತ್ಸೆಯಲ್ಲಿ ರಿಯಾತಿಗಳ ಬಗ್ಗೆ ವಿವರಿಸಿದರು. ತೆಕ್ಕಟ್ಟೆಯ […]
JANANUDI.COM NETWORK ಸರಕಾರ ತನ್ನ ಕನಿಷ್ಠ ಜವಾಬ್ದಾರಿಗಳನ್ನು ಒಂದು ಐತಿಹಾಸಿಕ ಸಾಧನೆ ಎನ್ನುವುದು ಸರಿಯಲ್ಲ. ಯಾವುದೇ ಯಶಸ್ಸು ಮೈಮರೆವಿಗೆ ಕಾರಣವಾಗಬಹುದು. ನಮ್ಮ ದೇಶದ ಜನಸಂಖ್ಯೆ ಮಕ್ಕಳನ್ನು ಸೇರಿಸಿದರೆ 136 ಕೋಟಿಗಿಂತ ಹೆಚ್ಚು. ಸರಕಾರ ತನ್ನ ಬೆನ್ನು ತಟ್ಟಿಕೊಳ್ಳುವ ವೇಗ ಮುಂದುವರೆದರೆ ಇನ್ನೂ ಉಳಿದ 172 ಕೋಟಿ ಲಸಿಕೆ ಹಾಕಿಸಿಕೊxಳ್ಳಲು ಇನ್ನು 479 ದಿನಗಳು ಬೇಕಾಗಬಹುದು. ಕೋವಿಡ್ ಹರಡುವಿಕೆಯ ವೇಗ ಮತ್ತು ಅದು ಉಂಟು ಮಾಡಬಹುದಾದ ಅನಾಹುತ ಗಣನೆಗೆ ತೆಗೆದುಕೊಂಡರೆ ಲಸಿಕೆ ಅಭಿಯಾನದಲ್ಲಿ ಭಾರತ ಹಿಂದುಳಿದಿರುವುದು ವಿಷಾದವಾಗಿದೆ ಎಂದು […]
JANANUDI.COM NETWORK ಇಂದು ಮೂಡುಬೆಳ್ಳೆಯ ಸಂತ ಲಾರೆನ್ಸ್ ಪ ಪೂರ್ವ ಕಾಲೇಜಿಗೆ ಉಡುಪಿ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ಸರ್ ಇವರು ಭೇಟಿ ನೀಡಿ ಕಾಲೇಜಿನಲ್ಲಿ ಕೋವಿಡ್ 19 ಸಂಬಂಧಿತ ನಿಯಮಾವಳಿಗಳ ಪಾಲನೆಯ ಪರಿಶೀಲನೆ ಮತ್ತು ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ನಡೆಯುತ್ತಿರುವಂತಹ ಆಫ್ಲೈನ್ ಪಾಠಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಿದರು. ಹಾಗೆಯೇ ವಿದ್ಯಾರ್ಥಿಗಳ ಕಲಿಕೆಯನ್ನು ಗಮನಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ “ಎಲ್ಲ ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು […]
JANANUDI.COM NETWORK ಕುಂದಾಪುರ: ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ನಾಗರಾಜ್ ಎಂಬಾತನ ಸಾವಿಗೆ ತಿರುವು ಲಭಿಸಿದ್ದು, ಪ್ರೇಮಿಸಿ ವಿವಾಹವಾಗಿದ್ದ ಮಮತಾಳಿಂದಲೇ ಕೊಲೆಯಾಗಿರುವುದಾಗಿ ಈಗ ತಿಳಿದು ಬಂದಿದೆ.ನಾಗರಾಜನು ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಪತ್ನಿ ಮಮತಾ ಹೇಳಿಕೆ ನೀಡಿದ್ದರಿಂದ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮರಣೋತ್ತರ ಶವ ಪರೀಕ್ಷೆಗಾಗಿ ಶವವನ್ನು ವಶಕ್ಕೆ ಪಡೆದಿದ್ದರು.ಈ ಸಂದರ್ಬ ಮೃತ ನಾಗರಾಜನ ಸಹೋದರಿ ಮೃತದೇಹವನ್ನು ಪರೀಕ್ಷಿಸಿದಾಗ ನಾಗರಾಜನ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾದ ಹೊನ್ನೆಲೆಯಲ್ಲಿ ಪೊಲೀಸರಿಗೆ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿ […]

