“ಪ್ಲೇಸ್ಟೋರ್ ನಿಂದ ಯಾವುದೇ ಆ್ಯಪ್ ಡೌನ್ಲೋಡ್ ಮಾಡುವಾಗ ವೈಯುಕ್ತಿಕ ಮಾಹಿತಿ ಮತ್ತು ಪಾಸ್ ವರ್ಡ್ ನೀಡುವಲ್ಲಿ ನಾವು ಜಾಗರೂಕರಾಗಿರಬೇಕು.ಸಾಮಾಜಿಕ ಜಾಲತಾಣಗಳ ಸ್ನೇಹ ಸಂಪರ್ಕಗಳ ಬಗ್ಗೆ ಎಚ್ಚರವಹಿಸಿ ಸೈಬರ್ ಮೋಸಜಾಲಕ್ಕೆ ಬಲಿಪಶುಗಳಾಗದಂತೆ ನೋಡಿಕೊಳ್ಳಬೇಕು” ಎಂದು ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ‘ ಸೈಬರ್ ಕ್ರೈಮ್ ತಡೆಗಟ್ಟುವಿಕೆ ವಿಷಯಾಧಾರಿತ ಕಾರ್ಯಕ್ರಮದಲ್ಲಿ ಕುಂದಾಪುರ ಟೌನ್ ಪೊಲೀಸ್ ಸ್ಟೇಶನ್ ಠಾಣಾಧಿಕಾರಿ ಶ್ರೀ ನಂಜಾ ನಾಯ್ಕ ಇವರು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈಯವರು ಕಾರ್ಯಕ್ರಮ ನಿರ್ವಹಿಸಿದರು.
ಬಲಿಷ್ಠ ,ಸ್ವಾವಲಂಬಿ ಮತ್ತು ಸ್ವಾಭಿಮಾನಿ ಭಾರತದ ಶಿಲ್ಪಿ ಮಾಜಿ ಪ್ರಧಾನಿ ಇಂದಿರಾಗಾಂಧಿ. ಅವರ ಆಡಳಿತ ಅವಧಿಯಲ್ಲಿ ಬಾಹ್ಯ ಮತ್ತು ಆಂತರಿಕ ಶತ್ರುಗಳ ವಿರುದ್ಧ ದುರ್ಗೆಯಂತೆ ಹೋರಾಡಿ ಹುತಾತ್ಮರಾದರು. ಬಡತನ ಮತ್ತು ಅಸಮಾನತೆಯ ನಿರ್ಮೂಲನೆಗಾಗಿ ಅವರು ಹಮ್ಮಿಕೊಂಡ ಕಾರ್ಯಕ್ರಮ ಗಳು ಇಂದಿಗೂ ಮಾದರಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಯಾಡಿ ಶಿವರಾಮ ಶೆಟ್ಟಿ ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರು , ಗೃಹ ಸಚಿವರಾದ ಪಟೇಲರು ಸ್ವಾತಂತ್ರ್ಯ ಹೋರಾಟದಲ್ಲಿ ಮಂಚೂಣಿಯಲ್ಲಿದ್ದು , ಸ್ವಾತಂತ್ರ್ಯ […]
ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು ಮಂಗಳೂರು; ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿವೆ ಎಂದು ಅಖಿಲ ಭಾರತೀಯ ಕ್ರೈಸ್ತ ಒಕ್ಕೂಟ ಇದರ ಕರ್ನಾಟಕ ರಾಜ್ಯಾಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ. ಅವರು ನೀಡಿದ ಹೇಳಿಕೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ನಿಷ್ಕಳಂಕ ಹಾಗೂ ಜನಪರ ನಾಯಕರಲ್ಲಿ ಒಬ್ಬರಾಗಿರುವ ಸನ್ಮಾನ್ಯ ಯು.ಟಿ. […]
ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಾದ್ಯಂತ 120ಕ್ಕೂ ಹೆಚ್ಚು ಕ್ಲಬ್ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ […]
ಬಸ್ರೂರು; ನಾಟ್ಯಾಂಜಲಿ ಕಲಾ ನಿಕೇತನ ಬಸ್ರೂರು, ಇಲ್ಲಿನ ನೃತ್ಯಗುರು ವಿದುಷಿ ಶ್ರೀಮತಿ ಕಲಾಶ್ರೀ ಪುನೀತ್ ಆಚಾರ್ಯ ಇವರು ತಮ್ಮ ನೃತ್ಯ ಶಿಷ್ಯಯರಿಗೆ ಗೆಜ್ಜೆಪೂಜೆ ಕಾರ್ಯಕ್ರಮವನ್ನು ಬಸ್ರೂರಿನ ಶ್ರೀ ದೇವಿ ಅಮ್ಮನವರ ದೇವಸ್ಥಾನದಲ್ಲಿ ದಿನಾಂಕ 27.10.2025 ರಂದು ಏರ್ಪಡಿಸಿದ್ದರು.ಗೋಧೂಳಿಯ ಸಮಯದಲ್ಲಿ ತಾಯಿಗೆ ಪೂಜೆ ನೆರವೇರಿಸಿ ವಿದ್ಯಾರ್ಥಿಗಳ ಗೆಜ್ಜೆಗೆ ದೇವಿಯ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ, ಪ್ರಸಾದದೊಂದಿಗೆ ಶಿಷ್ಯಯರಿಗೆ ಗೆಜ್ಜೆ ನೀಡಿ ಹರಸಿದರು ಮತ್ತು ವಿದ್ಯಾರ್ಥಿಗಳು ಗುರುಕಾಣಿಕೆ ನೀಡಿ ತಮ್ಮ ಗೌರವ ಅರ್ಪಿಸಿದರು. ಅಲ್ಲದೆ ಶ್ರೀ ದೇವಿಯ ಮುಂದೆ ತಮ್ಮ ತಮ್ಮ […]
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಎ.ವಿ. ಬಾಲಿಗ ಸ್ಮಾರಕ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಿತು. ಈ ಕಾರ್ಯಕ್ರಮದಲ್ಲಿ ಎ.ವಿ. ಬಾಳಿಗ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಶ್ರೀ ಸುರೇಶ್ ಹಾಗೂ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಶ್ರೀಮತಿ ಚೇತನಾ ಆರ್ ಉಪಸ್ಥಿತರಿದ್ದರು. ಕಾರ್ಯಕ್ರಮವು ದೀಪಪ್ರಜ್ವಲನ ಮತ್ತು ಅಧಿಕೃತ ಉದ್ಘಾಟನೆಯೊಂದಿಗೆ ಆರಂಭವಾಯಿತು. ವಿದ್ಯಾರ್ಥಿನಿ ಕುಮಾರಿ ಸಿನ್ಸಿ ಕಾರ್ಯಕ್ರಮ ನಿರೂಪಿಸಿದರು, ಕುಮಾರಿ […]
ಮದರ್ ತೆರೆಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣ , ಈ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಾದ ಪ್ರೀತಂ ಜಿ 10ನೇ ತರಗತಿ ಹಾಗೂ ಧನ್ವಿತ್ ಡಿ 9ನೇ ತರಗತಿ ಇವರು ಸರಕಾರಿ ಪ್ರೌಢಶಾಲೆ, ಒಳಕಾಡು ,ಉಡುಪಿ ಇಲ್ಲಿ ದಿನಾಂಕ 29-10-2025 ರಂದು ನಡೆದ ಜಿಲ್ಲಾಮಟ್ಟದ ಐಟಿ ಕ್ವಿಜ್ ನಲ್ಲಿ ಭಾಗವಹಿಸಿ ಮೈಸೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟದ ಐಟಿ ಕ್ವಿಜ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಒಟ್ಟು 250 ವಿದ್ಯಾರ್ಥಿಗಳಲ್ಲಿ 50ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು ,ಈ ವಿಶೇಷ ಸಾಧನೆ ಮಾಡಿದ ಮದರ್ ತೆರೆಸ ವಿದ್ಯಾಸಂಸ್ಥೆಯ […]
“Before loving a language, we must love the people who speak it”: Titus Noronha’s message at the KBMK Konkani Leaders’ Meeting ಭಾಷೆಯ ಪ್ರೀತಿ ಮಾಡುವ ಮೊದಲು ಅದನ್ನು ಮಾತನಾಡುವ ಜನರನ್ನು ಪ್ರೀತಿಸಬೇಕು : ಕೆಬಿಎಂಕೆ ಕೊಂಕಣಿ ಮುಂದಾಳುಗಳ ಸಭೆಯಲ್ಲಿ ಟೈಟಸ್ ನೊರೊನ್ಹಾ ಆಶಯ. ಭಾಷೆಗಳ ಬಗ್ಗೆ ಕೆಲಸ ಮಾಡುವ ಮುನ್ನ ಅದರಲ್ಲಿ ಕೆಲಸ ಮಾಡುವವರು ಒಬ್ಬರನ್ನು ಒಬ್ಬರು ಅರಿತು ಪ್ರೀತಿಯಿಂದ ಸಹಕಾರಿ ಆಗಬೇಕು. ಇಲ್ಲವಾದರೆ ನೀರಿನ ನಡುವಿನ ಕದ್ರುಗಳ […]
ಮಂಗಳೂರು; ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ಕಲ್ಲಚ್ಚು ಪ್ರಕಾಶನ ಮಂಗಳೂರು ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ” ಕನ್ನಡ ಕಣ್ಮನಗಳ ಕಲರವ” ಸಮಾರಂಭ ನವಂಬರ 1 ಶನಿವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಹೋಟೆಲ್ ವುಡ್ ಲ್ಯಾಂಡ್ಸ್ ಸಭಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಕಲ್ಲಚ್ಚು ರಾಜ್ಯೋತ್ಸವ ಪುರಸ್ಕಾರವನ್ನು ಪ್ರದೀಪ ನಾಯಕ್ ಮದ್ದಡ್ಕರವರಿಗೆ ಪ್ರದಾನ ಮಾಡಲಾಗುವುದು. ಹಿರಿಯ ಕವಿ ರಾಮಚಂದ್ರ ಬೈಕಂಪಾಡಿ ಉದ್ಘಾಟಿಸುವರು. ಉಪನ್ಯಾಸಕ ಕರುಣಾಕರ ಬಳ್ಕೂರು ರಾಜ್ಯೋತ್ಸವ ಸಂದೇಶ ನೀಡಲಿದ್ದು ಸಾಹಿತಿಗಳಾದ ಶಮೀಮ […]

