ಶ್ರೀನಿವಾಸಪುರ: ದಲಿತ ಸಮುದಾಯದವರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ಸಾಮಾಜಿಕ ಭದ್ರತೆಗೆ ಸಂಬಂಧಿಸಿದ ವಿಷಯಗಳಿಗೆ ಸ್ಪಂದಿಸಲು ಪೊಲೀಸ್ ಇಲಾಖೆ ಸದಾ ಸಿದ್ಧವಿದೆ ಎಂದು ಶ್ರೀನಿವಾಸಪುರ ಪೊಲೀಸ್ ಠಾಣೆಯ ಸಿಪಿಐ ಬಿ. ಶಂಕರಾಚಾರ್ ಹೇಳಿದರು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ದಲಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದವರು ಯಾವುದೇ ರೀತಿಯ ತೊಂದರೆ, ಅನ್ಯಾಯ, ದೌರ್ಜನ್ಯ ಅಥವಾ ಕಾನೂನುಬಾಹಿರ ಚಟುವಟಿಕೆಗಳಿಗೆ ಒಳಗಾದರೆ ಭಯಪಡದೆ ಧೈರ್ಯದಿಂದ ಪೊಲೀಸರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು. ಕಾನೂನಿನ ಮುಂದೆ ಪ್ರತಿಯೊಬ್ಬರೂ […]
ಸಾರ್ವಜನಿಕರನ್ನು ತಂದೆ-ತಾಯಿ, ಅಕ್ಕ-ತಂಗಿ, ಅಣ್ಣ-ತಮ್ಮಂದಿರಂತೆ ಭಾವಿಸಿ ಸೇವೆ ನೀಡಿ; ಸ್ವಚ್ಛತೆಗೆ ಕಟ್ಟುನಿಟ್ಟಿನ ಸೂಚನೆ ಶ್ರೀನಿವಾಸಪುರ, ಸೆ.2: ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರ ಕೆಲಸಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ತ್ವರಿತವಾಗಿ ಮಾಡಬೇಕು. ಪ್ರತಿಯೊಬ್ಬ ನಾಗರಿಕರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರನ್ನು ಅನಗತ್ಯವಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ಸಹಿಸುವುದಿಲ್ಲ ಎಂದು ಕೋಲಾರ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಶ್ರೀನಿವಾಸಪುರ ತಾಲ್ಲೂಕು ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್, ವಿವಿಧ ಇಲಾಖೆಗಳ ಕೊಠಡಿಗಳಿಗೆ […]
ಕೋಲಾರ:- ನಗರಸಭೆಯಲ್ಲಿ ಕಳೆದ 25 ವರ್ಷಗಳಿಂದ ನೀರು ಸರಬರಾಜು ಕಾಯಕದಲ್ಲಿ ನಿರತರಾಗಿದ್ದ ಗೌರಿಪೇಟೆಯ ಆರ್.ವೆಂಕಟಾಚಲಪತಿ ಅಲಿಯಾಸ್ ಶ್ರೀನಿವಾಸ್ ವಯೋ ನಿವೃತ್ತಿ ಹೊಂದಿದ್ದು, ಅವರನ್ನು ಕೋಲಾರ ನಗರದ 15ನೇ ವಾರ್ಡ್ನಲ್ಲಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.ಸಾರ್ವಜನಿಕರಿಗೆ ನೀರು ಸರಬರಾಜು ಮಾಡುವಲ್ಲಿನ ಬದ್ದತೆ, ಸಮಯಪ್ರಜ್ಞೆ, ಜನತೆಯೊಂದಿಗೆ ಹೊಂದಿದ್ದ ಒಡನಾಟ, ಮಾತಿನಲ್ಲಿ ಹಿಡಿತದ ಕುರಿತು ಸ್ಮರಿಸಿ, ನೀರಿನ ಸಂಕಷ್ಟದ ಸಮಯದಲ್ಲೂ ಸಮರ್ಪಕ ಹಾಗೂ ಸಮಾನವಾಗಿ ನೀರುಸರಬರಾಜು ಮಾಡುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು […]
ಕೋಲಾರ:- ಕೋಲಾರದ ಕೀಲುಕೋಟೆಯ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ ಆವರಣ, ಪ್ರಬೋಧ ಸೇವಾ ಸಮಿತಿ ಹಾಗೂ ಹಿಂದೂ ಜ್ಞಾನ ವೇದಿಕೆ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ-2026ರ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಈಗಾಗಲೇ ವೇದಿಕೆ ಸಿದ್ದಪಡಿಸಲಾಗಿದೆ.ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆ.4ರಿಂದ ಸೆ.7ರವರೆಗೆ ಕಾರ್ಯಕ್ರಮಗಳು ನಡೆಯಲಿದ್ದು, ಸೆ.7ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ಪಲ್ಲಕ್ಕಿ ಉತ್ಸವ ನಡೆಯಲಿದೆ.ಕೋಲಾರದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ ಆವರಣ, ಎನ್. ರಾಮಯ್ಯ ಲೇಔಟ್, ಅಂತರಗಂಗೆ ರಸ್ತೆ, ಅಶ್ವಿನಿ ನರ್ಸಿಂಗ್ […]
ಕೋಲಾರ:- ಮಕ್ಕಳೇ ತಂದೆ ತಾಯಿಯನ್ನು ನೋಯಿಸಿದರೆ ನಿಮಗೆ ಒಳ್ಳೆಯದು ಆಗಲ್ಲ. ಅವರ ಕಣ್ಣಲ್ಲಿ ನೀರು ಬರದಂತೆ ನೋಡಿಕೊಳ್ಳಿ. ಪೋಷಕರೂ ಅಷ್ಟೇ ಮಕ್ಕಳಿಗೆ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಯಾಗಿಸಿ ಎಂದು ಸಿ.ಬೈರೇಗೌಡ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿ.ಕೃಷ್ಣಾರೆಡ್ಡಿ ಕರೆ ನೀಡಿದರು.ನಗರ ಹೊರವಲಯದ ಕೃಷ್ಣಾ ಕಲ್ಯಾಣ ಮಂಟಪದಲ್ಲಿ ಬುಧವಾರ ಸಿ.ಬೈರೇಗೌಡ ಶಿಕ್ಷಣ ಸಂಸ್ಥೆಯಿಂದ ನಡೆದ ಹೊಸ ಹೆಜ್ಜೆ ಕನಸಿನಿಂದ ಸಾಧನೆಯತ್ತ ಮೊದಲ ವರ್ಷದ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಸಾಧಕರನ್ನು ಮಾದರಿಯಾಗಿ ತೆಗೆದುಕೊಂಡರೆ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡಬಹುದು. ಸರ್.ಎಂ.ವಿ. […]
ಕೋಲಾರ:- ಕೋಲಾರ ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಗಳ ಪ್ರಗತಿ ಹಾಗೂ ಸ್ಥಳೀಯ ಮೂಲ ಸೌಕರ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಮಾಜಿ ವಿಧಾನಸಭಾ ಮಾಜಿ ಸ್ಪೀಕರ್ ಹಾಗೂ ಹಿರಿಯ ರಾಜಕಾರಣಿ ಕೆ.ಆರ್. ರಮೇಶ್ ಕುಮಾರ್ ಅವರು ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ವಿಸ್ತೃತ ಚರ್ಚೆ ನಡೆಸಿದರು.ಬರಪೀಡಿತ ಕೋಲಾರ ಜಿಲ್ಲೆಯ ಬಹುದಿನಗಳ ಕನಸಾಗಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಕುರಿತು ರಮೇಶ್ ಕುಮಾರ್ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿದರು.ಕಾಮಗಾರಿಯ ಪ್ರಸ್ತುತ ಹಂತ ಹಾಗೂ ಬಾಕಿ ಉಳಿದಿರುವ […]
ಶ್ರೀನಿವಾಸಪುರ 1: ತಾಲೂಕಿನ ಲಕ್ಷ್ಮೀಸಾಗರ ಗ್ರಾಮಪಂಚಾಯಿತಿ ಮುಂಭಾಗ ಮಂಜಲನಗರ ರಘುನಾಥ್ ನನ್ನ ಮೇಲೆ ಆರೋಪ ಮಾಡಿರುವುದು ನಿರಾಧಾರ ಎಂದು ಪಿಡಿಒ ಮಹೇಶ್ಕುಮಾರ್.ಕೆ ಹೇಳಿಕೆ ನೀಡಿದರು.ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದರು.ಮಂಜಲನಗರ ರಘುನಾಥ್ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದಿರುವುದು ಅವರ ಸಾಂವಿಧಾನಿಕ ಹಕ್ಕು, ಅದಕ್ಕೆ ನನ್ನ ಆಕ್ಷೇಪಣೆ. ಇಲ್ಲ. ಆದರೆ ಪ್ರತಿಭಟನೆಯು ಕಾನೂನು ರೀತಿಯ ಇರಬೇಕು ಮತ್ತು ಯಾವುದಾದರೂ ಆಧಾರ ಸಹಿತ ಆರೋಪಗಳಿರಬೇಕು.ಪ್ರತಿದಿನ ಕಚೇರಿಗೆ ಬಂದು ನನ್ನ ಕೆಲಸ ಕಾರ್ಯಗಳನ್ನು ಕಾಯವಾಚ ಮನಸ ಕಾರ್ಯನಿರ್ವಹಿಸುತ್ತಿದ್ದೇನೆ. […]
30 ಎಕರೆ ವಿಸ್ತಾರ, 315 ಕೋಟಿ ರೂ. ವೆಚ್ಚ 18 ತಿಂಗಳಲ್ಲಿ ಘಟಕ ನಿರ್ಮಾಣದ ದಾಖಲೆ, 16 ಸಾವಿರ ಚ.ಮೀ. ವಿಸ್ತಾರ ಭಾರತದ ಮಾರುಕಟ್ಟೆಗೆ ಬಾಟ್ಲಿಂಗ್ ತಯಾರಿಕಾ ಘಟಕ ಉತ್ಪಾದನೆ ವೇಮಗಲ್ (ಕೋಲಾರ ಜಿಲ್ಲೆ): ಆಗಸ್ಟ್ 19 ಪಾನೀಯ, ದ್ರವ ಅಹಾರ ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯು ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ದಾಖಲೆ ಅವಧಿಯಲ್ಲಿ ನಿರ್ಮಿಸಿರುವ ನೂತನ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಸ್ಥಾವರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ […]
ಶ್ರೀನಿವಾಸಪುರ: ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಲಭ್ಯವಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವ ಸಲುವಾಗಿ ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಶುಕ್ರವಾರ ಚಾಲನೆ ನೀಡಲಾಯಿತು. ಪಟ್ಟಣದ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ. ಶ್ರೀನಿವಾಸ್ ಮಾತನಾಡಿ, ಇಲಾಖೆಯ ಸೌಲಭ್ಯಗಳು ಸೀಮಿತವಾಗಿರುವ ಹಿನ್ನೆಲೆಯಲ್ಲಿ ಅರ್ಜಿದಾರರ ಪೈಕಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಮಾವಿನ ತೋಟಗಳಲ್ಲಿ ಮಾವು ಸಂಸ್ಕರಣೆಗೆ ಸಂಬಂಧಿಸಿದ ಘಟಕಗಳನ್ನು ಸ್ಥಾಪಿಸಲು ಇಲಾಖೆಯಿಂದ […]

