ಶ್ರೀನಿವಾಸಪುರ : ತಾಲ್ಲೂಕನ್ನು ಜಿಲ್ಲೆಯಲ್ಲಿ ಸ್ವಚ್ಛತೆಯ ಮಾದರಿಯನ್ನಾಗಿಸಲು ಸಂಕಲ್ಪ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಸರ್ವೇಶ್ ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 25 ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ವಾರದಿಂದಲೇ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಶ್ರೀನಿವಾಸಪುರವನ್ನು ಸ್ವಚ್ಛತೆಯ ಕ್ಷೇತ್ರದಲ್ಲಿ ಜಿಲ್ಲೆಗೆ ಮಾದರಿಯನ್ನಾಗಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸಮನ್ವಯದಿಂದ […]

Read More

ಶ್ರೀನಿವಾಸಪುರ : ಓಂ ಶ್ರೀ ಮಂಜುನಾಥಾಯ ನಮ ಎಂಬ ಭಕ್ತಿಭಾವದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬವನ್ನು ಶ್ರೀನಿವಾಸಪುರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ರಾಜ್ಯದ ಲಕ್ಷಾಂತರ ಮಹಿಳೆಯರ ಸಬಲಿಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವ ಮಾತೃಶ್ರೀ ಹೇಮಾವತಿ ಅಮ್ಮನವರು, ನೊಂದವರು, ನಿರ್ಗತಿಕರು ಹಾಗೂ ಆಶ್ರಯವಿಲ್ಲದವರಿಗೆ ಆಶಾಕಿರಣವಾಗಿ ಪರಿಣಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮಾಸಿಕ ರೂ.1000 ರಿಂದ ರೂ.3000ರವರೆಗೆ ನೆರವು […]

Read More

ಶ್ರೀನಿವಾಸಪುರ : ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಶ್ರೀ ಪಾರ್ವತಿ ಸಮೇತ ಸಹಮನೇಶ್ವರಸ್ವಾಮಿ ಬ್ರಹ್ಮರಥೋತ್ಸವವು ಗುರುವಾರ ಭಕ್ತಿಭಾವದಿಂದ, ಸಂಪ್ರದಾಯಬದ್ಧವಾಗಿ ಹಾಗೂ ಅದ್ದೂರಿಯಾಗಿ ನಡೆಯಿತು. ಉತ್ಸವದ ಅಂಗವಾಗಿ ಬೆಳಗ್ಗಿನಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆಗಳು, ಅಭಿಷೇಕ, ಅಲಂಕಾರ ಕಾರ್ಯಗಳು ನೆರವೇರಿದವು. ನಂತರ ಗ್ರಾಮ ದೇವರ ಉತ್ಸವ ಮೂರ್ತಿಯನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.  ಈ ವೇಳೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಭಕ್ತರು ಹೂವು, ಹಣ್ಣು, ಪೂಜೆ ಸಾಮಗ್ರಿಗಳನ್ನು ಸಮರ್ಪಿಸಿ ಭಕ್ತಿಭಾವದಿಂದ […]

Read More

ಶ್ರೀನಿವಾಸಪುರ : ಜಿಲ್ಲಾ ಪಿಡಿಒ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಕೆ. ಮಹೇಶ್ ಅವರು ಮೊದಲಿನಿಂದಲೂ ಸಂಘಟನೆ ಕಾರ್ಯಗಳಲ್ಲಿ ತೊಡಗಿಸಿಕೊಂಡು ಅನುಭವ ಹೊಂದಿದ್ದಾರೆ ಎಂದು ತಾಲೂಕು ಪಂಚಾಯಿತಿ ಇಒ ಕೆ. ಸರ್ವೇಶ್ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷೆ ಹಾಗೂ ಖಜಾಂಚಿಯನ್ನು ಸನ್ಮಾನಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಲಾಖೆಯಲ್ಲಿ ಹಲವು ಸವಾಲುಗಳು ಎದುರಾಗುತ್ತಿದ್ದು, ಅವುಗಳನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಮಹೇಶ್ […]

Read More

ಶ್ರೀನಿವಾಸಪುರ : ದೇಶದ ಸಮಗ್ರ ಅಭಿವೃದ್ಧಿಗೆ ಯುವ ಪೀಳಿಗೆಯ ಆರೋಗ್ಯ ಅತ್ಯಂತ ಅಗತ್ಯವಾಗಿದ್ದು, ಪೌಷ್ಟಿಕ ಆಹಾರದಿಂದಲೇ ಆರೋಗ್ಯವಂತ ಮಕ್ಕಳ ನಿರ್ಮಾಣ ಸಾಧ್ಯ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಟಿ.ಆರ್. ಸುಲೋಚನ ಹೇಳಿದರು. ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಹೈಯರ್ ಪ್ರೈಮರಿ ಶಾಲೆಯಲ್ಲಿ ತಾಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ತಾಲೂಕು ಮಟ್ಟದ ಅಡುಗೆ ಸಿಬ್ಬಂದಿಗಳಿಗಾಗಿ ಆಯೋಜಿಸಿದ್ದ ಅಡುಗೆ ತಯಾರಿಕಾ ಸ್ಪರ್ಧೆಗೆ ಚಾಲನೆ ನೀಡಿ […]

Read More

ಶ್ರೀನಿವಾಸಪುರ : ಪಟ್ಟಣದ ವಾಸವಿ ಕನ್ನಿಕಾಪರಮೇಶ್ವರಿ ದೇವಾಲಯ ಆವರಣದಲ್ಲಿ ಶ್ರೀ ರಾಮನವಮಿ ಹಬ್ಬದ ಪ್ರಯುಕ್ತ ವಾಸವಿ ಗಂಗಾ ಆರತಿ ತಂಡದ ವತಿಯಿಂದ ಭಕ್ತರಿಗೆ ಪಾನಕ ಹಾಗೂ ಕೋಸಂಬರಿ ವಿತರಣೆ ಮಾಡುವ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಹಬ್ಬದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಆರತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತರು ಭಕ್ತಿ ಶ್ರದ್ಧೆಯಿಂದ ಆಚರಿಸಿದರು. ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಭಕ್ತರ ಆಗಮನ ಹೆಚ್ಚಾಗಿದ್ದು, ಕುಟುಂಬ ಸಮೇತರಾಗಿ ಬಂದು ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು. ನಂತರ ವಾಸವಿ ಗಂಗಾ ಆರತಿ […]

Read More

ಶ್ರೀನಿವಾಸಪುರ : ತಾಲ್ಲೂಕಿನ ಮೀಸಗಾನಹಳ್ಳಿ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಸರ್ವೇಶ್ ಪರಿಶೀಲಿಸಿದರು. ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಒಟ್ಟು 245 ಶುದ್ಧ ಕುಡಿಯುವ ನೀರು ಘಟಕಗಳಿದ್ದು, ಅವುಗಳಲ್ಲಿ 216 ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಉಳಿದ 29 ಘಟಕಗಳಿಗೆ ದುರಸ್ತಿ ಅಗತ್ಯವಿದ್ದು, […]

Read More

ಶ್ರೀನಿವಾಸಪುರ : ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಬಾಡಿಗೆದಾರರಿಗೆ ಮುನ್ಸೂಚನೆಯನ್ನು ನೀಡದೇ ಸದರಿ ಛಾವಣಿಯನ್ನು ಪುರಸಭೆ ಸಿಬ್ಬಂದಿಯಿಮದ ತೆರವುಗೊಳಸಲಾಗುವುದು. ಠೇವಣಿದಾರರು ನಿಗಧಿತ ದಿನಾಂಕದಂದು ಬಾಡಿಗೆಗಳನ್ನು ಕಟ್ಟುವಂತೆ ಸೂಚಿಸಿ, ಪುರಸಭೆಯು ಸೂಚಿಸಿರುವ ಷರತ್ತುಗಳನ್ನು ಪಾಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ನಾಗರಾಜು ಕರೆನೀಡಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಗುರುವಾರ ವಿವಿಧ ಬಾಬ್ತುಗಳ ಬಹಿರಂಗ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು. ಈ ಸಾಲಿನಲ್ಲಿ ದಿನವಹಿ ಮಾರುಕಟ್ಟೆ, ವಾರದ ಸಂತೆ, ಕಸಾಯಿಖಾನೆ, ಬಸ್ಟಾಂಡ್ ಶುಲ್ಕ, ಮುಸಾಫೀರ್‌ಖಾನ ವಾಣಿಜ್ಯ ಸಂಕೀರ್ಣ ನೆಲಮಹಡಿಯ ವಾಹನ ಶುಲ್ಕ […]

Read More

ಶ್ರೀನಿವಾಸಪುರ : ತಾಲೂಕಿನಲ್ಲಿ ಕೆರೆಗಳಿಗೆ ಕೆಸಿ ವ್ಯಾಲಿ ನೀರನ್ನು ಹರಿಸುವ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ತಕ್ಷಣವೇ ಎಲ್ಲಾ ಕೆರೆಗಳಿಗೆ ನೀರು ಹರಿಸುವಂತೆ ವಿವಿಧ ಮುಖಂಡರು ಆಗ್ರಹಿಸಿದ್ದಾರೆ. ಮಂಗಳವಾರ ಪಟ್ಟಣದ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ರಮೇಶ್‌ಕುಮಾರ್ ಅಭಿಮಾನಿ ಬಳಗದ ವತಿಯಿಂದ ನೀರಾಗಿ ನಮ್ಮ ಹಕ್ಕು ಕಾರ್ಯಕ್ರಮದಡಿ ಶ್ರೀನಿವಾಸಪುರದಿಂದ ಮುದುವಾಡಿ ಕೆರೆ ಹಾಗೂ ನರಸಾಪುರದ ಲಕ್ಷ್ಮಿಸಾಗರದವರೆಗೆ ಕಾರುಗಳ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್, ಮಾಜಿ ಶಾಸಕ ಕೆ.ಆರ್. ರಮೇಶ್‌ಕುಮಾರ್ ಅವರ ಕಾಳಜಿಯಿಂದ […]

Read More
1 9 10 11 12 13 388