
ಶ್ರೀನಿವಾಸಪುರ: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಹಾಗೂ ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ವಿರುದ್ಧ ಆಧಾರ ರಹಿತ ಆಪಾದನೆ ಮಾಡುತ್ತಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಶೇಷಾಪುರ ಗೋಪಾಲ್ ಅವರನ್ನು ಆ ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೆ.ಕೆ.ಮಂಜುನಾಥರೆಡ್ಡಿ ಆಗ್ರಹಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಕೆಲಸ ಮಾಡಿದ ಶೇಷಾಪುರ ಗೋಪಾಲ್ ಅವರಿಗೆ, ಕೆ.ಆರ್.ರಮೇಶ್ […]

ಕೋಲಾರ, ಜೂ.13: ಪ್ರಜಾಯಾತ್ರೆ ಸಮಾವೇಶಗಳಲ್ಲಿ ಸಾವಿರಾರು ಮಹಿಳೆಯರ ಸಮ್ಮುಖದಲ್ಲಿ ನಮ್ಮ ಪಕ್ಷಕ್ಕೆ ಮಹಿಳೆಯಾದ ನೀವು ಮತ ನೀಡಿದರೆ ಸಹಕಾರ ಬ್ಯಾಂಕ್ಗಳಲ್ಲಿ ಪಡೆದಿರುವ ಸ್ತ್ರೀಶಕ್ತಿ ಸಾಲ ಮನ್ನಾ ಮಾಡುತ್ತೇವೆಂಧು ಮಾತು ನೀಡಿ ಮತ ಪಡೆದ ಸಿದ್ದರಾಮಯ್ಯನವರ ಸರ್ಕಾರ ಸ್ತ್ರೀಶಕ್ತಿ ಸಾಲ ಮನ್ನಾ ಮಾಡದೆ ಇರುವುದು ಮಹಿಳೆಯರಿಗೆ ಮಾಡಿದ ದ್ರೋಹವನ್ನು ಖಂಡಿಸಿ ಹೊಸಮಟ್ನಹಳ್ಳಿ ಮತ್ತು ಮಂಗಸಂದ್ರ ಗ್ರಾಮಗಳಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಾಲ ವಸೂಲಾತಿಗೆ ನಮ್ಮ ಗ್ರಾಮಕ್ಕೆ ಬರಬೇಡಿ ಎಂದು ಬೋರ್ಡ ಹಾಕಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

ಕೋಲಾರ:- ಕೋಲಾರ ಲಯನ್ಸ್ ರಕ್ತ ನಿಧಿ ಕೇಂದ್ರದ ವತಿಯಿಂದ ಜಿಲ್ಲೆಯಲ್ಲೆ ಮೊಟ್ಟ ಮೊದಲ ಸಂಚಾರಿ ರಕ್ತದಾನ ಘಟಕವನ್ನು ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಪ್ರಾರಂಭಿಸಿದ್ದು, ರಕ್ತದಾನಿಗಳು ಸಂಚಾರಿ ರಕ್ತದಾನ ಘಟಕದ ಸದುಪಯೋಗವನ್ನು ಪಡೆಯಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ರವರು ಕರೆ ನೀಡಿದರು.ನಗರದ ಸರ್ಕಾರಿ ಬಾಲಕರ ಕಾಲೇಜು ವೃತ್ತದಲ್ಲಿ ಕೋಲಾರ ಲಯನ್ಸ್ ರಕ್ತ ನಿಧಿ ಕೇಂದ್ರದ ಸಂಚಾರಿ ರಕ್ತದಾನ ಘಟಕದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಕಾರ್ಲ್ ಲ್ಯಾಂಡ್ ಸ್ಟೀನರ್ […]

ಶ್ರೀನಿವಾಸಪುರ ವಿಧಾನಸಭಾ ಕ್ಷೆತ್ರ ಹೊಸ ಮಟ್ನಹಳ್ಳಿ ಗ್ರಾಮದ ಮಡಿವಾಳ ವೃತ್ತಿಯಿಂದ ಜೀವನ ಮಾಡುವ ಬಸವರಾಜ್ ಅವರಿಗೆ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ಹೊಸ ಸೈಕಲ್ ಕೊಡುಗೆಯಾಗಿ ನೀಡಿದರು.

ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.ಪಟ್ಟಣದ ಕನಕ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 47 ಸಾವಿರ ವಿದ್ಯಾರ್ಥಿಗಳಿಗೆ ರೂ.60 ಕೋಟಿ ಸುಜ್ಞಾನ ನಿಧಿ ಶಿಷ್ಯ ವೇತನ ನೀಡಲಾಗಿದೆ. ತಾಲ್ಲೂಕಿನಲ್ಲಿ ವೃತ್ತಿ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ 187 […]

ಶ್ರೀನಿವಾಸಪುರ : ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. , ಶ್ರೀನಿವಾಸಪುರ ಶಿಬಿರ ಕಛೇರಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಯವರ ನಿವೃತ್ತಿ ಪ್ರೋತ್ಸಾಹ ಧನ ಚೆಕ್ಗಳು ಮತ್ತು ಮೃತಪಟ್ಟ ಸದಸ್ಯರ ಕೋಮುಲ್ ವಿಮಾ ಚೆಕ್ಗಳ ವಿತರಣಾ ಕಾರ್ಯಕ್ರಮದಲ್ಲಿ ಒಕ್ಕೂಟದ ನಿರ್ದೇಶಕರಾದ ಎನ್.ಹನುಮೇಶ್ ರವರು ಮಾತನಾಡಿ , ನಿವೃತ್ತಿ ಹೊಂದಿದ ಎಲ್ಲಾ ಸಿಬ್ಬಂದಿಗಳನ್ನು ಸನ್ಮಾನಿಸಿ , ಸಂಘಗಳಿಗೆ ನೀಡಿದ ನಿರಂತರ ಸೇವೆಯನ್ನು ಸ್ಮರಿಸುತ್ತಾ ಸಿಬ್ಬಂದಿಯವರ ನಿವೃತ್ತಿ ಪ್ರೋತ್ಸಾಹ ಧನ ಚೆಕ್ಗಳು ಮೊತ್ತ 12,25,000 […]

ಕೋಲಾರ: ಮನುಷ್ಯನಾಗಿ ಹುಟ್ಟುವುದೆ ಹೆಮ್ಮೆ ಆದುದರಿಂದ ಸುಸಂಸ್ಕøತರಾಗಿ ಜೀವನದಲ್ಲಿ ಇಡುವ ಹೆಜ್ಜೆ ನೋಡುವ ನೋಟ ಉಡುವ ಬಟ್ಟೆ ಆಡುವ ಮಾತು ಸುಸಂಸ್ಕøತವಾಗಿದ್ದರೆ ಮಾನವನಾಗಿ ಹುಟ್ಟಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಎಸ್ಪಿವೈಎಸ್ಸೆಸ್ಸ್ ಜಿಲ್ಲಾ ಶಿಕ್ಷಣ ಪ್ರಮುಖ ಚೌಡಪ್ಪ ಹೇಳಿದರು.ಪಟ್ಟಣ ತ್ಯಾಗರಾಜ ಬಡಾವಣೆಯ ಯೋಗ ಮಂದಿರದಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಏರ್ಪಡಿಸಿದ್ದ 91 ನೇ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ಶಿಬಿರದ ಭಾರತ ಮಾತಾ ಪೂಜಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.ಸಮಾಜದಿಂದ ಎಲ್ಲವನ್ನು ಪಡೆಯುವ ಮನುಷ್ಯರು ಸಮಾಜಕ್ಕೇನು ಕೊಡದೆ ನಶ್ವರವಾಗುತ್ತಿದ್ದೇವೆ. ಭಾರತ ಎಂದರೆ […]

ಶ್ರೀನಿವಾಸಪುರ: ಗ್ರಾಮೀಣ ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ಪಡೆದು ಬದುಕು ರೂಪಿಸಿಕೊಳ್ಳಬೇಕು ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ಹೃದ್ರೋಗ ತಜ್ಞ ಡಾ. ಬಾಬುರೆಡ್ಡಿ ಹೇಳಿದರು.ತಾಲ್ಲೂಕಿನ ಆರಿಕುಂಟೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಡಾ. ಅಬ್ದುಲ್ ಕಲಾಂ ಅವರಂಥ ಮಹಾನ್ ಚಿಂತಕರ ಆದರ್ಶದ ಬೆಳಕಲ್ಲಿ ಬೆಳೆಯಬೇಕು ಎಂದು ಹೇಳಿದರು.ಗ್ರಾಮದ ಮುಖಂಡರಾಗಿದ್ದ ದಿವಂಗತ ಎ.ನಾರಾಯಣಸ್ವಾಮಿ ಬದ್ಧತೆಯಿಂದ ಕಾರ್ಯನಿರ್ವಹಿಸಿ ಗ್ರಾಮದಲ್ಲಿ ಸರ್ಕಾರಿ […]

ಕೋಲಾರ:- ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂ.12ರ ಸೋಮವಾರದಿಂದ ಆರಂಭಗೊಳ್ಳುತ್ತಿದ್ದು, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಹಾಗೂ ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಹಾಗೂ ಶಿಕ್ಷಣಾಧಿಕಾರಿ ಮುನಿವೆಂಕಟರಾಮಾಚಾರಿ ಸೂಚಿಸಿದರು.ನಗರದ ಬಾಲಕಿಯರ ಪಿಯು ಕಾಲೇಜು ಕೇಂದ್ರದಲ್ಲಿ ಪರೀಕ್ಷೆಗೆ ನಿಯೋಜನೆಗೊಂಡ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತದಳ ಹಾಗೂ ಕೊಠಡಿ ಮೇಲ್ವಿಚಾರರನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.ಇದು ಖಾಸಗಿ ಅಭ್ಯರ್ಥಿಗಳ ಕೇಂದ್ರವಾಗಿದೆ ಎಂದ ಅವರು, ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶೇ.75 ಶಾಲಾ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಅವಕಾಶ ಸಿಗದೇ […]