ಕೋಲಾರ:- ಅಂದಾಜು ಸುಮಾರು 3 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮೂರು ಮಹಡಿಗಳ ಸರ್ಕಾರಿ ನೌಕರರ ಸಂಘದ ನೂತನ ಕಟ್ಟಡದ ಗುದ್ದಲಿ ಪೂಜೆ ಆಗಸ್ಟ್ ಕೊನೆ ವಾರ ಹಮ್ಮಿಕೊಂಡಿರುವುದಾಗಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ತಿಳಿಸುತ್ತಿದ್ದಂತೆ ಕಾರ್ಯಕಾರಿ ಸಮಿತಿ ಅನುಮೋದನೆ ನೀಡಿತು.ನಗರದ ರೋಟರಿ ಭವನದಲ್ಲಿ ಜಿಲ್ಲಾ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆಗೆ ಚಾಲನೆ ನೀಡಿ, ಕಳೆದ ತಿಂಗಳು ನಿವೃತ್ತರಾದ ಗ್ರಾ.ಪಂ ಪಿಡಿಒ ನಾಗರಾಜ್, ಜಿಪಂನ ಚೆನ್ನಪ್ಪ, ತೋಟಗಾರಿಕಾ ಇಲಾಖೆಯ ಕದಿರಪ್ಪ ಅವರನ್ನು ಸಂಘದಿಂದ ಆತ್ಮೀಯವಾಗಿ […]
ಶ್ರೀನಿವಾಸಪುರ: ಪಟ್ಟಣದಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಆ.27 ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಕೆಂಪೇಗೌಡ ಜಯಂತಿ ಆಚರಿಸುವ ಕುರಿತು ಚರ್ಚಿಸಲು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಯಾವುದೇ ಒಂದು ಸಮುದಾಯಕ್ಕೆ ಮೀಸಲಾಗದಂತೆ ಎಚ್ಚರಿಕೆ ವಹಿಸಬೇಕು. ಆಚರಣೆ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿರಬೇಕು. ಸಮುದಾಯ […]
ಶ್ರೀನಿವಾಸಪುರ : ಇತ್ತೀಚಿಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಹೆಚ್ಚಾಗಿರುವ ನಿಟ್ಟಿನಲ್ಲಿ ಗ್ರಾಹಕರ ಮೇಲೆ ಹೊರೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಿಎನ್ಜಿ ಗ್ಯಾಸ್ ಬಳಿಸಿಕೊಳ್ಳುವುದರ ಮೂಲಕ ಹಣದ ಹೊರೆ ಕಡಿಮೆ ಮಾಡಿಕೊಳ್ಳುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಗ್ರಾಹಕರಲ್ಲಿ ಮನವಿ ಮಾಡಿಕೊಂಡರು.ಪಟ್ಟಣದ ರಾಜದಾನಿ ಪೆಟ್ರೋಲ್ ಬಂಕ್ ಸಭಾಂಗಣದಲ್ಲಿ ಸೋಮವಾರ ಸಿಎನ್ಜಿ ಗ್ಯಾಸ್ ಬಂಕಿಗೆ ಚಾಲನೆ ನೀಡಿ ಮಾತನಾಡಿದರು.ರೀಜನಲ್ ಮ್ಯಾನೇಜರ್ ವೆಂಕಟೇಶ್ ಮಾತನಾಡಿ ಕೋಲಾರ ಜಿಲ್ಲೆಯಲ್ಲಿ ೬ ಕೇಂದ್ರಗಳನ್ನು ತರೆಯಲಾಗಿದ್ದು, ಮೊದಲ ಭಾರಿಗೆ ಶ್ರೀನಿವಾಸಪುರದಲ್ಲಿ ಎಜಿಪಿ,ಸಿಎನ್ಜಿ ಗ್ಯಾಸ್ ಬಂಕ್ನ್ನು ತೆರೆಯಲಾಗಿದ್ದು, ೧ ಕೆಜಿ […]
ಶ್ರೀನಿವಾಸಪುರ: ತಾಲ್ಲೂಕಿನ ಅಡ್ಡಗಲ್ ಗ್ರಾಮದ ಖಾಸಗಿ ಶಾಲೆಯೊಂದರ ಅಪ್ರಾಪ್ತ ಬಾಲಕಿಯೊಬ್ಬಳನ್ನು ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡ ಆಪಾದನೆ ಮೇಲೆ ಶಾಲೆಯ ಶಿಕ್ಷಕ ಶಿವಕುಮಾರ್ ಅವರನ್ನು ಗೌನಿಪಲ್ಲಿ ಪೊಲೀಸರು ಬಂಧಿಸಿದ್ದಾರೆ.ಅಡ್ಡಗಲ್ ಗ್ರಾಮದ ಆದರ್ಶ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ನನ್ನ ಮಗಳು, ಮನೆಗೆ ಬಂದು ಹೊಟ್ಟೆ ನೋವೆಂದು ಹೇಳಿದಳು. ಚಿಂತಾಮಣಿ ಆಸ್ಪತ್ರೆಯಲ್ಲಿ ತೋರಿಸಿದೆವು. ವೈದ್ಯರು ಸ್ಕ್ಯಾನಿಂಗ್ ಮಾಡಿಸಲು ಹೇಳಿದರು. ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭ ಧರಿಸಿರುವ ವಿಷಯ ತಿಳಿದು ಬಂತು. ಆ ಬಗ್ಗೆ ವಿಚಾರಿಸಿದಾಗ ಅದೇ ಶಾಲೆಯ ಶಿಕ್ಷಕ ಶಿವಕುಮಾರ್, […]
ಶ್ರೀನಿವಾಸಪುರ: ಸರ್ಕಾರದ ಸೌಲಭ್ಯ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ದಿವಂಗತ ವಕೀಲ ಕೆ.ಮುನಿಸ್ವಾಮಿಗೌಡ ಅವರ ಜನ್ಮ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮುನಿಸ್ವಾಮಿಗೌಡ ಅವರು ಶಿಕ್ಷಣ ಪ್ರೇಮಿಯಾಗಿದ್ದರು ಹಾಗೂ ಸಮಾಜ ಮುಖಿ ಧೋರಣೆ ಹೊಂದಿದ್ದರು ಎಂದು ಹೇಳಿದರು.ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿವೆ. […]
ಕೋಲಾರ:- ಎಐಸಿಸಿ ಮುಖಂಡ ರಾಹುಲ್ಗಾಂಧಿ ಅವರಿಗೆ ಮೋದಿ ಉಪನಾಮದ ಶಿಕ್ಷೆ ಪ್ರಕರಣಲ್ಲಿ ಸುಪ್ರೀಂ ಕೋರ್ಟ್ನಿಂದ ರಿಲೀಫ್ ಸಿಕ್ಕಿರುವ ಹಿನ್ನಲೆಯಲ್ಲಿ ಕೋಲಾರದಲ್ಲಿ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೆ.ಜಯದೇವ್, ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ, ಲೋಕಸಭಾ ಸದಸ್ಯತ್ವದಿಂದ ರಾಹುಲ್ಗಾಂಧಿ ಅವರನ್ನು ಅನರ್ಹಗೊಳಿಸಿದ್ದ ಕ್ರಮದ ವಿರುದ್ದ ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪು ನೀಡಿದ್ದು, ದೇಶದಲ್ಲಿನ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಆದ ಸೋಲಾಗಿದೆ ಎಂದು ತಿಳಿಸಿದರು.ಲೋಕಸಭೆಯಲ್ಲಿ ಜನಪರ ಧ್ವನಿ […]
ಶ್ರೀನಿವಾಸಪುರ: ಮಕ್ಕಳ ವಯಸ್ಸಿಗೆ ಅನುಗುಣವಾಗಿ ಎಲ್ಲ ಲಸಿಕೆಗಳನ್ನೂ ತಪ್ಪದೆ ಹಾಕಿಸಬೇಕು ಎಂದು ತಹಶೀಲ್ದಾರ್ ಶರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರ, ಉಪ ಕೇಂದ್ರ ಹಾಗೂ ಅಂಗನವಾಡಿಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದರು.ಆ.7 ರಿಂದ 12 ರವರೆಗೆ ಸೊನ್ನೆಯಿಂದ 5 ವರ್ಷದೊಳಗಿನ ಮಕ್ಕಳು ಹಾಗೂ […]
ಕೋಲಾರ,ಆ.05: ಕೋಲಾರ ಜಿಲ್ಲೆಯ ಅಭಿವೃದ್ದಿಗೆ ಸಚಿವರ ಅನುದಾನದಲ್ಲಿ 74 ಕೋಟಿ ರೂ ವಿಶೇಷ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುತ್ತಿರುವುದಾಗಿ ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಘೋಷಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜಿಲ್ಲಾ ಕೇಂದ್ರವಾದ ಕೋಲಾರಕ್ಕೆ 26 ಕೋಟಿ ರೂ, ಕೆ.ಜಿ.ಎಫ್ ನಗರಕ್ಕೆ 15 ಕೋಟಿ ರೂ, ಬಂಗಾರಪೇಟೆಗೆ 10 ಕೋಟಿ ರೂ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ […]
ಶ್ರೀನಿವಾಸಪುರ 1 : ಸರ್ಕಾರದ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಿಂದ ಹೆಚ್ಚಿನ ಮೊತ್ತದ ಹಣವನ್ನು ವಸೂಲಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ಶರೀನ್ತಾಜ್ ದಾಳಿ ನಡೆಸಿದರು.ಪಟ್ಟಣದ ತಾಲೂಕು ಕಛೇರಿಯ ಮುಂಭಾಗದಲ್ಲಿನ ಕೆಲ ಸೈಬರ್ ಕೇಂದ್ರಗಳ ಮೇಲೆ ಶುಕ್ರವಾರ ದಾಳಿ ನಡೆಸಿ ಸೈಬರ್ ಸೆಂಟರ್ನ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ಮಾತನಾಡಿದರು.ಸಾರ್ವಜನಿಕರು ಕೆಲ ಸೈಬರ್ ಕೇಂದ್ರಗಳು ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಆರೋಪದ ಮೇಲೆ ತಾಲೂಕು ಕಛೇರಿ ಮುಂಭಾಗ ಕೆಲ ಸೈಬರ್ ಸೆಂಟರ್ಗಳಿ ಬೇಟಿ […]

