ಶ್ರೀನಿವಾಸಪುರ : ಪಟ್ಟಣದ ಜಾಕಿರ್ ಹುಸೇನ್ ಮೊಹಲ್ಲಾ ಸರ್ಕಾರಿ ಉರ್ದು ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಈಗಾಗಲೇ ಇರುವ ತರಗತಿ ಕೊಠಡಿಗಳು ಸಾಲದೇ ಭಾರೀ ಸಂಕಷ್ಟ ಉಂಟಾಗಿದೆ. ತರಗತಿ ಕೊಠಡಿಗಳ ಕೊರತೆಯ ಪರಿಣಾಮವಾಗಿ ವಿದ್ಯಾರ್ಥಿಗಳು ಅಸೌಕರ್ಯಕರ ಪರಿಸ್ಥಿತಿಯಲ್ಲಿ ಪಾಠಗಳನ್ನು ಕಲಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಗಂಭೀರ ಪರಿಸ್ಥಿತಿಯನ್ನು ಮನಗಂಡು, ಜಾಕಿರ್ ಹುಸೇನ್ ಮೊಹಲ್ಲಾದ ವಿದ್ಯಾರ್ಥಿಗಳನ್ನು ಚಿಂತಾಮಣಿ ರಸ್ತೆಯ ಸರ್ಕಾರಿ ಉರ್ದು ಬಾಲಕರ ಶಾಲೆಯ ನಾಲ್ಕು ತರಗತಿ ಕೊಠಡಿಗಳಿಗೆ ತಾತ್ಕಾಲಿಕವಾಗಿ […]

Read More

ಶ್ರೀನಿವಾಸಪುರ : ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸುವಲ್ಲಿ ಹಿಂದಿನ ಬಿಜೆಪಿ ಸರ್ಕಾರ ಹಾಗು ಇಂದಿನ ಕಾಂಗ್ರೆಸ್ ಸರ್ಕಾರವು ವಿಫಲವಾಗಿವೆ ಎಂದು ಕೆಪಿಆರ್‍ಎಸ್ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಆರೋಪಿಸಿದರು .ಪಟ್ಟಣದ ಶಂಕರಮಠದ ಬಳಿಯ ಕೆಪಿಆರ್‍ಎಸ್ ಕಚೇರಿಯಲ್ಲಿ ಶುಕ್ರವಾರ ಕೆಪಿಆರ್‍ಎಸ್ ವತಿಯಿಂದ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಯಾವ ರೈತರ ಭೂಮಿಯನ್ನು ಕಿತ್ತುಕೊಂಡಿಲ್ಲ ಎಂದು ಸುಳ್ಳು ವರಧಿಯನ್ನು ನೀಡಿರುವ ಸಚಿವರ ಬಗ್ಗೆ ಅಸಮದಾನವನ್ನು ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆಗೆ ಪದೇ ಪದೇ ಯಾವದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದೆಂದು ಹೇಳುತ್ತಿದ್ದರು , […]

Read More

ಕೋಲಾರ : ಡಿಸೆಂಬರ್ 12. ದೀರ್ಘಕಾಲದವರೆಗೆ ಹಕ್ಕುಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮೂಲ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಉದ್ದೇಶದಿಂದ ವಿಶೇಷ ಶಿಬಿರವನ್ನು ಇಂದು (12.12.2025, ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ಕೋಲಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ, ಐ.ಎ.ಎಸ್. ಅವರು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದರು. ಪತ್ರಿಕಾ ಪ್ರಕಟಣೆಯಲ್ಲಿ, […]

Read More

ಶ್ರೀನಿವಾಸಪುರ: ತಾಲ್ಲೂಕಿನ ಪ್ರಮುಖ ಹೆದ್ದಾರಿಗಳಲ್ಲಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು, ಇದರಿಂದ ಜನರ ಜೀವಕ್ಕೆ ಅಪಾಯ ಉಂಟಾಗುತ್ತಿರುವುದಾಗಿ ಕರ್ನಾಟಕ ಜನಪರ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪ್ರಕರಣಗಳ ಬಗ್ಗೆ ಸಂಬಂಧಿತ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ವೇದಿಕೆ ದೂರಿತಾಗಿದೆ. ಇಂದು ಕರ್ತವ್ಯಕ್ಕೆ ತಕ್ಕ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಮತ್ತು ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ತಕ್ಷಣ ಸುರುಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಗಡುವು ನೀಡಲಾಯಿತು.  ವಿಶೇಷವಾಗಿ, ಕಡಪ ಬೆಂಗಳೂರು ಹೆದ್ದಾರಿ ಅಪಘಾತಗಳ ಹಾಟ್‌ಸ್ಪಾಟ್ ಆಗಿ ಪರಿಣಮಿಸಿದ್ದು, ರಸ್ತೆ ಅಪಾಯ ಸೂಚಕ […]

Read More

ಶ್ರೀನಿವಾಸಪುರ: ರೈತರ ಸಮಸ್ಯೆ ನಿವಾರಣೆಗೆ ಪದಾಧಿಕಾರಿಗಳು ಸಾಂಘಿಕ ಹೋರಾಟ ನಡೆಸಬೇಕು. ಭ್ರಷ್ಟಾಚಾರ ಮತ್ತು ನೇಪಥ್ಯದಲ್ಲಿರುವ ಅಕ್ರಮಗಳ ವಿರುದ್ಧ ಸಂಘಟಿತವಾಗಿ ನಿಲ್ಲುವ ಕಾಲ ಬಂದಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಕರೆ ನೀಡಿದರು. ಪಟ್ಟಣದ ರೈತ ಸಂಘ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ರೈತರು ನೀರು, ಬೆಳೆನಾಶ, ಬೆಲೆ ಸ್ಥಿರೀಕರಣ ಸೇರಿದಂತೆ ಅನೇಕ ಸಮಸ್ಯೆಗಳೊಂದಿಗೆ […]

Read More

ಶ್ರೀನಿವಾಸಪುರ : ಭಾನುವಾರ ಬೆಳಗ್ಗೆ 11-30 ಗಂಟೆ ಸುಮಾರಿಗೆ ಪೊಲೀಸರು ಸ್ಥಳಕ್ಕೆ ದಾವಿಸಿ ಬಾಗಿಲು ಮುರಿದು ನಂತರ ಪರಿಶೀಲಿಸಿದ ವೇಳೆಯಲ್ಲಿ ವಿಷಪ್ರಾಸನ ಮಾಡಿರುವುದು ಬೆಳಕಿಗೆ ಬಂದಿದೆ.ತಾಲೂಕಿನ ರಾಯಲ್ಪಾಡು ಪೊಲೀಸ್‍ಠಾಣಾ ವ್ಯಾಪ್ತಿಯ ಉಪ್ಪರಪಲ್ಲಿ ಹೊರವಲಯದಲ್ಲಿ ಇರುವ ಕೋಳಿಫಾರಂನಲ್ಲಿ ಕೆಲಸ ಮಾಡಲು ಕಳೆದ 15 ದಿನಗಳ ಹಿಂದೆಯಷ್ಟೆ ಈ ಕೋಳಿಫಾರಂನಲ್ಲಿ ಕೆಲಸಕ್ಕೆ ಬಂದಿದ್ದ ಅಸ್ಸಾಂ ಮೂಲದ ಕುಟುಂಬವು ಕೋಳಿಫಾರಂ ಆವರಣದಲ್ಲಿ ಇರುವ ಮನೆಯಲ್ಲಿ ರೂಮ್ ಬಾಗಿಲು ಚಿಲುಕ ಹಾಕಿಕೊಂಡ ಅಸ್ಸಾಂ ಮೂಲದ ಗಂಡ ಮಹಬೂಬ್ ರೆಹಮಾನ್ (30) , ಹೆಂಡತಿ […]

Read More

ಶ್ರೀನಿವಾಸಪುರ: ತಾಲೂಕಿನ ಜೆ.ತಿಮ್ಮಸಂದ್ರ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕೆ. ರತ್ನಮ್ಮನಾರಾಯಣಸ್ವಾಮಿ ಏಕೈಕ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯಲ್ಲಿ ಒಟ್ಟು 17 ಸದಸ್ಯರು ಇದ್ದು, ಹಿಂದೆ ಅಧ್ಯಕ್ಷರಾಗಿದ್ದ ಶಂಕರರೆಡ್ಡಿ ಅವರ ರಾಜೀನಾಮೆಯಿಂದ ಸ್ಥಾನ ಖಾಲಿಯಾಗಿತ್ತು. ನಾಮಪತ್ರ ಸಲ್ಲಿಕೆಯಲ್ಲಿ ರತ್ನಮ್ಮನಾರಾಯಣಸ್ವಾಮಿ ಒಬ್ಬರೇ ಸ್ಪರ್ಧಿಸಿದ್ದರಿಂದ ಚುನಾವಣಾ ಪ್ರಕ್ರಿಯೆಯಲ್ಲೇ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎನ್. ರಾಜೇಶ್ ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ರಮದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ತೂಪಳ್ಳಿ ಆರ್. ನಾರಾಯಣಸ್ವಾಮಿ, ಪಿಡಿಒ ಕೆ. ಕಲ್ಯಾಣ, ಕಾರ್ಯದರ್ಶಿ […]

Read More

ಶ್ರೀನಿವಾಸಪುರ : ಕಳೆದ ವರ್ಷ ಬೆಲೆ ಕುಸಿತದಿಂದ ನಷ್ಟ ಅನುಭವಿಸಿದ್ದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಮಾವು ಬೆಳೆಗಾರರ ನೆರವಿಗೆ ರಾಜ್ಯ ಸರ್ಕಾರವು ಧಾವಿಸಿದ್ದು, ಎರಡು ಜಿಲ್ಲೆಗಳಿಗೆ ಒಟ್ಟು 40 ಕೋಟಿ 49 ಲಕ್ಷ ಹಣವನ್ನು ಬಿಡುಗಡೆ ಮಾಡಿದೆ ಎಂದು ಮಾವು ಮಂಡಳಿ ಅಧ್ಯಕ್ಷ ಮುದ್ದುಗಂಗಾಧರ್ ಅವರು ತಿಳಿಸಿದ್ದಾರೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡುಗಡೆಯಾದ ಈ ಅನುದಾನವನ್ನು ಈಗಾಗಲೇ ನಷ್ಟಕ್ಕೊಳಗಾದ ಮಾವು ರೈತರಿಗೆ ವಿತರಿಸಲಾಗಿದ್ದು, ಪ್ರತಿ ಕ್ವಿಂಟಾಲ್ ಮಾವಿಗೆ 440 ರೂ […]

Read More

ಶ್ರೀನಿವಾಸಪುರ : ಪ್ಲಾಸ್ಟಿಕ್ ತೆಗೆಯರಿ, ಪರಿಸರ ಉಳಿಸಿ ಎಂಬ ಘೋಷಣೆ ಮೂಲಕ ನಾಗರೀಕರಲ್ಲಿ ಪುರಸಭೆ ಮುಖ್ಯಾಧಿಕಾರಿ ವಿ.ನಾಗರಾಜ್ ಅರಿವು ಮೂಡಿಸಿದರುಪಟ್ಟಣ ಪುರಸಭೆ ವತಿಯಿಂದ ಗುರುವಾರ ಪಟ್ಟಣದಲ್ಲಿ ಪ್ಲಾಸ್ಟಿಕ್ ಮುಕ್ತ ಹಾಗು ಸ್ವಚ್ಚತೆ ಜಾಗೃತಿ ಮೂಡಿಸುವ ಸಲುವಾಗಿ ಹೋಟಲ್, ಬೇಕರಿ, ಹಣ್ಣು ತರಕಾರಿ ಹಾಗು ವಾಣಿಜ್ಯ ಅಂಗಡಿಗಳಿಗೆ ದಿಡೀರ್ ಬೇಟಿ ನೀಡಿ ಮಾತನಾಡಿದರು.ಎಂಜಿ ರಸ್ತೆಯಲ್ಲಿನ ಪುಟ್‍ಪಾತ್ ಅಂಗಡಿಗಳನ್ನು ತೆರವುಗೊಳಿಸಿದರು. ಮುಳಬಾಗಿಲು ವೃತ್ತದಲ್ಲಿ ಕಸ ಹಾಕುವ ಸ್ಥಳದಲ್ಲಿ ರಂಗೋಲಿ ಬಿಡಿಸಿ, ಈ ಸ್ಥಳದಲ್ಲಿ ಗಲೀಜು ಹಾಕದಂತೆ ಅರಿವು ಮೂಡಿಸಿದರು. ಸ್ವಚ್ಚತೆ […]

Read More
1 13 14 15 16 17 381