ಶ್ರೀನಿವಾಸಪುರ : ಪಟ್ಟಣದ ಗಫಾರ್ ಖಾನ್ ಮೊಹಲ್ಲಾದ ಖಾನ್ ಸಾಬ್ ಮಸೀದಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಸಾರ್ವಜನಿಕರ ದೈನಂದಿನ ಜೀವನವೇ ಅಸ್ತವ್ಯಸ್ತಗೊಂಡಿದೆ. ಇತ್ತೀಚೆಗೆ ಮೇಕಿಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಸಾವನ್ನಪ್ಪಿರುವ ಘಟನೆ ನಡೆದ ಬಳಿಕ, ಪ್ರದೇಶದಲ್ಲಿ ಭಯಭೀತಿಯ ವಾತಾವರಣ ನಿರ್ಮಾಣವಾಗಿದೆ.ದಿನದಿಂದ ದಿನಕ್ಕೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಮನೆಯಿಂದ ಹೊರಗೆ ಬರಲು ಕೂಡ ಹಿಂಜರಿಯುವ ಸ್ಥಿತಿ ಎದುರಾಗಿದೆ. ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ […]
ಶ್ರೀನಿವಾಸಪುರ: ಪಟ್ಟಣದ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮೈಲೇರಪ್ಪ ಅವರು ಮಂಗಳವಾರ ಭೇಟಿ ನೀಡಿ, ಶಾಲಾ ಆವರಣದಲ್ಲಿ ನಡೆಯುತ್ತಿರುವ ಹಾಗೂ ಪೂರ್ಣಗೊಂಡಿರುವ ಸಿವಿಲ್ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿಗಳ ಗುಣಮಟ್ಟವನ್ನು ಅವಲೋಕಿಸಿದರು. ಶಾಲೆಯ ಕಟ್ಟಡಗಳು, ತರಗತಿ ಕೋಣೆಗಳು, ಮೂಲಸೌಕರ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಒದಗಿಸಲಾಗಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಅಧಿಕಾರಿ, ಕಾಮಗಾರಿಗಳು ನಿಗದಿತ ಮಾನದಂಡಗಳಿಗೆ ಅನುಗುಣವಾಗಿ ನಡೆದಿರುವುದನ್ನು ಪರಿಶೀಲಿಸಿದರು. ಗುಣಮಟ್ಟದಲ್ಲಿ ಯಾವುದೇ ತಾರತಮ್ಯ ಇರಬಾರದು ಹಾಗೂ ವಿದ್ಯಾರ್ಥಿಗಳಿಗೆ […]
ಶ್ರೀನಿವಾಸಪುರ : ರಾಜ್ಯ ಸರ್ಕಾರ ರೈತ ವಿರೋಧಿ ಕ್ರಮಗಳನ್ನು ಅನುಸರಿಸುತ್ತಿದ್ದು, ಅರಣ್ಯ ಇಲಾಖೆ ದೋರಣೆಯನ್ನು ಖಂಡಿಸಿ ರೈತರ ಪರ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘದ ಕಾರ್ಯದರ್ಶಿ ವಿಜುಕೃಷ್ಣ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕೆಪಿಆರ್ಎಸ್ ಹಾಗೂ ಅಖಿಲ ಭಾರತ ಕಿಸಾನ್ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಚರ್ಚೆಯಲ್ಲಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಕೇಳಿದ ಪ್ರಶ್ನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿದ ಉತ್ತರ […]
ಕೋಲಾರ : ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನವು ನಮ್ಮನ್ನು ಆವರಿಸಿಕೊಂಡಿದೆ. ಆದರೆ ನಾವು ತಂತ್ರಜ್ಞಾನಕ್ಕೆ ಗುಲಾಮರಾಗದೆ, ಅದನ್ನು ನಮ್ಮ ಹತೋಟಿಯಲ್ಲಿಟ್ಟುಕೊಂಡು ಜಾಗೃತ ಗ್ರಾಹಕರಾಗಿ ವ್ಯವಹರಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ, ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ 2025-26 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ವರ್ಷದ ಘೋಷವಾಕ್ಯವಾದ ಡಿಜಿಟಲ್ ನ್ಯಾಯದ ಮೂಲಕ ಸಮರ್ಥ ಮತ್ತು […]
ಶ್ರೀನಿವಾಸಪುರ : ಠಾಣೆಗೆ ಯಾರೇ ಬಂದರೂ ಸೌಜನ್ಯದಿಂದ ಮಾತನಾಡಿ ಅವರ ಸಮಸ್ಯೆಗಳನ್ನ ಆಲಿಸಿ ನೊಂದು ಬಂದತವರಿಗೆ ಅಧಿಕಾರಿಗಳು ನ್ಯಾಯವನ್ನು ಒದಗಿಸಿ ನಮ್ಮ ಇಲಾಖೆಯ ಬಗ್ಗೆ ಅವರಿಗೆ ನಂಬಿಕೆ ಬರುತ್ತದೆ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನಿಕಾ ಸಕ್ರಿವಾಲಾ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಗೆ ಶನಿವಾರ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಡೀರ್ ಬೇಟಿ ನೀಡಿ ಕಾನೂನು ವ್ಯವಸ್ಥೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಬ್ಬಂದಿ ಕಡಿಮೆ ಇದೆ ಸುಗಮ ಸಂಚಾರಕ್ಕೆ ಹೆಚ್ಚು ಆದ್ಯತೆ ನೀಡಬೇಕು […]
ಶ್ರೀನಿವಾಸಪುರ : ಜೀವನವೆಂಬ ನದಿಯು ಹರಿ ಹರಿಯುತ್ತ ತನ್ನಲ್ಲಿನ ಕಲ್ಮಶವನ್ನು ತೊಳೆದು, ನಿಕಲ್ಮಶವಾದ ನೀರಾದಾಗ ಅದು ನಮ್ಮನ್ನು ಕಾಪಾಡುತ್ತದೆ ಜೀವನವೆಂಬ ಸಾಗರವನ್ನು ಸಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಹೇಳಿದರು.ತಾಲೂಕಿನ ರಾಯಲ್ಪಾಡು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗು ಪ್ರೌಡಶಾಲಾವರಣದಲ್ಲಿ ಶನಿವಾರ ಅರಿವು ಕೇಂದ್ರ ವತಿಯಿಂದ ಅರಿವು ಭಾರತ ಅಡಿಯಲ್ಲಿ ನಮ್ಮ ನಡೆ ಅಸ್ಪೃಶ್ಯತೆ ಮುಕ್ತ ಭಾರತದೆಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂದು ಅರಿವು ಕೇಂದ್ರವು ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವ ಮತ್ತು ಸಾಮಾಜಿಕ ಸಮಾನತೆಯನ್ನು […]
ಶ್ರೀನಿವಾಸಪುರ : ಶುಕ್ರವಾರ ತಮ್ಮ ಮನಗೆ ಬಂದ ಆಂಧ್ರದ ಚೀಕಲಬೈಲು ಗ್ರಾಮದ ನಿವಾಸಿ ಗಂಗುಲಮ್ಮರವರನ್ನ ಪರಿಚಿಯಿಸಿಕೊಂಡು ಗಂಗುಲಮ್ಮ ರವರೊಂದಿಗೆ ಕ್ಷೇಮಸಮಚಾರಗಳನ್ನು ಮಾತನಾಡುತ್ತಾ, ತಮ್ಮ ಹಳೆ ನನೆಪುಗಳನ್ನು ಮಾತನಾಡಿ ಗಂಗಲಮ್ಮ ರವರು ಅಡ್ಡಗಲ್ ಗ್ರಾಮದ ತಲಾರಿ ಗಂಗುಲಪ್ಪ ಮತ್ತು ಕದಿರೆಕ್ಕ ದಂಪತಿಗಳ ಐದನೇ ಮಗಳು ಈ ದಂಪತಿಗಳಿಗೆ ಒಟ್ಟು ಆರು ಜನ ಹೆಣ್ಣು ಮಕ್ಕಳು ಮೊದಲನೇ ಅವರು ಸೀತಕ್ಕ ನಂತರ ರಾಮಕ್ಕ ನಂತರ ಸಾಲಮ್ಮ ನಂತರ ನರಸಮ್ಮ ಐದನೇ ಅವಳು ಗಂಗೂ ಆರನೇವಳು ಸುಬ್ಬಮ್ಮ ಆರು ಹೆಣ್ಣು ಮಕ್ಕಳನ್ನು […]
ಕೋಲಾರ : ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು. ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ […]
ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು – ಶಿಕ್ಷಕರ ಸಭೆ ಕಡ್ಡಾಯ : ಶಿಕ್ಷಣ ಇಲಾಖೆ ಕ್ರಮಕ್ಕೆ ಸ್ವಾಗತ – ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು–ಶಿಕ್ಷಕರ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮ ಸಮಿತಿಯ ಸದಸ್ಯ ಶಬ್ಬೀರ್ ಅಹ್ಮದ್ ಸ್ವಾಗತಿಸಿದ್ದಾರೆ. ಈ ಕ್ರಮದಿಂದ ಶಾಲೆ, ಶಿಕ್ಷಕರು ಹಾಗೂ ಪೋಷಕರ ನಡುವೆ ಸಮನ್ವಯ ಮತ್ತಷ್ಟು ಬಲಪಡಲಿದ್ದು, ವಿದ್ಯಾರ್ಥಿಗಳ […]

