ಶ್ರೀನಿವಾಸಪುರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿದ್ದು, ಎಲ್ಲ ವರ್ಗದ ಜನರೂ ಅವರನ್ನು ಬೆಂಬಲಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ, ತಾಲ್ಲೂಕು ವಾಲ್ಮೀಕಿ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕೈಗೊಂಡ ನಿರ್ಧಾರದಿಂದಾಗಿ ಬಡವರು, ಅನ್ನ ತಿನ್ನುವಂತಾಗಿದೆ. ಬಡವರಿಗೆ ಅಕ್ಕಿ ನೀಡಿದ ಪರಿಣಾಮವಾಗಿ ಹಸಿವು ಮುಕ್ತ ಕರ್ನಾಟಕದ ಕನಸು ನನಸಾಗಿದೆ. ಬಡವರ ಪರ ಕಾಳಜಿ ಇರುವ ಸಿದ್ದರಾಮಯ್ಯ ಅವರನ್ನು […]

Read More

ಶ್ರೀನಿವಾಸಪುರ 1 : ದೀಪಾವಳಿಯ ವೇಳೆ ಒಂದು ದಿನವನ್ನು ಬಲಿಪಾಡ್ಯಮಿ ಎಂದು ಬಲಿ ಚಕ್ರವರ್ತಿಯ ನೆನಪಿಗಾಗಿ ಆಚರಿಸಲಾಗುತ್ತದೆ ಎಂದು ಮೇಧಾ ಗುರು ಜ್ಯೋತಿರ್ವಿಜ್ಞಾನ ಕೇಂದ್ರದ ಸಂಸ್ಥಾಪಕ ವೆಲ್ಲಾಲ ಸತ್ಯನಾರಾಯಣಶಾಸ್ತ್ರಿ ತಿಳಿಸಿದರು.ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿನ ಶ್ರೀ ಕಾಶೀವಿಶ್ವೇಶ್ವರ ದೇವಾಲಯದಲ್ಲಿ ಬುಧವಾರ ಬಲಿ ಪಾಡ್ಯಮಿ,ಬಲೀಂದ್ರ ಪೂಜಾ ಅಂಗವಾಗಿ ನಡೆದ ಗೋಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ದಿನ ಲಕ್ಷ್ಮೀ ಪೂಜೆ, ಗೋಪೂಜೆ ಇವುಗಳನ್ನು ಮಾಡಲಾಗುವುದು ಯಾಕೆಂದರೆ, ಬಲಿ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು, ಅದಕ್ಕೆ ಪೂಜೆಗಳನ್ನು ಆರಾಧನೆಯನ್ನು ಮಾಡಲಾಗುತ್ತಿತ್ತು. ಅದರ […]

Read More

ಶ್ರೀನಿವಾಸಪುರ 1 : ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲಾ ಜನಾಂಗಕ್ಕೆ ಬೇಕಾದವರು ಆದ್ದರಿಂದ ತಾಲ್ಲೂಕಿನ ಎಲ್ಲಾ ಜನಾಂಗದವರು ಪಕ್ಷಾತೀತವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕು ಎಂದು ಸರ್ಕಾರದ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಬಾವಿ ಸಭೆಯಲ್ಲಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಗೆ ಮೃತ್ತಿಕೆ ಸಂಗ್ರಹ ಅಭಿಯಾನದ ಬಗ್ಗೆ ಮಾತನಾಡಿದರು.ಇದೇ ತಿಂಗಳು 29.30 ರಂದು ತಾಲೂಕಿನ 5 ಹೋಬಳಿ […]

Read More

ಶ್ರೀನಿವಾಸಪುರ: ಅನ್ಯ ಭಾಷೆಗಳ ಪ್ರಭಾವ ಇರುವ ಗಡಿ ಭಾಗದ ಜನರು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅತಿ ಪುರಾತನ ಭಾಷೆಗಳಲ್ಲಿ ಒಂದಾದ ಕನ್ನಡ ಒಂದು ಸುಂದರ ಹಾಗೂ ಶಕ್ತಿಯುತ ಭಾಷೆಯಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಮುಂಚೂಣಿಯಲ್ಲಿದೆ ಎಂದು ಹೇಳಿದರು.ನಮ್ಮ ಸುಂದರ ಹಾಗೂ ಅರ್ಥಗರ್ಭಿತ […]

Read More

ಕೋಲಾರ:- ಗುರುಭವನ ನಿರ್ಮಿಸಲು ಉದ್ದೇಶಿಸಿರುವ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿನ ಶಿಥಿಲಗೊಂಡ ಐದು ಕಟ್ಟಡಗಳನ್ನು ಲೋಕೋಪಯೋಗಿ ಇಲಾಖೆ ಅನುಮತಿ ನೀಡಿರುವ ಹಿನ್ನಲೆಯಲ್ಲಿ ನೆಲಸಮಗೊಳಿಸಲು ಕ್ರಮ ಕೈಗೊಂಡಿದ್ದು, ಗುರುಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ ಸಿದ್ದಗೊಳಿಸಲಾಗುತ್ತಿದೆ ಎಂದು ಗುರುಭವನ ಸಮಿತಿ ಅಧ್ಯಕ್ಷರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.ನಗರದ ಮಾಧ್ಯಮಿಕ ಶಾಲಾ ಆವರಣದಲ್ಲಿನ ಶಿಥಿಲಗೊಂಡ ಹಳೆ ಕಟ್ಟಡಗಳನ್ನು ಜೆಸಿಬಿ ಮೂಲಕ ನೆಲಸಮಗೊಳಿಸುವ ಕಾರ್ಯವನ್ನು ವೀಕ್ಷಿಸಿದ ನಂತರ ಅವರು ಮಾತನಾಡುತ್ತಿದ್ದರು.ಗುರುಭವನ ನಿರ್ಮಾಣ ಹಲವಾರು ವರ್ಷಗಳಿಂದ ನೆನೆಗುದಿಗೆ […]

Read More

ಕೋಲಾರ:- ಹಾಲು ಒಕ್ಕೂಟ ಸಾಮಾಜಿಕ ಕಾರ್ಯಗಳಿಗಾಗಿಯೇ 12 ಕೋಟಿ ದತ್ತಿ ನಿಧಿ ಸ್ಥಾಪಿಸಿದ್ದು, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಹಾಗೂ ಹಾಲು ಉತ್ಪಾದಕರ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಎಲ್ಲಾ ರೀತಿಯ ನೆರವು ಒದಗಿಸಲು ಸಿದ್ದವಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ ಕೆ.ವೈ.ನಂಜೇಗೌಡ ಭರವಸೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕೋಚಿಮುಲ್‍ನಿಂದ ಮುದ್ರಿಸಿ ಹೊರ ತಂದಿರುವ ನನ್ನನ್ನೊಮ್ಮೆ ಗಮನಿಸಿ’ಪ್ರಶ್ನೋತ್ತರ ಕೋಠಿ,ಚಿತ್ರಬಿಡಿಸು ಅಂಕಗಳಿಸು’ , ಕನ್ನಡ,ಇಂಗ್ಲೀಷ್, ಉರ್ದು […]

Read More

ಕೋಲಾರ:- ಭಾರತ್ ಜೋಡೋ ಬದಲಿಗೆ ಕೋಲಾರ ಜಿಲ್ಲೆಯಲ್ಲಿ ಕಾಂಗ್ರೇಸ್ ಜೋಡೋ ಮೊದಲು ಮಾಡಬೇಕಾಗಿತ್ತು ಎಂದು ವಿಧಾನಪರಿಷತ್ ಸರ್ಕಾರದ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ ಲೇವಡಿ ಮಾಡಿದರು.ಅವರೇ ಹೇಳಿಕೊಂಡಿರುವಂತೆ 4 ತಲೆಮಾರುಗಳಿಗೆ ದುಡ್ಡು ಮಾಡಿಕೊಂಡಿರುವ ಮಹಾ ಜ್ಞಾನಿಗಳು ಕೋಲಾರ ಜಿಲ್ಲೆಯ ಕಾಂಗ್ರೆಸ್‍ನಲ್ಲಿದ್ದಾರೆ ಅವರು ಮೊದಲು ಅವರ ಪಕ್ಷ ಸರಿಪಡಿಸಿಕೊಂಡರೆ ಭಾರತ್ ಜೋಡೋ ಆಮೇಲೆ ಎಂದರು.ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಜಿಲ್ಲೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಭಿನ್ನಮತದಿಂದ ನಗೆಪಾಟಲಿಗೀಡಾಗಿದೆ ಇದನ್ನು ಸರಿಪಡಿಸದೇ ಇವರು ಮಾಡೋ ಭಾರತ್ ಜೋಡೋ ಯಾವ ಪುರುಷಾರ್ಥಕ್ಕೆ […]

Read More

ಕೋಲಾರ:- ಪ್ರಧಾನಿ ನರೇಂದ್ರ ಮೋದಿಯವರಿಂದ ನ.11 ರಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 108 ಅಡಿಗಳ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಲೋಕಾರ್ಪಣೆ ಹಿನ್ನಲೆಯಲ್ಲಿ ಕೈಗೊಂಡಿರುವ ಕೆಂಪೇಗೌಡ ಪ್ರಗತಿಯ ರಥಯಾತ್ರೆಗೆ ಅ.27 ರಂದು ಬೆಳಗ್ಗೆ 10-30 ಗಂಟೆಗೆ ನಗರದ ಟೇಕಲ್ ರಸ್ತೆಯ ಬ್ರಿಡ್ಜ್ ಸಮೀಪ ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಲಿದ್ದಾರೆ ಎಂದು ಸರ್ಕಾರದ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ ತಿಳಿಸಿದರು.ಈ ಸಂಬಂಧ ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿ ನಡೆಸಿದ ಅವರು, ನ.11 ರಂದು ಪ್ರಧಾನಿ ನರೇಂದ್ರಮೋದಿಯವರು […]

Read More

ಕೋಲಾರ:- ಬಯಲುಸೀಮೆಯ ರೈತರ ಜೀವನಾಡಿಯಾಗಿರುವ ರೇಷ್ಮೆಕೃಷಿಯನ್ನು ಇತರೆ ಇಲಾಖೆಗಳೊಂದಿಗೆ ವಿಲೀನ ಮಾಡುವ ಸರ್ಕಾರದ ನಿರ್ಧಾರ ಅವೈಜ್ಞಾನಿಕವಾಗಿದ್ದು, ಅನ್ನದಾತನ ಬದುಕಿನೊಂದಿಗೆ ಚೆಲ್ಲಾಟವಾಡುವ ಪ್ರಯತ್ನ ಕೈಬಿಟ್ಟು ಇಲಾಖೆಯ ಬಲವರ್ಧನೆಗೆ ಕ್ರಮವಹಿಸುವಂತೆ ಸರ್ಕಾರವನ್ನು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಒತ್ತಾಯಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ರೇಷ್ಮೆ ಇಲಾಖೆಯಲ್ಲಿನ 2346 ಹುದ್ದೆಗಳ ರದ್ದತಿ ಜತೆಗೆ ಇಲಾಖೆಯನ್ನು ಮತ್ತೊಂದು ಇಲಾಖೆ ಜತೆ ವಿಲೀನ ಮಾಡುವ ನಿರ್ಧಾರ ಕೈಬಿಡಿ ಎಂದು ಆಗ್ರಹಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತದ ಕರೆಯ […]

Read More