ಕೋಲಾರ,ಜೂ.21: ಇಂಡಿಯನ್ ಯೂನಿಯನ್ ಮುಸ್ಲೀಮ್ ಲೀಗ್ ವತಿಯಿಂದ ಕೋಲಾರದ ನೂತನ ಜಿಲ್ಲಾಧಿಕಾರಿಗಳಾದ ಅಕ್ರಂಪಾಶ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.ಇದೇ ಸಂದರ್ಭದಲ್ಲಿ ನಗರದಲ್ಲಿರುವ ರಸ್ತೆಗಳ ಸಮಸ್ಯೆ, ಯು.ಜಿ.ಡಿ, ಕಸ ವಿಲೇವಾರಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ವಹಿಸಿ ಸಾರ್ವಜನಿಕರಿಗೆ ಅನಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.ನಿಯೋಗದಲ್ಲಿ ಇಂಡಿಯನ್ ಯೂನಿಯನ್ ಮುಸ್ಲೀಮ್ ಲೀಗ್ ಜಿಲ್ಲಾಧ್ಯಕ್ಷ ಶೇಖ್ ಆಶ್ರಫ್ಆಲಿ, ಜಿಲ್ಲಾ ಕಾರ್ಯದರ್ಶಿ ಸೈಯದ್ ಸಿಬ್ಗತ್ವುಲ್ಲಾ, ವಜೀರ್ಪಾಷ, ಇಮ್ರಾನ್ಪಾಷ, ಸೈಯದ್ ನೂರ್ ಇನ್ನಿತರರು ಉಪಸ್ಥಿತರಿದ್ದರು.
ಶ್ರೀನಿವಾಸಪುರ: ನಗರ ಪ್ರದೇಶದಲ್ಲಿ ಯೋಗ ಶಿಕ್ಷಣ ಆದ್ಯತೆ ವಿಷಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಯೋಗಾಭ್ಯಾಸದಿಂದ ದೊರೆಯುವ ಪ್ರಯೋಜನ ಕುರಿತು ಪ್ರಚಾರ ಮಾಡಬೇಕಾದ ಅಗತ್ಯವಿದೆ ಎಂದು ತಾಲ್ಲೂಕು ಎಲ್ಐಸಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್ ಹೇಳಿದರು.ಪಟ್ಟಣದಲ್ಲಿ ಎಲ್ಐಸಿ ಸಿಬ್ಬಂದಿ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಯೋಗ ಪ್ರಚಾರ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.ಇಂದು ವಿಶ್ವ ಅಡ್ಡ ಪರಿಣಾಮ ಇಲ್ಲದ ಆರೋಗ್ಯ ರಕ್ಷಣೆಗಾಗಿ ಭಾರತದ ಕಡೆ ನೋಡುತ್ತಿದೆ. ಯೋಗ […]
ಶ್ರೀನಿವಾಸಪುರ: ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದ ಸಭಾಂಗಣದಲ್ಲಿ ಜೂ.23 ರಂದು ಬೆಳಿಗ್ಗೆ 11 ಗಂಟೆಗೆ ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ ಕೃತಿ ಬಿಡುಗಡೆ ಹಾಗೂ ಭವಿಷ್ಯದ ಮಕ್ಕಳ ರಂಗಭೂಮಿ, ಸವಾಲುಗಳು, ಸಾಧ್ಯತೆಗಳು ಎಂಬ ವಿಷಯ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಕೋಲಾರದ ಕೃಷಿ ಸಂಸ್ಕøತಿ ಕೇಂದ್ರದ ವತಿಯಿಂದ ಬುಧವಾರ ಏರ್ಪಡಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಸಕ […]
ಕೋಲಾರ, ಜೂನ್22 : ಕೋಲಾರ ಜಿಲ್ಲೆಯನ್ನು ರಾಜ್ಯದಲ್ಲೇ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯನ್ನು ಹೊಂದಿ ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ನೂತನ ಜಿಲ್ಲಾಧಿಕಾರಿ ಅಕ್ರಂ ಪಾಷಾರವರು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಮೊದಲ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರ ಬದಲಾಗಿದೆ. ಸರ್ಕಾರದ ಕಾರ್ಯವೈಖರಿಯೂ ಬದಲಾಗಿದೆ ಆದ್ದರಿಂದ ಹೊಸ ಸರ್ಕಾರದ ಆಶಯಗಳಿಗನುಗುಣವಾಗಿ ಅದರ ವೇಗಕ್ಕೆ ತಕ್ಕಂತೆ ಕೆಲಸ ಮಾಡುವುದು ಕಾರ್ಯಾಂಗದ ಮೇಲಿನ ಜವಾಬ್ದಾರಿಯಾಗಿದೆ ಎಂದರು. ಜಿಲ್ಲಾ ಮಟ್ಟದ […]
ಕೋಲಾರ : ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಮ್ ಪಾಷಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು . ಕೋಲಾರ ಜಿಲ್ಲಾಧಿಕಾರಿಯಾಗಿ ಅಕ್ರಮ್ ಪಾಷಾ ರವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು . ಈ ವೇಳೆ ಅಪರ ಜಿಲ್ಲಾಧಿಕಾರಿಯವರಿಗೆ ಹೂಗುಚ್ಚು ನೀಡಿ ಶುಭ ಕೋರಿದರು. ಈ ಸಂಧರ್ಭದಲ್ಲಿ ಉಪವಿಭಗಾಧಿಕಾರಿ ವೆಂಕಟಲಕ್ಷ್ಮಿ ಜಿಲ್ಲೆಯ ಎಲ್ಲ ತಹಸೀಲ್ದಾರ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರುಗಳು ಹಾಜರಿದ್ದರು.
ಪಟ್ಟಣದ ಎಂಜಿ ರಸ್ತೆಯಲ್ಲಿ ಕಾಳಿಕಾ ಕಮಠೇಶ್ವರ ದೇವಸ್ಥಾನದಲ್ಲಿ ಭಾನುವಾರ ಅಮಾವಾಸ್ಯೆ ಪ್ರಯುಕ್ತ 108 ಲೀಟರ್ ಕ್ಷೀರಾಭಿಷೇಕ ಕಾರ್ಯಕ್ರಮವು ತಾಲೂಕು ವಿಶ್ವಕರ್ಮ ಸಮುದಾಯದ ತಾಲೂಕು ಅಧ್ಯಕ್ಷ ಮೋಹನಾಚಾರಿ ನೇತೃತ್ವದಲ್ಲಿ ನಡೆಯಿತು. ಅರ್ಚಕ ಮಂಜುನಾಥಚಾರಿ ನಡೆಸಿಕೊಟ್ಟರು. ಮುಖಂಡರಾದ ರುದ್ರಪ್ಪ ಚಾರಿ, ಕೆ.ರತ್ನಚಾರಿ, ಕಾಳಾಚಾರಿ, ರವಿಚಂದ್ರಚಾರಿ, ರಾಮಚಂದ್ರಚಾರಿ, ಕೆ.ರಾದಮ್ಮ, ಕಾಳಮ್ಮ, ರಮೇಶ್ ಇದ್ದರು.
ಶ್ರೀನಿವಾಸಪುರ : ಸರ್ಕಾರಿ ಸೌಲಭ್ಯಗಳ ಜೊತೆಗೆ ದಾನಿಗಳು ನೀಡುವ ಶೈಕ್ಷಣಿಕ ಸಾಮಾಗ್ರಿಗಳನ್ನು ಬಳಿಸಿಕೊಂಡು ಶೈಕ್ಷಣಿಕ ಪ್ರಗತಿ ಕಾಣುವಂತೆ ವಿದ್ಯಾರ್ಥಿಗಳಿಗೆ ಬಿಇಒ ವಿ.ಉಮಾದೇವಿ ಕರೆ ನೀಡಿದರು. ತಾಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸಮೀಪ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶನಿವಾರ ಮಣಿಪುರಂ ರಿತಿ ಜ್ಯೂಲರೀಸ್ ವತಿಯಿಂದ ೨೫೦ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾದ ಬ್ಯಾಗ್ಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರವು ಪ್ರತಿಯೊಬ್ಬ ಮಗುವು ಶಿಕ್ಷಣವನ್ನು ಪಡೆಯಲೇ ಬೇಕೆಂಬ ನಿಟ್ಟಿನಲ್ಲಿ ಅನೇಕ ಯೋಜನೆಗಳ ಮುಖಾಂತರ ಶಿಕ್ಷಣ ಪಡೆಯಲು ಪ್ರೋತ್ಸಾಹ ಮಾಡುತ್ತಿದೆ. ವಸತಿ ಶಾಲೆಯಲ್ಲಿ ಅನೇಕ ಮೂಲಭೂತ […]
ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ಕೋಲಾರದ ವತಿಯಿಂದ ಶ್ರೀನಿವಾಸಪುರ ತಾಲ್ಲೂಕಿನ ತರ್ನಹಳ್ಳಿ ಗ್ರಾಮದಲ್ಲಿ “ಸಮಗ್ರ ಬೆಳೆ ನಿರ್ವಹಣೆ” ಅಡಿಯಲ್ಲಿ ಮಾವು ಬೆಳೆಯ ಕ್ಷೇತ್ರೋತ್ಸವ ನಡೆಸಲಾಯಿತು. ಗ್ರಾಮದ ಮಂಜುನಾಥ್ ಎಂಬ ರೈತರ ಮಾವಿನ ತೋಟದಲ್ಲಿ ಕಳೆದ ವರ್ಷ ಸಮಗ್ರ ಬೆಳೆ ನಿರ್ವಹಣೆ ಅಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆಯನ್ನು ಕೈಗೊಂಡಿದ್ದು ಅದರ ಅಡಿಯಲ್ಲಿ “ಮಾವು ಬೆಳೆಯ ಕ್ಷೇತ್ರೋತ್ಸವ” ನಡೆಸಲಾಯಿತು. ಕೋಲಾರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ಮಾರ್ಗದರ್ಶನದಲ್ಲಿ ಸಮಗ್ರ ಬೆಳೆ ನಿರ್ವಹಣೆ ಕ್ರಮಗಳನ್ನು ಅನುಸರಿಸಿದ ತರ್ನಹಳ್ಳಿ ಗ್ರಾಮದ ಮಂಜುನಾಥರವರು ತಮ್ಮ ಮಾವಿನ […]
ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಬೇಕು. ಸರ್ಕಾರದ ಸೌಲಭ್ಯಗಳು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ಸಿಗುವಂತ ನೋಡಿಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮನೆ ನೀಡುವಲ್ಲಿ ಗುಡಿಸಲು ವಾಸಿಗಳು ಹಾಗೂ ವಾಸಿಸಲು ಯೋಗ್ಯವಲ್ಲದ ಮನೆಗಳಲ್ಲಿ ವಾಸಿಸುತ್ತಿರವ ಕುಟುಂಬಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ […]

