
ಶ್ರೀನಿವಾಸಪುರ 4 : ವಚನಗಳು ಎಂದರೆ ಶರಣರ ಕೈಗನ್ನಡಿ, ಸಮಾಜಕ್ಕೆ ದಾರಿ ದೀಪ ವಚನಗಳಲ್ಲಿ ಮೂರು ವಿಧಗಳಿದ್ದು, ವಿಡಂಬಾತ್ಮಕ ವಚನ, ಆಧ್ಯಾತ್ಮಿಕ ವಚನ ಮತ್ತು ಸಂವಾದಾತ್ಮಕ ವಚನ ಈ ಮೂರು ವಚನಗಳನ್ನು ಅರಿತಿದ್ದೇ ಆದರೆ ಮಾನವನ ಜೀವನ ಸಾರ್ಥಕ ಎಂದ ಅವರು ಈ ಎಲ್ಲವನ್ನೂ ಮಕ್ಕಳು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕ ಜೀವನ ನಡೆಸಬೇಕು ಎಂದು ಕೋಲಾರ ಬಾಲಕರ ಕಾಲೇಜಿನ ಪ್ರಾದ್ಯಾಪಕ ಪ್ರೊ. ಶಂಕರಪ್ಪ ತಿಳಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ […]

ಕೋಲಾರ:- ಕೆಜಿಎಫ್ ತಾಲ್ಲೂಕಿನ ಸಮಗ್ರ ಅಭಿವೃದ್ದಿಗಾಗಿ ಕಂಕಣ ತೊಟ್ಟಿರುವ ತಮ್ಮ ಪ್ರಯತ್ನದಿಂದ ಈಗಾಗಲೇ ವಿವಿಧ ಯೋಜನೆಗಳಡಿ ಸುಮಾರು 35 ಕೋಟಿ ರೂ ಮಂಜೂರು ಮಾಡಿಸಿದ್ದು ಲೋಕೋಪಯೋಗಿ ಇಲಾಖೆ ಅಡಿಯಲ್ಲಿ 15 ಕೋಟಿ ರೂಗಳ ರಸ್ತೆ ಕಾಮಗಾರಿ ಶೀಘ್ರ ಆರಂಭಿಸಲು ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಮನವಿ ಮಾಡಿದರು.ನಗರದ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಚಂದ್ರಶೇಖರ್ ಅವರನ್ನು ಖುದ್ದು ಭೇಟಿಯಾಗಿ ಮುಖ್ಯಮಂತ್ರಿಗಳು ಅನುಮೋದನೆ ನೀಡಿರುವ 15 ಕೋಟಿ ರೂಗಳ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಿದ್ದು, ಕೂಡಲೇ ಟೆಂಡರ್ […]

ಕೋಲಾರ:- ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಜಂಟಿ ಆಶ್ರಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಮಂಗಸಂದ್ರದ ಸ್ನಾತಕೋತ್ತರ ಕೇಂದ್ರದಲ್ಲಿ ಜುಲೈ 28 ರಂದು ನಡೆಯಲಿದೆ.ಮಹಿಳಾ ಮತ್ತು ವರ್ತಮಾನ (ಸಾಹಿತ್ಯ ಮತ್ತು ಸಮಾಜ) ಕುರಿತು ನಡೆಯಲಿರುವ ಈ ವಿಚಾರ ಸಂಕಿರಣವು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಆರಂಭಗೊಂಡ ಮೇಲೆ ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಮೊದಲ ವಿಚಾರ ಸಂಕಿರಣವಾಗಿದೆಜು.28ರ ಬೆಳಗ್ಗೆ 10 ಗಂಟೆಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪ್ರೋ.ಚಂದ್ರಶೇಖರ ಕಂಬಾರ ಅವರು […]

ಕೋಲಾರ:- ತಾಲ್ಲೂಕಿನ ನರಸಾಪುರ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಯು.ಗೋವಿಂದ್ ಅವರಿಗೆ 2021-22ನೇ ಸಾಲಿನ ಶಿಕ್ಷಣ ಸಾರಥಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ತುಮಕೂರು ನಗರದ ಸಿದ್ದಗಂಗಾ ಮಠದ ಆವರಣದಲ್ಲಿನ ಉದ್ಧಾನೇಶ್ವರ ಕಲ್ಯಾಣ ಮಂಟಪದಲ್ಲಿ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್,ಮೈಸೂರು ಇವರಿಂದ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಅವರಿಗೆ ಶಿಕ್ಷಣ ಸಾರಥಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಶಿಕ್ಷಣ ಕ್ಷೇತ್ರದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಮಾಡಿರುವ ಗಣನೀಯ ಸೇವೆ ಹಾಗೂ ವಿದ್ಯಾರ್ಥಿಗಳು,ಶಿಕ್ಷಕರಿಗೆ ಉತ್ತಮ ಶೈಕ್ಷಣಿಕ ಮಾರ್ಗದರ್ಶನ ನೀಡಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಅಭಿವೃದ್ದಿಗೆ ನಿಸ್ವಾರ್ಥ,ಪ್ರಾಮಾಣಿಕ […]

ಕೋಲಾರ:- ವಿದ್ಯಾರ್ಥಿಗಳು ಸ್ವಾವಲಂಬಿಗಳಾಗಬೇಕು, ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ವ್ಯಕ್ತಿತ್ವ ವಿಕಸನದ ಜತೆ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಕಿವಿಮಾತು ಹೇಳಿದರು.ಮಂಗಳವಾರ ನಗರದ ಸಹ್ಯಾದ್ರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾರಾಟ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಿ, ಬದುಕಿಗೆ ಪಠ್ಯ ಸಾಲದು ಜತೆಗೆ ಮಾರಾಟ ಕೌಶಲ್ಯಗಳನ್ನು ಬೆಳೆಸಿಕೊಂಡರೆ ನಿಮ್ಮ ಮುಂದಿನ ಬದುಕಿನಲ್ಲಿ ಸಹಕಾರಿಯಾಗಲಿದೆ ಎಂದರು.ನಿಮ್ಮ ಜೀವನದ ಗುರಿ ಸಾಧನೆಗೆ ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದ ಅವರು, ನಿಮ್ಮ […]

ಕೋಲಾರ:- ಕರ್ನಾಟಕ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಯಾದವ ಸಮುದಾಯದ ಹಿರಿಯ ಮುಖಂಡ ಎಂ.ನಾಗರಾಜ್ ಯಾದವ್ ಅವರನ್ನು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ಮತ್ತಿತರ ಸಮುದಾಯದ ಹಿರಿಯ ಮುಖಂಡರು ಭೇಟಿ ಮಾಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ನಾಗರಾಜ್ ಯಾದವ್, ಹಿಂದುಳಿದ ಸಮುದಾಯದವನಾದ ನನಗೆ ಕಾಂಗ್ರೆಸ್ ಪಕ್ಷ ಅವಕಾಶ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿದಿದ್ದು, ಎಲ್ಲಾ ಶೋಷಿತ ಸಮುದಾಯಗಳ ಹಿತ ಕಾಯುವ ಹೊಣೆಗಾರಿಕೆ ನನಗಿದೆ ಎಂದು ತಿಳಿಸಿದರು.ರಾಜ್ಯದ ಇಡೀ ಯಾದವ ಸಮುದಾಯ ನನ್ನ ಮೇಲೆ ಇಟ್ಟಿರುವ […]

ಶ್ರೀನಿವಾಸಪುರ 1 : ಲಕ್ಷ್ಮೀಪುರ ಗ್ರಾಮಪಂಚಾಯಿತಿ ಪಿಡಿಒ ಶಂಕರಪ್ಪ ಕೋಲಾರ ಜಿಲ್ಲಾ ಭ್ರಷ್ಟಾಚಾರ ನಿಗ್ರಹದಳವು ಮಂಗಳವಾರ ನಿವೇಶನದ ಇ-ಖಾತೆ ಮಾಡುವ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಖೆಡ್ಡಾಗೆ ಬಿದ್ದಿದ್ದಾರೆ.ಪಿರ್ಯಾದುದಾರ ವೆಂಕರಾಜು ರವರು ತಂದೆಯ ಹೆಸರಿನಲ್ಲಿ ಹಾಗು ತನ್ನ ತಾಯಿ ರವರ ಹೆಸಿನಲ್ಲಿ ಖಾಲಿ ನಿವೇಶನಗಳು ಇದ್ದು, ನಿವೇಶನಗಳಿಗೆ ಸಂಬಂದಿಸಿದಂತೆ ಇ-ಖಾತ ಮಾಡಲು ಮಾರ್ಚ್ 2022ರಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು. ಇ-ಖಾತ ಮಾಡಲು ಒಟ್ಟು 15ಸಾವಿರ ಬೇಡಿಕೆ ಇಟ್ಟಿದ್ದ ಪಿಡಿಓ ಮುಂಗಡವಾಗಿ 2ಸಾವಿರವನ್ನು ನೀಡಲಾಗಿತ್ತು . ಉಳಿದ ಹಣವನ್ನು […]

ಶ್ರೀನಿವಾಸಪುರ: ಶಾಲಾ ಕಾಲೇಜು ಆವರಣ ಪ್ರವೇಶಿಸಿ ಅನೈತಿಕ ಚಟುವಟಿಕೆ ನಡೆಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾ ಸಂಸ್ಥೆಗಳ ಪಾವಿತ್ರ್ಯತೆ ಉಳಿಸಲು ಪೂರಕವಾದ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಸಾರ್ವಜನಿಕ ಇಲಾಖೆ ಉಪ ನಿರ್ದೇಶದಕರನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಹೇಳಿದರು.ಕೆಲವರು ಸರ್ಕಾರಿ ಶಾಲಾ ಕಾಲೇಜು ಆವರಣದಲ್ಲಿ ಕುಡಿಯುವುದು, […]

ಶ್ರೀನಿವಾಸಪುರ: ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ.ಎಸ್.ಅನಸೂಯ ಬಾಬು ಆಯ್ಕೆಯಾಗಿದ್ದಾರೆ.ಈ ಹಿಂದೆ ಅಧ್ಯಕ್ಷರಾಗಿದ್ದ ಗೀತಾ ರಾಮಚಂದ್ರ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಸಲಾಯಿತು.ಒಟ್ಟು 19 ಸದಸ್ಯರ ಪೈಕಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೆ.ಎಸ್.ಅನಸೂಯ ಬಾಬು 10 ಮತ ಪಡೆದು ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಟಿ.ಎಚ್.ಲಕ್ಷ್ಮಿದೇವಮ್ಮ 9 ಮತ ಪಡೆದು ಸೋಲನ್ನಪ್ಪಿದರು.ಚುನಾವಣಾಧಿಕಾರಿ ಎಂ.ಶ್ರೀನಿವಾಸನ್, ಪಿಡಿಒ ಶಂಕರಪ್ಪ, ಮುಖಂಡರಾದ ಮಂಜುನಾಥರೆಡ್ಡಿ, ಭೀಮಣ್ಣ, ನಾಗಾರ್ಜುನ, ರಾಮಮೂರ್ತಿ, ಅಶೋಕ್, ಶ್ರೀರಾಮರೆಡ್ಡಿ ಇದ್ದರು.