
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಸಾಮಾನ್ಯ ಕಾನುಗಳ ಅರಿವು ಇದ್ದರೆ ಅದರಿಂದ ಗ್ರಾಮದಲ್ಲಿ ಶಾಂತಿ,ಸೌಹಾರ್ದತೆ ನೆಲಸಲು ಹೆಚ್ಚು ಸಹಕಾರಿಯಾಗಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ಸಿ.ಹೆಚ್.ಗಂಗಾಧರ್ ತಿಳಿಸಿದರು.ಕಾನೂನು ಪ್ರಾಧಿಕಾರಿ,ವಕೀಲರ ಸಂಘ, ಸುಗಟೂರು ಗ್ರಾ.ಪಂ ವತಿಯಿಂದ ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಗ್ರಾ.ಪಂ ಸದಸ್ಯರು, ಅಂಗನವಾಡಿ,ಆಶಾ ಕಾರ್ಯಕರ್ತೆಯರಿಗಾಗಿ ಹಮ್ಮಿಕೊಂಡಿದ್ದ ಕಾನೂನು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಗ್ರಾ.ಪಂ ಚುನಾಯಿತಿ ಸದಸ್ಯರಿಗೆ ಸಾಮಾನ್ಯ ಕಾನೂನುಗಳ ಅರಿವು ಇದ್ದರೆ, ಸಮಾಜದಲ್ಲಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಬೇಸಿಗೆಯಲ್ಲಿ ಜನರಿಗೆ ನಿರಂತರ ಕೆಲಸ ಸ್ವಾವಲಂಬಿ ಬದುಕು ನಿರ್ಮಿಸಲು ದುಡಿಯೋಣ ಬಾ ಯೋಜನೆ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸುಬ್ರಮಣಿ ತಿಳಿಸಿದರು.ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ದುಡಿಯೋಣ ಬಾ ಎಂಬ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸುಬ್ರಮಣಿ ಮಾರ್ಚ್ 15 ರಿಂದ ಜೂನ್ 30 ರ ವರಿಗೆ ಅಭಿಯಾನ ಚಾಲನೆಯಲ್ಲಿ ಇದ್ದು, ಬೇಸಿಗೆ ಕಾಲದಲ್ಲಿ ರೈತಾಪಿ ವರ್ಗಕ್ಕೆ ಕೃಷಿ ಚಟುವಟಿಕೆ ಕಡಿಮೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಏ.9: ತಾಲೂಕಿನ ವೇಮಗಲ್ ನಲ್ಲಿ ನೆಲೆಸಿರುವ ಶ್ರೀ ಧರ್ಮರಾಯಸ್ವಾಮಿ ದ್ರೌಪತಿ ದೇವಿಯವರ ಕಲ್ಯಾಣ ಮಂಟಪ ಅಭಿವದ್ಧಿಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಶನಿವಾರ 5 ಲಕ್ಷ ರೂಪಾಯಿಗಳ ದೇಣಿಗೆ ನೀಡಿದರು.ದೇವಾಲಯ ನಿರ್ಮಾಣಕ್ಕೆ ಇದುವರೆವಿಗೂ 70 ಲಕ್ಷ ನೀಡಲಾಗಿತ್ತು. ಶನಿವಾರ ಸುಮಾರು 5 ಲಕ್ಷ ರೂಪಾಯಿಗಳನ್ನು ಸಚಿವ ವರ್ತೂರು ಪ್ರಕಾಶ್ ವಹ್ನಿಕುಲ ಕ್ಷತ್ರಿಯ ಸಮಾಜದ ಮುಖಂಡರುಗಳಿಗೆ ನೀಡಿ ದೇವಾಲಯ ನಿರ್ಮಾಣ ಮತ್ತು ಅಭಿವೃದ್ಧಿ ಕಾರ್ಯವನ್ನು ಸಂಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.ಸಭೆಯಲ್ಲಿ ಕ್ಷೇತ್ರದ ಮುಖಂಡರು ಆದ ಬೆಗ್ಲಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಮುಳಬಾಗಿಲು; 9: ಶ್ರೀರಾಮ ಶೋಭಾಯಾತ್ರೆಯಲ್ಲಿ ಕಲ್ಲು ತೂರಾಟ ಮಾಡಿ ಶಾಂತಿ ಹದಗೆಡಿಸಿರುವ ಕಿಡಿಗೇಡಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ವತಿಯಿಂದ ಎರಡೂ ಜನಾಂಗದ ಶಾಂತಿ ಸಭೆ ನಡೆಸಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಜಾಬ್ನಿಂದ ಪ್ರಾರಂಭವಾದ ಧರ್ಮ ಯುದ್ಧ ದಿನೇದಿನೇ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಒಂದಲ್ಲಾ ಒಂದು ವಿವಾದವಾಗುವ ಮುಖಾಂತರ ಜನಸಾಮಾನ್ಯರು ಶಾಂತಿ ಸುವ್ಯವಸ್ಥೆಯಿಲ್ಲದೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಬೇಸಿಗೆಯಲ್ಲಿ ಜನರಿಗೆ ನಿರಂತರ ಕೆಲಸ ಸ್ವಾವಲಂಬಿ ಬದುಕು ನಿರ್ಮಿಸಲು ದುಡಿಯೋಣ ಬಾ ಯೋಜನೆ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸುಬ್ರಮಣಿ ತಿಳಿಸಿದರು.ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ದುಡಿಯೋಣ ಬಾ ಎಂಬ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸುಬ್ರಮಣಿ ಮಾರ್ಚ್ 15 ರಿಂದ ಜೂನ್ 30 ರ ವರಿಗೆ ಅಭಿಯಾನ ಚಾಲನೆಯಲ್ಲಿ ಇದ್ದು, ಬೇಸಿಗೆ ಕಾಲದಲ್ಲಿ ರೈತಾಪಿ ವರ್ಗಕ್ಕೆ ಕೃಷಿ ಚಟುವಟಿಕೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಕ್ಷೇತ್ರದ ಅಭಿವೃದ್ದಿಯೇ ನನ್ನ ಮೂಲ ಮಂತ್ರ, ನನಗೆ ಮತ ಹಾಕಿದ ಜನತೆಯ ಅಭಿವೃದ್ದಿಯೇ ನನ್ನ ಗುರಿ ಎಂದು ಕೆ.ಆರ್.ರಮೇಶ್ಕುಮಾರ್ ಹೇಳಿದರು.ನೆಲವಂಕಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ವಿವಿಧ ಕಾಮಾಗಾರಿಗಳನ್ನು ಗುರುವಾರ ಉದ್ಗಾಟಿಸಿ, ವೀಕ್ಷಿಸಿ ಮಾತನಾಡಿದರು.ಜನತೆ ನನ್ನ ಮೇಲಿನ ಪ್ರೀತಿ ವಿಶ್ವಾಸಕ್ಕೆ ಮತ ಹಾಕಿ ನನ್ನನ್ನು ಗೆಲ್ಲಿಸಿಕೊಟ್ಟಿದ್ದಾರೆ ಅದಕ್ಕಾಗಿ ಇಂದು ನಾನು ಅವರ ಋಣ ತೀರಿಸುವ ಉದ್ದೇಶದಿಂದ ಕ್ಷೇತ್ರದಾದ್ಯಂತ ಬಡವರಿಗೆ ಮನೆಗಳ ನಿರ್ಮಾಣ, ಶುದ್ದ ಕುಡಿಯುವ ನೀರಿನ ಸೌಲಭ್ಯ, ಸುಸಜ್ಜಿತ ರಸ್ತೆಗಳು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಶ್ರೀನಿವಾಸಪುರ ಶಾಖೆಯ ಶೃಂಗೇರಿ ಶಂಕರಮಠದಲ್ಲಿ ಗರುವಾರ ಜಗದ್ಗುರುಗಳಾದ ಶ್ರೀಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿ 72ನೇ ವರ್ಧಂತಿ ಮಹೋತ್ಸವವದ ಅಂಗವಾಗಿ ಶಂಕರಾಚಾರ್ಯರ ಮೂಲ ಮೂರ್ತಿಗೆ ಏಕವಾರ ರುದ್ರಾಭಿಷೇಕ, ಮಂಗಳಸತ್ಯಮೂರ್ತಿ,ಆಶಾರವಿಕುಮಾರ್ ತಂಡದವತಿಯಿಂದ ಸಹಸ್ರನಾಮ ಕುಂಕುಮಾರ್ಚನೆ ಮಹಾಮಂಗಳಾರತಿ ನಡೆಯಿತು.ಶಂಕರಮಠದ ನಿರ್ದೇಶಕರಾದ ಶ್ರೀನಿವಾಸ್,ಮಂಜುನಾಥ್,ಅರ್ಚಕ ಸುಬ್ರಮಣ್ಯ,ಕೃಷ್ಣ,ಕುರುಮಾಕಲಪಲ್ಲಿ ಪ್ರಕಾಶ್,ರಾಘವೇಂದ್ರ,ನಾಗೇಂದ್ರ ಹಾಗು ಇತರರು ಇದ್ದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 2 : ಗೌನಿಪಲ್ಲಿ ಗ್ರಾ.ಪಂ ಚುನಾವಣೆಗೆ ಸಂಬಂದಿಸಿದಂತೆ ಗುರುವಾರ ಅಧ್ಯಕ್ಷ ಗಾದೆಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಜೆಡಿಎಸ್ನ ಶೇಷಾದ್ರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಗೆ ಸಂಬಂದಿಸಿದಂತೆ ಒಟ್ಟು 23 ಸ್ಥಾನಗಳ ಪೈಕಿ ಜೆಡಿಎಸ್ ಪರ 14 ಸದಸ್ಯರು, 9 ಕಾಂಗ್ರೆಸ್ ಪರ ಸದಸ್ಯರು ಇದ್ದು, ಅದರಲ್ಲಿ ಜೆಡಿಎಸ್ ಪರ ಶೇಷಾದ್ರಿ, ಕಾಂಗ್ರೆಸ್ ಪರ ಕೆ.ಎಂ ಮುನಿರಾಜು ನಾಮಪತ್ರ ಸಲ್ಲಿಸಿದ್ದರು. ಶೇಷಾದ್ರಿ 14 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆಂದು ಚುನಾವಣಾ ಅಧಿಕಾರಿ ಶೀಗಪಲ್ಲಿ ನಾರಾಯಣಸ್ವಾಮಿ ತಿಳಿಸಿದರು. […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಏ.7: ಶಾಲೆಯ ರಜೆಯಲ್ಲಿ ಮಕ್ಕಳು ಕಾಲಹರಣ ಮಾಡದೆ ಬೇಸಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ವೈವಿಧ್ಯಮಯ ಕಲಾಕೌಶಲ್ಯವನ್ನು ಬೆಳೆಸಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾರವರು ತಿಳಿಸಿದರು.ನಗರದ ಪಿ.ಸಿ ಬಡಾವಣೆಯ ರತ್ನಮಾಲಾ ಮಹಿಳಾ ಮಂಡಳಿ ವತಿಯಿಂದ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರವನ್ನು ಜ್ಯೋತಿ ಬೆಳಗಿಸುವ ಮೂಲಕ ಅವರು ಉದ್ಘಾಟಿಸಿ ಮಾತನಾಡುತ್ತಿದ್ದರು.ಗ್ರಾಮೀಣ ಪ್ರದೇಶದಲ್ಲಿ ಮಕ್ಕಳು ಆಟವಾಡಲು ಹೊಸ ಕಲೆಯನ್ನು ಕಲಿಯಲು ಬಹಳಷ್ಟು ಅವಕಾಶಗಳಿವೆ, ಆದರೆ ನಗರ ಪ್ರದೇಶದಲ್ಲಿನ ಮಕ್ಕಳು […]