
ಶ್ರೀನಿವಾಸಪುರ : ಸಭೆಯಲ್ಲಿ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಭಾಗವಹಿಸಿದ್ದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಜನ ಸಾಮಾನ್ಯರಿಗೆ ಎದುರಾಗುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕೋಲಾರ ಜಿಲ್ಲಾ ಎಸ್ ಪಿ ಬಿ ನಿಖಿಲ್ ರವರು ತಿಳಿಸಿದರು.ತಾಲೂಕಿನ ಗೌನಿಪಲ್ಲಿ ಗ್ರಾಮದ ಎಸ್ಎಲ್ವಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆಯನ್ನು ಉದ್ಗಾಟಿಸಿ ಮಾತನಾಡಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳಲ್ಲಿ ಹಾಗೂ ಮನೆಗಳ […]

ಶ್ರೀನಿವಾಸಪುರ:ಪುರಸಭಾ ಕಚೇರಿಯ ಸಭಾಂಗಣದಲ್ಲಿಂದು ಪುರಸಭಾ ಅಧ್ಯಕ್ಷರಾದ ಬಿ.ಆರ್. ಭಾಸ್ಕರ್ ರವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು. ಜಿಲ್ಲಾ ವಿಪತ್ತು ಉಪಶಮನ ನಿಧಿಯಡಿ ಪುರಸಭೆಗೆ ಹಂಚಿಕೆಯಾಗಿರುವ ರೂ.50.00 ಲಕ್ಷಗಳ ಅನುದಾನಕ್ಕೆ ಸಿದ್ಧಪಡಿಸಿರುವ ಕ್ರಿಯಾ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿವಿಧ ಅನುದಾನದಡಿ ಸ್ವೀಕೃತಗೊಂಡ ಏಕಮಾತ್ರ ಟೆಂಡರ್ ಗಳನ್ನು ಸಭೆಯಲ್ಲಿ ಅನುಮೋದಿಸಲಾಯಿತು. ಇದೇ ಸಂದರ್ಭದಲ್ಲಿ ಪುರಸಭೆಯ ನೂತನ ನಾಮನಿರ್ದೇಶನ ಸದಸ್ಯರಾದ ಗಂಗಾಧರ್, ಶಫೀವುಲ್ಲಾ, ನರಸಿಂಹಮೂರ್ತಿ, ಹೇಮಂತ್ ಕುಮಾರ್, ಶಿವರಾಜ್ ರವರುಗಳನ್ನು ಸ್ವಾಗತಿಸಿ, ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಉಪಾಧ್ಯಕ್ಷರಾದ […]

ಕೋಲಾರ : ಸರ್ಕಾರಿ ದತ್ತು ಸಂಸ್ಥೆಯು 0-6 ವರ್ಷದೊಳಗಿನ ಕುಟುಂಬದ ಪ್ರೀತಿ ವಂಚಿತ, ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳ ಪುನರ್ವಸತಿಗೆ ನೆರವಾಗುವ ಒಂದು ಸೂಕ್ತ ಸಂಸ್ಥೆಯಾಗಿದೆಯೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಿಷನ್ ವಾತ್ಸಲ್ಯ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ವತಿಯಿಂದ ಹಮ್ಮಿಕೊಂಡಿದ್ದ, ಇಲಾಖೆಯ ವಿವಿಧ ಯೋಜನೆಗಳ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, […]

ಶ್ರೀನಿವಾಸಪುರ : ಕನ್ನಡಬಾಷೆಯ ಬಗ್ಗೆ ಬಾಷಾಭಿಮಾನವಿರಲಿ ಆದರೆ ದುರಾಭಿಮಾನಬೇಡ ದೀಪದಿಂದ ದೀಪ ಬೆಳಗುವಂತೆ ಕನ್ನಡ ಭಾಷೆ ಪ್ರಪಂಚದಾದ್ಯಂತ ಪಸರಿಸಲಿ ಕನ್ನಡ ಭಾಷೆ ಶ್ರೀಮಂತವಾಗಿದ್ದು ಇದನ್ನು ಉಳಿಸಿ ಬೆಳಸುವ ಹೊಣಗಾರಿಕೆ ನಮ್ಮಲ್ಲೆರ ಮೇಲಿದೆ ಎಂದು ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ಹೇಳಿದರು.ತಾಲೂಕಿನ ರೋಣುರು ಕ್ರಾಸ್ನ ವಿಐಪಿ ಶಾಲೆಯಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕನ್ನಡ ಭಾಷೆಯು ಮನೆ ಮಾತು ಆಗಬೇಕು. ಬೇರೆ ಬಾಷೆಯೊಂದಿಗೆ ಅಭಿಮಾನ ಇರಬೇಕು, ಕನ್ನಡ ಬಾಷೆಯ ಬಗ್ಗೆ ಹೆಚ್ಚು ಅಭಿಮಾನ ಇರಬೇಕು. ಪ್ರತಿ ದಿನ […]

ಶ್ರೀನಿವಾಸಪುರ : ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗಾಗಿ ನಾನು ಶ್ರಮಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಹಂತ ಹಂತವಾಗಿ ಅಭಿವೃದ್ದಿಪಡಿಸಲಾಗುವುದು. ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಕಾನೂನು ಚೌಕಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲಮಾಡಲಾಗುವುದು ಎಂದು ಪಿಡಿಒ ಕೆ.ಪಿ.ಶ್ರೀನಿವಾಸರೆಡ್ಡಿ ಹೇಳಿದರು.ತಾಲೂಕಿನ ಯಲ್ದೂರು ಗ್ರಾಮದ ಗ್ರಾಮಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಗ್ರಾಮಸಭೆಯಲ್ಲಿ ಮತನಾಡಿದರು.ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಲ್ಲಿ ಬೀದಿ ದೀಪಗಳಿಗೆ ಬಲ್ಬುಗಳು ಇಲ್ಲದೆ ಇರುವ ಕಂಬಗಳನ್ನು ಪರಿಶೀಲಿಸಿ ಬಲ್ಬುಗಳನ್ನು ಹಾಕಿಸಲಾಗುವುದು. ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಹಳ್ಳಿಗಳಲ್ಲಿ ನೀರಿನ ಪೈಪ್ ಲೈನ್ ಹೊಡೆದು […]

ಶ್ರೀನಿವಾಸಪುರ : ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅಧ್ಯಯನ ನಡೆಸಿ ಅರಿವು ಮೂಡಿಸಿಕೊಂಡು ಸಾರ್ವಜನಿಕರಿಗೂ ಸಹ ಕಾನೂನಿನ ಬಗ್ಗೆ ತಿಳಿ ಹೇಳಬೇಕು. ಗ್ರಾಮೀಣ ಭಾಗದಲ್ಲಿ ಅಕ್ಷರಸ್ಥರು ಕಡಿಮೆ ಇರುವುದರಿಂದ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಕಾಯ್ದೆಯ ಬಗ್ಗೆ ಅರಿತು ಸುತ್ತಲಿನ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ತಾಲೂಕು ಪ್ರಧಾನ ಸಿವಿಲ್ ನ್ಯಾಯಾಧೀಶ ಹೆಚ್.ಆರ್.ಸಚಿನ್ ಹೇಳಿದರು.ಪಟ್ಟಣ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ತಾಲೂಕು ಕಾನೂನು ಸೇವ ಸಮತಿವತಿಯಿಂದ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ […]

ಶ್ರೀನಿವಾಸಪುರ : ಪಟ್ಟಣದ ನೌಕರರ ಭವನದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಎಂ.ಬೈರೇಗೌಡ ಸಲ್ಲಿಸಿದರು. ನಾಮ ಪತ್ರ ಸಲ್ಲಿಸುವ ಕೊನೆಯ ದಿನವಾದ ಗುರುವಾರ ನಾಮಪತ್ರವನ್ನ ಚುನಾವಣಾಧಿಕಾರಿ ಐಮಾರೆಡ್ಡಿರವರಿಗೆ ಸಲ್ಲಿಸಿದರು.ಅಧ್ಯಕ್ಷ ಸ್ಥಾನ ಆಕಾಂಕ್ಷಿ ಎಂ.ಬೈರೇಗೌಡ ಮಾತನಾಡುತ್ತಾ ಈಗಾಗಲೇ ವಿವಿಧ ಇಲಾಖೆಗಳಿಂದ ಚುನಾವಣೆಯಲ್ಲಿ 32 ನಿರ್ದೆಶಕರು ವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ 3 ಮಂದಿ ಆಕಾಂಕ್ಷಿಗಳಿದ್ದೇವೆ ಇವರಲ್ಲಿ ನಾನೂ ಒಬ್ಬನಾಗಿದ್ದೇನೆ ನನಗೆ ಒಮ್ಮೆ ಅವಕಾಶ ನೀಡಿ ತಾಲ್ಲೂಕಿನ ನೌಕರರ ಸಮಸ್ಯೆಗಳಿಗೆ ದ್ವನಿಯಾಗಿ ಸಂಘದ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದರು.ಎಲ್ಲಾ ನಿರ್ದೇಶಕರು ನನ್ನ ಅಧ್ಯಕ್ಷನಾಗಿ […]

ಕೆ.ಎಸ್.ಗಣೇಶ್ಕೋಲಾರ: ಬಂಗಾರಪೇಟೆ ತಾಲೂಕಿನಲ್ಲಿ 6 ಎಕರೆ 9 ಗುಂಟೆ ಬಿ ಖರಾಬ್ ಜಮೀನನ್ನು ಕಾನಿಡೆಂಟ್ ಚಾಂಪಿಯನ್ ರೀಫ್ ಗಾಲ್ ಸಂಸ್ಥೆಗೆ ಮಂಜೂರು ಮಾಡುವ ಹಾಗೂ ಅನಿಗಾನಹಳ್ಳಿ ಗುಂಡು ತೋಪು ಜಮೀನನ್ನು ಸಾರ್ವಜನಿಕ ರಸ್ತೆಗಾಗಿ ಕಾಯ್ದಿರಿಸಲು ಕೋರಿರುವ ಕುರಿತು ವಿವರವಾದ ವರದಿ ಹಾಗೂ ಕೈಗೊಂಡ ಕ್ರಮದ ಮಾಹಿತಿಯನ್ನು ಕೂಡಲೇ ಒದಗಿಸುವಂತೆ ಜಿಲ್ಲಾಕಾರಿಗಳನ್ನು ಕಂದಾಯ ಇಲಾಖೆ ಕೋರಿದೆ.ಸರಕಾರದ ಅೀನ ಕಾರ್ಯದರ್ಶಿ ಮಹಾಂತಯ್ಯ ಎಸ್ ಹೊಸಮಠ ಈ ಕುರಿತು ಅ.21 ರಂದು ಜಿಲ್ಲಾಕಾರಿಗಳಿಗೆ ಪತ್ರ ಬರೆದು ವಿವರವಾದ ಪ್ರಸ್ತಾವನೆ ವರದಿ ಹಾಗೂ […]

ಕೋಲಾರ:- ಮಕ್ಕಳಿಗೆ ಪಠ್ಯದ ಜತೆಗೆ ಕ್ರೀಡೆ,ಸಾಂಸ್ಕೃತಿಕ ಚಟುವಟಿಕೆಗಳ ಅಗತ್ಯವಿದ್ದು, ಅವರಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.ಜಿಲ್ಲಾಡಳಿತ,ಜಿಪಂ, ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಬುಧವಾರ ನಗರದ ಅಂಜುಮಾನ್ ಅಲಮಿನ್ ಶಾಲಾ ಆವರಣದಲ್ಲಿ ನಡೆದ ೨೦೨೪-೨೫ನೇ ಸಾಲಿನ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ವರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಆಧುನಿಕತೆ ಬೆಳೆದಂತೆ ಮೊಬೈಲ್, ದೂರದರ್ಶನದ ದಾಳಿಯಿಂದ ನಶಿಸಿ ಹೋಗುತ್ತಿರುವ ಗ್ರಾಮೀಣ ಜಾನಪದ […]