ಶ್ರೀನಿವಾಸಪುರ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಬಾಲಕೀಯರ ಕಾಲೇಜು ವತಿಯಿಂದ ಶನಿವಾರ ತಾಲೂಕು ಆರೋಗ್ಯ ಕೇಂದ್ರ ವತಿಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ತಾಲೂಕಿನಲ್ಲಿ 16 ಸಾವಿರ ಮೇಲ್ಪಟ್ಟು ಮಕ್ಕಳಿಗೆ ಇದ್ದು, 4 ದಿನಗಳ ಕಾಲ ಪಲ್ಸ್ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು 0 ಯಿಂದ 5 ವರ್ಷ ಮಗುವಿಗೆ ಎರಡು ಹನಿ ಲಸಿಕೆಯನ್ನು ಹಾಕುವುದರ ಮೂಲಕ ಯಶಸ್ವಿಗೊಳಿಸಲು ಈಗಾಗಲೇ ಟಾಸ್ಕ್ ಫೋರ್ಸ್ನ ಪದಾಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಈ […]
ಶ್ರೀನಿವಾಸಪುರ : ಪಟ್ಟಣದಲ್ಲಿ ರೋಗ ರುಜನಿಗಳು ಹರಡದಂತೆ ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಪೌರರ ಆರೋಗ್ಯವನ್ನು ಕಾಪಾಡಲು ಒಂದು ರೀತಿಯಲ್ಲಿ ವೈದ್ಯಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ಹೇಳುತ್ತಾ, ಪಟ್ಟಣದ ಸ್ವಚ್ಚತೆಯಲ್ಲಿ ಪೌರಕಾರ್ಮಿಕರ ಕಾರ್ಯ ಬಹು ಮುಖ್ಯವಾದದು ಎಂದು ಪುರಸಭೆ ಮುಖ್ಯಾಧಿಕಾರಿ ನಾಗರಾಜ್. ವಿ ಹೇಳಿದರು.ಪಟ್ಟಣ ಪುರರಸಭೆವತಿಯಿಂದ ಶನಿವಾರ ಸಿ&ಡಿ ತ್ಯಾಜ್ಯ ವಿಲೇವಾರಿ ಅಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.ಪಟ್ಟಣದಲ್ಲಿ ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಅದಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪುರಸಭೆ ವ್ಯಾಪ್ತಿಯ […]
ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಯದರೂರು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಅಡುಗೆ ಕೊಠಡಿ ಅತ್ಯಂತ ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಅನಾಹುತ ಸಂಭವಿಸುವ ಆತಂಕ ಇದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಎಚ್ಚರಿಕೆ ನೀಡಿದೆ. ಅಡುಗೆ ಕೊಠಡಿಯ ಮೇಲ್ಛಾವಣಿಯಿಂದ ಸಿಮೆಂಟ್ ತುಂಡುಗಳು ಉದುರುತ್ತಿದ್ದು, ಮಕ್ಕಳ ಹಾಗೂ ಅಡುಗೆ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಿರುವ ಬಗ್ಗೆ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿ ಸದಸ್ಯ ಶಬ್ಬೀರ್ ಅಹ್ಮದ್ ಅವರು ಆಯೋಗಕ್ಕೆ […]
ಶ್ರೀನಿವಾಸಪುರ : ಪೊಲೀಸ್ ಇಲಾಖೆ ಪಕ್ಷತೀತವಾಗಿ ಕಾರ್ಯನಿರ್ವಹಿಸಬೇಕು. ಯಾರದೂ ಒತ್ತಡಕ್ಕೆ ಮಣಿದು ಇಲ್ಲಸಲ್ಲದ ಕೇಸು ದಾಖಲಿಸುವುದು ಸರಿಯಲ್ಲ ಎಂದು ಕೆಪಿಸಿಸಿ ಸದಸ್ಯ ಸಂಜಯ್ರೆಡ್ಡಿ ಹೇಳಿದರು.ತಾಲೂಕಿನ ಗೌನಿಪಲ್ಲಿ ಪೊಲೀಸ್ಠಾಣೆಯ ಮುಂಭಾಗದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸುತ್ತಿರುವ ಪೊಲೀಸ್ರ ವಿರುದ್ಧ ಧರಣಿ ನಡೆಸಿ ಮಾತನಾಡಿದರು. ಇತ್ತೀಚಿಗೆ ಗೌನಿಪಲ್ಲಿ ಪೊಲೀಸ್ ಠಾಣಾ ಮರಸನಪಲ್ಲಿ ಗ್ರಾಮದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಹೊಡೆದ ಜೆಡಿಎಸ್ ಪಕ್ಷದವರು ಪೊಲೀಸರ ಮೇಲೆ ಒತ್ತಡ ತಂದು ನಮ್ಮ […]
ಶ್ರೀನಿವಾಸಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ವತಿಯಿಂದ ತಾಲೂಕಿನ ರಾಯಲ್ಪಾಡ್ ಗ್ರಾಮದ ಕೆನರಾ ಬ್ಯಾಂಕ್ ಮುಂಭಾಗ ಮಂಗ:ವಾರ ರಾಯಲ್ಪಾಡು ವಲಯಕ್ಕೆ ಸಂಬಂದಿಸಿದಂತೆ ಶ್ರೀ ಲಕ್ಷ್ಮಿ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಬಿ.ವಿ.ಶಿವಾರೆಡ್ಡಿ ಯವರು ಉದ್ಘಾಟಕರ ಮಾತನ್ನ ಮಾತನಾಡುತ್ತ ಕ್ಷೇತ್ರ ದ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಬಗ್ಗೆ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಕೋಲಾರ ಜಿಲ್ಲೆಯ ಜಿಲ್ಲಾ ನಿರ್ದೇಶಕ ಶ್ರೀ ಶಿವಾನಂದ ಆಚಾರ್ಯ ಸರ್ […]
ಶ್ರೀನಿವಾಸಪುರ : ಪಟ್ಟಣದ ಎಂಜಿ ರಸ್ತೆಯಲ್ಲಿ ನಡೆಯುತ್ತಿರುವ ಅವರೇ ಕಾಯಿ ವಹಿವಾಟನ್ನು ಕೃಷಿ ಉತ್ಪನ ಮಾರುಕಟ್ಟೆಗೆ ಸ್ಥಳಾಂತರಿಸಿ ಇಲ್ಲವೇ ಸೂಕ್ತವಾದ ಜಾಗವನ್ನು ಗುರುತಿಸಿ ರೈತರಿಗೆ ಆಗುತ್ತಿರುವ ಹರಾಜು ಮೋಸ ಹಾಗೂ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಮುಕ್ತಿ ನೀಡಬೇಕೆಂದು ರೈತ ಸಂಘದ ರಾಜ್ಯಾಧ್ಯಕ್ಷ ಕೆ. ನಾರಾಯಣಗೌಡ ಒತ್ತಾಯಿಸಿದರು. ಟುಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಬುಧವಾರ ಅವರೇ ಕಾಯಿ ಸಮೇತ ಉಪ.ತಹಸೀಲ್ದಾರ ನಾರಾಯಣಸ್ವಾಮಿ ರವರಿಗೆ ಮನವಿ ನೀಡಿ ಮಾತನಾಡಿದರು. ಒಂದು ವಾರದೊಳಗೆ ಅವರೇ ಕಾಯಿ ವಹಿವಾಟನ್ನು ಎ.ಪಿ.ಎಂ.ಸಿಗೆ ಸ್ಥಳಾಂತರ ಮಾಡದೇ […]
ಕೋಲಾರ: ಭ್ರಷ್ಟಾಚಾರದಿಂದ ಭಾರತವು ಅಭಿವೃದ್ಧಿಯಲ್ಲಿ ಸೊರಗುತ್ತಿದೆ. ಅಧಿಕಾರಿಗಳು ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬಾರದಂತೆ ಕೆಲಸ ನಿರ್ವಹಿಸಬೇಕೆಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ. ವೀರಪ್ಪ ಅವರು ಅಭಿಪ್ರಾಯ ಪಟ್ಟರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಉಪಲೋಕಾಯುಕ್ತರಿಂದ ಸಾರ್ವಜನಿಕ ದೂರು ವಿಚಾರಣೆ ಹಾಗೂ ಬಾಕಿ ದೂರು ವಿಲೇವಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಭ್ರಷ್ಟ ವ್ಯವಸ್ಥೆ ಹಾಗೂ ಅಧಿಕಾರಿಗಳ ವಿಳಂಬ ಧೋರಣೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಕಾಲಮಿತಿಯಲ್ಲಿ ಸಾರ್ವಜನಿಕರು ಲೋಕಾಯುಕ್ತರಿಗೆ ನೀಡಲಾದ ದೂರುಗಳ ತ್ವರಿತ […]
ಶ್ರೀನಿವಾಸಪುರ ( www.vknews.in ): ಸರ್ಕಾರಿ ಶಾಲೆಗಳ ಜಮೀನುಗಳನ್ನು ಉಳಿಸುವಲ್ಲಿ ಶಿಕ್ಷಕರು ಸಕ್ರಿಯವಾಗಿ ಕ್ರಮಕೈಗೊಳ್ಳಬೇಕು. ಸರ್ಕಾರಿ ಶಾಲೆಗಳ ಜಮೀನುಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ (ಡಿಡಿಪಿಐ) ಅಲ್ಮಾಸ್ ಫರ್ವೀನ್ತಾಜ್ ಅವರು ಸೂಚಿಸಿದರು. ಪಟ್ಟಣದ ಬಿಆರ್ಸಿ ಕಚೇರಿಯಲ್ಲಿ ಮಂಗಳವಾರ ಓದು ಕರ್ನಾಟಕ ನೈತಿಕ ಗಣಿತ, ಎಲ್ ಬಿ ಎಂ ಹಾಗೂ ಮೌಲ್ಯ ಶಿಕ್ಷಣ ವಿಷಯಗಳ ಕುರಿತು ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. […]
ಶ್ರೀನಿವಾಸಪುರ : ಶ್ರೀನಿವಾಸಪುರ –ಮುಳಬಾಗಿಲು ಮುಖ್ಯ ರಸ್ತೆಯ ಯದರೂರು ಸಮೀಪ ವೀಲಿಂಗ್ ಮಾಡುತ್ತಿದ್ದ ಯುವಕರನ್ನು ಶ್ರೀನಿವಾಸಪುರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಯದರೂರು ಸಮೀಪ ಯುವಕರ ಗುಂಪೊಂದು ವೀಲಿಂಗ್ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಈ ಕುರಿತು ಮಾಹಿತಿ ಪಡೆದ ಶ್ರೀನಿವಾಸಪುರ ಠಾಣೆಯ ಪಿಎಸ್ಐ ಹೆಚ್. ಜಯರಾಮ್ ಅವರ ಮಾರ್ಗದರ್ಶನದಲ್ಲಿ ಎಎಸ್ಐ ಮುನಿಗುರಪ್ಪ ಹಾಗೂ ಸಿಬ್ಬಂದಿ ಟಿ.ಎ. ನಾಗರಾಜ್, ಎಂ. ಆನಂದ್ ಕುಮಾರ್, ಸಂತೋಷ್ ಕುಮಾರ್, ರಮೇಶ್, ಮುರುಳಿ, ರಾಜೇಶ್ ಮತ್ತು ಪತ್ರಿಬಸಪ್ಪ ಅವರು ಕಾರ್ಯಾಚರಣೆ […]

