
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪರಿಹಾರ ಚೆಕ್ ಪಡೆದ ಫಲಾನುಭವಿಗಳು ಕಡ್ಡಾಯವಾಗಿ ರಾಸುಗಳನ್ನು ಖರೀದಿ ಮಾಡಬೇಕು. ನಿಗದಿತ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಉತ್ತಮ ಗುಣಮಟ್ಟದ ಹಾಲು ಪೂರೈಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಫಲಾನುಭವಿಗಳಿಗೆ ಮೃತಪಟ್ಟ ರಾಸುಗಳ ವಿಮಾ ಚೆಕ್ ವಿತರಿಸಿ ಮಾತನಾಡಿ, ಕೋಚಿಮುಲ್ ವತಿಯಿಂದ ಹಾಲು ಉತ್ಪಾದಕರಿಗೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಹಾಲು ಒಕ್ಕೂಟದ ಸಹಕಾರ ಸಂಘಗಳಿಗೆ ಹಾಲು ಹಾಕುವ ಫಲಾನುಭವಿಗಳಿಗೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದ 6 ಕೇಂದ್ರ ಸೇರಿದಂತೆ ಜಿಲ್ಲೆಯ ಒಟ್ಟು 15 ಕೇಂದ್ರಗಳಲ್ಲಿ ಆ.28ರ ಶನಿವಾರ ಮತ್ತು 29ರ ಭಾನುವಾರ ಎರಡು ದಿನ ಸಿಇಟಿ ಪರೀಕ್ಷೆ ಕೋವಿಡ್ ಮಾರ್ಗಸೂಚಿಯಡಿ ನಡೆಯಲಿದ್ದು, ಒಟ್ಟು 5016 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದ್ದಾರೆ.ಸಾಮಾನ್ಯ ಪ್ರವೇಶ ಪರೀಕ್ಷೆಯ ಮೊದಲ ದಿನ ಶನಿವಾರ ಬೆಳಗ್ಗೆ 10-30 ರಿಂದ 11-50ರವರೆಗೂ ಜೀವಶಾಸ್ತ್ರ, ಮಧ್ಯಾಹ್ನ 2-30 ರಿಂದ 3-50 ರವರೆಗೂ ಗಣಿತ ವಿಷಯದ ಪರೀಕ್ಷೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರ ತಾಲೂಕು ಮಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸಮೂಹ ಹಾಲು ಕರೆಯುವ ಯಂತ್ರಗಳ ಉದ್ಘಾಟನೆ ಹಾಗೂ ಹಾಲು ಉತ್ಪಾದಕರಿಗೆ ಉಚಿತ ಆಹಾರ ಕಿಟ್ಗಳನ್ನು ಒಕ್ಕೂಟದ ನಿರ್ದೇಶಕ ಡಿ.ವಿ. ಹರೀಶ್ರವರು ವಿತರಣೆ ಮಾಡಿದರು . ಈ ಸಂದರ್ಭದಲ್ಲಿ ಮಾತನಾಡುತ್ತಾ , ಘಟಕಕ್ಕೆ ಒಕ್ಕೂಟದಿಂದ ಸುಮಾರು ೩.೫ ಲಕ್ಷ ರೂಗಳನ್ನು ಮಂಜೂರು ಮಾಡಿಸಿದ್ದು ಇದರಲ್ಲಿ ಘಟಕದ ವೆಚ್ಚ ಮತ್ತು ಸಿವಿಲ್ ಕಾಮಗಾರಿಗಾಗಿ ಅನುಧಾನ ಇರುವುದಾಗಿ ತಿಳಿಸಿದರು . ಇದರ ಸದುಪಯೋಗವನ್ನು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ; ಪ್ರಪಂಚದಲ್ಲಿ ಪ್ರತಿಯೊಬ್ಬರು ನೇತ್ರದಾನ ಮಾಡಿದರೆ ಶಾಶ್ವತವಾಗಿ ಅಂಧತ್ವ ನಿರ್ಮೂಲನೆಯಾಗುತ್ತದೆ ಆದ್ದರಿಂದ ಪ್ರತಿಯೊಬ್ಬರು ಮರಣದ ನಂತರ ನೇತ್ರದಾನ ಮಾಡಿ ವಿಶ್ವಕ್ಕೆ ಬೆಳಕಾಗಬೇಕು. ನೇತ್ರದಾನ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಮ್.ನಾಗರಾಜ್ ಅವರು ತಿಳಿಸಿದರು.ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 36ನೇ ರಾಷ್ಟ್ರೀಯ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾನವ ವಿರೋಧಿ ನಿಲುವು ಹೊಂದಿರುವ ಯಾವುದೇ ಧರ್ಮವನ್ನು, ಧರ್ಮವೆಂದು ಕರೆಯಲು ಸಾಧ್ಯವಿಲ್ಲ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ಶಂಕರ ಮಠದ ಸಮೀಪ ರೂ.7 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಜಗದ್ಗುರು ಶ್ರೀ ಭಾರತೀತೀರ್ಥ ಸಭಾಭವನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದೂ ಧರ್ಮ ನಂಬಿಕೆಗಳ ಹುತ್ತ. ಕುಲಗಳ ಬೆಟ್ಟ. ಶಾಂತಿ ಬೋಧನೆ ಯಾವುದೇ ಧರ್ಮದ ಮುಖ್ಯ ಉದ್ದೇಶ ಎಂದು ಹೇಳಿದರು. ‘ನನಗೆ ಮುಖ್ಯ ಮಂತ್ರಿಯಾಗಬೇಕು, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತವನ್ನು ನಡೆಸುತ್ತಿದ್ದು, ರೈತರ ಹೆಸರಿನಲ್ಲಿ ಅಧಿಕಾರವನ್ನು ಸ್ವೀಕರಿಸಿ ರೈತರ ಮೇಲೆ ಕೃಷಿಗೆ ಬಳಸುವ ರಸಗೊಬ್ಬರ ಮತ್ತು ಕೀಟನಾಶಕ ಯಂತ್ರೋಪಕರಣಗಳ ಬೆಲೆಯನ್ನು ಹೆಚ್ಚಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ವಿರೋಧ ನೀತಿಗಳನ್ನು ಜಾರಿಗೆ ತಂದು ರೈತರಿಗೆ ತೊಂದರೆಯನ್ನು ಮಾಡುತ್ತೀದ್ದಾರೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ತಿಳಿಸಿದರು.ಪಟ್ಟಣದ ತಾಲ್ಲೂಕು ಕಛೇರಿಯ ಅವರಣದಲ್ಲಿ ಉಪತಹಶೀಲ್ದಾರ್ಗೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಉಪ್ಪರಪಲ್ಲಿ ಗ್ರಾಮದ ದಲಿತ ಬಡ ರೈತ ವೆಂಕಟಸ್ವಾಮಿ ಇವರ ಕುಟುಂಬದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನ ವಿವಾದದಲ್ಲಿ ದೌಜನ್ಯ ಮಾಡಿ ಗಾಯಪಡಿಸಿದ್ದು ಇದುವರಿಗೂ ಪೋಲೀಸ್ ಇಲಾಖೆ ಇವರ ಮೇಲೆ ಇಲ್ಲಿಯ ತನಕ ಕ್ರಮ ಕೈಗೊಂಡಿಲ್ಲ ಎಂದು ಅಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ಪಟ್ಟಣದ ತಾಲ್ಲೂಕು ಕಛೇರಿಯ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬಾಗವಹಿಸಿ ಮತನಾಡಿದ ದಲಿತ ಮುಖಂಡ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಕಾರ್ಮೋಡ ಕರಗುತ್ತಿದ್ದು, ಶಾಲೆಯತ್ತ ಖುಷಿಯಿಂದ ಬರುತ್ತಿರುವ ನೀವು ಜಾಗೃತಿ ವಹಿಸುವ ಮೂಲಕ ಕೋವಿಡ್ ಮುಕ್ತ ಜಿಲ್ಲೆ ನಿರ್ಮಾಣಕ್ಕೆ ಕೈಜೋಡಿಸಿ ಎಂದು ಕೋಲಾರ ರೋಟರಿ ಸೆಂಟ್ರಲ್ ಅಧ್ಯಕ್ಷ ಹಾಗೂ ಸಮಾಜಸೇವಕ ಸಿ.ಎಂ.ಆರ್.ಶ್ರೀನಾಥ್ ಕರೆ ನೀಡಿದರು.ಜಿಲ್ಲೆಯಾದ್ಯಂತ 9 ಮತ್ತು 10ನೇ ತರಗತಿಯ ಭೌತಿಕ ತರಗತಿಗಳು ಆರಂಭಗೊಂಡಿರುವ ಹಿನ್ನಲೆಯಲ್ಲಿ ರೋಟರಿ ಸೆಂಟ್ರಲ್ ಹಾಗೂ ಭಾರತ ಸೇವಾದಳ ವತಿಯಿಂದ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಸಿಹಿ ಹಾಗೂ ಗುಣಮಟ್ಟದ ಮಾಸ್ಕ್ ಕೊಡುಗೆಯಾಗಿ ನೀಡಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಪಾರ್ಥೇನಿಯಂ ಕಳೆಯ ಅರಿವು ಸಪ್ತಾಹ 16-22 ಅಗಸ್ಟ್ 2021 -ಸಾಮಥ್ರ್ಯ ವೃದ್ಧಿ ಕಾರ್ಯಕ್ರಮವನ್ನು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ಆನ್ಲೈನ್ ಮುಖಾಂತರ ದಿನಾಂಕ: 19.08.2021 ರಂದು ಹಮ್ಮಿಕೊಳ್ಳಲಾಗಿತ್ತು.ಸುಮಾರು 50ರ ದಶಕದಲ್ಲಿ ನಮ್ಮ ದೇಶದಲ್ಲಿರುವ ಹಸಿವು ಮತ್ತು ಅಪೌಷ್ಠಿಕತೆ ಹೋಗಲಾಡಿಸಲು ಸಾರ್ವಜನಿಕ ಕಾಯ್ದೆ 480ರ ಪ್ರಕಾರ ಭಾರತ ಮತ್ತು ಅಮೇರಿಕ ದೇಶಗಳ ನಡುವೆ ಒಪ್ಪಂದವಾಗಿ, ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡಾಗ, ನಮ್ಮ ದೇಶವನ್ನು ಪ್ರವೇಶಿಸಿದ ಕಳೆಯೇ ಪಾರ್ಥೇನಿಯಂ. ಇದರ ತವರೂರು ಮೆಕ್ಸಕೋ […]