
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ರೈತರು ಬಡವರು ಸ್ವಾಭಿಮಾನ ಜೀವನ ಕಟ್ಟುಕೊಳ್ಳಲು ತಾಲೂಕಿನಲ್ಲಿ ಡಿಸಿಸಿ ಬ್ಯಾಂಕಿನಿಂದ ಕೊಡುವ ಸಾಲ ರೈತರು ಅಗತ್ಯ ಸೌಲಭ್ಯಗಳಿಗೆ ಬಳಸಿಕೊಂಡು ಆರ್ಥಿಕ ಸಬಲರಾಗಬೇಕೆಂದು ಶಾಸಕ ಕೆ.ಆರ್. ರಮೇಶ್ಕುಮಾರ್ ತಿಳಿಸಿದ್ದಾರೆ.ಸೋಮಯಾಜಲಹಳ್ಳಿ ಎಸ್.ಎಫ್.ಸಿ.ಎಸ್ ಸೋಸೈಟಿ ಆವರಣದಲ್ಲಿ ಶ್ರೀನಿವಾಸಪುರ ಡಿಸಿಸಿ ಬ್ಯಾಂಕ್ನಿಂದ ರೈತರಿಗೆ ಆಯೋಜಿಸಿದ 1 ಕೋಟಿ ರೂ. ಶುನ್ಯ ಬಡ್ಡಿ ಸಾಲ ವಿತರಿಸಿ ಮಾತನಾಡಿದ ಅವರು ಬ್ಯಾಂಕ್ ಜನರ ಬ್ಯಾಂಕ್ ಆಗಿದೆ. ನಾವು ನೀಡುತ್ತಿರುವ ಈ ಸಾಲ ಸ್ತ್ರೀಶಕ್ತಿ ಸಂಘಗಳಿಗೆ ರೈತರಿಗೆ ಸೀಮಿತವಾಗದೆ ಗ್ರಾಮೀಣ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೇವಲ 11 ತಿಂಗಳು ಜಿಲ್ಲಾಧಿಕಾರಿಯಾಗಿ ಜಿಲ್ಲೆಯ ಜನರ ಧ್ವನಿಯಾಗಿ, ಕೋವಿಡ್ ನಿರ್ವಹಣೆಯಲ್ಲಿ ಯಶಸ್ವಿಯಾಗಿ ಕೆಲಸ ಮಾಡಿದ ಆತ್ಮತೃಪ್ತಿ ನನಗಿದೆ, ಜಿಲ್ಲೆಯ ಜನತೆ, ಅಧಿಕಾರಿಗಳು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ನೀಡಿದ ಸಹಕಾರಕ್ಕೆ ನಾನು ಋಣಿ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ನೌಕರರ ಸಂಘ, ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸಿ.ಸತ್ಯಭಾಮ, ಶಿವಲಿಂಗಯ್ಯ ದಂಪತಿಗಳಿಗೆ ನೀಡಿದ ಆತ್ಮೀಯ ಬೀಳ್ಕೊಡುಗೆಗೆ ಭಾವುಕವಾಗಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಕೋವಿಡ್ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶ್ರೀನಿವಾಸಪುರ – ಚಿಂತಾಮಣಿ ರಸ್ತೆಯ ಪಾತಪಲ್ಲಿ ಗ್ರಾಮದ ಸಮೀಪ ಮಂಗಳವಾರ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸೊಂದು ರಸ್ತೆ ಬದಿಯಲ್ಲಿನ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಿನ ಒಂದು ಕಡೆಯ ಚಕ್ರಗಳು ಕಳಚಿಬಿದು, ಬಸ್ಸು ಜಖಂಗೊಂಡಿದೆ.ಬಸ್ ಚಾಲಕ, ಎದುರಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಸವಾರನನ್ನು ಅಪಘಾತದಿಂದ ಪಾರುಮಾಡಲು ಪ್ರಯತ್ನಿಸಿದಾಗ ಈ ಘಟನೆ ನಡೆಯಿತಿ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ರಾಜ್ಯ ರಸ್ತೆ ಸಾರಿಗೆ ಸಂಸ್ಥೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಕೋಳಿ ಸಾಕಾಣಿಕೆಗೆ ಕೃಷಿ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ತಿಮ್ಮರಾಯಪ್ಪ ಆಗ್ರಹ ಪಡಿಸಿದರು.ಪಟ್ಟಣದಲ್ಲಿ ಮಂಗಳವಾರ, ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳಿದ ತಾಲ್ಲೂಕು ಕೋಳಿ ಸಾಕಾಣಿಕೆದಾರ ಬೀಳ್ಕೊಡುತೆ ಸಮಾರಂಭದಲ್ಲಿ ಮಾತನಾಡಿ, ಸರ್ಕಾರ ಈಗಾಗಲೇ ಪ್ರಕಟಿಸಿರುವಂತೆ ಒಂದು ಕೆಜಿ ಕೋಳಿಗೆ ರೂ.7.5 ಬೆಂಬಲ ಬೆಲೆ ನೀಡಬೇಕು. ಎಲ್ಲ ರೈತರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕೋಳಿ ಮರಿಗಳನ್ನು ಪೂರೈಕೆ ಮಾಡಬೇಕು. […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕು, ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಬಗಲಘಟ್ಟ ಬಿ.ವಿ. ಶ್ರೀನಿವಾಸರೆಡ್ಡಿ ಉಪಾಧ್ಯಕ್ಷರಾಗಿ ಶಿವಪುರ ಬಿ. ಗುರ್ರಪ್ಪ ಅವಿರೋದವಾಗಿ ಅಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ ಬಿ.ಆರ್. ಶಿವಶಂಕರ್ ತಿಳಿಸಿದ್ದಾರೆ.ತಾಲ್ಲೂಕು, ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ಆಡಳಿತ ಮಂಡಳಿಗೆ ಈಗಾಗಲೇ 13 ನಿರ್ದೇಶಕರು ಆಯ್ಕೆಯಾಗಿದ್ದಾರೆ. ಈ ಅಧ್ಯಕ್ಷ ಸ್ಥಾನಕ್ಕೆ ಮುದಿಮುಡಗು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಬಿ.ವಿ. ಶ್ರೀನಿವಾಸರೆಡ್ಡಿ ನಾಮಪತ್ರ ಸಲ್ಲಿಸಿದ್ದು. ಅದೇ ರೀತಿಯಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಠ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಂತ ಸೇವಾಲಾಲ್ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಶಿರಸ್ತೇದಾರ್ ಮನೋಹರ ಮಾನೆ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೊಮವಾರ ಏರ್ಪಡಿಸಿದ್ದ ಸಂತ ಸೇವಾಲಾಲ್ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಮಾನ್ಯ ದನಗಾಹಿ ಕುಟುಂಬದಲ್ಲಿ ಜನಿಸಿದ ಸೇವಾಲಾಲ್ ಅವರು ಮಾನವತಾವಾದಿಯಾಗಿದ್ದರು ಎಂದು ಹೇಳಿದರು.ಸೇವಾಲಾಲರು ನಿಸ್ವಾರ್ಥ ಭಾವನೆಯಿಂದ ಜನರನ್ನು ಸಂಘಟಿಸಿ, ಜನವಿರೋಧಿಗಳನ್ನು ಮಟ್ಟಹಾಕಿದರು. ತಮ್ಮ ಧೈರ್ಯ ಹಾಗೂ ಮಾನವೀಯ ಗುಣಗಳಿಂದ ಮನೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ತಾಲ್ಲೂಕಿನ ಮುದುವತ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ. ನಾಗೇಂದ್ರಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕೆ.ಮಂಜುಳ ಇಂದು ಮಾಜಿ ಸಚಿವ ಆರ್. ವರ್ತೂರು ಪ್ರಕಾಶ್ ರವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವರ್ತೂರು ಪ್ರಕಾಶ್, ಮುಖಂಡ ಬೆಗ್ಲಿ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್,ಅರುಣ್ ಪ್ರಸಾದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಆಂಜಿನಪ್ಪ, ಬಂಕ್ ಮಂಜು, ಲಕ್ಷ್ಮೀ ಸಾಗರ ಮುನಿರಾಜು, ಪಂಚಾಯಿತಿ ಅಭಿವೃದ್ಧಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ತಾಲ್ಲೂಕಿನ ದೊಡ್ಡ ಹಸಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಂಜುಳ ರಾಜೇಶ್ ಹಾಗೂ ಉಪಾಧ್ಯಕ್ಷರಾಗಿ ಕೆ. ನಾರಾಯಣಸ್ವಾಮಿ ಇಂದು ಮಾಜಿ ಸಚಿವ ಆರ್. ವರ್ತೂರು ಪ್ರಕಾಶ್ ರವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವರ್ತೂರು ಪ್ರಕಾಶ್, ಮುಖಂಡ ಬೆಗ್ಲಿ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್,ಅರುಣ್ ಪ್ರಸಾದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಆಂಜಿನಪ್ಪ, ಬಂಕ್ ಮಂಜು, ಎಪಿಎಂಸಿ ನಿದೇರ್ಶಕ ಅಪ್ಪಯ್ಯಪ್ಪ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರದ ನೂತನ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಭಾನುವಾರ ಮಧ್ಯಾಹ್ನ ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಂದ ಅಧಿಕಾರ ಸ್ವೀಕರಿಸಿದರು.ಈವರೆಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು ಇದೀಗ ಕೋಲಾರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡು ಆಗಮಿಸಿದ್ದು, ಭಾನುವಾರವೇ ಅಧಿಕಾರ ಸ್ವೀಕರಿಸಿದರು.ಅಧಿಕಾರ ಹಸ್ತಂತರಿಸಿದ ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಕೋಲಾರ ಜಿಲ್ಲೆಗೆ ಸ್ವಾಗತ ಕೋರಿ ಶುಭ ಹಾರೈಸಿದರು.ಸತ್ಯಭಾಮ ಅವರನ್ನು ಸರ್ಕಾರ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ.ಇದೇ […]