
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಡಿ.22: ನಗರದ ಪತ್ರಿಕಾ ವಿತರಕರಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿ.ಮುನಿರಾಜು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ವಿ ಗೋಪಿನಾಥ್ ರವರು ಇಂದು ಪತ್ರಕರ್ತರ ಭವನದಲ್ಲಿ ಜರ್ಕಿನ್ಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಸಾಗರ್, ಸದಸ್ಯರಾದ ಶ್ರೀನಿವಾಸಶೆಟ್ಟಿ, ಶ್ರೀನಿವಾಸಮೂರ್ತಿ, ಹರೀಶ್, ರಮೇಶ್, ಮಂಜುನಾಥ್, ಲಾಯರ್ ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಕಾಲೇಜು ಮೈದಾನದಲ್ಲಿ ಸ್ಥಾಪಿಸಲಾಗಿರುವ ಚುನಾವಣಾ ಸಾಮಗ್ರಿ ವಿತರಣಾ ಕೇಂದ್ರದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ನೇಮಿಸಲಾಗಿರುವ ಮತಗಟ್ಟೆ ಸಿಬ್ಬಂದಿ, ಚುನಾವಣಾ ಸಾಮಗ್ರಿ ಪಡೆದುಕೊಂಡರು. ಪಡೆದುಕೊಂಡ ಚುನಾವಣಾ ಸಾಮಗ್ರಿಗಳನ್ನು ಪ್ರತ್ಯೇಕವಾಗಿ ಕುಳಿತು ಪರಿಶೀಲನೆ ನಡೆಸಿದ ಬಳಿಕ, ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿದ್ದ ಭೋಜನ ಶಾಲೆಯಲ್ಲಿ ಊಟ ಮುಗಿಸಿಕೊಂಡು, ತಮಗಾಗಿ ಮೀಸಲಿಡಲಾಗಿದ್ದ ಬಸ್ಗಳಲ್ಲಿ ನಿಗದಿತ ಗ್ರಾಮಗಳ ಮತಗಟ್ಟೆಗಳಿಗೆ ತೆರಳಿದರು. ತಾಲ್ಲೂಕಿಲ್ಲಿ ಚುನಾವಣೆ ನಡೆಯಲಿರುವ 23 ಗ್ರಾಮ ಪಂಚಾಯಿತಿಗಳ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಎಪಿಎಂಸಿ ಮಾರುಕಟ್ಟೆ ವರ್ತಕರು ಸೋಮವಾರ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಎಪಿಎಂಸಿ ಮಾರುಕಟ್ಟೆ ಬಂದ್ಗೆ ಬೆಂಬಲ ವ್ಯಕ್ತಪಡಿಸಿದರು. ಬೆಳಿಗ್ಗೆ ಮಾರುಕಟ್ಟೆಗೆ ಆಗಮಿಸಿದ ವರ್ತಕರು, ಮಾರುಕಟ್ಟೆ ಪ್ರವೇಶ ದ್ವಾರದಲ್ಲಿ ಬೆಂಕಿ ಹಾಕಿ ಲಾರಿಗಳು ಮಾರುಕಟ್ಟೆ ಪ್ರವೇಶಿಸುವುದನ್ನು ತಡೆದರು. ಅನಂತರ ಕೇಂದ್ರ ಸರ್ಕಾರದ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆ ವಿರುದ್ಧ ಘೋಷಣೆ ಕೂಗಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನ ನಿರತ ವರ್ತಕರನ್ನು ಉದ್ದೇಶಿಸಿ ಟೊಮೆಟೊ ವರ್ತಕರ ಸಂಘದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಮಾಜಿ ಸಚಿವ ಆರ್.ವರ್ತೂರು ಪ್ರಕಾಶ್ ರವರ 55ನೇ ಹುಟ್ಟುಹಬ್ಬವನ್ನು ಜಿಲ್ಲಾ ಪಂಚಾಯಿತಿ ಸದಸ್ಯರಾದ ರೂಪಶ್ರೀ ಮಂಜುನಾಥ್ ಮನೆಯ ಆವರಣದಲ್ಲಿ ಹಣ್ಣಿನ ಸಸಿ ನೆಡುವ ಮೂಲಕ ಸರಳವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಬೆಗ್ಲಿ ಪ್ರಕಾಶ್, ಎಂ.ನಾರಾಯಣಸ್ವಾಮಿ, ಹಾಲಳ್ಳಿ ರಾಮಚಂದ್ರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ,ಎಸ್.ವೆಂಕಟೇಶ್, ಸದಸ್ಯೆ ರೋಪಶ್ರೀ ಮಂಜು, ನಗರಸಭೆ ಸದಸ್ಯ ಮಂಜುನಾಥ್ ಮಾಜಿ ಸದಸ್ಯರಾದ ಸಿ.ಸೋಮಶೇಖರ್, ವಿ.ಕೆ.ರಾಜೇಶ್, ಮುಖಂಡರಾದ ವಾಲ್ಮೀಕಿ ಮಂಜು, ಚಂದ್ರ ಪ್ರಕಾಶ್, ಮುಳ್ಳಹಳ್ಳಿ ಮಂಜುನಾಥ್, ಸೂಲೂರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸುದೀರ್ಘ ಸೇವೆಯ ನಂತರ ನಿವೃತ್ತರಾದ ನೌಕರರ ವಿಶ್ರಾಂತಿ ಜೀವನದಲ್ಲಿ ಅವರಿಗೆ ನೀಡುವ ಪಿಂಚಣಿಯಲ್ಲಿ ವ್ಯತ್ಯಾಸವಾಗದಂತೆ ಕ್ರಮವಹಿಸುವ ಅಗತ್ಯವಿದೆ, ಬ್ಯಾಂಕುಗಳಿಂದ ಆಗುತ್ತಿರುವ ತೊಂದರೆ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕಿ ಎನ್.ರುಕ್ಮಣಿದೇವಿ ತಿಳಿಸಿದರು.ನಗರದ ಡಿಐಸಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಖಜಾನೆ ವತಿಯಿಂದ ನಡೆದ ಪಿಂಚಣಿ ಅದಾಲತ್ನ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಿಂಚಣಿದಾರರ ಕುಂದುಕೊರತೆಗಳ ಕುರಿತು, ಬ್ಯಾಂಕ್ವತಿಯಿಂದ ಹೆಚ್ಚುವರಿ ಅಥವಾ ಕಡಿಮೆ ಪಾವತಿಸಿರುವುದು, ಮುಂತಾದ ನ್ಯೂನ್ಯತೆಗಳನ್ನು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಆಶಾ ಭಾವನೆಯನ್ನು ಇಟ್ಟಿಕೊಳ್ಳಬೇಕು ಸೋಲು ಗೆಲವು ದೈವಾದೀನ ಭಯಪಡದೇ ಧೈರ್ಯದಿಂದ ಚುನಾವಣೆಯನ್ನು ಎದುರಿಸಬೇಕೆಂದು ಸಂಸದ ಎಸ್.ಮುನಿಸ್ವಾಮಿ ಅಭ್ಯರ್ಥಿಗಳಿಗೆ ಧೈರ್ಯವನ್ನು ತುಂಬಿದರು.ಪಟ್ಟಣದ ಹೊರವಲಯದ ಖಾಸಗಿ ಶಾಲಾ ಅವರಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಹಾಗೂ ಪಕ್ಷದ ಸಂಘಟನೆಯ ಕುಂದು ಕೊರತೆಗಳ ಸಬೆಯಲ್ಲಿ ಭಾಗವಹಿಸಿ ಮಾತನಾಡಿದ ಎಸ್.ಮುನಿಸ್ವಾಮಿ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಚುನಾವಣಾ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸ್ತ್ರೀಶಕ್ತಿ ಸಂಘಗಳ ಸಬಲೀಕರಣದ ಜತೆ ಬ್ಯಾಂಕಿನ ಬಗ್ಗೆ ಮಹಿಳೆಯರಲ್ಲಿ ನಂಬಿಕೆ ಬಲಗೊಳಿಸುವ ಇ-ಶಕ್ತಿ ಯೋಜನೆ ಅನುಷ್ಟಾನದಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಇ-ಶಕ್ತಿಯೋಜನೆಯಡಿ ನೇಮಕಗೊಂಡಿರುವ ಪ್ರೇರಕರಿಗೆ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಎಚ್ಚರಿಕೆ ನೀಡಿದರು.ಶುಕ್ರವಾರ ಜಿಲ್ಲಾ ಸಹಕಾರಿ ಯೂನಿಯನ್ ಸಭಾಗಂಣದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ವತಿಯಿಂದ ನಡೆದ ಇ-ಶಕ್ತಿ ಯೋಜನೆಯ ಪ್ರೇರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಪ್ರೇರಕರು ಸೇವಾ ಮನೋಭಾವದಿಂದ ಕೆಲಸ ಮಾಡಬೇಕು, ಇ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಗುರುವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮತ್ತು ಸಿಬ್ಬಂದಿ ಭೇಟಿ ನೀಡಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಸಾಮಗ್ರಿ ವಿತರಣೆ, ಸ್ವೀಕರಣೆ ಹಾಗೂ ಮತ ಎಣಿಕೆ ಕೇಂದ್ರ ಸ್ಥಾಪಿಸಲು ಸ್ಥಳ ಪರಿಶೀಲನೆ ನಡೆಸಿದರು.’ಪಟ್ಟಣದಲ್ಲಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮತ ಎಣಿಕೆಗೆ ಸೂಕ್ತ ಸ್ಥಳವೆಂದು ಗುರುತಿಸಲಾಗಿದೆ. ಈ ಕಟ್ಟಡದಲ್ಲಿ 25 ಗ್ರಾಮ ಪಂಚಾಯಿತಿಗಳ ಮತಗಳನ್ನು ಎಣಿಸಲು ಅಗತ್ಯವಾದ ಕೊಠಡಿಗಳಿವೆ. ಮತ ಎಣಿಕೆ ನಡೆಯುವಾಗಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಹೃದಯ ಭಾಗವಾದ ಎಂಜಿ ರಸ್ತೆಯಲ್ಲಿ ಅವರೆ ಕಾಯಿ ಸಗಟು ವಹಿವಾಟು ನಡೆಸುವುದರಿಂದ ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.ಕಳೆದ ವರ್ಷ ಪಟ್ಟಣದಲ್ಲಿ ನಡೆಯುತ್ತಿದ್ದ ತರಕಾರಿ ಮಾರುಕಟ್ಟೆ ವಹಿವಾಟನ್ನು ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸಲಾಯಿತು. ಆದರೆ ಅವರೆ ಕಾಯಿ ಮಂಡಿ ಮಾಲೀಕರು ಪ್ರಭಾವಿ ರಾಜಕಾರಣಿಗಳಿಗೆ ಮೊರೆ ಹೋಗೆ, ಮುಂದಿನ ವರ್ಷದಿಂದ ಎಪಿಎಂಸಿ ಮಾರುಕಟ್ಟೆಗೆ ವಹಿವಾಟು ಸ್ಥಳಾಂತರಿಸುವುದಾಗಿ ತಿಳಿಸಿದ್ದರು. ಆದರೆ ಈಗ ಹೇಳಿದಂತೆ ನಡೆದುಕೊಳ್ಳದೆ ಮತ್ತೆ ಇಲ್ಲೇ ವಹಿವಾಟು ನಡೆಸುತ್ತಿದ್ದಾರೆ ಎಂದು […]