ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ; ತಾಲ್ಲೂಕಿನ ಕಲ್ಲೂರು ಗ್ರಾಮದ ಸಮೀಪ ರೂ.15 ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸಲಾಗುವುದು ಎಂದು ಹೈಕೋರ್ಟ್ ನ್ಯಾಯಾಧೀಶ ಬಿ.ವೀರಪ್ಪರೆಡ್ಡಿ ಹೇಳಿದರು.ಶನಿವಾರ ಪಟ್ಟಣದ ಹೊರವಲಯದ ಕಲ್ಲೂರು ಗ್ರಾಮದ ಸಮೀಪ ನಿರ್ಮಿಸಲಾಗುವ ನೂತನ ನ್ಯಾಯಾಲಯ ಕಟ್ಟಡದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣಕ್ಕೆ ರೂ.15 ಕೋಟಿ ಮಂಜೂರಾಗಿದೆ. ಸಧ್ಯದಲ್ಲಿಯೇ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.ನ್ಯಾಯಾಲಯದಲ್ಲಿರು ಹಳೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ವಕೀಲರು ಸಹಕರಿಸಬೇಕು. ಸಾರ್ವಜನಿಕರಲ್ಲಿ ನ್ಯಾಯಾಲಯದ ಬಗ್ಗೆ ಗೌರವ ಭಾವನೆಯಿದೆ. […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ತಾಲ್ಲೂಕಿನ ತಾಡಿಗೋಲ್ ಕ್ಲಾಸ್ನಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರನ್ನು ಥಳಿಸಿರುವ ಪುಂಡ ಪೋಕರಿಗಳ ವಿರುದ್ಧ ಪೊಲೀಡರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಆಗ್ರಹಪಡಿಸಿದರು . ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಈಚೆಗೆ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ನಡೆದ ಘರ್ಷಣೆಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು ಹಾಗೂ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿ ಮಾತನಾಡಿದರು . ಈ ಘಟನೆಯಲ್ಲಿ ಹಲ್ಲೆಗೆ ಒಳಗಾಗಿರುವ ವಿದ್ಯಾರ್ಥಿನಿಯರನ್ನು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ :- ಮುಂದಿನ ಪೀಳಿಗೆಯು ಆರೋಗ್ಯಕರವಾಗಿರಬೇಕಾದರೆ ಅಪೌಷ್ಟಿಕತೆಯ ಬಗ್ಗೆ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಅರಿವು ಮೂಡಿಸಿ , ಅಪೌಷ್ಟಿಕತೆಯನ್ನು ನಿರ್ಮೂಲನೆ ಮಾಡಿ ಆರೋಗ್ಯಕರ ತಾಯಿ ಮಗುವಿನ ಸಮಾಜ ನಿರ್ಮಿಸಲು ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್ . ಸೆಲ್ವಮಣಿ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ , ಸ್ಪಿರುಲಿನ್ ಫೌಂಡೇಶನ್ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ ಸೆಪ್ಟೆಂಬರ್ 9 : ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಹೆಣ್ಣು ಮಗಳ ಮೇಲೆ ಹಲ್ಲೆ ಮಾಡಿರುವವರ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ, ಅವರನ್ನು ಗಡಿ ಪಾರು ಮಾಡಿ, ದಲಿತ ಹೆಣ್ಣುಮಕ್ಕಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡುವಂತೆ ದಲಿತ ಸಂಘರ್ಷ ಸಮಿತಿಯ-ಕರ್ನಾಟಕ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಿದರು.ಸೆಪ್ಟೆಂಬರ್ 9ರಂದು ಬೆಳಿಗ್ಗೆ 8:30ಕ್ಕೆ ಚಿಂತಾಮಣಿ ಕಾಲೇಜಿಗೆ ಬಸ್ಸಿನಲ್ಲಿ ಹೊರಟಿದ್ದ ಹೆಣ್ಣು ಮಕ್ಕಳನ್ನು 50 ಮಂದಿ ಸವರ್ಣೀಯರ ಯುವರ ಕುಂಪು ಲೈಂಗಿಕ ಕಿರುಕುಳ ನೀಡಿ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಶಿಕ್ಷಣ ವಂಚಿತ ಮಕ್ಕಳನ್ನು ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ಕೊಡಿಸುವುದು ಪ್ರತಿಯೊಬ್ಬ ನಾಗರೀಕರ ಸಾಮಾಜಿಕ ಜವಾಬ್ದಾರಿಯಾಗಬೇಕೆಂದು ಕೋಲಾರ ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.ನಗರದ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮೀಣ ಗ್ರಂಥಾಲಯದಲ್ಲಿ ಭಾರತ ಸೇವಾದಳ ಜಿಲ್ಲಾ ಮತ್ತು ತಾಲೂಕು ಸಮಿತಿಗಳು ಹಾಗೂ ಕೋಲಾರ ರೋಟರಿ ಸೆಂಟ್ರಲ್ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ವಯೋಮಾನ ಮೀರಿ ಕಲಿಕೆಯ ಆಸಕ್ತಿ ಇರುವರೆಲ್ಲರಿಗೂ ಕಲಿಯುವ ಅವಕಾಶ ಕಲ್ಪಿಸಿದಾಗ ದೇಶ ಸಂಪೂರ್ಣ ಸಾಕ್ಷರತೆ ಹೊಂದಲು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಸೆ.7: ನಗರದ ಸ್ವಚ್ಛತೆಗಾಗಿ ನಿರಂತರವಾಗಿ ಶ್ರಮಿಸುವ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳ ಆಯೋಜನೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ನಗರಸಭೆ ಉಪಾಧ್ಯಕ್ಷ ಎನ್.ಎಸ್. ಪ್ರವೀಣ್ಗೌಡ ಅವರು ಹೇಳಿದರು.ನಗರದ ಅಂತರಗಂಗೆ ರಸ್ತೆಯ ಆರ್ ಎಲ್ ಜಾಲಪ್ಪ ಆಸ್ಪತ್ರೆ ಆವರಣದಲ್ಲಿ ಕೋಲಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿ, ಪೌರ ಕಾರ್ಮಿಕರರು ಆರೋಗ್ಯವಾಗಿದ್ದಾಗ ಮಾತ್ರ ನಗರಸಭೆ ವ್ಯಾಪ್ತಿಯ ನಿವಾಸಿಗಳು ಆರೋಗ್ಯವಂತ ಜೀವನ ಸಾಗಿಸಲು ಸಾಧ್ಯವಾಗಿರುತ್ತದೆ ಎಂದರು.ಪೌರ ಕಾರ್ಮಿಕರರು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಶಿಕ್ಷಕರ ದಿನಾಚರಣೆಹಾಗೂ ಸಾಧಕರಿಗೆ ಸನ್ಮಾನಕಾರ್ಯಕ್ರಮವನ್ನುಸೆ.08 ರ ಬುಧವಾರ ಬೆಳಿಗ್ಗೆ 11 ಗಂಟೆಗೆ, ನಗರದ ವಿವೇಕ್ಇನ್ಪೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿಜಿಲ್ಲಾ ಪೊಲೀಸ್ರಕ್ಷಣಾಧಿಕಾರಿಡಿ.ಕಿಶೋರ್ ಬಾಬು ಅವರುಉದ್ಘಾಟಿಸಲಿದ್ದಾರೆ.ಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿರುವರೋಜ, ಕುಮಾರ್, ಜಗದೀಶ್, ಸಂತೋಷ್, ರಾಮು, ನಾಗೇಶ್ಹಾಗೂ ಟಿ.ಇ.ಟಿ. ಪರೀಕ್ಷೆಯಲ್ಲಿಅರ್ಹತೆ ಪಡೆದಿರುವ ಉಷಾ, ಅನಿತಾ, ಅಶ್ವಿನಿ, ಸೋನಿಯಾ, ಸಂಗೀತ, ಆಶಾ, ವನಜ ಮತ್ತುಸುನೀಲ್ಅವರನ್ನುಅತ್ಮೀಯವಾಗಿ ಸನ್ಮಾನಿಸಲಾಗುವುದು.ಕಾರ್ಯಕ್ರಮದಲ್ಲಿಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ. ಪ್ರಮೋದ್ಕುಮಾರ್, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಜಿ.ಮುರಳಿ, ಉಪನ್ಯಾಸಕರಾದಧಾರವಾಡದ ಮಹಮದ್ಇಲಿಯಾಸ್, ಎಸ್.ಆರ್.ರಾಕೇಶ್, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ವಿಭಜನೆಗೆ ಈಗಾಗಲೇ ಒಕ್ಕೂಟದ ಆಡಳಿತ ಮಂಡಲಿ, ವಾರ್ಷಿಕ ಸಾಮಾನ್ಯ ಸಭೆಗಳಲ್ಲಿ ಚರ್ಚಿಸಿ ತೀರ್ಮಾನಿಸಿರುವಂತೆ ವಿಭಜನೆ ಮಾಡಲು ಸಮ್ಮತಿಸಿರುವುದರಿಂದ, ಒಕ್ಕೂಟವನ್ನು ವಿಭಜಿಸಲು ನನ್ನ ಅಭ್ಯಂತರವಿರುವುದಿಲ್ಲ. ಎನ್. ಹನುಮೇಶ್ ನಿರ್ದೇಶಕರು, ಶ್ರೀನಿವಾಸಪುರ ತಾಲ್ಲೂಕು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿ. ಇವರು ಮಾಧ್ಯಮಕ್ಕೆ ತಿಳಿಸಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ 5 ಲಕ್ಷ ಲೀಟರ್ ಸಾಮಥ್ರ್ಯದ ಮೆಗಾಡೇರಿಯನ್ನು ಅಂದಾಜು ರೂ. 200 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಿದ್ದು, 3 ಸಂಖ್ಯೆಯ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು . ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಗ್ರಾಮ ವಿಕಾಸ ಯೋಜನೆ ಅಡಿಯಲ್ಲಿ ಏರ್ಪಡಿಸಲಾಗಿದ್ದ ಗ್ರಾಮ ಸಭೆಯಲ್ಲಿ ರೂ . ೯೩ ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು , ರಸ್ತೆ , ಚರಂಡಿ , ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಗುಣಮಟ್ಟ ಕೆಡಬಾರದು ಎಂದು […]

