
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಅವಿಭಜಿತ ಜಿಲ್ಲೆಯಲ್ಲಿ ೨೯೭೮೪ ಮಹಿಳಾ ಸ್ವಸಹಾಯ ಸಂಘಗಳಿದ್ದು, ಮೊದಲ ಹಂತದಲ್ಲಿ ೭೩೦೦ ಸಂಘಗಳ ಕಾರ್ಯಚಟುವಟಿಕೆಗಳನ್ನು ಇ-ಶಕ್ತಿ ಯೋಜನೆಯಡಿ ತರಲು ನೇಮಕಗೊಂಡಿರುವ ೨೪೩ ಪ್ರೇರಕರ ಸಭೆಯನ್ನು ಡಿ.೧೮ ರಂದು ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು. ಬುಧವಾರ ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಬಾರ್ಡ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಜಿಲ್ಲಾ ಯೋಜನಾ ಅನುಷ್ಟಾನ ಮತ್ತು ಉಸ್ತುವಾರಿ ಸಮಿತಿ ಸಭೆಯ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ, ಜೆಡಿಎಸ್ ಬೆಂಬಲಿತ ಎಲ್ಲಾ 17 ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆ ಬಳಿಕ ನಡೆದ ಮತ ಎಣಿಕೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಆಯ್ಕೆಯಾದ ಶಿಕ್ಷಕರು ಹಾಗೂ ಶಿಕ್ಷಕಿಯರು, ತಮ್ಮ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು. ಮುಖಂಡರಾದ ಮಂಜುನಾಥರೆಡ್ಡಿ, ಜಯರಾಮರೆಡ್ಡಿ, ದಿವಾಕರ್, ಆನಂದ್, ಶ್ರೀನಿವಾಸಪ್ಪ, ಹರೀಶ್ ಕುಮಾರ್ ಇದ್ದರು. ಫಲಿತಾಂಶ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ.96 ರಷ್ಟು ಮತದಾನವಾಗಿದೆ.ಮತದಾರರ ಒಟ್ಟು ಸಂಖ್ಯೆ 811 ಆಗಿದ್ದು, 775 ಮತಗಳು ಚಲಾವಣೆಯಾಗಿವೆ. ಆ ಪೈಕಿ 439 ಪುರುಷರು ಹಾಗೂ 336 ಮಹಿಳೆಯರು ಮತ ಚಲಾಯಿಸಿದ್ದಾರೆ. 12 ಪುರುಷರು ಹಾಗೂ 5 ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎಂದು ಮತಗಟ್ಟೆ ಅಧಿಕಾರಿ ಮುರಳಿ ಬಾಬು ತಿಳಿಸಿದರು.ಬೆಳಿಗ್ಗೆ ನಿಧಾನ ಗತಿಯಲ್ಲಿ ನಡೆದ ಮತದಾನ, ಮಧ್ಯಾಹ್ನದ ಹೊತ್ತಿಗೆ ಚುರುಕು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಡಿ15: ಕೋಲಾರ ನಗರದ ಆದಾಯ ತೆರಿಗೆ ಇಲಾಖೆಯಲ್ಲಿ ವಿವಾದ್ ಸೆ ವಿಶ್ವಾಸ್ ಯೋಜನೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸ್ಥಳೀಯ ಆದಾಯ ತೆರಿಗೆ ಅಧಿಕಾರಿ ವಿ.ಸೀತಾಲಕ್ಷ್ಮಿ ವಿವಾದಿತ ತೆರಿಗೆ ಬಾಕಿ ಇಟ್ಟುಕೊಂಡಿರುವ ತೆರಿಗೆ ಪಾವತಿದಾರರು ಕಮೀಷನರ್ ಆಫ್ ಇನ್ಕಮ್ ಟ್ಯಾಕ್ಸ್ (ಅಪೀಲ್ಸ್) ಐ.ಟಿ.ಎ.ಟಿ ಹೈಕೋರ್ಟ್, ಸುಪ್ರಿಮ್ ಕೋರ್ಟ್ಗಳಲ್ಲಿ ಮೇಲ್ಮನವಿ ಸಲ್ಲಿಸಿರುವ ವ್ಯಕ್ತಿಗಳು ಶೇ.100 ರಷ್ಟು ವಿವಾಧಿತ ತೆರಿಗೆ ಶೇ.25 ರಷ್ಟು ಹಾಕಿರುವ ಬಡ್ಡಿ ಹಾಗೂ ದಂಡ ಕಟ್ಟಿದರೆ ವಿವಾದದಿಂದ ಮುಕ್ತಿ ಹೊಂದಬಹುದು. ಹಾಗೆ ಮಾಡಿದ್ದಲ್ಲಿ ವಿಧಿಸಬಹುದಾದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- `ಬನ್ನಿ ಶಿಕ್ಷಕರೇ ವಿಕಾಸಶೀಲ ಹೆಜ್ಜೆಗಳೊಂದಿಗೆ ಹೊಸ ಮನ್ವಂತರದತ್ತ ಸಾಗೋಣ’ ಎಂಬ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರ ಕರೆಗೆ ಓಗೊಟ್ಟ ಪ್ರಾಥಮಿಕ ಶಾಲಾ ಶಿಕ್ಷಕರು ಇಂದು ಮತದಾನದಲ್ಲಿ ಅತಿ ಹೆಚ್ಚು ಉತ್ಸಾಹದಿಂದ ಪಾಲ್ಗೊಂಡಿದ್ದು, ಶೇ.98.40 ರಷ್ಟು ಮತದಾನವಾಗಿದೆ.ತಾಲ್ಲೂಕಿನಲ್ಲಿ 1131 ಮಂದಿ ಪ್ರಾಥಮಿಕ ಶಾಲಾ ಶಿಕ್ಷಕರಿದ್ದು, ಅವರ ಪೈಕಿ 1113 ಮಂದಿ ಮತ ಚಲಾಯಿಸಿದ್ದಾರೆ, ಅದರಲ್ಲಿ 452 ಮಂದಿ ಪುರುಷ ಮತದಾರರು ಹಾಗೂ 661 ಮಂದಿ ಮಹಿಳಾ ಮತದಾರರು ತಮ್ಮ ಹಕ್ಕು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಸಂಚಾರ ಆರಂಭಗೊಂಡಿತು. ಆದರೆ ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ನಿಲ್ದಾಣದಲ್ಲಿದ್ದರು.ಬೆಳಿಗ್ಗೆಯಿಂದ ಪಟ್ಟಣದಿಂದ ಹೊರಗೆ ಹೋಗುವ ಪ್ರಯಾಣಿಕರು, ಖಾಸಗಿ ಬಸ್, ಆಟೋ ಹಾಗೂ ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣ ಬೆಳೆಸಿದ್ದರು. ಸಂಜೆಯ ಹೊತ್ತಿಗೆ ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆ ಇತ್ತು. ಬಸ್ ಪ್ರಯಾಣ ಆರಂಭಗೊಳ್ಳುವುದು ಅನಿಶ್ಚಿತವಾಗಿದ್ದ ಕಾರಣ ನಿಲ್ದಾಣ ಬರಿದಾಗಿತ್ತು.ಮೊದಲ ಬಸ್ ಡಿಪೋದಿಂದ ಪೊಲೀಸ್ ಬೆಂಗಾವಲಿನಲ್ಲಿ ನಿಲ್ದಾಣ ಪ್ರವೇಶಿಸಿತು. ಆದರೆ ಬಸ್ ನಿಲ್ದಾಣ ನಿರ್ಜನವಾಗಿತ್ತು. ಬಹಳ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ನಿವಾರ್ ಚಂಡಮಾರುತದ ಹಾವಳಿಗೆ ತುತ್ತಾಗಿರುವ ಬೆಳೆಗಳಿಗೆ ಪ್ರತಿ ಎಕರೆಗೆ ೨ ಲಕ್ಷ ಪರಿಹಾರ ನೀಡುವ ಜೊತೆಗೆ ಉಚಿತವಾಗಿ ಬಿತ್ತನೆ ಆಲೂಗಡ್ಡೆ, ಔಷಧಿಯನ್ನು ಪೂರೈಕೆ ಮಾಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಅಂಗಮಾರಿ ಟಮೋಟೋ ಮತ್ತು ಕ್ಯಾಪ್ಸಿಕಾಂ ಗಿಡಗಳ ಸಮೇತ ತೋಟಗಾರಿಕೆ ಇಲಾಖೆಯ ಮುಂದೆ ಹೋರಾಟ ಮಾಡಲಾಯಿತು.ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಒಂದು ಕಡೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಕಾಯಿದೆಗಳು ಮತ್ತೊಂದು ಕಡೆ ಅತಿವೃಷ್ಠಿ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ದಕ್ಷಿಣ ಕಾಶಿಯೆಂದೇ ಖ್ಯಾತಿಯಾದ ನಗರದ ಅಂತರಗಂಗೆಯ ಕಾಶಿ ವಿಶ್ವೇಶ್ವರ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಕಡೆ ಸೋಮವಾರ ಅತ್ಯಂತ ವಿಶೇಷತೆ ಹೊಂದಿದ್ದು, ಲಕ್ಷಾಂತರ ಮಂದಿ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸುವ ಹಿನ್ನಲೆಯಲ್ಲಿ ಭಜರಂಗದಳ,ವಿಹಿಂಪ ಸಂಘಟನೆಗಳು ಕಳೆದೆರಡು ದಿನಗಳಿಂದಲೇ ಸಿದ್ದತೆ ನಡೆಸಿವೆ.ಅಂತರಗಂಗೆ ಬೆಟ್ಟಕ್ಕೆ ಬರುವ ಲಕ್ಷಾಂತರ ಭಕ್ತರನ್ನು ಸ್ವಾಗತಿಸಲು ನಗರದ ಬಸ್ನಿಲ್ದಾನದ ಸಮೀಪ ಬೃಹತ್ ಕಮಾನು ನಿರ್ಮಿಸಿರುವ ಬಜರಂಗದಳದ ಕಾರ್ಯಕರ್ತರು ಕಾಶಿ ವಿಶ್ವೇಶ್ವರಸ್ವಾಮಿಯ ದರ್ಶನಕ್ಕೆ ಬರುವ ಭಕ್ತರಿಗೆ ನೆರವಾಗಲು ಸಿದ್ದಗೊಂಡಿದ್ದಾರೆ.ರಾಷ್ಟ್ರೀಯ ಬಜರಂಗದಳ ವಿಹಿಂಪ ಮುಖಂಡರುಬಜರಂಗದಳ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ವಿಸ್ಟ್ರಾನ್ ಕಂಪನಿಯಲ್ಲಿ ಆಗಿರುವ ಅನಾಹುತಕ್ಕೆ ಆಡಳಿತ ಮಂಡಳಿ ಹಾಗೂ ಗುತ್ತಿಗೆದಾರರ ವೈಫಲ್ಯವೇ ಕಾರಣವಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಹುರಾಷ್ಟ್ರೀಯ ಕಂಪನಿಗಳಿಗೆ ಸ್ವಾಗತ ಕೋರಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವ ಸರ್ಕಾರ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು, ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಕೆಲಸ ಸಿಗುತ್ತಿದೆಯೇ, ಕಾರ್ಮಿಕರಿಗೆ ಕಾಲಕಾಲಕ್ಕೆ […]