ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಹತ್ತು ದಿನಗಳೊಳಗಾಗಿ ಕೊವಿಡ್ ವಾರ್ ರೂಂನ್ನು ನಿರ್ಮಿಸಿ ಮಕ್ಕಳಲ್ಲಿ ಯಾವುದೇ ಚಿಕಿತ್ಸೆ ತೊಂದರೆ ಯಾಗದಂತೆ ಚಿಕಿತ್ಸೆ ನೀಡಬೇಕು . ಆಸ್ಪತ್ರೆಯಲ್ಲಿ ಹಾಸಿಗೆಗಳ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ತೋಟಗಾರಿಕೆ , ಯೋಜನೆ ಮತ್ತು ಸ್ಯಾಂಖಿಕ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ಸೂಚಿಸಿದರು . ಇಂದು ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ನಡೆಸಿ ಮಾತನಾಡಿ , 3 ನೇ ಅಲೆಯಿಂದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಡೆಂಗೆ ತಡೆಯಲು ಸೊಳ್ಳೆ ಕಡಿತದಿಂದ ಪಾರಾಗಬೇಕು. ಅದಕ್ಕೆ ಪೂರಕವಾಗಿ ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ನೀರು ಜಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಸರ್ಕಾರಿ ಆಸ್ಪತ್ರೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಲ್.ನಾಗಲಕ್ಷ್ಮಿ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಡೆಂಗೆ ವಿರೋಧಿ ಮಾಸಾಚಣೆ ಸಮಾರಂಭದಲ್ಲಿ ಮಾತನಾಡಿ, ಡೆಂಗೆ ಜನರ ಆರೋಗ್ಯಕ್ಕೆ ಮಾರಕವಾಗಿದೆ. ಮನೆ ಮಂದಿಗೆ ಸೊಳ್ಳೆ ಕಡಿಯದಂತೆ ನೋಡಿಕೊಳ್ಳಬೇಕು. ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿರೋಧಕಗಳನ್ನು ಬಳಸುವುದರ ಮೂಲಕ ಸೊಳ್ಳೆಗಳನ್ನು […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ಸಭಾಂಗಣದಲ್ಲಿ ಆದಿತ್ಯವಾರ ‘ಆಟಿಡೊಂಜಿ ದಿನ” ಕಾರ್ಯಕ್ರಮ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಬೋಳ ಉದಯ್ ಅಂಚನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜೇಸಿಐ ವಲಯ ಉಪಾಧ್ಯಕ್ಷ ಗಿರೀಶ್ ಎಸ್. ಪಿ. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ನ್ಯಾಯಾಲಯದಲ್ಲಿ ಆ.14 ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಮೆಘಾ ಲೋಕ ದಾಲತ್ ಏರ್ಪಡಿಸಲಾಗಿದೆ ಎಂದು ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ತಿಳಿಸಿದ್ದಾರೆ.ಅದಾಲತ್ನಲ್ಲಿ ರಾಜಿಯಾಗಬಹುದಾದ, ಈಗಾಗಲೆ ನ್ಯಾಯಾಲಯದಲ್ಲಿ ಇರುವ ಸಿವಿಲ್, ಕ್ರಿಮಿನಲ್, ವ್ಯಾಜ್ಯಗಳನ್ನು ಮತ್ತು ದಾಖಲಾಗದೆ ಇರುವ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: 2020-21ನೇ ಸಾಲಿನಲ್ಲಿತಾಲ್ಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದರೋಟರಿ ವಾರ್ಷಿಕ ಸಭೆಯಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್18 ಪ್ರಶಸ್ತಿಗಳನ್ನು ಪಡೆದುಕೊಂಡಿದೆಎಂದು 2020-21ನೇ ಸಾಲಿನ ಅಧ್ಯಕ್ಷರಾದಎಸ್. ಶಿವಮೂರ್ತಿ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಿವಮೂರ್ತಿ, 2020-21 ನೇ ಸಾಲಿನಲ್ಲಿಒಟ್ಟು 150 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಾನು ಅಧಿಕಾರಿ ವಹಿಸಿಕೊಂಡ ದಿನವೇ ಪೆÇಲೀಸ್ ವಸತಿಗೃಹದಲ್ಲಿ ಗಿಡಗಳನ್ನು ನಾಟಿ ಮಾಡುವ ಮುಖಾಂತರ ಪ್ರಾರಂಭವಾದಕಾರ್ಯಕ್ರಮವುತಾಲ್ಲೂಕಿನಾಧ್ಯಂತ ಸುಮಾರುಒಂದು ಸಾವಿರ ಗಿಡಗಳನ್ನು ನೆಡಲಾಗಿದೆ. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಕಲ್ಲೂರು ಗ್ರಾಮದ ಗಂಗಮ್ಮನ ದೇವಾಲಯದಲ್ಲಿ ಶ್ರಾವಣ ಮಂಗಳವಾರದ ಪ್ರಯುಕ್ತ ಗ್ರಾಮಸ್ಥರು ವಿಶೇಷ ಪೂಜೆ ನೆರವೇರಿಸಿದರು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಆಗಸ್ಟ್ 10 : ಅಲ್ಪಸಂಖ್ಯಾತರ ವಾರ್ಡ್ಗಳಲ್ಲಿ ಇರುವ ಅನಕ್ಷರಸ್ಥರಿಗೆ ಅಲ್ಲಿನ ಅಕ್ಷರಸ್ಥರು ಕೋವಿಡ್ 19 ರ ಬಗ್ಗೆ ಜಾಗೃತಿ ಮೂಡಿಸುವ ಜವಾಬ್ದಾರಿ ಇದೆ ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಗೌಡ ತಿಳಿಸಿದರುಕೋಲಾರ ನಗರದ ರಹಮತ್ ನಗರದಲ್ಲಿ ರೆಡ್ ಕ್ರಾಸ್ ಸಂಸ್ಥೆಯಿಂದ ಸಾರ್ವಜನಿಕರಿಗಾಗಿ ಶಕ್ತಿಯುತವಾದ ಪಾನಿಯ ಮಾಸ್ಕ್ ಸ್ಯಾನಿಟೈಸರ್ ವಿತರಿಸಿ ಮಾತನಾಡಿದರು.ಸಾರ್ವಜನಿಕರು ತಮ್ಮ ಸುತ್ತಮುತ್ತಲು ಇರುವ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಅರ್ಧ ಕಾಯಿಲೆಗಳನ್ನು ತಡೆಗಟ್ಟಬಹುದು ಆದ್ದರಿಂದ ಸ್ವಚ್ಛತೆಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ಆಗಸ್ಟ್-9, ವಿದ್ಯುತ್ ಖಾಸಗೀಕರಣ 2003 ರ ಮಸೂದೆಯನ್ನು ಚಳಿಗಾಲದ ಅವಧಿವೇಶನದಲ್ಲಿ ಮಂಡಣೆ ಮಾಡಬಾರದೆಂದು ಸಾಮೂಹಿಕ ನಾಯಕತ್ವ ರೈತ ಸಂಘದ ರೈಲ್ವೆ ಇಲಾಖೆ ಮುಂದೆ ಮೋಟರ್ ಪಂಪ್ಗಳ ಸಮೇತ ಹೋರಾಟ ಮಾಡಿ ರೈಲ್ವೆ ಅಧಿಕಾರಿಗಳ ಮುಖಾಂತರ ಮಾನ್ಯ ರಾಜ್ಯ ಪಾಲರಿಗೆ ಮನವಿ ನೀಡಿ, ಒತ್ತಾಯಿಸಲಾಯಿತು.ಅತಿವೃಷ್ಟಿ ಅನಾವೃಷ್ಟಿ ಸಾಂಕ್ರಾಮಿಕ ರೋಗಗಳಿಂದ ತತ್ತರಿಸಿರುವ ರೈತರ ಪಂಪ್ಸೆಟ್ಗಳಿಗೆ ಕೇಂದ್ರ ರಾಜ್ಯ ಸರ್ಕಾರ ಪ್ರೀಪೆಡ್ ಮೀಟರ್ ಅಳವಡಿಸಲು ಮುಂದಾದರೆ ಪ್ರಪಂಚದ ಮೂರನೇ ಮಹಾಯುದ್ದ ರೈತರಿಂದಲೇ ಪ್ರಾರಂಭವಾಗುವ ಕಾಲ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ವಿ.ಮುರಳಿಮೋಹನ್, ಪ್ರಧಾನ ಕಾರ್ಯದರ್ಶಿಯಾಗಿ ವಿ.ವೆಂಕಟೇಶಪ್ಪ,ಖಜಾಂಚಿಯಾಗಿ ಆರ್.ನಾಗರಾಜ್ ಹಾಗೂ ಗೌರವಾಧ್ಯಕ್ಷರಾಗಿ ವಿ.ಶ್ರೀನಿವಾಸಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನ ಪದಾಧಿಕಾರಿಗಳನ್ನು ಸಂಘದ ರಾಜ್ಯಾಧ್ಯಕ್ಷ ಎಸ.ಚೌಡಪ್ಪ ಅಭಿನಂದಿಸಿದರು.ಜಿಲ್ಲಾ ನೌಕರರ ಭವನದಲ್ಲಿ ನಡೆದ ಜಿಲ್ಲಾ ದೈಹಿಕ ಶಿಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ನೂತನ ಪದಾಧಿಕಾರಿಗಳು ಸಂಘಟನೆಗೆ ಒತ್ತು ನೀಡಿ, ಶ್ರಮಿಸುವಂತೆ ಕರೆ ನೀಡಿ, ರಾಜ್ಯ ಸಂಘ ಈಗಾಗಲೇ ದೈಹಿಕ ಶಿಕ್ಷಕರ ವೃಂದ ನೇಮಖಾತಿ ನಿಯಮಗಳು, ಪ್ರೌಢಶಾಲೆಗಳಲ್ಲಿನ ಮುಖ್ಯಶಿಕ್ಷಕರ ಹುದ್ದೆಗೆ […]

