
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೊರೊನಾ ಲಾಕ್ಡೌನ್ ವೇಳೆ ಸರ್ಕಾರ ಹೂ, ವಾಣಿಜ್ಯ ಬೆಳೆಗಳಿಗೆ ಘೋಷಣೆ ಮಾಡಿದ್ದ ಪರಿಹಾರ ಹಣ ಕೂಡಲೇ ಬಿಡುಗಡೆ ಮಾಡುವ ಜೊತೆಗೆ ತೋಟಗಾರಿಕೆ ಇಲಾಖೆಯಲ್ಲಿನ ಕೋಟ್ಯಾಂತರರೂಪಾಯಿ ಭ್ರಷ್ಟಾಚಾರ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಒತ್ತಾಯಿಸಿ ರೈತಸಂಘದಿಂದ ತೋಟಗಾರಿಕೆ ಕಚೇರಿಯೆದುರು ದೀಪಗಳೊಂದಿಗೆ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ 20 ಲಕ್ಷಕೋಟಿ ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿ ತಿಂಗಳಾನುಗಟ್ಟಲೇ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಆಜ್ಞೇಯ ಪದವೀಧರ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಮನವಿ ಮಾಡಿದರು. ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ.ಗೌಡ ಅವರ ಪರವಾಗಿ ಶುಕ್ರವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಕೇಶವ ಪ್ರಸಾದ್, ಜಿಲ್ಲಾ ಬಿಜೆಪಿ ಪ್ರಭಾರಿ ಪದ್ಮ ಶಿವಶಂಕರ್ ಕೇಂದ್ರ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ಕೊರೊನಾ ಹರಡದಂತೆ ನಿಯಮಗಳನ್ನು ತಪ್ಪದೆ ಪಾಲಿಸಬೇಕು. ವೈಯಕ್ತಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ಪಟ್ಟಣದಲ್ಲಿ ಪುರಸಭೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕೊರೊನಾ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಜನ ದಟ್ಟಣೆ ಇರುವು ಕಡೆ ಅಂತರ ಪಾಲಿಸಬೇಕು. ಮನೆಯಿಂದ ಹೊರಬಂದ ಕೂಡಲೆ ಮಾಸ್ಕ್ ಧರಿಸಬೇಕು. ಸಾಬೂನಿನಿಂದ ಕೈ ತೊಳೆಯಬೇಕು. ಸ್ಯಾನಿಟೈಸರ್ ಬಳಸಬೇಕು ಎಂದು ಹೇಳಿದರು. ಪುರಸಭೆ ಮುಖ್ಯಾಧಿಕಾರಿ ವಿ.ಮೋನಹ್ ಕುಮಾರ್, […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ.ಅ.16: ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ರವರು ಮತಗಟ್ಟೆಗಳಿಗೆ ಬೇಟಿ ನೀಡಿ ಪರಿಶೀಲಿಸಿದರು.ಬೆಳಗ್ಗೆ 11 ಗಂಟೆಯಿಂದ ರಾಯಲ್ಪಾಡು, ಲಕ್ಷ್ಮೀಸಾಗರ, ರೋಣೂರು, ಯಲ್ದೂರು, ದುಗ್ಗಸಂದ್ರ, ಮುಳಬಾಗಿಲು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಮತಗಟ್ಟೆಗಳನ್ನು ಪರಿಶೀಲಿಸಿದ ಡಿ.ಸಿಯವರು ಕರೋನಾ ಹೆಚ್ಚಾಗುತ್ತಿರುವ ಸಲುವಾಗಿ ಸ್ವಚ್ಚತೆಯನ್ನು ಕಾಪಾಡಿ, ಅಂಗವಿಕಲ ಮತದಾರರಿಗೆ ವೀಲ್ಚೇರ್ ಮತ್ತು ಅವರು ಮತದಾನ ಮಾಡಲು ಒಬ್ಬ ವ್ಯಕ್ತಿ ಜೊತೆಯಲ್ಲಿ ಹೋಗಲು ನಿಯೋಜಿಸಬೇಕು. ಆ ಕಾರ್ಯಕ್ಕೆ ಸ್ಕೌಟ್ಸ್ ಅಂಡ್ ಗೈಡ್ಸ್ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ಸೂಚಿಸಿ, […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಗುರುವಾರ ಕೃಷಿ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರಸ್ವಾಮಿ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಇಲ್ಲಿನ ಕೃಷಿ ಇಲಾಖೆ ಕಚೇರಿಯಲ್ಲಿ ಹತ್ತು ವರ್ಷಗಳಿಂದ ಪ್ರಥಮ ದರ್ಜೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಭದ್ರತೆ ಮತ್ತು ಭವಿಷ್ಯವು ಯುವ ಸಮುದಾಯದ ಮೇಲೆ ಆವಲಂಬಿತವಾಗಿದ್ದು, ಇಂತಹ ಯುವ ಸಮುದಾಯ ಸದೃಢವಾಗಲು ಮನಸ್ಸು ಮತ್ತು ದೇಹದ ದೃಢತೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಬಲಿಷ್ಟ ಭಾರತ ನಿರ್ಮಿಸಲು ಶ್ರಮಿಸಬೇಕಾಗಿದೆ ಎಂದು ಶ್ರೀನಿವಾಸಸಂದ್ರ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ ಲೋಕೇಶ್ ಅವರು ಅಭಿಪ್ರಾಯ ಪಟ್ಟರು.ಇಂದು ಕೆ.ಜಿ.ಎಫ್ ತಾಲ್ಲೂಕಿನ ಕರಡಗೂರಿನಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಕೋಲಾರ, ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ಜನ ವಿಕಾಸ ಯುವಜನ ಸೇವಾ ಸಂಸ್ಥೆ, ಕೋಲಾರ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ವಿವಿಧ ಕಾರಣಗಳಿಂದ ಮಾನಸಿಕ ಖಿನ್ನತೆ ಮತ್ತು ಒತ್ತಡಕ್ಕೆ ಒಳಗಾಗಿರುವರನ್ನು ರಕ್ಷಣೆ ಮಾಡಬೇಕು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಎಂ.ಎಲ್ ರಘುನಾಥ್ ಅವರು ತಿಳಿಸಿದರು.ಇಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಪೊಲೀಸ್ ಇಲಾಖೆ , ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮಕ್ಕೆ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಅಕ್ಟೋಬರ್ 15 : ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಕಾಯಿಲೆಗಳು ಹರಡುವುದಿಲ್ಲ ನಿಯಂತ್ರಿಸಬಹುದು ಎಂದು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕ ವಿ ಹರೀಶ್ ತಿಳಿಸಿದರು .ಜಿಲ್ಲಾ ಹಾಲು ಒಕ್ಕೂಟ ವತಿಯಿಂದ ಇಂದು ಏರ್ಪಡಿಸಿದ್ದ ವಿಶ್ವ ಕೈ ತೊಳೆಯುವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು .ಇದರಿಂದ ಜನರಿಗೆ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಸಂದರ್ಭದಲ್ಲಿ ಇರುವ ಸರ್ಕಾರದ ಎಲ್ಲ ಸೂಚನೆಗಳನ್ನು ಅನುಸರಿಸುವುದರಿಂದ ಮತ್ತು ಕಡ್ಡಾಯವಾಗಿ ಕೈ ತೊಳೆಯುವುದರಿಂದ ಕೋವಿಡ್ ನಿಯಂತ್ರಿಸಬಹುದು ಎಂದರು ..ಸಸಿಗಳಿಗೆ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೃಷಿಯಲ್ಲಿ ತೊಡಗಿರುವ ರೈತ ಮಹಿಳೆಯರಿಗೂ ಭೂಮಿಯ ಹಕ್ಕನ್ನು ನೀಡಬೇಕೆಂದು ರೈತಸಂಘದಿಂದ ತಾಲೂಕಿನ ಹೊಸಮಟ್ನಹಳ್ಳಿಯಲ್ಲಿ ರೈತ ಮಹಿಳೆಯರಿಗೆ ಗಿಡ ಮತ್ತು ಹರಿಶಿನ, ಕುಂಕುಮ ನೀಡಿ ಅಂತರಾಷ್ಟ್ರೀಯ ರೈತ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆಗ್ರಹಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದಿದ್ದರೂ ರೈತರು ತಾವು ಬೆಳೆದಂತಹ ಬೆಳೆಗಳಿಗೆ ಬೆಲೆಗಳನ್ನು ನಿಗಧಿಪಡಿಸುವ ಹಕ್ಕು ಇನ್ನೂ ಬಾರದೇ […]