ಶ್ರೀನಿವಾಸಪುರ : ಅರಣ್ಯ ಒತ್ತುವರಿ ತೆರವು ಕಾರ್ಯಕ್ರಮದಿಂದ ಭಾದಿತರಾದ ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ಅವರ ಭಾಗದಲ್ಲಿ ಸರ್ಕಾರಿ ಜಮೀನು, ಲಭ್ಯ ಇದ್ದಲ್ಲಿ ಅರ್ಜಿ ಹಾಕಿಕೊಂಡರೆ ಅಂತಹವರಿಗೆ ಆದ್ಯತೆ ಮತ್ತು ಅರ್ಹತೆ ಮೇರೆಗೆ ಜಮೀನು ಮಂಜೂರು ಮಾಡಿಕೊಡಲಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಗೆ ಚಾಲನೆ ನೀಡಿ ಮಾತನಾಡಿದರು. 1999 ರಿಂದ 2004ರವರೆಗೂ ನಾನು ಶಾಸಕನಾಗಿದ್ದಾಗ ತಾಲೂಕಿನ ಎಲ್ಲಾ ಪಂಚಾಯ್ತಿಗಳಲ್ಲಿಯೂ […]

Read More

ಮಾವು ಬೆಂಬಲ ಬೆಲೆ ರೈತರಿಗೆ ಮಾತ್ರವೇ ? ಮಾವಿನ ಫಸಲು ಖರೀದಿ ವ್ಯಾಪಾರಸ್ಥರಿಗೂ ನೆರವಿಗೆ ಆಗ್ರಹ – ಬಂಗಾರದ ಒಡವೆ ಅಡಮಾನ, ಕೈಸಾಲ ಪಡೆದು ಹೂಡಿಕೆ ಮಾಡಿದ ಮಾವಿನ ಫಸಲು ಖರೀದಿ ವ್ಯಾಪಾರಸ್ಥರ ಸಂಕಷ್ಟ ; ಕಟಾವು–ಸಾಗಣೆ ವೆಚ್ಚವೂ ವಾಪಸ್ ಬಾರದ ಸ್ಥಿತಿ ಶ್ರೀನಿವಾಸಪುರ, ಜು. 12: ಸರ್ಕಾರ ತೋತಾಪುರಿ ಮಾವಿಗೆ ಬೆಂಬಲ ಬೆಲೆ ಘೋಷಿಸಿರುವುದು ರೈತರಿಗೆ ಆಶಾದಾಯಕ ಬೆಳವಣಿಗೆಯಾಗಿದ್ದರೂ, ಮುಂಗಡ ಒಪ್ಪಂದದ ಮೂಲಕ ಮಾವಿನ ಫಸಲನ್ನು ಖರೀದಿಸಿರುವ ವ್ಯಾಪಾರಸ್ಥರು ಯೋಜನೆಯಿಂದ ಹೊರಗುಳಿದಿರುವುದು ಶ್ರೀನಿವಾಸಪುರದಲ್ಲಿ ಹೊಸ ಚರ್ಚೆಗೆ […]

Read More

ಚಿಂತನಕುಂಟೆಯಲ್ಲಿ ವನಮಹೋತ್ಸವ ; ಪರಿಸರ ಸಂರಕ್ಷಣೆಗೆ ಜನಜಾಗೃತಿ ಅಗತ್ಯ ಎಂದು ಕರೆ ಶ್ರೀನಿವಾಸಪುರ, ಜುಲೈ 11: ಎಷ್ಟು ದಿನ ಗಿಡಗಳು ಉಸಿರಾಡುತ್ತವೆಯೋ ಅಷ್ಟು ದಿನ ಮಾತ್ರ ಮಾನವ ಬದುಕಲು ಸಾಧ್ಯ. ಗಿಡಗಳ ಉಸಿರಾಟ ನಿಂತರೆ ಮಾನವನ ಬದುಕೂ ಅಪಾಯಕ್ಕೆ ಸಿಲುಕುತ್ತದೆ. ಆದ್ದರಿಂದ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಹೇಳಿದರು. ತಾಲ್ಲೂಕಿನ ಚಿಂತನಕುಂಟೆ ಅರಣ್ಯ ಪ್ರದೇಶದಲ್ಲಿ ಶನಿವಾರ ಕರ್ನಾಟಕ ಲೋಕಾಯುಕ್ತ, ಜಿಲ್ಲಾಡಳಿತ, ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು […]

Read More

ಕೋಲಾರ : ಜುಲೈ 9 ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಭರದಿಂದ ಸಾಗಿದ್ದು, ಜುಲೈ 09ರ ಗುರುವಾರ ಸಂಜೆ ವೇಳೆಗೆ ಜಿಲ್ಲೆಯಾದ್ಯಂತ ಶೇ. 95.87 ರಷ್ಟು ಮತದಾರರ ನಮೂನೆಗಳನ್ನು (EFs) ವಿತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಜೂನ್ 16ರ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 12,95,265 ಮತದಾರರಿದ್ದಾರೆ. ಪರಿಷ್ಕರಣೆಗಾಗಿ ಮತದಾರರ ನಮೂನೆಗಳನ್ನು ಮುದ್ರಿಸಿ ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳಿಗೆ (BLOs) ತಲುಪಿಸಲಾಗಿದೆ. ಜುಲೈ 09ರ ಸಂಜೆ 4 ಗಂಟೆಯವರೆಗಿನ ವರದಿಯಂತೆ, ಜಿಲ್ಲೆಯ […]

Read More

ಕೋಲಾರ, ಜುಲೈ 9: ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದ್ದು, ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026’ (ಎಸ್‌ಐಆರ್) ಕಾರ್ಯವನ್ನು ಸಂಪೂರ್ಣ ದೋಷರಹಿತವಾಗಿ ಹಾಗೂ ಪಾರದರ್ಶಕವಾಗಿ ಪೂರ್ಣಗೊಳಿಸಲು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ರೋಲ್ ವೀಕ್ಷಕರಾದ ತುಲಸಿ ಮದ್ದಿನೇನಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026’ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ […]

Read More

ಶ್ರೀನಿವಾಸಪುರ: ಪಟ್ಟಣದ ಪುರಸಭೆ ಕಚೇರಿ ಮುಂಭಾಗದಲ್ಲಿ ಬುಧವಾರ ಪೌರ ಕಾರ್ಮಿಕರು ತಮ್ಮ ಬೇಡಿಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ತಹಶೀಲ್ದಾರ್ ಸುಧೀಂದ್ರ ಅವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಮಾತನಾಡಿ, ಪೌರ ಕಾರ್ಮಿಕರಿಗೆ ಸಂಭಾವನೆ ನೀಡುವ ಬಗ್ಗೆ ನೀಡಲಾಗಿರುವ ಮನವಿ ಪತ್ರವನ್ನು ಸಮುಚಿತ ಮಾರ್ಗದ ಮೂಲಕ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು. ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಲು ಆಶ್ರಯ ಬಡಾವಣೆಯ ಗಡಿ ಗುರುತಿಸಿಕೊಡಲು ಹೇಳಲಾಗಿದೆ. ಸರ್ವೆ ನಂಬರ್ 17 ರಲ್ಲಿ ವಸತಿ ಸೌಲಭ್ಯ ನೀಡಲು ಪೂರಕವಾಗಿ […]

Read More

ಶ್ರೀನಿವಾಸಪುರ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಹಂತ ಹಂತವಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ಪಟ್ಟಣದ ಮುಳಬಾಗಿಲು ವೃತ್ತದಿಂದ ಎಚ್.ನಲ್ಲಪಲ್ಲಿ ಗ್ರಾಮದವರೆಗೆ ₹1 ಕೋಟಿ ವೆಚ್ಚದಲ್ಲಿ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣದಲ್ಲಿನ ಮೂರು ರಾಜಕಾಲುವೆಗಳನ್ನು ಸುಮಾರು ₹5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಎಪಿಎಂಸಿ ಮಾರುಕಟ್ಟೆ ಬಳಿಯ ರಾಜಕಾಲುವೆಯಿಂದ ಕಾಮಗಾರಿ ಆರಂಭವಾಗಲಿದ್ದು, ಮೂರು ಪ್ರಮುಖ ರಾಜಕಾಲುವೆಗಳ ಅಭಿವೃದ್ಧಿಯ ಜೊತೆಗೆ ಒಂದು ಸೇತುವೆ ನಿರ್ಮಾಣಕ್ಕೂ ಯೋಜನೆ […]

Read More

ಶ್ರೀನಿವಾಸಪುರ: ಪಟ್ಟಣದ ಕ್ರೀಡಾಂಗಣದಲ್ಲಿ ಸುಸಜ್ಜಿತ ಈಜುಕೊಳ ನಿರ್ಮಿಸುವಂತೆ ಹಾಗೂ ರಸ್ತೆ ನಿರ್ಮಾಣ ಮತ್ತು ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸುವಂತೆ ಆಗ್ರಹಿಸಿ, ತಾಲ್ಲೂಕು ಕಾಂಗ್ರೆಸ್ ಮುಖಂಡರು ತಹಶೀಲ್ದಾರ್ ಜಿಎನ್.ಸುಧೀಂದ್ರ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಬಿ.ಎಂ. ಪ್ರಕಾಶ್ ಮಾತನಾಡಿ, ಮುಖ್ಯ ಮಂತ್ರಿಗಳ ವಿವೇಚನಾ ನಿಧಿಯಡಿ ರೂ.5 ಕೋಟಿ ಮಂಜೂರಾಗಿದ್ದು, ಆ ಧನದಲ್ಲಿ ಕ್ರೀಡಾಂಗಣದಲ್ಲಿ ರೂ.3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಈಜುಕೊಳ ನಿರ್ಮಿಸಲು ಪುರಸಭೆ ಅನುಮೋದನೆ ನೀಡಿದೆ ಆದರೆ ಈವರೆಗೆ ಅದರ ಅನುಷ್ಠಾನ ಸಾಧ್ಯವಾಗಿಲ್ಲ ಎಂದು […]

Read More

ಕೋಲಾರ, ಜು.2: ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರು ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಪ್ರಮುಖ ಸೇತುವೆಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ ಹೇಳಿದರು. ಭಾರತ ಸರ್ಕಾರದ ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ (ಪಿಐಬಿ), ಬೆಂಗಳೂರು, ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತವಾಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ […]

Read More