ಕೋಲಾರ:- ಕೋಲಾರ ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿದ್ದೋದ್ಧೇಶ ಸಹಕಾರ ಸಂಘದ ನಿಯಮಿತದ ಶೇರು ಸಂಗ್ರಹಣಾ ಅಭಿಯಾನಕ್ಕೆ ಮಾಲೂರು ನಗರದಿಂದ ಬುಧವಾರ ಚಾಲನೆ ನೀಡಿ, ಯಶಸ್ವಿನಿ ಆರೋಗ್ಯ ವಿಮಾ ಸೌಲಭ್ಯ ಹಾಗೂ ಸಾಲ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಪಡೆದುಕೊಳ್ಳಲು ಸೂಚಿಸಲಾಯಿತು.ಮಾಲೂರು ನಗರದ ಕೃಷಿಕ ಸಮಾಜ ಸಂಘದ ಸಭಾಂಗಣದಲ್ಲಿ ಬುಧವಾರ ಜರುಗಿದ ಅಭಿಯಾನದ ಪ್ರಥಮ ಸಭೆಯಲ್ಲಿ ಹಿರಿಯ ಪತ್ರಕರ್ತ ರಾಜ್ಗೋಪಾಲ್ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್, ಉಪಾಧ್ಯಕ್ಷ ಅಬ್ಬಣಿ ಶಂಕರ್ ಇತರೇ ನಿರ್ದೇಶಕರಿಗೆ ತಮ್ಮ ಸದಸ್ಯತ್ವ ಅರ್ಜಿಯನ್ನು ನೀಡುವ ಮೂಲಕ ಚಾಲನೆ […]
ಶ್ರೀನಿವಾಸಪುರ : ಅನೇಕ ವರ್ಷಗಳಿಂದಲೂ ನಾವು ಈ ವ್ಯಾಪಾರವನ್ನೇ ನಂಬಿಕೊಂಡು ನಮ್ಮ ಕುಟುಂಬವನ್ನ ಪೋಷಣೆ ಮಾಡುತ್ತಿದ್ದೇವೆ. ಬಹುತೇಕರು ಆನ್ಲೈನ್ಮೂಲಕ ಔಷಧಿಗಳನ್ನು ತರಿಸಿಕೊಳ್ಳುತ್ತಿದ್ದು , ಇದರಿಂದ ನಾವು ನಷ್ಟವನ್ನು, ಕಷ್ಟವನ್ನು ಅನುಭವಿಸುತ್ತಿದ್ದೇವೆ ಎಂದು ಔಷಧಿ ವ್ಯಾಪಾರಿಗಳ ತಾಲೂಕು ಸಂಘದ ಅಧ್ಯಕ್ಷ ಬಾಲಚಂದ್ರನಾಥ್ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಮುಂಭಾಗ ತಾಲೂಕು ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಬುಧವಾರ ತಮ್ಮ ಬೇಡಿಕೆಗಳನ್ನು ಸರ್ಕಾರಕ್ಕೆ ತಲುಪಿಸಲು ತಹಶೀಲ್ದಾರ್ ಕಚೇರಿ ಸಿಬ್ಬಂದಿ ಆರ್ಐ ಮಂಜುನಾಥ್ರವರಿಗೆ ಮನವಿ ಸಲ್ಲಿಸಿದರು. ತಕ್ಷಣ ಸರ್ಕಾರ ಇದರ ಬಗ್ಗೆ ಹೆಚ್ಚಿನ […]
ಶ್ರೀನಿವಾಸಪುರ: ಭಾರಿ ಮಳೆ ಮತ್ತು ಬಿರುಗಾಳಿಯಿಂದ ಹಾನಿಗೊಳಗಾದ ಮಾವು ಬೆಳೆಗಾರ ರೈತರಿಗೆ ತಕ್ಷಣ ಎಸ್ಡಿಆರ್ಎಫ್ ಹಾಗೂ ಎನ್ಡಿಆರ್ಎಫ್ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕೆಆರ್ಎಸ್ ಪಕ್ಷದ ವತಿಯಿಂದ ಸೋಮವಾರ ಭರ್ಜರಿ ಬೈಕ್ ರ್ಯಾಲಿ ನಡೆಸಲಾಯಿತು. ಕೆಆರ್ಎಸ್ ಪಕ್ಷದ ರಾಜ್ಯ ಕಾರ್ಯದರ್ಶಿ ಇಂದಿರಾ ರೆಡ್ಡಿ ನೇತೃತ್ವದಲ್ಲಿ ನಡೆದ ರ್ಯಾಲಿಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈತರ ಪರ ಘೋಷಣೆಗಳನ್ನು ಕೂಗಿದರು. ಹೊದಲಿ ಪಂಚಾಯಿತಿಯಿಂದ ಆರಂಭವಾದ ರ್ಯಾಲಿ ಪುಲಗೂರಕೋಟೆ, ಸೋಮಯಾಜಲಹಳ್ಳಿ, ಅಡ್ಡಗಲ್, ಲಕ್ಷ್ಮಿಪುರ , ತಾಡಿಗೋಳ್ ಹಾಗೂ ನೆಲವಂಕಿ […]
ಶ್ರೀನಿವಾಸಪುರ, ಮೇ 19: ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದರೂ, ಶಾಲೆಯ ಈ ಸಾಧನೆಗೆ ಸಮರ್ಪಕ ಪ್ರಚಾರ ಸಿಗದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾದ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆ ಶೇಕಡ 100 ಫಲಿತಾಂಶ ದಾಖಲಿಸಿದೆ. ಅಲ್ಲದೆ ಹಲವು ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದು ಶಾಲೆಗೆ […]
ಕೋಲಾರ:- ಸಾಮಾಜಿಕ ಸೇವೆಯ ಮೂಲಕ ಬಡವರಿಗೆ ನೆರವಾಗುವ ಕೆಲಸ ದೇವರಿಗೂ ಪ್ರೀತಿಯಾಗಿರುತ್ತದೆ, ಹಸಿದವನಿಗೆ, ಅಗತ್ಯವಿದ್ದವನಿಗೆ ಊಟ ಹಾಕಿದರೆ ಅದು ಸಾರ್ಥಕವಾಗುತ್ತದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ಕುಮಾರ್ ತಿಳಿಸಿದರು.ತಾಲ್ಲೂಕಿನ ಯಲ್ದೂರು ಹಾಗೂ ರೋಣೂರು ಗ್ರಾಮದಲ್ಲಿ ಡಿ.ಕೆ.ಶಿವಕುಮರ್ ಅವರ ಹುಟ್ಟುಹಬ್ಬದ ಅಂಗವಾಗಿ ನಡೆದ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಡಿಕೆಶಿ ಆಪ್ತರಾದ ಪುರ್ನಹಳ್ಳಿಯ ಚೆನ್ನಮ್ಮ ವರದಪ್ಪ ಕುಟುಂಬದವರು ಶ್ರೀನಿವಾಸಪುರ ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಉಚಿತವಾಗಿ ನೀಡಿರುವ ಶವ ಪೆಟ್ಟಿಗೆ ಫ್ರೀಜರ್ಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.ಇಂದು ಸಮಾಜದಲ್ಲಿ ಉಳ್ಳವರು […]
ಶ್ರೀನಿವಾಸಪುರ: ತಾಲೂಕಿನ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಬ್ಬಟ ಗ್ರಾಮದಲ್ಲಿ ಉರ್ದು ಶಾಲೆಯಿಂದ ಮಸೀದಿ ರಸ್ತೆಯ ನಜಿರ್ ಸಾಬ್ ಅವರ ಮನೆ ಸಮೀಪದವರೆಗೆ ಮೋರಿ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಿ ಚರಂಡಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಎಚ್.ಎಂ. ಆನಂದ್ ಕುಮಾರ್ ತಿಳಿಸಿದ್ದಾರೆ. ಗ್ರಾಮದ ಪ್ರಮುಖ ರಸ್ತೆಯ ಭಾಗದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ಹಾಗೂ ಚರಂಡಿ ನೀರು ರಸ್ತೆ ಮೇಲೆ ನಿಂತು ಸಾರ್ವಜನಿಕರಿಗೆ ತೀವ್ರ […]
ಕೋಲಾರ, ಮೇ ೧೩: ಮೇ ೩ರಂದು ನಡೆದ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ಗಂಭೀರ ವಿಚಾರವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಕೇಂದ್ರ ಉನ್ನತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಎಸ್. ಮಂಜುನಾಥ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ […]
ಶ್ರೀನಿವಾಸಪುರ ಮೇ 13: ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ರಾಜಗೋಪುರ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಈ ಕಾಮಗಾರಿಯ ಬಗ್ಗೆ ಯಾರೂ ನನಗೆ ಮಾಹಿತಿ ನೀಡಿರಲಿಲ್ಲ. ದೇವರ ಪ್ರೇರಣೆಯಿಂದ ನನ್ನಿಂದ ಈ ಕಾರ್ಯ ನಡೆಯುತ್ತಿದ್ದು, ಈ ಅವಕಾಶ ನೀಡಿದ ದೇವರಿಗೆ ನಾನು ಧನ್ಯನಾಗಿದ್ದೇನೆ ಎಂದು ಹೇಳಿದರು. ರಾಜಗೋಪುರ ನಿರ್ಮಾಣಕ್ಕಾಗಿ ಶಾಸಕ ನಿಧಿಯಿಂದ ₹1 ಕೋಟಿ ಹಾಗೂ ಮುಜರಾಯಿ ಇಲಾಖೆಯಿಂದ ₹50 […]
ಶ್ರೀನಿವಾಸಪುರ, ಮೇ 12: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ನಗರಾಭಿವೃದ್ಧಿ ಕೋಶದ ಘನ ತ್ಯಾಜ್ಯ ನಿರ್ವಹಣೆ ಜಿಲ್ಲಾ ನೋಡಲ್ ಅಧಿಕಾರಿ ನವೀನ್ ಚಂದ್ರ ಹಾಗೂ ಎಸ್ಡಬ್ಲ್ಯೂಎಂ ತಜ್ಞ ಹರ್ಷ ಅವರು ಘನ ತ್ಯಾಜ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ವೇಳೆ ಮನೆಮನೆಗಳಲ್ಲಿ ತ್ಯಾಜ್ಯವನ್ನು ಮೂಲದಲ್ಲೇ ಹಸಿ, ಒಣ, ಸ್ಯಾನಿಟರಿ ಹಾಗೂ ಅಪಾಯಕಾರಿ ತ್ಯಾಜ್ಯವಾಗಿ ವಿಂಗಡಣೆ ಮಾಡುವುದು, ಸಂಗ್ರಹಣೆ, ಸಾಕಾಣಿಕೆ ಹಾಗೂ ವೈಜ್ಞಾನಿಕ ವಿಲೇವಾರಿ ಮಾಡುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಸ್ವಚ್ಛ […]

