ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ “ರೈತರಆದಾಯ ವೃದ್ಧಿಗೆ ದ್ವಿತಳಿ ರೇಷ್ಮೆಹುಳು ಸಾಕಾಣಿಕೆಯಲ್ಲಿ ಸುಧಾರಿತತಾಂತ್ರಿಕತೆಗಳು” ಆನ್ಲೈನ್ತರಬೇತಿಕಾರ್ಯಕ್ರಮವನ್ನು ಐಸಿಎಆರ್-ಕೃಷಿ ವಿಜ್ಞಾನಕೇಂದ್ರ, ಕೋಲಾರ ಮತ್ತುರೇಷ್ಮೆ ಇಲಾಖೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 27.05.2021ರಂದು ಕೃಷಿ ವಿಜ್ಞಾನಕೇಂದ್ರದಲ್ಲಿಆಯೋಜಿಸಲಾಗಿತ್ತು.ಶ್ರೀ. ಎಂ. ಮಂಜುನಾಥ, ರೇಷ್ಮೆ ಸಹಾಯಕ ನಿರ್ದೇಶಕರು, ಕೋಲಾರರವರುತಮ್ಮ ಪ್ರಸ್ತಾವಿಕ ಬಾಷಣದಲ್ಲಿಕಳೆದ ಬಾರಿಗೆ ಹೊಲಿಸಿದರೆ ಈ ಬಾರಿಯ ಲಾಕ್ಡೌನ್ ಸಮಯದಲ್ಲಿರೇಷ್ಮೆಗೂಡು ಮಾರುಕಟ್ಟೆಗಳು ಕಾರ್ಯ ನಿರ್ವಹಿಸುತ್ತಿದ್ದು, ರೈತಬಾಂಧವರುಯಾವುದೇಕಾರಣಕ್ಕೂಹಿಪ್ಪುನೇರಳೆ ತೋಟವನ್ನುಕಿತ್ತುಹಾಕದೇರೇಷ್ಮೆಕೃಷಿಯನ್ನು ಮುಂದುವರೆಸಿಕೊಂಡು ಹೋಗಲುಬೇಕು, ಪ್ರಸ್ತುತಎಲ್ಲಾ ಬೆಳೆಗಳಿಗೂ ಸೂಕ್ತ ಬೆಲೆಯಿಲ್ಲದಂತಾಗಿದ್ದುರೇಷ್ಮೆಕೃಷಿಯಿಂದ ಮಾತ್ರ ಸುಸ್ಥಿರ ಜೀವನನಡೆಸಬಹುದಾಗಿದೆಹಾಗೂ ಹಿಪ್ಪುನೇರಳೆ ಸೊಪ್ಪನ್ನು ಪರ್ಯಾಯಜೀವನೋಪಯ ಮಾರ್ಗವಾಗಿಕುರಿ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಜೀವನವೆಂದ ಮೇಲೆ ಸುಖ, ಕಷ್ಟ, ಸ್ವಾಸ್ಥ್ಯ , ರೋಗರುಜಿನಗಳು ಇದ್ದೇ ಇರುತ್ತವೆ . ರೋಗಗಳು ಬಾಧಿಸಲು ಆರಂಭಿಸಿದಾಗ ಔಷಧವನ್ನು ಪರಮಶತ್ರುವಿನಂತೆ ಕಾಣುವ ಅದೆಷ್ಟೋ ಜನರಿರುತ್ತಾರೆ. ಇದಲ್ಲದೆ ಗ್ರಾಮೀಣ ಭಾಗದಲ್ಲಿ ಕೆಲವರು ಆಸ್ಪತ್ರೆಯನ್ನು ಸಹ ಪರಮಶತ್ರುವಿನಂತೆ ಕಾಣುವಂತವರು ಇದ್ದಾರೆ.ಗ್ರಾಮೀಣ ಭಾಗದ ನಾಗರೀಕರಲ್ಲಿ ಆಸ್ಪತ್ರೆ ಎಂದರೆ ಇಂಜಕ್ಷನ್ ಕೊಡುವಂತಹ, ಆಪರೇಷನ್ ಮಾಡುವಂತಹ ಸ್ಥಳ ಎಂಬ ಭಯದ ವಾತವರಣ ಹಾಗು ಆಸ್ಪತ್ರೆಗೆ ಹೋದರೆ ಇಲ್ಲಸಲ್ಲದ ಪರೀಕ್ಷೆಗಳನ್ನು ಮಾಡಿ ಮಾನಸಿಕವಾಗಿ ಹಿಂಸೆಯಾಗುತ್ತದೆ ಹಾಗು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸಹಕಾರಿ ಬ್ಯಾಂಕುಗಳಿಂದ ಸಾಲ ಪಡೆದ ಮಹಿಳೆಯರ ಸಂಕಷ್ಟಕ್ಕೆ ಮುಖ್ಯಮಂತ್ರಿ ಸ್ಪಂದಿಸಿ ಸಾಲದ ಕಂತು ಮರುಪಾವತಿ ಅವಧಿಯನ್ನು 3 ತಿಂಗಳು ವಿಸ್ತರಿಸಿದ್ದರೂ, ಸಹಕಾರ ಇಲಾಖೆ ಅದಕ್ಕೆ ಸಿಎಂ ಆದೇಶವನ್ನೇ ಧಿಕ್ಕರಿಸಿ ಜೂನ್ ಕೊನೆಗೆ ಪೂರ್ಣ 3 ಕಂತು ಒಂದೇ ಬಾರಿ ಪಾವತಿಗೆ ಆದೇಶ ಹೊರಡಿಸಿರುವುದು ತಾಯಂದಿರ ತೀವ್ರ ಟೀಕೆಗೆ ಗುರಿಯಾಗಿದೆ.ಸಾಲ ಮರುಪಾವತಿ ಸಂಬಂಧ ಸಹಕಾರ ಇಲಾಖೆಯ ಆದೇಶದಿಂದ ಆಕ್ರೋಶಗೊಂಡ ವಿವಿಧ ಮಹಿಳಾ ಸಂಘಗಳ ಪ್ರತಿನಿಧಿಗಳು ನಗರದ ಕೇಂದ್ರ ಸಹಕಾರಿ ಬ್ಯಾಂಕಿಗೆ ಧಾವಿಸಿ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ನಿಂದಾಗಿ ಸಂಕಷ್ಟಕ್ಕೀಡಾಗಿರುವ ಖಾಸಗಿ ಅನುದಾನ ರಹಿತ ಶಾಲೆ,ಕಾಲೇಜುಗಳ ಬೋಧಕ,ಬೋಧಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸುರೇಶ್ಕುಮಾರ್ ನೇತೃತ್ವದ ಎಂಎಲ್ಸಿಗಳ ನಿಯೋಗಕ್ಕೆ ಭರವಸೆ ನೀಡಿದ್ದು, ತಲಾ 10 ಸಾವಿರ ಪ್ಯಾಕೇಜ್ ನೀಡುವ ಸಾಧ್ಯತೆ ಇದೆ ಎಂದು ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ತಿಳಿಸಿದ್ದಾರೆ.ಈ ಸಂಬಂಧ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ಕುಮಾರ್ ನೇತೃತ್ವದಲ್ಲಿ ಶಿಕ್ಷಕ,ಪದವೀಧರ ಕ್ಷೇತ್ರಗಳ ಎಂಎಲ್ಸಿಗಳು ಸಂಕಷ್ಟದಲ್ಲಿರುವ ಶಿಕ್ಷಕರ,ಸಿಬ್ಬಂದಿ ನೆರವಿಗೆ ಬರಲು ಮಾಡಿದ ಮನವಿಗೆ ಸಿಎಂ ಸ್ಪಂದಿಸಿದ್ದು ಪ್ಯಾಕೇಜ್ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆಯಲ್ಲಿ 3 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ನಿಂದ ಕರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದೆ. ಮೇ 27 ರಂದು ಬೆಳಿಗ್ಗೆ 10.00 ಗಂಟೆಯಿಂದ ಮೇ 31 ರಂದು ಬೆಳಿಗ್ಗೆ 6.00 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತದೆ. ವೈದ್ಯಕೀಯ ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರುತ್ತದೆ ಸಾರ್ವಜನಿಕರು ಸಹಕರಿಸಬೇಕು ಎಂದು ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ ಲಿಂಬಾವಳಿ ಅವರು ತಿಳಿಸಿದರು.ಇಂದು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆಯಲ್ಲಿ ಹೋಮ್ ಐಸೋಲೇಷನ್ ನಿಯಮ ಉಲ್ಲಂಘಿಸಿರುವ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಿ ಅವರಿಗೆ ಚಿಕಿತ್ಸೆಯನ್ನು ನೀಡುವಂತೆ ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ ಲಿಂಬಾವಳಿ ಅವರು ಸೂಚಿಸಿದರು .ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ -19 ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ ಗುಣಮುಖರಾದವರ ಸಂಖ್ಯೆ , ಹೋಂ ಐಸೋಲೇಷನ್ನಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕರೋನಾ ವೈರಸ್ನ ಎರಡನೇ ಅಲೆ ಎಲ್ಲೆಡೆ ಹರಡುತ್ತಿದೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ. ಗ್ರಾಮೀಣ ಬಾಗದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ ಸೋಂಕಿತ ಮನೆಗಳಿಗೆ ಪೋಸ್ಟರ್ ಕಡ್ಡಾಯವಾಗಿ ಅಂಟಿಸಲಾಗುವುದು . ಕೋವಿಡ್ ಸೋಂಕಿತ ವ್ಯಕ್ತಿ ವಿನಾಕಾರಣ ಹೊರಗೆ ಓಡಾಡಿದರೆ ಸ್ಥಳದಲ್ಲಿಯೇ ಎಫ್.ಐ.ಆರ್ ದಾಖಲಿಸುವ ವಿಶೇಷ ಜವಾಬ್ದಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಲಾಗಿದೆ , ಸೋಂಕಿತ ವ್ಯಕ್ತಿಯ ಭೇಟಿ ಸ್ಥಳದಲ್ಲಿ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಲಾಗುವುದು . […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ; ರೈತರೇನು ನಿಮ್ಮ ಕಣ್ಣಿಗೆ ಭಿಕ್ಷುಕರಂತೆ ಕಾಣುತ್ತೇವೇಯೇ, ಪರಿಹಾರ ಘೋಷಿಸುವಾಗ ಸೌಜನ್ಯಕ್ಕಾದರೂ ಕೃಷಿಕನ ಕಷ್ಟ ಆಲಿಸುವುದು ಬೇಡವೇ ಎಂದು ಪ್ರಶ್ನಿಸಿದ ಶಾಸಕ ಹಾಗೂ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ಕುಮಾರ್ ಪ್ರತಿ ಹೆಕ್ಟೇರ್ ಬೆಳೆಗೆ ಕನಿಷ್ಟ 75 ಸಾವಿರ ಘೋಷಿಸುವಂತೆ ಆಗ್ರಹಿಸಿದರು.ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಯಾರೂ ರೈತರಿಲ್ಲ, ಕೃಷಿಕನ ನೋವು ಇವರಿಗೆ ಹೇಗೆ ತಾನೇ ಅರ್ಥವಾದೀತು ಎಂದು ವಾಗ್ದಾಳಿ ನಡೆಸಿದರು.ರೈತರ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು . ಈ ಹಿಂದೆ ಸಹ ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊರರಾಜ್ಯದ ಮಹಾರಾಷ್ಟ್ರ ,ಆಂಧ್ರಪ್ರದೇಶ, ತಮಿಳುನಾಡು ,ರಾಜಕಾರಣಿಗಳು ಸಹ ದೇವರ ದರ್ಶನ ಪಡೆದಿದ್ದಾರೆ ಚಿತ್ರನಟ ಚಿರಂಜೀವಿ ಅವರು ಸಹ ಪ್ರಸಿದ್ಧ ಜ್ಯೋತಿಷ ತಜ್ಞರಾದ ವೆಲ್ಲಾಲ ಸತ್ಯ ನಾರಾಯಣ ಶಾಸ್ತ್ರಿ ಬಳಿ ಭವಿಷ್ಯದ […]

