ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ಬುಧವಾರ ವಯೋನಿವೃತ್ತಿ ಹೊಂದಿದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಲ್.ಕೆ.ಶ್ರೀನಿವಾಸಮೂರ್ತಿ ಹೇಳಿದರು.ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಇಲಾಖೆ ಸಿಬ್ಬಂದಿ ಹಾಗೂ ನಾಗರಿಕರಿಂದ ಬುಧವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಶಿಕ್ಷಣ ಹೊರತು ಪಡಿಸಿ ಬದುಕು ಸಾಧ್ಯವಿಲ್ಲ ಎಂಬ ಅರಿವು ಇದ್ದುದರಿಂದಾಗಿ ತಾಂತ್ರಿಕ ಶಿಕ್ಷಣ ಪಡೆದು ಎಂಜಿಯರ್ ಆಗಲು ಸಾಧ್ಯವಾಯಿತು ಎಂದು ಹೇಳಿದರು.ಈ ಸಂದರ್ಭದಲ್ಲಿ ತಮ್ಮ ಕಾರ್ಯಭಾರವನ್ನು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಬಿಸಿಯೂಟ ತಯಾರಿಸುವ ಅಡಿಗೆ ಸಿಬ್ಬಂದಿ ಸ್ವಚ್ಛತೆ ಕಾಪಾಡಿಕೊಂಡು ತಮ್ಮ ಮನೆಗಳಲ್ಲಿ ತಯಾರು ಮಾಡುವ ಅಡುಗೆಯಂತೆ ಶಾಲೆಗಳಲ್ಲಿ ಸಹ ವಿಶೇಷ ಕಾಳಜಿವಹಿಸಿ ಲಭ್ಯವಿರುವ ಆಹಾರ ಪದಾರ್ಥಗಳನ್ನು ಬಳಕೆ ಮಾಡಿಕೊಂಡು ಶುಚಿ – ರುಚಿಯಾಗಿ ತಯಾರು ಮಾಡಬೇಕೆಂದು ತಹಶೀಲ್ದಾರ್ ಶ್ರೀನಿವಾಸ್ ತಿಳಿಸಿದರು .ಪಟ್ಟಣದ ಕನಕಭವನದಲ್ಲಿ 2020-21ನೇ ಸಾಲಿನ ಬಿಸಿಯೂಟ ಅಡುಗೆ ನೌಕರರಿಗೆ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಅಡಿಗೆಯನ್ನು ತಯಾರಿಸುವ ಮುನ್ನಾ ಅಲ್ಲಿನ ಕೊಠಡಿಯನ್ನು ಸ್ವಚ್ಚ ಮಾಡಬೇಕು ನಾವು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪುರಸಭೆಯ 2021 – 22ನೇ ಸಾಲಿನ ಆಯವ್ಯಯ ಮಂಡನಾ ಸಭೆಯಲ್ಲಿ ರೂ.20,60,000 ಉಳಿತಾಯ ಆಯ ವ್ಯಯಕ್ಕೆ ಒಪ್ಪಿಗೆ ಪಡೆಯಲಾಯಿತು.ಪುರಸಭೆಯ ಒಟ್ಟು ವಾರ್ಷಿಕ ಆದಾಯ ರೂ.38,36,60,000 ಆಗಿದ್ದು, ಆ ಪೈಕಿ ರೂ.38,16,00,000 ಖರ್ಚು ಮಾಡಲು ಸಭೆ ಹೆಚ್ಚು ಚರ್ಚೆ ಇಲ್ಲದೆ ಅಗೀಕಾರ ನೀಡಿತು. ಮಂಡಿಸಲಾದ ಬಜೆಟ್ನಲ್ಲಿ ರಾಜಸ್ವ ಸ್ವೀಕೃತಿಗಳಿಂದ ರೂ.12,60,50,000, ಬಂಡವಾಳ ಸ್ವೀಕೃತಿಗಳಿಂದ ರೂ.16,92,50,000, ಅಸಾಧಾರಣ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಹೊಸಕೋಟೆಯಿಂದ ಬಂಗಾರಪೇಟೆ ಮಾರ್ಗವಾಗಿ ವಿ.ಕೋಟೆ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಕ್ಕೆ ಇರುವ ಅಡೆತಡೆಗಳನ್ನು ನಿವಾರಿಸಿ, ಅವರಿವರ ಮೇಲೆ ನೆಪ ಹೇಳುವುದನ್ನು ಬಿಟ್ಟು ಕೂಡಲೇ ಕಾಮಗಾರಿ ಮುಗಿಸಿ ಎಂದು ಕೆಜಿಎಫ್ ಶಾಸಕಿ ರೂಪಶಶಿಧರ್ ತಾಕೀತು ಮಾಡಿದರು.ಮಂಗಳವಾರ ನಗರದ ಪ್ರಾದೇಶಿಕ ಅರಣ್ಯ ವಿಭಾಗದ ಕಚೇರಿಯಲ್ಲಿ ಕರೆಯಲಾಗಿದ್ದ ಲೋಕೋಪಯೋಗಿ, ಅರಣ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ವಿರುದ್ದ ಕಿಡಿಕಾರಿ, ವಿಳಂಬ ಮಾಡಿದರೆ ಏನು ಮಾಡಬೇಕು ಎಂದು ನನಗೆ ಗೊತ್ತಿದೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಫಲಾನುಭವಿಗಳು ಲೋಕ್ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು. ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಪರಿಹರಿಸಿಕೊಂಡು ನೆಮ್ಮದಿಯ ಜೀವನ ನಡೆಸಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಂಗ ಇಲಾಖೆ ವತಿಯಿಂದ ಏರ್ಪಡಿಸಿದ್ದ ಲೋಕ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜೀವನದಲ್ಲಿ ಸಮಸ್ಯೆಗಳು ಬರುವುದು ಸಹಜ. ಅವುಗಳನ್ನು ತೆರೆದ ಮನಸ್ಸಿನಿಂದ ಚರ್ಚಿಸಿ ಇತ್ಯರ್ಥಪಡಿಸಿಕೊಂಡಲ್ಲಿ ಹಣ ಹಾಗೂ ಸಮಯದ ಉಳಿತಾಯವಾಗುತ್ತದೆ. ಮಾನಸಿಕ ನೆಮ್ಮದಿಯೂ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೃಷಿ ಕಾರ್ಯಗಳ ಒತ್ತಡದಲ್ಲಿರುವ ಗ್ರಾಮೀಣ ಜನತೆ ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯ ಸಮಸ್ಯೆಗಳ ಕುರಿತು ಉದಾಸೀನ ತೋರಬಾರದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮ್ಯದೀಪಿಕಾ ಕರೆ ಕರೆ ನೀಡಿದರು.ಶನಿವಾರ ತಾಲ್ಲೂಕಿನ ಅರಾಭಿಕೊತ್ತನೂರಿನ ಸೋಮನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಧಾನ್ ಫೌಂಡೇಷನ್, ಹೊಸಕೋಟೆಯ ಎಂವಿಜೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಆಸ್ಪತ್ರೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಎಂವಿಜೆ ಆಸ್ಪತ್ರೆಯ ವೈದ್ಯರು ಗ್ರಾಮೀಣ ಜನತೆಗೆ ಉಚಿತ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಆರ್ಥಿಕ ವರ್ಷ ಮುಗಿಯಲು 3 ದಿನ ಬಾಕಿ ಇದೆ, ಹಗಲಿರುಳು ದುಡಿದು ಸಾಲ ವಸೂಲಾತಿ ಮಾಡಿ ಎನ್ಪಿಎ 2.5 ರಿಂದ 1.5ಕ್ಕೆ ಇಳಿಸಿದ್ದೆ ಆದರೆ ಇದು ದೇಶದ ಸಹಕಾರಿ ರಂಗದ ಇತಿಹಾಸದಲ್ಲೇ ಮೈಲಿಗಲ್ಲಾಗಲಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಅವಿಭಜಿತ ಜಿಲ್ಲೆಯ ಎಲ್ಲಾ ಡಿಸಿಸಿ ಬ್ಯಾಂಕ್ ಶಾಖೆಗಳ ವ್ಯವಸ್ಥಾಪಕರೊಂದಿಗೆ ನಡೆಸಿದ ಈ ಆರ್ಥಿಕ ವರ್ಷದ ಕೊನೆಯ ಆನ್ಲೈನ್ ಪ್ರಗತಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಭೂಮಿಯಲ್ಲಿ ತೇವಾಂಶದ ಕೊರತೆ ಎದುರಿಸುತ್ತಿರುವ ರೈತರು ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೆಳೆಯುವುದು ಸೂಕ್ತ ಎಂದು ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥ ಡಾ. ಆರ್.ಕೆ.ರಾಮಚಂದ್ರ ಹೇಳಿದರು.ತಾಲ್ಲೂಕಿನ ಶ್ಯಾಗತ್ತೂರು ಗ್ರಾಮದಲ್ಲಿ, ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಅಖಿಲ ಭಾರತ ಸಮನ್ವಯ ಗೋಡಂಬಿ ಸಂಶೋಧನಾ ಯೋಜನೆ ವತಿಯಿಂದ, ಗೇರು ಬೆಳೆಯಲ್ಲಿ ಅಧಿಕ ಇಳುವರಿಗಾಗಿ ವೈಜ್ಞಾನಿಕ ಉತ್ಪಾದನಾ ತಾಂತ್ರಿಕತೆಗಳು ಎಂಬ ವಿಷಯ ಕುರಿತು […]
ವರದಿ ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು . ಇದರಿಂದ ಬಡವರಿಗೆ , ಹಿಂದುಳಿದವರಿಗೆ ಸೇವೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ | ಆರ್.ಸೆಲ್ವಮಣಿ ಅವರು ತಿಳಿಸಿದರು . ಇಂದು ತಮ್ಮ ಕಛೇರಿ ನ್ಯಾಯಾಂಗ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ , ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಮಟ್ಟದ ಕುಂದು ಕೊರತೆಯ ಪರಿಹಾರ ಉಚಿತ ಎಂದು ಸಮಿತಿ […]

