
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಫಲಿತಾಂಶ ಪಡೆದುಕೊಳ್ಳಬೇಕು : ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಧನದ ಚೆಕ್ ವಿತರಿಸಿ ಮಾತನಾಡಿ, ಪುರಸಭೆ ವತಿಯಿಂದ 91 ವಿದ್ಯಾರ್ಥಿಗಳಿಗೆ ರೂ.6.42 ಲಕ್ಷ ಸಹಾಯ ಧನ ವಿತರಿಸಲಾಗಿದೆ. ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ನೆರವು ನೀಡಲಾಗಿದೆ ಎಂದು ಹೇಳಿದರು. […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ದೇಶದ ಸಾಮಾನ್ಯ ನಾಗರೀಕನಿಗೂ ಉತ್ತಮವಾದ ಆರೋಗ್ಯ ಚಿಕಿತ್ಸೆಯನ್ನು ಒದಗಿಸುವುದು ಅತ್ಯಂತ ಪ್ರಮುಖವಾದ ಕಾರ್ಯ: ಗೋವಿಂದಸ್ವಾಮಿ ಯಲ್ದೂರು, ಮಾ-06 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದೇಶದ ಸಾಮಾನ್ಯ ನಾಗರೀಕನಿಗೂ ಉತ್ತಮವಾದ ಆರೋಗ್ಯ ಚಿಕಿತ್ಸೆಯನ್ನು ಒದಗಿಸುವುದು ಅತ್ಯಂತ ಪ್ರಮುಖವಾದ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳಾದ ನೀರಿನ ವ್ಯವಸ್ಥೆ, ಮೀನು ಸಾಕಾಣಿಕ ತೊಟ್ಟಿ, ಹೊಗಳಗೆರೆ ಗ್ರಾಮದಿಂದ ಆಸ್ಪತ್ರೆಯವರೆಗೂ ವಿದ್ಯುತ್ ದೀಪಗಳ ಅಳವಡಿಕೆ, ಅಗತ್ಯವಿರುವ ಸಿಬ್ಬಂಧಿ ನೇಮಕಾತಿಗೆ ತಮ್ಮ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ರಾಜ್ಯ ಬಜೆಟ್ನಲ್ಲಿ ಕೋಲಾರ ಜಿಲ್ಲೆಗೆ ಅನ್ಯಾಯ ಕೋಲಾರ : ಗುರುವಾರ ರಾಜ್ಯ ಬಜೆಟ್ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಡಿಸಿದ್ದು, ಈ ಬಜೆಟ್ನಲ್ಲಿ ಕೋಲಾರ ಜಿಲ್ಲೆಯನ್ನು ಸಂಪೂರ್ಣವಾಗಿ ಕೈ ಬಿಟ್ಟಿರುವುದು ಬೇಸರದ ಸಂಗತಿ ಎಂದು ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಮತ್ತು ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ ಟೀಕಿಸಿದ್ದಾರೆ. ಕೋಲಾರ ಜಿಲ್ಲೆಯು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ , ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲಿಯೇ ಮೃತರು. ಒಬ್ಬ ವ್ಯಕ್ತಿಗೆ ತೀವ್ರ ಗಾಯ ಶ್ರೀನಿವಾಸಪುರ: ತಾಲ್ಲೂಕಿನ ಶ್ರೀನಿವಾಸಪುರ ಹೊಗಳಗೆರೆ ರಸ್ತೆಯ ಸಮೀಪ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾನೆ. ಮೃತರನ್ನು ತಾಲ್ಲೂಕಿನ ಗಾಂಧಿನಗರ ಗ್ರಾಮದ ಯಶ್ವಂತ್ (20), ದೊಡ್ಡವೆಂಕಟೇಶಪ್ಪ (50), ಯಲ್ಲಪ್ಪ (18) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸ್ವಚ್ಛತೆ ಕಾಪಾಡಿಕೊಳ್ಳವ ಮೂಲಕ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ – ಸಿ ಎಸ್ ವೆಂಕಟೇಶ್ ಕೋಲಾರ: ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ ಎಸ್ ವೆಂಕಟೇಶ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಹಯೋಗದಲ್ಲಿ ಮುಳಬಾಗಿಲು ತಾಲ್ಲೂಕಿನ ತಾಯಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:ರಾಗಿ ತೊಗರಿ,ಭತ್ತಕ್ಕೆ ನೀಡಿರುವ ಬೆಂಬಲ ಬೆಲೆಯಂತೆ ತರಕಾರಿ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಬೇಕು. ಕೋಲಾರ: ಜಿಲ್ಲೆಯಲ್ಲಿ ಕೃಷಿ ಆದಾರಿತ ಕೈಗಾರಿಕೆಗಳನ್ನು ತೆರಯಬೇಕು, ರಾಗಿ ತೊಗರಿ,ಭತ್ತಕ್ಕೆ ನೀಡಿರುವ ಬೆಂಬಲ ಬೆಲೆಯಂತೆ ತರಕಾರಿ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಮತ್ತು ಕೃಷಿ ಆದಾರಿತ ಮಾವು, ರೇಷ್ಮೆ, ತರಕಾರಿ, ಹೂ.ಬೆಳೆಗಳ ಸಂಸ್ಕರಣ ಘಟಕಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು, ಜೊತೆಗೆ ಹಾಲಿನ ಪ್ರೋತ್ಸಾಹದನ ಹೆಚ್ಚಿಸಿ, ಹಾಲಿನ ಉತ್ಪಾದನೆ ಹೆಚ್ಚಿಸುವಂತೆ ಕ್ರಮ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಅನರ್ಹರು ಪಡೆದಿರುವ ಬಿ.ಪಿ.ಎಲ್ ಚೀಟಿಯನ್ನು ಹಿಂತಿರುಗಿಸಲು ಮಾರ್ಚ್ 31 ರ ಗಡವು. ಕೋಲಾರ: ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಕೆಲವು ಆರ್ಥಿಕವಾಗಿ ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ. ಬಿ.ಪಿ.ಎಲ್ ಪಡಿತರ ಚೀಟಿ ಪಡೆಯಲು ಕೆಲವು ಮಾನದಂಡಗಳನ್ನು ನಿಗದಿಪಡಿಸಿದೆ. ಇದನ್ನು ಹೊರುತಪಡಿಸಿ ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ತಾವು ಪಡೆದಿರುವ ಅನರ್ಹ ಪಡಿತರ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕಡಿಮೆ ಬಂಡವಾಳದಲ್ಲಿ ಉತ್ತಮ ಟಮ್ಯಾಟೊ ಇಳುವರಿ ಶ್ರೀನಿವಾಸಪುರ:- ಕೃಷಿ ವ್ಯವಸ್ಥೆ ಇಂದು ದುಬಾರಿಯಾಗುತ್ತಿದೆ ಸಣ್ಣ ಪ್ರಮಾಣದ ವ್ಯವಸಾಯಕ್ಕೂ ದುಬಾರಿ ಬಂಡವಾಳ ಅನಿವಾರ್ಯವಾಗಿದೆ ಹಾಗಾಗಿ ಟಮ್ಯಾಟೊ ಬೆಳೆಯಲು ಲಕ್ಷಗಟ್ಟಲೆ ಬಂಡವಾಳ ಅಗತ್ಯವಾಗುತ್ತಿದೆ ಎಂದು ತೋಟಗಾರಿಕೆ ಕೃಷಿ ತಜ್ಞ, ನಿವೃತ್ತ ಪ್ರಾದ್ಯಪಕ ಡಾ,ಮುನಿಯಪ್ಪ ಹೇಳಿದರು. ಅವರು ಇಂದು ಪಟ್ಟಣದ ಹೊರವಲಯದಲ್ಲಿರುವಂತ ಮಾವಿನ ತಿರಳು ಜ್ಯೂಸ್ ಫ್ಯಾಕ್ಟರಿ ವೆಂಕಟಲಕ್ಷ್ಮೀ ಫುಡ್ಸ್ ಸಂಸ್ಥೆಯ ಅವರಣದಲ್ಲಿರುವಂತ ಟಮ್ಯಾಟೊ ತೋಟದಲ್ಲಿ ತೋಟಗಾರಿಕೆ ಬೆಳೆಗಾರರಿಗೆ ವೆಂಕಟಲಕ್ಷ್ಮೀ ಫುಡ್ಸ್ ಮತ್ತು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸಾರ್ವಜನಿಕರು ನಾಡ ಕಚೇರಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಸಿ.ಸೋಮಶೇಖರ್ ಹೇಳಿದರು. ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಾಡ ಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ನಾಡ ಕಚೇರಿಯಲ್ಲಿ 44 ಸೇವೆಗಳು ಸಿಗುತ್ತವೆ. ಜನನ, ಮರಣ ಪ್ರಮಾಣ ಪತ್ರ, ಪಹಣಿ, ಕೃಷಿ ಪ್ರಮಾಣ ಪತ್ರ ಸೇರಿದಂತೆ ಅಗತ್ಯವಿರುವ ಹಲವು ಸೇವೆಗಳನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿಕೊಡಲಾಗುವುದು ಎಂದು ಹೇಳಿದರು. […]