ಕೋಲಾರ : 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ UPSC/KAS ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ KPSC ಗ್ರೂಪ್-‘ಸಿ’, RRB ಮತ್ತು SSC ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದೆ. ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಅಭ್ಯರ್ಥಿಗಳು ಈ ತರಬೇತಿಗಾಗಿ ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹತಾ ಮಾನದಂಡಗಳಂತೆ, ಅಭ್ಯರ್ಥಿಗಳು ಕರ್ನಾಟಕ ರಾಜ್ಯದ […]
ಕೋಲಾರ:- ಕೋಲಾರ ಮತ್ತು ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿದ್ದೋದ್ದೇಶ ಸಹಕಾರ ಸಂಘವು 2024-25 ಸಾಲಿನಲ್ಲಿ 1.71 ಲಕ್ಷ ನಿವ್ವಳ ಲಾಭದೊಂದಿಗೆ ಆಡಿಟ್ ವರದಿಯಲ್ಲಿ ಬಿ ಶ್ರೇಣಿ ದಕ್ಕಿಸಿಕೊಂಡಿದೆಯೆಂದು ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಪ್ರತಿ ವರ್ಷ ಸಂಘದಿಂದ ಸುಮಾರು 65 ಮಂದಿ ಪತ್ರಕರ್ತರಿಗೆ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಶೇ.90 ಕ್ಕಿಂತಲೂ ಹೆಚ್ಚಿನ ಪ್ರಮಾಣ ಸಾಲ ವಸೂಲಾತಿ […]
ಶ್ರೀನಿವಾಸಪುರ, ಆ. ೪ – ಹಬ್ಬದ ಒಳಗೆ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೀಚಿಂಗ್ ಪೌಡರ್ ಹಾಕುವ ಜೊತೆಗೆ ಬೀದಿ ದೀಪಗಳನ್ನು ತ್ವರಿತವಾಗಿ ಸ್ಥಾಪಿಸುವಂತೆ ಹಾಗೂ ನೀರಿನ ಕೊರತೆಯುಳ್ಳ ಗ್ರಾಮಗಳಲ್ಲಿ ತಕ್ಷಣ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಶಾಸಕರಾದ ಜಿ.ಕೆ. ವೆಂಕಟಶಿವಾರೆಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಹೊರವಲಯದ ಹೊಗಳಗೆರೆ ಕೃಷಿ ಮಾವು ಅಭಿವೃದ್ದಿ ಮಂಡಳಿ ಸಭಾಂಗಣದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಕೆಡಿಪಿ (ಕೆಳಮಟ್ಟದ ಅಭಿವೃದ್ಧಿ) ಸಭೆಗೆ ಚಾಲನೆ ನೀಡಿದ ಅವರು ಮಾತನಾಡಿದರು. ಹಳ್ಳಿಗಳಲ್ಲಿ ನಿಲ್ಲಿಸಿರುವ ಜೆಜೆಎಂ (ಜಲ ಜೀವನ್ ಮಿಷನ್) […]
ಕೋಲಾರ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೋಲಾರ ಜಿಲ್ಲಾ ಕಚೇರಿ ವ್ಯಾಪ್ತಿಯ , ತಾಲ್ಲೂಕು ಕಚೇರಿ, ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಮಂಜೂರಾದ ಹುದ್ದೆಗಳ ಪೈಕಿ ಬಹುತೇಕ ಹುದ್ದೆಗಳು ಇನ್ನೂ ಖಾಲಿ ಇರುವ ದೃಶ್ಯ ಸ್ಪಷ್ಟವಾಗಿದೆ. ಜಿಲ್ಲೆಯಲ್ಲಿ ಒಟ್ಟು 86 ಖಾಯಂ ಹುದ್ದೆಗಳು ಮಂಜೂರಾಗಿದ್ದು, ಇದರ ಪೈಕಿ ಕೇವಲ 28 ಹುದ್ದೆಗಳು ಮಾತ್ರ ಭರ್ತಿಯಾಗಿವೆ, ಉಳಿದ 58 ಹುದ್ದೆಗಳು ಖಾಲಿಯಾಗಿವೆ ಎಂಬ ಅಂಶ ಬೆಳಕಿಗೆ ಬಂದಿದೆ. ವಿಭಾಗವಾರು ಹುದ್ದೆಗಳ ವಿವರ ಹೀಗಿದೆ: ಜಿಲ್ಲಾ […]
ಶ್ರೀನಿವಾಸಪುರ : ಪಟ್ಟಣ ಹೊರವಲಯದ ಪುಂಗನೂರು ಕ್ರಾಸ್ನಲ್ಲಿ ಗುರುವಾರ ಅಭಯ ಆಂಜನೇಯಸ್ವಾಮಿ ಪ್ರತಿಷ್ಟೆಯು ಅದ್ದೂರಿಯಾಗಿ ನೆರವೇರಿತು. ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಎಂಎಲ್ಸಿ ವೈ.ಎ. ನಾರಾಯಣಸ್ವಾಮಿ ಅವರು ಸನಾತನ ಧರ್ಮವು ಎಲ್ಲಾ ಧರ್ಮಗಳಿಗಿಂತ ಶ್ರೇಷ್ಠವಾಗಿದ್ದು, ಸರ್ವರಿಗೂ ಸಮಪಾಲು, ಸಮಬಾಳು ನೀಡುವ ಧರ್ಮವಾಗಿದೆ. ಸರ್ವಜನಾಂಗದ ಶಾಂತಿಯ ತೋಟವೆಂದೇ ಸನಾತನ ಧರ್ಮವನ್ನು ಪರಿಗಣಿಸಬಹುದು. ಎಲ್ಲಾ ಧರ್ಮಸ್ಥರನ್ನು ಸಮಾನವಾಗಿ ಕಾಣುವ ಧರ್ಮವೇ ಇದು ಎಂದು ಅವರು ಮುಂದುವರಿದು, ಈಗಾಗಲೇ ಪುಂಗನೂರು ಕ್ರಾಸ್ನಲ್ಲಿ ಶನೇಶ್ಚರಸ್ವಾಮಿ ದೇವಾಲಯ ನಿರ್ಮಾಣ ಹಂತದಲ್ಲಿದ್ದು, ಇದು […]
(✒️ ಶಬ್ಬೀರ್ ಅಹ್ಮದ್, ಪತ್ರಕರ್ತ ಶ್ರೀನಿವಾಸಪುರ) “ಹೃದಯದಿಂದ ನೀಡಲಾದ ಶಿಕ್ಷಣವು ಕ್ರಾಂತಿಯನ್ನು ತರಬಲ್ಲುದು” ಎಂಬ ಶಾಶ್ವತ ಸಂದೇಶವನ್ನು ನೀಡಿದ ಮೌಲಾನಾ ಅಬುಲ್ ಕಲಾಮ್ ಆಝಾದ್ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮುಂಚೂಣಿ ನಾಯಕರಲ್ಲೊಬ್ಬರಾಗಿದ್ದು, ದೇಶದ ಮೊದಲ ಶಿಕ್ಷಣ ಮಂತ್ರಿಯಾಗಿ ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಅಡಿಗಲ್ಲು ಹಾಕಿದ ಮಹಾನ್ ವ್ಯಕ್ತಿ. ಅವರ ಜೀವನ, ತತ್ವಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳು ಇಂದಿಗೂ ಪ್ರೇರಣೆಯ ದೀಪಸ್ತಂಭಗಳಾಗಿ ನಿಂತಿವೆ. ಮೌಲಾನಾ ಅಬುಲ್ ಕಲಾಮ್ ಆಝಾದ್ ಅವರ ಜೀವನ ಮತ್ತು ಹೋರಾಟ […]
ಶ್ರೀನಿವಾಸಪುರ, ಜುಲೈ 25 – ಪಟ್ಟಣದ ಜಾಕಿರ್ ಹುಸೇನ್ ಮೊಹಲ್ಲಾಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉರ್ದು ಹಾಗೂ ಇಂಗ್ಲಿಷ್ ಮಾಧ್ಯಮದ ಹಿರಿಯ ಪ್ರಾಥಮಿಕ ಶಾಲೆಗೆ ಪುರಸಭೆ ಅಧ್ಯಕ್ಷ ಭಾಸ್ಕರ್ ಅವರು ದಿಢೀರ್ ಭೇಟಿ ನೀಡಿದ್ದು, ಶಾಲೆಯ ಮೂಲಭೂತ ಸೌಲಭ್ಯಗಳ ಕೊರತೆ ಬಗ್ಗೆ ಪರಿಶೀಲನೆ ನಡೆಸಿದರು.ಶಾಲೆಯ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದ ಅಧ್ಯಕ್ಷರು, ಶುದ್ಧ ಕುಡಿಯುವ ನೀರಿನ ಕೊರತೆಯ ಬಗ್ಗೆ ಗಮನ ಹರಿಸಿ ನೂತನ ನೀರಿನ ಸಂಪು ನಿರ್ಮಿಸಲು ಹಾಗೂ ಶಾಲೆಗೆ ಅಗತ್ಯವಿರುವ ಇತರ ಮೂಲಭೂತ ಸೌಲಭ್ಯಗಳನ್ನು ಕೂಡ ತ್ವರಿತವಾಗಿ ಒದಗಿಸುವ ಭರವಸೆ […]
ಶ್ರೀನಿವಾಸಪುರ, ಜುಲೈ 29: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಶ್ರೀನಿವಾಸಪುರ ಪಟ್ಟಣದ ಗಫಾರ್ ಖಾನ್ ಮೊಹಲ್ಲಾ, ಚಿಂತಾಮಣಿ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ ಸೋಮವಾರ ವಿಶೇಷ ದಾಖಲಾತಿ ಆಂದೋಲನ ಹಾಗೂ ಅರಿವು ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೈಲಾರಪ್ಪ ವಹಿಸಿದ್ದರು. ಅವರು ಮಾತನಾಡಿ, ವಿದ್ಯಾಭ್ಯಾಸವು ಮಗುಗಳ ಭವಿಷ್ಯ ರೂಪಿಸುವ ಶಕ್ತಿಶಾಲಿ ಅಸ್ತ್ರವಾಗಿದೆ. ನಾಳೆಯ ಸಮಾಜವನ್ನು ಕಟ್ಟುವ ಪ್ರಜ್ಞಾವಂತ ನಾಗರಿಕರು ಇಂದು ಶಿಕ್ಷಣ ಪಡೆಯುತ್ತಿರುವ ಮಕ್ಕಳೇ […]
ಶ್ರೀನಿವಾಸಪುರ : ಮಕ್ಕಳಿಗೆ ತಂದೆ-ತಾಯಿಯೆಷ್ಟು ಮುಖ್ಯವೋ, ಅಜ್ಜಿ-ತಾತಂದಿರೂ ಅಷ್ಟೇ ಮುಖ್ಯ ಎಂದು ಫಾದರ್ ಫ್ರಾನ್ಸಿಸ್ ಎಕ್ಕ ಅಭಿಪ್ರಾಯಪಟ್ಟರು. ಪಟ್ಟಣದ ಎಸ್ಎಫ್ಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಿರಿಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಮಕ್ಕಳು ಅಜ್ಜಿ-ತಾತಂದಿರೊಂದಿಗೆ ಬೆಳೆದಾಗ ಅವರ ಅನುಭವ ಮತ್ತು ಬದುಕಿನ ಕಥೆಗಳು ಮಕ್ಕಳ ಮೇಲೆ ಆಳವಾದ ಪ್ರಭಾವ ಬೀರುತ್ತವೆ. ಕೆಲವೊಮ್ಮೆ ಆ ಅನುಭವಗಳು ಮಕ್ಕಳ ಜೀವನದ ದಿಕ್ಕನ್ನೇ ಬದಲಾಯಿಸುತ್ತವೆ. ಅಜ್ಜಿ-ತಾತ ನೀಡುವ ನೀತಿಕಥೆಗಳು ಮಕ್ಕಳಿಗೆ ಜೀವನ ಮೌಲ್ಯಗಳನ್ನು ಕಲಿಸುತ್ತವೆ, ಎಂದು ಅವರು ಉಲ್ಲೇಖಿಸಿದರು. ಕಾರ್ಯಕ್ರಮದಲ್ಲಿ ಎಸ್ಎಫ್ಎಸ್ […]

