ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಜೂ.30ರೊಳಗೆ ಸೊಸೈಟಿಗಳ ಗಣಕೀಕರಣ,ಆಡಿಟ್ ಮುಗಿಸಿ-ಬ್ಯಾಲಹಳ್ಳಿ ಗೋವಿಂದಗೌಡ ದಾಖಲೆ ನಿರ್ವಹಣೆಯಲ್ಲಿ ಲೋಪವಾದರೆ ವ್ಯವಸ್ಥಾಪಕರೇ ಹೊಣೆ-ಎಚ್ಚರಿಕೆ ಕೋಲಾರ:- ಸೊಸೈಟಿಗಳ ಆಡಿಟ್ ಹಾಗೂ ಗಣಕೀಕರಣ ಜೂ.30ರೊಳಗೆ ಮುಗಿಸಿ, ಸಾಲ ವಿತರಣೆಗೆ ಸಂಬಂಧಿಸಿದ ದಾಖಲೆ ನಿರ್ವಹಣೆಯಲ್ಲಿ ಲೋಪವಾದರೆ ವ್ಯವಸ್ಥಾಪಕರು ಹಾಗೂ ಮೇಲ್ವಿಚಾರಕರೇ ಹೊಣೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಎಚ್ಚರಿಕೆ ನೀಡಿದರು. ನಗರದ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಎರಡೂ ಜಿಲ್ಲೆಗಳ ಬ್ಯಾಂಕ್ ಶಾಖೆಗಳ ವ್ಯವಸ್ಥಾಪಕರು ಹಾಗೂ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ವ್ಯಾಪಾರಿ ಕುಟುಂಬಕ್ಕೂ ಸೋಂಕು ಶ್ರೀನಿವಾಸಪುರ : ವ್ಯಾಪಾರ ನಿಮಿತ್ತ ಚೆನ್ನೈಗೆ ಹೋಗಿಬಂದಿದ್ದ ಪಟ್ಟಣದ ಸುಭಾಷ್ ರಸ್ತೆಯ ನಿವಾಸಿ ಸ್ಟೀಲ್ ಪಾತ್ರೆಗಳ ವ್ಯಾಪಾರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು . ನಂತರ ಆತನ ಕುಟುಂಬದ ಸದಸ್ಯರಿಗೆ ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು , ಇಂದು ಕುಟುಂಬಸ್ಥರ ಪರೀಕ್ಷೆ ವರದಿ ಬಂದಿದ್ದು ವ್ಯಾಪಾರಿಯ ತಂದೆ ( 70 ) ತಂದೆಯ ಸಹೋದರಿ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸರ್ಕಾರಿ ನೌಕರರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು: ಜಿ.ಶ್ರೀನಿವಾಸ್ ಶ್ರೀನಿವಾಸಪುರ: ಸರ್ಕಾರಿ ನೌಕರರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪದವೀಧರೇತರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ, ಜಿಲ್ಲಾ ಪದವೀಧರೇತರ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಂಗವಾದಿ ನಾಗರಾಜ್ ಅವರನ್ನು ಸನ್ಮಾನಿಸಿ ಮಾತನಾಡಿ, ಪದವೀಧರೇತರ ಸರ್ಕಾರಿ ನೌಕರರು ತಮ್ಮದೇ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ನಿವಾಸಪುರ: ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಮಂಜೂರಾಗಿದ್ದ ಜಮೀನು ಒತ್ತುವರಿಯನ್ನು ಕಂದಾಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದರು. ‘ಸರ್ವೆ ನಂಬರ್ 88 ರಲ್ಲಿ 2.15 ಎಕರೆ ಜಮೀನನ್ನು ಗ್ರಾಮದ ಸರ್ಕಾರಿ ಶಾಲೆಗೆ ಮಂಜೂರು ಮಾಡಲಾಗಿತ್ತು. ಆದರೆ ಆ ಜಮೀನನ್ನು 8 ಮಂದಿ ರೈತರು ಒತ್ತುವರಿ ಮಾಡಿಕೊಂಡಿದ್ದರು’ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ತಿಳಿಸಿದರು. ಗ್ರಾಮಸ್ಥರು ಶಾಲಾ ಆಸ್ತಿಯ ಉಸ್ತುವಾರಿ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಒತ್ತುವರಿ ಮಾಡಿಕೊಳ್ಳಲು ಅವಕಾಶ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಜಿಲ್ಲಾಧಿಕಾರಿಗಳಿಂದ ಪೌಷ್ಟಿಕಾಂಶ ಪಾನೀಯ ವಿತರಣೆಗೆ ಚಾಲನೆ ಕೋಲಾರ : ನಾವು ಕೋವಿಡ್ನೊಂದಿಗೆ ಜೀವನ ನಡೆಸಬೇಕಾಗಿದೆ ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಿ ನಮ್ಮನ್ನು ನಾವು ಕಾಪಾಡಿಕೊಳ್ಳುವ ಮೂಲಕ ಆರೋಗ್ಯವಂತರಾಗಬೇಕು ಈ ದೆಸೆಯಲ್ಲಿ ಪೌಷ್ಟಿಕಾಂಶ ಪಾನೀಯ ಸೇವಿಸಿ ಸದೃಢರಾಗುವಂತೆ ಜಿಲ್ಲಾಧಿಕಾರಿಗಳಾದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ಸಿ ಸತ್ಯಭಾಮ ತಿಳಿಸಿದರು. ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಶುಕ್ರವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸರ್ಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬದವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಒಂದು ತಿಂಗಳೂಳಗೆ ಹಿಂದುರುಗಿಸಿ ಕೋಲಾರ, ಕೆಲವು ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವ ವಿದ್ಯಾಲಯಗಳ ಸಂಸ್ಥೆಯ ಅಧಿಕಾರಿಗಳು, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದುಕೊಂಡು, ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ವ್ಯಕ್ತಿಯ ಜೀವನದಲ್ಲಿ ಬಾಲ್ಯಾವಸ್ಥೆಯು ಪ್ರಮುಖ ಘಟ್ಟ – ಸಿ. ಸತ್ಯಭಾಮ ಕೋಲಾರ : ಒಬ್ಬ ವ್ಯಕ್ತಿಯು ತಮ್ಮ ಜೀವನದಲ್ಲಿ ಬಾಲ್ಯ, ಯೌವ್ವನ, ವೃದ್ಧಾಪ್ಯ ಮತ್ತು ವಾನಪ್ರಸ್ಥ ವ್ಯವಸ್ಥೆಗಳೆಂಬ 4 ಘಟ್ಟಗಳನ್ನು ಹೊಂದಿದ್ದು, ಇವುಗಳಲ್ಲಿ ಬಾಲ್ಯ ವ್ಯವಸ್ಥೆಯು ಜೀವನದ ಪ್ರಮುಖ ಘಟ್ಟವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಸಿ.ಸತ್ಯಭಾಮ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಿ.ಸತ್ಯಭಾಮ ಕೋಲಾರ : ಜೂನ್ 25 ರಿಂದ ಜುಲೈ 4 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ಸೂಚಿಸಿದರು. ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಜನಾಭಿಪ್ರಾಯವಿಲ್ಲದೆ 1961ರ ಕರ್ನಾಟಕ ಭೂಸುಧಾರಣೆ ಕಾಯಿದೆಗೆ ರಾಜ್ಯ ಸರ್ಕಾರವು ತಿದ್ದುಪಡಿ ಮಾಡಿರುವುದು ಖಂಡನೀಯ ಕೋಲಾರ ಜನಾಭಿಪ್ರಾಯವಿಲ್ಲದೆ 1961ರ ಕರ್ನಾಟಕ ಭೂಸುಧಾರಣೆ ಕಾಯಿದೆಗೆ ರಾಜ್ಯ ಸರ್ಕಾರವು ತಿದ್ದುಪಡಿ ಮಾಡಿರುವುದು ಖಂಡನೀಯವಾಗಿದ್ದು, ರೈತ ವಿರೋಧಿ ಕಾಯಿದೆ ತಿದ್ದುಪಡಿ ಆದೇಶವನ್ನು ಕೂಡಲೇ ವಾಪಸ್ಸು ಪಡೆಯುವಂತೆ ಆಗ್ರಹಿಸಿ ಉಪವಿಭಾಗಾಧಿಕಾರಿಗಳ ಮುಖಾಂತರ ರೈತಸಂಘದಿಂದ ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, 1961 ಕರ್ನಾಟಕ ಭೂಸುಧಾರಣಾ […]

