
ಶ್ರೀನಿವಾಸಪುರ : ಆಟಓಟಗಳಿಂದ ದೇಹದಂಡನೆಯ ಜತೆ ಮಾನಸಿಕ ದೈರ್ಯ,ಛಲ ಹೆಚ್ಚುವುದರೊಂದಿಗೆ ಆರೋಗ್ಯವಂತ ಸಮಾಜದ ಸೃಷ್ಟಿಗೆ ಕಾರಣವಾಗುತ್ತದೆ. ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.ತಾಲೂಕಿನ ರಾಯಲ್ಪಾಡು ಹೋಬಳಿಯ ಕಂಡ್ಲೇವಾರಿಪಲ್ಲಿಯ ಕಾವೇರಿ ಪಬ್ಲಿಕ್ ಶಾಲಾವರಣದಲ್ಲಿ ಸೋಮವಾರ ಶಿಕ್ಷಣ ಇಲಾಖೆ ಹಾಗು ಪಂಚಾಯಿತ್ರಾಜ್ ಇಲಾಖೆ ,ರ್ರಂವಾಪಲ್ಲಿ ಗ್ರಾಮಪಂಚಾಯಿತಿ ಸಹಯೋಗದೊಂದಿಗೆ ಹಿರಿಯ ಪ್ರಾಥಮಿಕ ಮತ್ತು ಪ್ರೌಡಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟವನ್ನ ಉದ್ಗಾಟಿಸಿ ಮಾತನಾತನಾಡಿದರು.ಈಗಾಗಲೇ ಪಟ್ಟಣದ ಅಮಾನಿಕೆರೆಯಂಗಳದಲ್ಲಿ ಕ್ರೀಡಾಂಗಣದ ಕಾಮಗಾರಿ ನಡೆಯುತ್ತಿದ್ದು, ತಾಲೂಕಿನ ರಾಯಲ್ಪಾಡು , ಗೌನಿಪಲ್ಲಿ, ಲಕ್ಷಿö್ಮÃಪುರ, ಯಲ್ದೂರು, ಸುಗುಟೂರು ಗ್ರಾಮಗಳಲ್ಲಿ ಮಿನಿ ಕ್ರೀಡಾಕೂಟಕ್ಕೆ […]

ಕೋಲಾರ,ಜು.26: ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ 128ನೇ ಕೆಡಿಪಿ ಸಭೆಯನ್ನು ಜುಲೈ 31 ರಂದು ಬುಧವಾರ ಬೆಳಗ್ಗೆ 11-00 ಗಂಟೆಗೆ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷ ಮೊಹಮ್ಮದ್ ಹನೀಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್ಸಿ ನಜೀರ್ ಅಹಮದ್, ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೊತ್ತೂರು ಮಂಜುನಾಥ್, ಎಂಎಲ್ಸಿ ಅನಿಲ್ ಕುಮಾರ್, ಎಂಎಲ್ಸಿ ಗೋವಿಂದರಾಜು, ಜಿಲ್ಲಾಧಿಕಾರಿ ಆಕ್ರಂಪಾಷ್, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಭಾಗವಹಿಸುವರು.

ಕೋಲಾರ,ಜು.29: ಓ.ಆರ್.ಎಸ್ (ಒರಲ್ ರಿಹೈಡ್ರೇಶನ್ ಸೊಲ್ಯೂಷನ್) ದಿನವನ್ನು ಪ್ರತಿ ವರ್ಷ ಜುಲೈ 29 ರಂದು ಆಚರಿಸಲಾಗುತ್ತದೆ. ಕೋಲಾರದ ಸರಕಾರಿ ಆಸ್ಪತ್ರೆಯಲ್ಲಿ ಈ ವರ್ಷ ಓ.ಆರ್.ಎಸ್ ದಿನಾಚರಣೆ ಮಹತ್ವದ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಭಾರತೀಯ ಶಿಶುಚಿಕಿತ್ಸಾ ಸಂಸ್ಥೆ (ಐಎಪಿ ಕೋಲಾರ ಬ್ರಾಂಚ್) ಅಧ್ಯಕ್ಷ ಡಾ. ಬೀರೇಗೌಡ ಅವರ ನೇತೃತ್ವದಲ್ಲಿ ನಡೆಸಲಾಯಿತು.ಡಾ. ಬೀರೇಗೌಡ ಓ.ಆರ್.ಎಸ್ ದ್ರಾವಣದ ಮಹತ್ವ ಮತ್ತು ಅದರ ಬಳಕೆ ಕುರಿತು ಸಮಗ್ರ ಮಾಹಿತಿ ನೀಡಿದರು. ಜ್ವರ, ಊಟನಾಳದ ಸೋಂಕು, ಮತ್ತು ಡಿಹೈಡ್ರೇಶನ್ ಸಮಸ್ಯೆಗಳನ್ನು ತಡೆಯಲು ಓ.ಆರ್.ಎಸ್ […]

ಕೋಲಾರ,ಜು.29: ಕೋಲಾರ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ನಗರಪಾಲಿಕೆ ಸೂಕ್ತ ಕ್ರಮ ಕೈಗೊಂಡು ನಾಗರೀಕರಿಗೆ ನಾಯಿಗಳಿಂದ ಆಗುತ್ತಿರುವ ಉಪಟಳಕ್ಕೆ ಇಡೀಶ್ರೀ ಹಾಡಬೇಕು ಎಂದು ಹಿರಿಯ ನಾಗರೀಕರ ಒಕ್ಕೂಟದ ಸಂಚಾಲಕ ವಿ.ಮುನಿವೆಂಕಟೇಶ್ ಒತ್ತಾಯಿಸಿದ್ದಾರೆ.ನಗರದ ವಿವಿಧ ಬಡಾವಣೆ ಹಾಗೂ ಹೊರವಲಯಗಳಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ, ಶಾಲಾ ಮಕ್ಕಳು, ವಯೋವೃದ್ಧರು ಹಾಗೂ ವಾಯು ವಿಹಾರಕ್ಕೆ ತೆರಳುವ ಜನರ ಮೇಲೆ ದಾಳಿ ಮಾಡುತ್ತಿವೆ. ಇದುವರೆಗೂ ಹತ್ತಾರು ಜನರು ಬೀದಿನಾಯಿಗಳ ಹಾವಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೋಲಾರ ನಗರದ 35 (ಮೂವತ್ತೈದು) ವಾರ್ಡ್ಗಳಲ್ಲಿಯೂ ಬೀದಿನಾಯಿಗಳ […]

ಶ್ರೀನಿವಾಸಪುರ : ಶ್ರೀನಿವಾಸಪುರ ಪಟ್ಟಣ, ರಾಯಲಪಾಡು ಹಾಗೂ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ಯುವಕರು ಹೆಚ್ಚು ಶಬ್ದ ಬರುವ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದು, ಈಗಾಗಲೇ ಮುಳಬಾಗಿಲು ತಾಲೂಕಿನಲ್ಲಿ ಇಂತಹ ಬೈಕ್ಗಳ ಸುಮಾರು ೧೫೦ ಸೈಲೆನ್ಸರ್ಗಳನ್ನು ಪೊಲೀಸರು ಕಿತ್ತು ನಗರದ ಡಿವಿಜಿ ವೃತ್ತದಲ್ಲಿ ರೋಡ್ ರೋಲರ್ನಿಂದ ತುಳಿಸಿ ನಜ್ಜುಗುಜ್ಜು ಮಾಡಲಾಗಿದೆ ಎಂದು ಡಿವೈಎಸ್ಪಿ ಡಿ.ಸಿ.ನಂದಕುಮಾರ್ ಮಾಹಿತಿ ನೀಡಿದರು.ಪಟ್ಟಣದ ನೌಕರರ ಭವನದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆವತಿಯಿಂದ ಏರ್ಪಡಿಸಿದ್ದ ಜನ ಸಂಪರ್ಕಸಭೆಗೆ ಚಾಲನೆ ನೀಡಿ […]

ಶ್ರೀನಿವಾಸಪುರ : ಕೂರಿಗೇಪಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ರಾಜೀನಾಮೆ ನೀಡಿ ತೆರವಾಗಿದ್ದ ಸ್ಥಾನಕ್ಕೆ ಜುಲೈ 26 ರಂದು ಚುನಾವಣೆ ನಡೆದಿದ್ದು ಕಾಂಗ್ರೇಸ್ ಬೆಂಬಲಿತ ಅಧ್ಯಕ್ಷರಾಗಿ ಯಲ್ಲಮ್ಮ ಜಯರಾಮ್ ರವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಕೂರಿಗೇಪಲ್ಲಿ ಗ್ರಾಮ ಪಂಚಾಯತಿಯಲ್ಲಿ ಒಟ್ಟು 12 ಸದಸ್ಯರಿದ್ದು ಕಾಂಗ್ರೇಸ್ ಬೆಂಬಲಿತ 11 ಜೆಡಿಎಸ್ ಬೆಂಬಲಿತ ಒಬ್ಬರು ಮಾತ್ರ ಸದಸ್ಯರಾಗಿರುವ ಕಾರಣ ಅಧ್ಯಕ್ಷರ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು ಚುನಾವಣಾಧಿಕಾರಿ ನಾರಾಯಣಸ್ವಾಮಿ ಅವಿರೋಧವಾಗಿ ಯಲ್ಲಮ್ಮ ಜಯರಾಮ್ ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡಿದರು ಉಪಾಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಜಾಕೀರ್ ಹುಸೇನ್ ಮೊಹಲ್ಲದ ನಿವಾಸಿ ಸಕ್ಕರೆ ಕಾಯಿಲೆಯಿಂದ ಕಾಲನ್ನು ಕಳೆದುಕೊಂಡು ಬಳಲುತ್ತಿರುವ ಅತಾಉಲ್ಲಾಖಾನ್ರವರಿಗೆ ಧರ್ಮಸ್ಥಳ ಸಂಸ್ಥೆಯ ಬೆಂಗಳೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ ರವರಿಂದವೀಲ್ಚೇರ್ ವಿತರಣೆ ಮಾಡಿದರು.ಈ ಸಂದರ್ಭ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಈಗಾಗಲೇ 88 ಮಂದಿ ವಿಶೇಷ ಚೇತನರಿಗೆ ವೀಲ್ಚೇರ್, ವಾಟರ್ ಬೆಡ್, ಯು ಶೇಪ್ ವಾಕರ್, ಕಮೋಡ್ಚೇರ್, ಆಕ್ಸಿಲರಿಕ್ರಚ್ಚಸ್ ಇನ್ನಿತರ ಉಪಕರಣಗಳನ್ನು ಸಂಸ್ಥೆಯು ಉಚಿತವಾಗಿ ನೀಡುತ್ತಿದ್ದು ವಿಶೇಷಚೇತನರಿದ್ದಲ್ಲಿ ಇದರ ಸದುಪಯೋಗವನ್ನು […]

ಶ್ರೀನಿವಾಸಪುರ : ಒಂಟಿ ಮನೆ ಗುರಿಯಾಗಿಸಿಕೊಂಡು ದರೋಡೆ ಮಾಡಿರುವ ಖದೀಮರು, ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನಿನಲ್ಲಿ ಮನೆ ಕಟ್ಟಿಕೊಂಡು ಜೀವನ ಮಾಡುತ್ತಿದ್ದ ರಾಮಕೃಷ್ಣಪ್ಪ ಕುಟುಂಬ, ಮನೆಯಲ್ಲಿ ಇಬ್ಬರು ಮಹಿಳೆಯರು ಇದ್ದನ್ನು ಗಮನಿಸಿ ದರೋಡೆ ಮಾಡಿರುವ ಶಂಕೆ.ಗೌನಿಪಲ್ಲಿ ಪೊಲೀಸ್ ಠಾಣಾವ್ಯಾಪ್ತಿಯ ತಾಡಿಗೋಲ್ ಕ್ರಾಸ್ ಬಳಿ ಪಿಸ್ತೂಲ್, ಲಾಂಗುಗಳು ತೋರಿಸಿ ಮನೆಯಲ್ಲಿ ದರೋಡೆ ಬುಧವಾರ ರಾತ್ರಿ 8 ಗಂಟೆ ಸಮಯದಲ್ಲಿ ನಡೆದಿದೆ. ಮನೆಯ ಯಜಮಾನ ರೇಷನ್ ತರಲು ಹೋಗಿದ್ದ ವೇಳೆ ಘಟನೆ, ನಾಲ್ವರು ದರೋಡೆಕೊರ ಬಂದಿರಬಹುದೆದು ಮಾಹಿತಿ ನೀಡಿದರು.1 ತಾಳಿ,3 […]

ಕೋಲಾರ,ಜು.26: ಜನರಿಗೆ ಜಾಗೃತಿ ಮೂಡಿಸಲು, ಸರಿಯಾದ ಮಾಹಿತಿ ತಲುಪಿಸಲು ಮಾಧ್ಯಮ ಬೇಕು. ಸಮಾಜದಲ್ಲಿನ ತಪ್ಪುಗಳನ್ನು ಹೊರತರಲು ಜೊತೆಯಾಗಿ ಕೆಲಸ ಮಾಡೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಶುಕ್ರವಾರ ಆಯೋಜಿಸಿದ್ದ ಸಂವಾದ ಮತ್ತು ಕೇಂದ್ರ ಸರ್ಕಾರ ಹೊಸದಾಗಿ ರೂಪಿಸಿರುವ ಭಾರತೀಯ ನ್ಯಾಯ ಸಂಹಿತೆ ಕುರಿತು ಪತ್ರಕರ್ತರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವ ಜನತೆಗೆ ತಿಳಿವಳಿಕೆ ಮೂಡಿಸುವುದು. 15 ದಿನಕ್ಕೊಮ್ಮೆ ಆರಕ್ಷಕರ ದಿನ […]